Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: BMTC ಭಾರತದ ನಂ.1 ಸಾರಿಗೆ ಸಂಸ್ಥೆಯಾಗಬೇಕು: ಸಿಎಂ ಬಸವರಾಜ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | BMTC ಭಾರತದ ನಂ.1 ಸಾರಿಗೆ ಸಂಸ್ಥೆಯಾಗಬೇಕು: ಸಿಎಂ ಬಸವರಾಜ ಬೊಮ್ಮಾಯಿ

Bengaluru City

BMTC ಭಾರತದ ನಂ.1 ಸಾರಿಗೆ ಸಂಸ್ಥೆಯಾಗಬೇಕು: ಸಿಎಂ ಬಸವರಾಜ ಬೊಮ್ಮಾಯಿ

Public TV
Last updated: December 27, 2021 9:02 pm
Public TV
Share
2 Min Read
BMTC JBM ELECTRIC BUS 2
SHARE

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೊಸ ವಿನ್ಯಾಸ, ಉತ್ತಮ ಸೇವೆ ಹಾಗೂ ಸಂಪನ್ಮೂಲ ಸೃಜನೆಯ ಮೂಲಕ ಭಾರತದಲ್ಲಿಯೇ ನಂ. 1 ಸಾರಿಗೆ ಸಂಸ್ಥೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಶಿಸಿದರು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ ಆಯೋಜಿಸಿರುವ ವಿದ್ಯುತ್ ಚಾಲಿತ ಬಸ್ ಮತ್ತು ಬಿಎಸ್-6 ಡೀಸೆಲ್ ಬಸ್‌ಗಳಿಗೆ ವಿಧಾನಸೌಧದ ಪೂರ್ವದ್ವಾರದ ಬಳಿ ಇಂದು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಈ ದಿಸೆಯಲ್ಲಿ ಬಿಎಂಟಿಸಿಯ ಪ್ರಯತ್ನಗಳಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು.

BMTC JBM ELECTRIC BUS 2

ಸಾರಿಗೆ, ಎಸ್ಕಾಂ ಪುನಶ್ಚೇತನ ಸರ್ಕಾರದ ಸಂಕಲ್ಪ: ಸಬ್ಸಿಡಿ ಆಧಾರದ ಮೇಲೆ ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಕಷ್ಟ ಸಾಧ್ಯ. ಅದಕ್ಕಾಗಿ ರಾಜ್ಯದ ಎಲ್ಲ ಸಾರಿಗೆ ನಿಗಮಗಳನ್ನು ಪುನಶ್ಚೇತನಗೊಳಿಸಲು ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸ ಮೂರ್ತಿ ಅವರ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ. ಸಾರಿಗೆ ವ್ಯವಸ್ಥೆಯ ಸೋರಿಕೆ ತಡೆಗಟ್ಟಿ, ಸಂಪನ್ಮೂಲ ಸೃಷ್ಟಿಗೆ ಒತ್ತು ನೀಡಲು ಹಾಗೂ ಸಂಸ್ಥೆಗಳ ಉತ್ತಮ ಸೇವೆಯ ಮೂಲಕ ಲಾಭದಾಯಕವಾಗಿ ಕಾರ್ಯನಿರ್ವಹಿಸುವ ಕುರಿತು ಈ ಸಮಿತಿ ಶಿಫಾರಸು ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅಂತೆಯೇ ಎಸ್ಕಾಂಗಳ ಪುನಶ್ಚೇತನಕ್ಕೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್ ಅವರ ಅಧ್ಯಕ್ಷತೆಯ ಸಮಿತಿ ರಚಿಸಲಾಗಿದೆ. ಸಾರಿಗೆ ಹಾಗೂ ಎಸ್ಕಾಂಗಳು ಆರ್ಥಿಕವಾಗಿ ಸ್ವಾವಲಂಬನೆಯಾಗಿ ಜನರ ಸೇವೆ, ಸಂಸ್ಥೆ ಕಟ್ಟಲು ಹಾಗೂ ಸರ್ಕಾರದ ಮೇಲೆ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಈ ಸಮಿತಿಗಳನ್ನು ರಚಿಸಲಾಗಿದೆ ಎಂದರು.

