Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋಲಿಬಾರ್‌ಗೆ ಬಲಿಯಾದವರಿಗೆ ಘೋಷಿಸಿದ ಪರಿಹಾರ ವಾಪಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Uncategorized | ಗೋಲಿಬಾರ್‌ಗೆ ಬಲಿಯಾದವರಿಗೆ ಘೋಷಿಸಿದ ಪರಿಹಾರ ವಾಪಸ್

Uncategorized

ಗೋಲಿಬಾರ್‌ಗೆ ಬಲಿಯಾದವರಿಗೆ ಘೋಷಿಸಿದ ಪರಿಹಾರ ವಾಪಸ್

Public TV
Last updated: December 25, 2019 8:58 pm
Public TV
Share
2 Min Read
bsy 5
SHARE

– ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ
– ಆರೋಪಿಗಳ ಪತ್ತೆ 8 ತಂಡ ರಚನೆ

ಮಂಗಳೂರು: ಪೌರತ್ವ ಕಾಯಿದೆ ಮತ್ತು ಎನ್‍ಆರ್‍ಸಿ ವಿರೋಧಿಸಿ ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಸಂಭವಿಸಿದ್ದ ಹಿಂಸಾಚಾರದಲ್ಲಿ ಪೊಲೀಸ್ ಗೋಲಿಬಾರ್‌ಗೆ  ಬಲಿಯಾದ ಜಲೀಲ್, ನೌಶೀನ್‍ಗೆ ಘೋಷಿಸಿದ್ದ ಪರಿಹಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹಿಂಪಡೆದಿದ್ದಾರೆ.

ಮಂಗಳೂರಲ್ಲಿ ಮಾತನಾಡಿ, ಮೃತಪಟ್ಟವರು ಕೃತ್ಯದಲ್ಲಿ ಭಾಗಿಯಾದವರೆಂದು ಮೇಲ್ನೋಟಕ್ಕೆ ಕಂಡುಬಂದಿದೆ. ಅಪರಾಧಿಗಳಿಗೆ ಪರಿಹಾರ ಕೊಟ್ಟ ನಿದರ್ಶನ ದೇಶದಲ್ಲಿ ಇಲ್ಲ ಎಂದಿದ್ದಾರೆ. ಉಡುಪಿಯಲ್ಲಿ ಮಾತನಾಡಿ, ತನಿಖೆ ಮೊದಲು ಪರಿಹಾರ ಕೊಟ್ಟರೆ ಅಪರಾಧ ಆಗುತ್ತದೆ. ನಮಗೆ ಮನವರಿಕೆ ಆಗಿದೆ. ಬೇರೆಯವರೆಲ್ಲ ಕೊಟ್ಟಿದ್ದಾರೆ ನಮ್ಮ ಅಭ್ಯಂತರ ಇಲ್ಲ. ತನಿಖೆಯಾದ ಮೇಲೆ ಪರಿಹಾರದ ಬಗ್ಗೆ ಘೊಷಣೆ ಮಾಡುತ್ತೇವೆ ಎಂದು ಪುನಾರುಚ್ಚರಿಸಿದ್ದಾರೆ.

mng galabe cctv 2

ಪರಿಹಾರ ವಾಪಸ್ ಪಡೆದ ಬಿಎಸ್‍ವೈ ನಡೆಗೆ ಬಿಜೆಪಿಯಲ್ಲೇ ಪರ ವಿರೋಧ ಎದ್ದಿದೆ. ಸಚಿವರಾದ ಈಶ್ವರಪ್ಪ, ಕೊಲೆಗಡುಕರಿಗೆ ಪರಿಹಾರ ಕೊಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದರೆ ಸಂಸದೆ ಶೋಭಾ ಕರಂದ್ಲಾಜೆ ಅವರು ಅಪರಾಧಿಗಳಿಗೆ ಪರಿಹಾರ ನೀಡಿದ ಉದಾಹರಣೆ ದೇಶದಲ್ಲಿ ಇಲ್ಲ ಅಂದಿದ್ದಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ಮಾತ್ರ ಗೋಲಿಬಾರ್‍ನಲ್ಲಿ ಸತ್ತವರಿಗೆ ಪರಿಹಾರ ಕೊಡ್ಬೇಕು. ಘಟನೆ ಬಗ್ಗೆ ನ್ಯಾಯಾಂಗ ತನಿಖೆಯಲ್ಲಿ ಎಲ್ಲವೂ ಗೊತ್ತಾಗುತ್ತದೆ ಎಂದಿದ್ದಾರೆ.

ಕಾಂಗ್ರೆಸ್ ವಿರೋಧ: ಪರಿಹಾರ ವಾಪಸ್ ಪಡೆಯುವ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸಿಗರು ಖಂಡಾತುಂಡವಾಗಿ ಖಂಡಿಸಿದ್ದಾರೆ. ಯುಟಿ ಖಾದರ್ ಅವರಂತೂ, ಮುಖ್ಯಮಂತ್ರಿಯವರೇ ಮೃತರ ಕುಟುಂಬಸ್ಥರನ್ನು ಕರೆದು ಸಾಂತ್ವನ ಹೇಳಿದ್ದರು. 10 ಲಕ್ಷ ಪರಿಹಾರವನ್ನೂ ಘೋಷಿಸಿದ್ರು. ಆದ್ರೀಗ, ಕಾರ್ಯಕರ್ತರ ಮಾತು ಕೇಳಿ ಪರಿಹಾರ ಹಿಂಪಡೆಯುತ್ತಿದ್ದಾರೆ. ಇವರು ರಾಜ್ಯಕ್ಕೆ ಮುಖ್ಯಮಂತ್ರಿಯೋ, ಬಿಜೆಪಿ ಕಾರ್ಯಕರ್ತರಿಗೋ ಎಂದು ಪ್ರಶ್ನಿಸಿದ್ದಾರೆ.

