Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಜನತಾ ದರ್ಶನಕ್ಕೆ ಭರ್ಜರಿ ಪ್ರತಿಕ್ರಿಯೆ – ದಿನವಿಡೀ ದೂರು ದುಮ್ಮಾನ ಆಲಿಸಿದ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಜನತಾ ದರ್ಶನಕ್ಕೆ ಭರ್ಜರಿ ಪ್ರತಿಕ್ರಿಯೆ – ದಿನವಿಡೀ ದೂರು ದುಮ್ಮಾನ ಆಲಿಸಿದ ಸಿದ್ದರಾಮಯ್ಯ

Bengaluru City

ಸಿಎಂ ಜನತಾ ದರ್ಶನಕ್ಕೆ ಭರ್ಜರಿ ಪ್ರತಿಕ್ರಿಯೆ – ದಿನವಿಡೀ ದೂರು ದುಮ್ಮಾನ ಆಲಿಸಿದ ಸಿದ್ದರಾಮಯ್ಯ

Public TV
Last updated: November 27, 2023 9:44 pm
Public TV
Share
3 Min Read
Karnataka CM Siddaramaiah Janata Darshana Gets Huge Response
SHARE

– ಆರೋಗ್ಯ ಸಮಸ್ಯೆ ಇದ್ದವರಿಗೆ ಸ್ಥಳದಲ್ಲೇ ಸ್ಪಂದನೆ

ಬೆಂಗಳೂರು: ಜನ ಸ್ಪಂದನ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ದಿನವಿಡೀ ನಡೆಸಿದ ಜನತಾ ದರ್ಶನಕ್ಕೆ (Janata Darshan) ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಸಿಎಂ ಬಳಿಕ ತಮ್ಮ ದೂರು ದುಮ್ಮಾನ, ಕಷ್ಟ ಕೋಟಲೆಗಳನ್ನು ಹೇಳಿಕೊಳ್ಳಲು ಇಡೀ ದಿನ ಸಿಎಂ ಗೃಹಕಚೇರಿ ಕೃಷ್ಣಾ ಬಳಿ ಸಾವಿರಾರು ಮಂದಿ ಬಂದಿದ್ದರು.

ಊಟಕ್ಕೂ ಮನೆಯೊಳಗೆ ಹೋಗದ ಸಿಎಂ ಸಿದ್ದರಾಮಯ್ಯ, ಅಲ್ಲೇ ಕುಳಿತು 10 ನಿಮಿಷದಲ್ಲಿ ಊಟ ಮುಗಿಸಿ ಜನರ ಕಷ್ಟಗಳಿಗೆ ದನಿಯಾಗುವ ಕೆಲಸ ಮಾಡಿದರು. ಸಮಸ್ಯೆ ಕೇಳಿದ್ದಕ್ಕೆ ಹಿರಿಯ ವ್ಯಕ್ತಿಯೊಬ್ಬರು ಸಿಎಂ ತಲೆಯನ್ನು ಪ್ರೀತಿಯಿಂದ ನೇವರಿಸಿದರು.

ಬೆಳಗ್ಗೆ 10:30ರಿಂದ ಸಂಜೆ 5 ಗಂಟೆವರೆಗೂ 3500ಕ್ಕೂ ಹೆಚ್ಚು ಅರ್ಜಿಗಳನ್ನು ಸಿಎಂ ಸ್ವೀಕರಿಸಿದ್ದು, ಗಂಭೀರ ಅನಾರೋಗ್ಯ, ವರ್ಗಾವಣೆಯಂತಹ 65 ಸಮಸ್ಯೆಗಳಿಗೆ ಸಿಎಂ ಸ್ಥಳದಲ್ಲೇ ಪರಿಹಾರ ನೀಡಿದರು. ಕೆಲ ಅರ್ಜಿಗಳ ಪರಿಶೀಲನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು.  ಇದನ್ನೂ ಓದಿ: ದೃಷ್ಟಿ ಸಮಸ್ಯೆಯಿದ್ದರೂ ದೇಶಕ್ಕಾಗಿ ಕ್ರಿಕೆಟ್‌ ಆಡುವ ಯುವತಿಗೆ ಬೇಕಿದೆ ಸಹಾಯ