BMTC JBM ELECTRIC BUS 4

ಮಾಲಿನ್ಯ ರಹಿತ ಬಸ್‌ಗಳು: ಬಿಎಸ್-6 ನಂತಹ ವಾಹನಗಳನ್ನು ಅಳವಡಿಸಿರುವುದು ಸಂತೋಷದ ವಿಷಯವಾಗಿದೆ. ಪರಿಸರ ಮಾಲಿನ್ಯ ಮುಕ್ತ 300 ವಿದ್ಯುತ್ ಚಾಲಿತ ಬಸ್‍ಗಳನ್ನು ಅಳವಡಿಸುವ ಗುರಿಯನ್ನು ಹೊಂದಿದ್ದು, ಪ್ರಸ್ತುತ 90 ಬಸ್ ಅಳವಡಿಸಲಾಗುತ್ತಿದೆ. ಇವುಗಳ ಸಂಚಾರದಿಂದ ಮಾಲಿನ್ಯ ತಪ್ಪುತ್ತದೆ ಎಂಬ ವಿಶ್ವಾಸವಿದೆ ಹಾಗೂ ಸಾರ್ವಜನಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸಲು ಬೊಮ್ಮಾಯಿ ಅವರು ಮನವಿ ಮಾಡಿದರು. ಇದನ್ನೂ ಓದಿ: ನಾಪತ್ತೆಯಾಗಿ 7 ವರ್ಷಗಳ ಬಳಿಕ ಪತಿಯನ್ನು ಸೇರಿದ ಪತ್ನಿ! 

BMTC JBM ELECTRIC BUS 1

ತಂತ್ರಜ್ಞಾನವನ್ನು ಮೇಲ್ದರ್ಜೆಗೇರಿಸಿ, ಜನಸ್ನೇಹಿಯಾಗಿಸುವ ಮುಖೇನ ಲಾಭದಾಯಕವಾಗುವಂತೆ ಮಾಡಬೇಕು. ಸಂಸ್ಥೆಗಳು ಆದಾಯದ ಸೋರಿಕೆಯನ್ನು ತಡೆದು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಗಮನ ನೀಡುವಂತೆ ತಿಳಿಸಿದರು. ಸಮಿತಿಯ ಸಲಹೆಗಳನ್ನು ಜಾರಿಗೆ ತರುವ ಮೂಲಕ ಸಾರಿಗೆಗೆ ಹೊಸ ಆಯಾಮ ನೀಡುವ ಕೆಲಸ ಮಾಡಬೇಕು ಎಂದರು. ಹಿಂದೆ ಸಾರ್ವಜನಿಕ ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬಿಎಂಟಿಸಿ ಸೇವೆ ಪಡೆಯುತ್ತಿದ್ದವು. ಮುಂದಿನ ದಿನಗಳಲ್ಲಿ ಹೆಚ್‍ಎಎಲ್-ಮತ್ತಿತರ ಸಾರ್ವಜನಿಕ ಉದ್ದಿಮೆಗಳು ಹಾಗೂ ಐಟಿ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಬಿಎಂಟಿಸಿ ಸೇವೆಯನ್ನು ಬಳಸುವ ಬಗ್ಗೆ ಮನವೊಲಿಸಲಾಗುವುದು ಎಂದರು. ಹೊಸ ಪ್ರಯೋಗ ಮಾಡಿ ದಕ್ಷತೆ, ಕ್ಷಮತೆಯನ್ನು ಹೆಚ್ಚಿಸುವ ಮೂಲಕ ಸಾರಿಗೆ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳು ಸಹಕಾರ ನೀಡಿದರೆ ಫಲಪ್ರದವಾಗುವುದು. ಬಿಎಂಟಿಸಿ ಬದಲಾಗಿ ಹೊಸ ವಿನ್ಯಾಸ ರೂಪಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಇದನ್ನೂ ಓದಿ: ಪ್ರಾಂಶುಪಾಲೆಯ ಕಿರುಕುಳಕ್ಕೆ 5ನೇ ಮಹಡಿಯಿಂದ ಬಿದ್ದು ಪ್ರಾಣ ಬಿಟ್ಟ 13 ವರ್ಷದ ಬಾಲಕಿ

ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪಿ.ಸಿ. ಮೋಹನ್ ಬಿಎಂಟಿಸಿ ಅಧ್ಯಕ್ಷ ನಂದೀಶ ರೆಡ್ಡಿ, ಶಾಸಕರು, ಸಾರಿಗೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

TAGGED:Basavaraj BommaiBMTCBMTC Electric Bus LaunchKarnataka CMಬಿಎಂಟಿಸಿಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
1 minute ago
a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
8 minutes ago
Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
24 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
37 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
1 hour ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?