Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: BMTC ಭಾರತದ ನಂ.1 ಸಾರಿಗೆ ಸಂಸ್ಥೆಯಾಗಬೇಕು: ಸಿಎಂ ಬಸವರಾಜ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | BMTC ಭಾರತದ ನಂ.1 ಸಾರಿಗೆ ಸಂಸ್ಥೆಯಾಗಬೇಕು: ಸಿಎಂ ಬಸವರಾಜ ಬೊಮ್ಮಾಯಿ

Bengaluru City

BMTC ಭಾರತದ ನಂ.1 ಸಾರಿಗೆ ಸಂಸ್ಥೆಯಾಗಬೇಕು: ಸಿಎಂ ಬಸವರಾಜ ಬೊಮ್ಮಾಯಿ

Public TV
Last updated: December 27, 2021 9:02 pm
Public TV
Share
2 Min Read
BMTC JBM ELECTRIC BUS 2
SHARE

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೊಸ ವಿನ್ಯಾಸ, ಉತ್ತಮ ಸೇವೆ ಹಾಗೂ ಸಂಪನ್ಮೂಲ ಸೃಜನೆಯ ಮೂಲಕ ಭಾರತದಲ್ಲಿಯೇ ನಂ. 1 ಸಾರಿಗೆ ಸಂಸ್ಥೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಶಿಸಿದರು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ ಆಯೋಜಿಸಿರುವ ವಿದ್ಯುತ್ ಚಾಲಿತ ಬಸ್ ಮತ್ತು ಬಿಎಸ್-6 ಡೀಸೆಲ್ ಬಸ್‌ಗಳಿಗೆ ವಿಧಾನಸೌಧದ ಪೂರ್ವದ್ವಾರದ ಬಳಿ ಇಂದು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಈ ದಿಸೆಯಲ್ಲಿ ಬಿಎಂಟಿಸಿಯ ಪ್ರಯತ್ನಗಳಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು.

BMTC JBM ELECTRIC BUS 2

ಸಾರಿಗೆ, ಎಸ್ಕಾಂ ಪುನಶ್ಚೇತನ ಸರ್ಕಾರದ ಸಂಕಲ್ಪ: ಸಬ್ಸಿಡಿ ಆಧಾರದ ಮೇಲೆ ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಕಷ್ಟ ಸಾಧ್ಯ. ಅದಕ್ಕಾಗಿ ರಾಜ್ಯದ ಎಲ್ಲ ಸಾರಿಗೆ ನಿಗಮಗಳನ್ನು ಪುನಶ್ಚೇತನಗೊಳಿಸಲು ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸ ಮೂರ್ತಿ ಅವರ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ. ಸಾರಿಗೆ ವ್ಯವಸ್ಥೆಯ ಸೋರಿಕೆ ತಡೆಗಟ್ಟಿ, ಸಂಪನ್ಮೂಲ ಸೃಷ್ಟಿಗೆ ಒತ್ತು ನೀಡಲು ಹಾಗೂ ಸಂಸ್ಥೆಗಳ ಉತ್ತಮ ಸೇವೆಯ ಮೂಲಕ ಲಾಭದಾಯಕವಾಗಿ ಕಾರ್ಯನಿರ್ವಹಿಸುವ ಕುರಿತು ಈ ಸಮಿತಿ ಶಿಫಾರಸು ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅಂತೆಯೇ ಎಸ್ಕಾಂಗಳ ಪುನಶ್ಚೇತನಕ್ಕೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್ ಅವರ ಅಧ್ಯಕ್ಷತೆಯ ಸಮಿತಿ ರಚಿಸಲಾಗಿದೆ. ಸಾರಿಗೆ ಹಾಗೂ ಎಸ್ಕಾಂಗಳು ಆರ್ಥಿಕವಾಗಿ ಸ್ವಾವಲಂಬನೆಯಾಗಿ ಜನರ ಸೇವೆ, ಸಂಸ್ಥೆ ಕಟ್ಟಲು ಹಾಗೂ ಸರ್ಕಾರದ ಮೇಲೆ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಈ ಸಮಿತಿಗಳನ್ನು ರಚಿಸಲಾಗಿದೆ ಎಂದರು.

BMTC JBM ELECTRIC BUS 4

ಮಾಲಿನ್ಯ ರಹಿತ ಬಸ್‌ಗಳು: ಬಿಎಸ್-6 ನಂತಹ ವಾಹನಗಳನ್ನು ಅಳವಡಿಸಿರುವುದು ಸಂತೋಷದ ವಿಷಯವಾಗಿದೆ. ಪರಿಸರ ಮಾಲಿನ್ಯ ಮುಕ್ತ 300 ವಿದ್ಯುತ್ ಚಾಲಿತ ಬಸ್‍ಗಳನ್ನು ಅಳವಡಿಸುವ ಗುರಿಯನ್ನು ಹೊಂದಿದ್ದು, ಪ್ರಸ್ತುತ 90 ಬಸ್ ಅಳವಡಿಸಲಾಗುತ್ತಿದೆ. ಇವುಗಳ ಸಂಚಾರದಿಂದ ಮಾಲಿನ್ಯ ತಪ್ಪುತ್ತದೆ ಎಂಬ ವಿಶ್ವಾಸವಿದೆ ಹಾಗೂ ಸಾರ್ವಜನಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸಲು ಬೊಮ್ಮಾಯಿ ಅವರು ಮನವಿ ಮಾಡಿದರು. ಇದನ್ನೂ ಓದಿ: ನಾಪತ್ತೆಯಾಗಿ 7 ವರ್ಷಗಳ ಬಳಿಕ ಪತಿಯನ್ನು ಸೇರಿದ ಪತ್ನಿ! 