ಸಾವಿರಕ್ಕೂ ಹೆಚ್ಚು ಅಧಿಕಾರಿಗಳನ್ನು ಅತ್ತಿತ್ತ ಕದಲದಂತೆ, ಜನರ ಸಮಸ್ಯೆಗಳನ್ನು ಇತ್ಯರ್ಥ ಮಾಡುವುದಕ್ಕೆ ಬಿಟ್ಟಿದ್ದರು. ಜನತಾದರ್ಶನಕ್ಕೆ ಚಿತ್ರವಿಚಿತ್ರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಂದಿದ್ದ ಕೆಲವರು ಸಿಎಂ ಗಮನ ಸೆಳೆಯಲು ಯತ್ನಿಸಿದರು.

ದೂರು ಸ್ವೀಕರಿಸಲು 20 ಕೌಂಟರ್ ತೆರೆಯಲಾಗಿತ್ತು. ಹಿರಿಯ ನಾಗರೀಕರು, ವಿಶೇಷ ಚೇತನರಿಗೆ ಪ್ರತ್ಯೇಕ ಕೌಂಟರ್ ತೆರೆಯಲಾಗಿತ್ತು. ದೂರದೂರುಗಳಿಂದ ಬಂದಿದ್ದವರಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಇದನ್ನೂ ಓದಿ: ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ನಿಧನ

ಆನ್‌ಲೈನ್ ಮೂಲಕವೂ ಸಿಎಂಗೆ ದೂರು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. 1902ಕ್ಕೆ ಕರೆ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ. ಮೂರು ತಿಂಗಳಿಗೊಮ್ಮೆ ಜನಸ್ಪಂದನ ನಡೆಸುವುದಾಗಿ ಸಿಎಂ ಘೋಷಿಸಿದ್ದಾರೆ.

ಯಾವೆಲ್ಲ ದೂರು ಬಂದಿತ್ತು?
ಗೃಹಲಕ್ಷ್ಮಿ ಯೋಜನೆ ತಾಂತ್ರಿಕ ತೊಂದರೆ ಬಗೆಹರಿಸಿ
ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಅರ್ಜಿ ತೆಗೆದುಕೊಳ್ಳುತ್ತಿಲ್ಲ. ಎಲ್ಲಾ ಕೆವೈಸಿ ಅಪ್ಡೇಟ್ ಮಾಡಿ ದಾಖಲೆ ಸಲ್ಲಿಸಿದರೂ ಅರ್ಜಿ ಸ್ವೀಕಾರದಲ್ಲಿ ತಾಂತ್ರಿಕ ಸಮಸ್ಯೆ ಬಗ್ಗೆ ಹಲವರಿಂದ ದೂರು ನೀಡಿದರು. ಈ ಸಮಸ್ಯೆಯನ್ನು ಬೇಗ ಬಗೆಹರಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.

ಸಕಾಲ ಸಿಬ್ಬಂದಿಗೆ ವೇತನ ರಿಲೀಸ್ ಮಾಡಿಸಿ ಮಹಿಳೆ ಕಣ್ಣೀರು
2011 ರಲ್ಲಿ ನಿಯೋಜನೆಗೊಂಡ ಸಕಾಲ ಸಿಬ್ಬಂದಿಗೆ ಕಳೆದ ಒಂದು ವರ್ಷದಿಂದ ವೇತನ ನೀಡುತ್ತಿಲ್ಲ ಎಂದು ಮಹಿಳೆಯೊಬ್ಬರು ಕಣ್ಣೀರು ಹಾಕಿದರು. ಬೆಂಗಳೂರು ಉತ್ತರ, ದಕ್ಷಿಣ ತಾಲೂಕು ಕಚೇರಿಗಳ ಸಕಾಲ ಸಿಬ್ಬಂದಿಗೆ ಬಾಕಿ ವೇತನ ಬಿಡುಗಡೆಗೆ ಸಿಎಂ ಸೂಚಿಸಿದರು.

