Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: BMTC ಭಾರತದ ನಂ.1 ಸಾರಿಗೆ ಸಂಸ್ಥೆಯಾಗಬೇಕು: ಸಿಎಂ ಬಸವರಾಜ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | BMTC ಭಾರತದ ನಂ.1 ಸಾರಿಗೆ ಸಂಸ್ಥೆಯಾಗಬೇಕು: ಸಿಎಂ ಬಸವರಾಜ ಬೊಮ್ಮಾಯಿ

Bengaluru City

BMTC ಭಾರತದ ನಂ.1 ಸಾರಿಗೆ ಸಂಸ್ಥೆಯಾಗಬೇಕು: ಸಿಎಂ ಬಸವರಾಜ ಬೊಮ್ಮಾಯಿ

Public TV
Last updated: December 27, 2021 9:02 pm
Public TV
Share
2 Min Read
BMTC JBM ELECTRIC BUS 2
SHARE

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೊಸ ವಿನ್ಯಾಸ, ಉತ್ತಮ ಸೇವೆ ಹಾಗೂ ಸಂಪನ್ಮೂಲ ಸೃಜನೆಯ ಮೂಲಕ ಭಾರತದಲ್ಲಿಯೇ ನಂ. 1 ಸಾರಿಗೆ ಸಂಸ್ಥೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಶಿಸಿದರು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ ಆಯೋಜಿಸಿರುವ ವಿದ್ಯುತ್ ಚಾಲಿತ ಬಸ್ ಮತ್ತು ಬಿಎಸ್-6 ಡೀಸೆಲ್ ಬಸ್‌ಗಳಿಗೆ ವಿಧಾನಸೌಧದ ಪೂರ್ವದ್ವಾರದ ಬಳಿ ಇಂದು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಈ ದಿಸೆಯಲ್ಲಿ ಬಿಎಂಟಿಸಿಯ ಪ್ರಯತ್ನಗಳಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು.

BMTC JBM ELECTRIC BUS 2

ಸಾರಿಗೆ, ಎಸ್ಕಾಂ ಪುನಶ್ಚೇತನ ಸರ್ಕಾರದ ಸಂಕಲ್ಪ: ಸಬ್ಸಿಡಿ ಆಧಾರದ ಮೇಲೆ ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಕಷ್ಟ ಸಾಧ್ಯ. ಅದಕ್ಕಾಗಿ ರಾಜ್ಯದ ಎಲ್ಲ ಸಾರಿಗೆ ನಿಗಮಗಳನ್ನು ಪುನಶ್ಚೇತನಗೊಳಿಸಲು ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸ ಮೂರ್ತಿ ಅವರ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ. ಸಾರಿಗೆ ವ್ಯವಸ್ಥೆಯ ಸೋರಿಕೆ ತಡೆಗಟ್ಟಿ, ಸಂಪನ್ಮೂಲ ಸೃಷ್ಟಿಗೆ ಒತ್ತು ನೀಡಲು ಹಾಗೂ ಸಂಸ್ಥೆಗಳ ಉತ್ತಮ ಸೇವೆಯ ಮೂಲಕ ಲಾಭದಾಯಕವಾಗಿ ಕಾರ್ಯನಿರ್ವಹಿಸುವ ಕುರಿತು ಈ ಸಮಿತಿ ಶಿಫಾರಸು ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅಂತೆಯೇ ಎಸ್ಕಾಂಗಳ ಪುನಶ್ಚೇತನಕ್ಕೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್ ಅವರ ಅಧ್ಯಕ್ಷತೆಯ ಸಮಿತಿ ರಚಿಸಲಾಗಿದೆ. ಸಾರಿಗೆ ಹಾಗೂ ಎಸ್ಕಾಂಗಳು ಆರ್ಥಿಕವಾಗಿ ಸ್ವಾವಲಂಬನೆಯಾಗಿ ಜನರ ಸೇವೆ, ಸಂಸ್ಥೆ ಕಟ್ಟಲು ಹಾಗೂ ಸರ್ಕಾರದ ಮೇಲೆ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಈ ಸಮಿತಿಗಳನ್ನು ರಚಿಸಲಾಗಿದೆ ಎಂದರು.

BMTC JBM ELECTRIC BUS 4

ಮಾಲಿನ್ಯ ರಹಿತ ಬಸ್‌ಗಳು: ಬಿಎಸ್-6 ನಂತಹ ವಾಹನಗಳನ್ನು ಅಳವಡಿಸಿರುವುದು ಸಂತೋಷದ ವಿಷಯವಾಗಿದೆ. ಪರಿಸರ ಮಾಲಿನ್ಯ ಮುಕ್ತ 300 ವಿದ್ಯುತ್ ಚಾಲಿತ ಬಸ್‍ಗಳನ್ನು ಅಳವಡಿಸುವ ಗುರಿಯನ್ನು ಹೊಂದಿದ್ದು, ಪ್ರಸ್ತುತ 90 ಬಸ್ ಅಳವಡಿಸಲಾಗುತ್ತಿದೆ. ಇವುಗಳ ಸಂಚಾರದಿಂದ ಮಾಲಿನ್ಯ ತಪ್ಪುತ್ತದೆ ಎಂಬ ವಿಶ್ವಾಸವಿದೆ ಹಾಗೂ ಸಾರ್ವಜನಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸಲು ಬೊಮ್ಮಾಯಿ ಅವರು ಮನವಿ ಮಾಡಿದರು. ಇದನ್ನೂ ಓದಿ: ನಾಪತ್ತೆಯಾಗಿ 7 ವರ್ಷಗಳ ಬಳಿಕ ಪತಿಯನ್ನು ಸೇರಿದ ಪತ್ನಿ! 