BMTC JBM ELECTRIC BUS 1

ತಂತ್ರಜ್ಞಾನವನ್ನು ಮೇಲ್ದರ್ಜೆಗೇರಿಸಿ, ಜನಸ್ನೇಹಿಯಾಗಿಸುವ ಮುಖೇನ ಲಾಭದಾಯಕವಾಗುವಂತೆ ಮಾಡಬೇಕು. ಸಂಸ್ಥೆಗಳು ಆದಾಯದ ಸೋರಿಕೆಯನ್ನು ತಡೆದು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಗಮನ ನೀಡುವಂತೆ ತಿಳಿಸಿದರು. ಸಮಿತಿಯ ಸಲಹೆಗಳನ್ನು ಜಾರಿಗೆ ತರುವ ಮೂಲಕ ಸಾರಿಗೆಗೆ ಹೊಸ ಆಯಾಮ ನೀಡುವ ಕೆಲಸ ಮಾಡಬೇಕು ಎಂದರು. ಹಿಂದೆ ಸಾರ್ವಜನಿಕ ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬಿಎಂಟಿಸಿ ಸೇವೆ ಪಡೆಯುತ್ತಿದ್ದವು. ಮುಂದಿನ ದಿನಗಳಲ್ಲಿ ಹೆಚ್‍ಎಎಲ್-ಮತ್ತಿತರ ಸಾರ್ವಜನಿಕ ಉದ್ದಿಮೆಗಳು ಹಾಗೂ ಐಟಿ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಬಿಎಂಟಿಸಿ ಸೇವೆಯನ್ನು ಬಳಸುವ ಬಗ್ಗೆ ಮನವೊಲಿಸಲಾಗುವುದು ಎಂದರು. ಹೊಸ ಪ್ರಯೋಗ ಮಾಡಿ ದಕ್ಷತೆ, ಕ್ಷಮತೆಯನ್ನು ಹೆಚ್ಚಿಸುವ ಮೂಲಕ ಸಾರಿಗೆ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳು ಸಹಕಾರ ನೀಡಿದರೆ ಫಲಪ್ರದವಾಗುವುದು. ಬಿಎಂಟಿಸಿ ಬದಲಾಗಿ ಹೊಸ ವಿನ್ಯಾಸ ರೂಪಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಇದನ್ನೂ ಓದಿ: ಪ್ರಾಂಶುಪಾಲೆಯ ಕಿರುಕುಳಕ್ಕೆ 5ನೇ ಮಹಡಿಯಿಂದ ಬಿದ್ದು ಪ್ರಾಣ ಬಿಟ್ಟ 13 ವರ್ಷದ ಬಾಲಕಿ

ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪಿ.ಸಿ. ಮೋಹನ್ ಬಿಎಂಟಿಸಿ ಅಧ್ಯಕ್ಷ ನಂದೀಶ ರೆಡ್ಡಿ, ಶಾಸಕರು, ಸಾರಿಗೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

TAGGED:Basavaraj BommaiBMTCBMTC Electric Bus LaunchKarnataka CMಬಿಎಂಟಿಸಿಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌
Share This Article
Facebook Whatsapp Whatsapp Telegram

Cinema news

Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood

You Might Also Like

Belagavi Liquor Seize
Belgaum

ಕಸದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ – 25 ಲಕ್ಷಕ್ಕೂ ಅಧಿಕ ಮೌಲ್ಯದ 900 ಬಾಕ್ಸ್ ಜಪ್ತಿ, ಕಿರಾತಕ ಅರೆಸ್ಟ್

Public TV
By Public TV
7 minutes ago
pakistan army soldiers
Latest

ಬಲೂಚ್‌ ಬಂಡುಕೋರರ ದಾಳಿಗೆ 80ಕ್ಕೂ ಹೆಚ್ಚು ಪಾಕ್‌ ಸೈನಿಕರು ಸಾವು – 18 ಮಂದಿ ಒತ್ತೆಯಾಳು

Public TV
By Public TV
15 minutes ago
Hassan Suicide
Crime

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

Public TV
By Public TV
56 minutes ago
Nirmala Sitharaman
Latest

ಇಂದು ನಿರ್ಮಲಾ ಸೀತಾರಾಮನ್‌ರಿಂದ ದಾಖಲೆಯ 9ನೇ ಕೇಂದ್ರ ಬಜೆಟ್ ಮಂಡನೆ

Public TV
By Public TV
1 hour ago
Price Hike 3
Bengaluru City

ಬೇಸಿಗೆಗೂ ಮುನ್ನವೇ ಬೆಲೆ ಏರಿಕೆ ಹೊಡೆತ – ಅಕ್ಕಿ, ಬೇಳೆಕಾಳುಗಳ ಬೆಲೆ ಹೆಚ್ಚಳ!

Public TV
By Public TV
9 hours ago
Team India 3
Cricket

ಸಿಡಿಲಬ್ಬರದ ಬ್ಯಾಟಿಂಗ್‌, ಬೆಂಕಿ ಬೌಲಿಂಗ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ, 4-1 ರಲ್ಲಿ ಸರಣಿ ಜಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?