ವಿಕ್ಟೋರಿಯಾ ಅವ್ಯವಸ್ಥೆ ಸರಿ ಮಾಡಿಸಿ
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆಯಿಂದ ಕೂಡಿದೆ ಎಂದ ಅಜ್ಜಿಯೊಬ್ಬರು ದೂರು ನೀಡಿದರು. ಚಳಿ ಜ್ವರದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಈ ವೇಳೆ ಅಲ್ಲಿರುವ ಸಿಬ್ಬಂದಿ ನಿರ್ಲಕ್ಷ ತೋರಿದ್ದಾರೆ ಎಂದು ಅಳಲು ತೋಡಿಕೊಂಡರು.

ಪಹಣಿ ಸಮಸ್ಯೆ.. ವಿಜಯನಗರ ಡಿಸಿಗೆ ಕ್ಲಾಸ್
ವಿಜಯನಗರ ಡಿಸಿಗೆ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ ಪಹಣಿ ವಿಚಾರಕ್ಕೆ ನನ್ನ ಬಳಿ ಬರಬೇಕಾ? ಇದನ್ನೆಲ್ಲ ನೀವೇ ಪರಿಹಾರ ಮಾಡಲು ಆಗುದಿಲ್ಲವೇ? ಎಂದು ಪ್ರಶ್ನಿಸಿ ವಿಡಿಯೋ ಕಾನ್ಫರೆನ್ಸ್ ಕ್ಲಾಸ್‌ ತೆಗೆದುಕೊಂಡರು.

ವಿಜಯೇಂದ್ರ, ಪ್ರೀತಂ ವಿರುದ್ಧ ದೂರು
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಹಾಸನ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಮಹೇಂದ್ರ ಎಂಬವರು ದೂರು ನೀಡಿದರು. ಅನಾಥ ಮಕ್ಕಳಿಗಾಗಿ ಕೊಟ್ಟಿದ್ದ ಭೂಮಿ ಸಮಸ್ಯೆಯಾಗಿದೆ. ಸರ್ಕಾರಿ ಉದ್ಯೋಗಿಯಾದ ತನ್ನ ಪತ್ನಿಗೂ ಪ್ರೀತಂಗೌಡ ಕಿರುಕುಳ ಕೊಡ್ತಿದ್ದಾರೆ ಎಂದು ಅಳಲು ತೋಡಿಕೊಂಡರು. ತನಿಖೆ ಮಾಡಿಸುವುದಾಗಿ ಸಿಎಂ ಭರವಸೆ ನೀಡಿದರು.

ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್‌ಗೆ 22 ಗುಂಟೆ ಜಮೀನು
ಗದಗದಲ್ಲಿ ಪುತ್ರನ ಹೆಸರಿನ ಟ್ರಸ್ಟ್‌ಗೆ ಸಿಎಂ ನಿವೇಶನ ಮಂಜೂರು ಮಾಡಿಸಿದ್ದರು. ಆದರೆ ಸಚಿವ ಹೆಚ್‌ಕೆ ಪಾಟೀಲ್ ಈ ಜಮೀನನ್ನು ಬೇರೆ ಉದ್ದೇಶಕ್ಕೆ ಹಸ್ತಾಂತರಿಸಲು ಸೂಚಿಸಿದ್ದಾರೆ. ಹೀಗಾಗಿ ಟ್ರಸ್ಟ್ ಮುಖ್ಯಸ್ಥ ರಾಮಕೃಷ್ಣ ರೊಳ್ಳಿ ಸಿಎಂ ಬಳಿ ದೂರಿತ್ತರು. ಕೂಡಲೇ ಗದಗ ಡಿಸಿಗೆ ಕರೆ ಮಾಡಿದ ಸಿಎಂ, ಆ 22 ಗಂಟೆ ನಿವೇಶನವನ್ನು ರಾಕೇಶ್ ಸಿದ್ದರಾಮಯ್ಯ (Rakesh Siddaramaiah) ಟ್ರಸ್ಟ್‌ಗೆ ಕೊಡಬೇಕು ಎಂದು ನಿರ್ದೇಶನ ನೀಡಿದರು.