BMTC JBM ELECTRIC BUS 1

ತಂತ್ರಜ್ಞಾನವನ್ನು ಮೇಲ್ದರ್ಜೆಗೇರಿಸಿ, ಜನಸ್ನೇಹಿಯಾಗಿಸುವ ಮುಖೇನ ಲಾಭದಾಯಕವಾಗುವಂತೆ ಮಾಡಬೇಕು. ಸಂಸ್ಥೆಗಳು ಆದಾಯದ ಸೋರಿಕೆಯನ್ನು ತಡೆದು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಗಮನ ನೀಡುವಂತೆ ತಿಳಿಸಿದರು. ಸಮಿತಿಯ ಸಲಹೆಗಳನ್ನು ಜಾರಿಗೆ ತರುವ ಮೂಲಕ ಸಾರಿಗೆಗೆ ಹೊಸ ಆಯಾಮ ನೀಡುವ ಕೆಲಸ ಮಾಡಬೇಕು ಎಂದರು. ಹಿಂದೆ ಸಾರ್ವಜನಿಕ ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬಿಎಂಟಿಸಿ ಸೇವೆ ಪಡೆಯುತ್ತಿದ್ದವು. ಮುಂದಿನ ದಿನಗಳಲ್ಲಿ ಹೆಚ್‍ಎಎಲ್-ಮತ್ತಿತರ ಸಾರ್ವಜನಿಕ ಉದ್ದಿಮೆಗಳು ಹಾಗೂ ಐಟಿ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಬಿಎಂಟಿಸಿ ಸೇವೆಯನ್ನು ಬಳಸುವ ಬಗ್ಗೆ ಮನವೊಲಿಸಲಾಗುವುದು ಎಂದರು. ಹೊಸ ಪ್ರಯೋಗ ಮಾಡಿ ದಕ್ಷತೆ, ಕ್ಷಮತೆಯನ್ನು ಹೆಚ್ಚಿಸುವ ಮೂಲಕ ಸಾರಿಗೆ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳು ಸಹಕಾರ ನೀಡಿದರೆ ಫಲಪ್ರದವಾಗುವುದು. ಬಿಎಂಟಿಸಿ ಬದಲಾಗಿ ಹೊಸ ವಿನ್ಯಾಸ ರೂಪಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಇದನ್ನೂ ಓದಿ: ಪ್ರಾಂಶುಪಾಲೆಯ ಕಿರುಕುಳಕ್ಕೆ 5ನೇ ಮಹಡಿಯಿಂದ ಬಿದ್ದು ಪ್ರಾಣ ಬಿಟ್ಟ 13 ವರ್ಷದ ಬಾಲಕಿ

ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪಿ.ಸಿ. ಮೋಹನ್ ಬಿಎಂಟಿಸಿ ಅಧ್ಯಕ್ಷ ನಂದೀಶ ರೆಡ್ಡಿ, ಶಾಸಕರು, ಸಾರಿಗೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

TAGGED:Basavaraj BommaiBMTCBMTC Electric Bus LaunchKarnataka CMಬಿಎಂಟಿಸಿಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌
Share This Article
Facebook Whatsapp Whatsapp Telegram

Cinema news

Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post
kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories

You Might Also Like

Ajit Pawar Dies Plane plane was headed towards the runway but it fell down a 100 feet before it Eyewitness
Latest

Ajit Pawar Dies | ಲ್ಯಾಂಡ್‌ ಆಗಲು ಇನ್ನೇನು 100 ಅಡಿ ಬಾಕಿಯಿದ್ದಾಗ ಪತನಗೊಂಡು ಸ್ಫೋಟ: ಪ್ರತ್ಯಕ್ಷದರ್ಶಿ

Public TV
By Public TV
11 seconds ago
Narendra Modi Ajit Pawar
Latest

ಅಜಿತ್ ಪವಾರ್ ಮಹಾರಾಷ್ಟ್ರದ ಜನರ ಸೇವೆಗೆ ಮುಂಚೂಣಿಯಲ್ಲಿದ್ದರು: ಮೋದಿ ಸಂತಾಪ

Public TV
By Public TV
14 minutes ago
ajit pawar plane crash VT SSK
Latest

ವಿಮಾನ ಪತನವಾಗಿ ‘ಮಹಾ’ ಡಿಸಿಎಂ ಅಜಿತ್ ಪವಾರ್ ಸಾವು – ಅಪಘಾತಕ್ಕೀಡಾದ ವಿಮಾನದ ಬಗ್ಗೆ ನಮಗೆಷ್ಟು ಗೊತ್ತು?

Public TV
By Public TV
43 minutes ago
Ajit Pawars Plane Crash
Latest

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದ್ದ ವಿಮಾನ ಪತನ

Public TV
By Public TV
45 minutes ago
Ajit Pawar Dies In Plane Crash
Latest

Ajit Pawar: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

Public TV
By Public TV
1 hour ago
Parliament Mansoon Session
Latest

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಶುರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?