ರಾಹುಲ್ ಗಾಂಧಿ ಭೇಟಿ ಮಾಡಿಸಿ
ಅಥಣಿಯ ಅಶೋಕ್ ಎಂಬವರು ಊರಿನಲ್ಲಿ ಇಂದಿರಾಗಾಂಧಿ ಪ್ರತಿಮೆ ಮಾಡಿದ್ದೇನೆ. ಅದನ್ನು ತೋರಿಸಲು ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿ ಮಾಡಿಸಿ ಎಂದು ಬೇಡಿಕೆಯಿಟ್ಟರು. ಇದಕ್ಕೆ ಹೌದಾ ಎಂದ ಸಿಎಂ ಅವರಿಗೆ ಹೇಳ್ತೀನಿ ಹೋಗು ಎಂದು ಹೇಳಿ ಕಳುಹಿಸಿಕೊಟ್ಟರು.

TAGGED:congressJanata Darshankarnatakapoliticssiddaramaiahಕರ್ನಾಟಕಕಾಂಗ್ರೆಸ್ಜನತಾ ದರ್ಶನಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

dinner meeting congress mla 2
Bengaluru City

ಡಿಕೆಶಿ, ಸಿಎಂ ಆಯ್ತು ಈಗ ಕೈ ಶಾಸಕರಿಂದಲೇ ಡಿನ್ನರ್‌ ಸಭೆ!

Public TV
By Public TV
3 hours ago
Davanagere by election Muslim leaders challenge Congress to defeat Shamanur family by 50000 votes if given ticket
Davanagere

ಶಾಮನೂರು ಕುಟುಂಬಕ್ಕೆ ಟಿಕೆಟ್‌ ನೀಡಿದ್ರೆ 50 ಸಾವಿರ ಮತಗಳಿಂದ ಸೋಲಿಸುತ್ತೇವೆ: ಕಾಂಗ್ರೆಸ್‌ಗೆ ಮುಸ್ಲಿಮ್‌ ನಾಯಕರಿಂದ ಚಾಲೆಂಜ್‌

Public TV
By Public TV
3 hours ago
Sandesh PG
Dakshina Kannada

ಪತಿಯನ್ನ ಅರೆಸ್ಟ್ ಮಾಡಿ ಪತ್ನಿಯನ್ನ ಮಂಚಕ್ಕೆ ಕರೀತಿದ್ದ ಕೇಸ್ –  ಇನ್ಸ್‌ಪೆಕ್ಟರ್‌ ಸಂದೇಶ್ ಸಸ್ಪೆಂಡ್

Public TV
By Public TV
3 hours ago
vyalikaval parcel
Bengaluru City

ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿ ಪಾರ್ಸೆಲ್ – ಕೊರಿಯರ್ ಆಫೀಸಲ್ಲಿ ಸಿಕ್ಕಿಬಿದ್ದ ಕುಟುಂಬ

Public TV
By Public TV
4 hours ago
Gadag Farmer Death
Districts

ಕೆಲಸ ಮುಗಿಸಿ ಬರುವಾಗ ಸಿಡಿಲು ಬಡಿದು ರೈತ ಸಾವು

Public TV
By Public TV
5 hours ago
bengaluru hubballi karave protest for kannada railway exam postponed
Bengaluru City

ಕನ್ನಡಕ್ಕಾಗಿ ಕರವೇ ಪ್ರತಿಭಟನೆ – ರೈಲ್ವೇ ಪರೀಕ್ಷೆ ಮುಂದೂಡಿಕೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?