mng galabe cctv 1

ಮಾಜಿ ಸಂಸದ ವೀರಪ್ಪ ಮೊಯ್ಲಿ, ಸತ್ತ ಮೇಲೆ ಆಪಾದಿತನಾಗುವುದು ಹೇಗಾಗುತ್ತದೆ? ಒಮ್ಮೆ ಪರಿಹಾರ ಘೋಷಣೆ ಮಾಡಿ, ಹಿಂಪಡೀತಾರೆ ಅಂದ್ರೇನು ಅಂತ ಪ್ರಶ್ನಿಸಿದ್ದಾರೆ. ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲರು, ಗೋಲಿಬಾರಿನಲ್ಲಿ ಸತ್ತವರ ಜೀವ ವಾಪಸ್ ಕೊಡಲಿ. ಸತ್ತವರಲ್ಲಿ ಒಬ್ಬ ಪಿಎಚ್‍ಡಿ ಪೇಪರ್ ತರಲು ಹೋಗಿದ್ದ ವಿದ್ಯಾರ್ಥಿ. ಒಬ್ಬರು ಪೊಲೀಸ್‍ಗಷ್ಟೇ ಗಾಯವಾಗಿದೆ. ಪೊಲೀಸರು ವೀಡಿಯೋ ರಿಲೀಸ್ ಮಾಡಿ ಸತ್ಯ ಮುಚ್ಚಿಹಾಕುವ ಯತ್ನ ಮಾಡ್ತಿದ್ದಾರೆ ಅಂತ ಆರೋಪಿಸಿದ್ದಾರೆ.

8 ತಂಡ ರಚನೆ: ಮಂಗಳೂರು ಹಿಂಸಾಚಾರದ ದುಷ್ಕರ್ಮಿಗಳ ಪತ್ತೆಗೆ 8 ತಂಡಗಳನ್ನು ಮಂಗಳೂರು ಕಮಿಷನರ್ ಪಿ.ಎಸ್ ಹರ್ಷ ರಚಿಸಿದ್ದಾರೆ. ಡಿಸಿಪಿ ಮತ್ತು ಇನ್ಸ್ ಪೆಕ್ಟರ್ ನೇತೃತ್ವದಲ್ಲಿ 150 ಪೊಲೀಸರು ಈ ತಂಡದಲ್ಲಿದ್ದಾರೆ. ಈಗಾಗಲೇ 10 ಮಂದಿಯನ್ನು ಅರೆಸ್ಟ್ ಮಾಡಲಾಗಿದ್ದು, 30ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

mng galabe cctv

ಸಿಸಿಟಿವಿ ಫೂಟೇಜ್ ಆಧರಿಸಿ 100ಕ್ಕೂ ಹೆಚ್ಚು ಮಂದಿಯ ಚಹರೆ ಗುರುತು ಹಚ್ಚಲಾಗಿದೆ. ಸೈಬರ್ ಅಪರಾಧ ಪತ್ತೆಗೆ ಇಬ್ಬರು ಇನ್ಸ್ ಪೆಕ್ಟರ್ ನೇತೃತ್ವದ 2 ತಂಡವನ್ನೂ ರಚಿಸಲಾಗಿದೆ. ಪ್ರಚೋದನಕಾರಿ ಸಂದೇಶ, ಹಿಂಸೆಗೆ ಪ್ರೇರಣೆ ವಿಚಾರದಲ್ಲಿ 60 ಕೇಸು ದಾಖಲಾಗಿದ್ದು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 24 ತಂಡಗಳು ಕಾರ್ಯಾಚರಣೆಗೆ ಇಳಿದಿವೆ.

ಈ ಮಧ್ಯೆ, ಸಚಿವ ಸಿಟಿ ರವಿ ಅವರು, ಗಲಭೆಯಲ್ಲಿ ಮೃತಪಟ್ಟವರು ಅಮಾಯಕರಲ್ಲ. ಪೊಲೀಸರು ನಿಯಂತ್ರಿಸದೇ ಇದ್ದಿದ್ರೆ ದೊಡ್ಡ ಅನಾಹುತ ನಡೆಯುತ್ತಿತ್ತು ಎಂದರೆ ಸಂಸದೆ ಶೋಭಾ ಕರಂದ್ಲಾಜೆ ಅವರು, ಹಿಂಸಾಚಾರದಲ್ಲಿ ನಾರ್ಮಲ್ ಮುಸಲ್ಮಾನರಿಲ್ಲ. ಕೇರಳದಿಂದ ಬಂದ ಜನ ಕೃತ್ಯ ಮಾಡಿದ್ದಾರೆ. ಕೆಎಫ್‍ಡಿ, ಪಿಎಫ್‍ಐ ಸಂಘಟನೆಗಳ ಬಗ್ಗೆ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿದ್ದೇವೆ ಎಂದು ಆರೋಪಿಸಿದ್ದಾರೆ.

TAGGED:compensationkarnatakaMangaluruyeddyurappaಕಾಂಗ್ರೆಸ್ಗೋಲಿಬಾರ್ಪರಿಹಾರ ಧನಪೊಲೀಸ್ಮಂಗಳೂರು ಗಲಭೆಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
11 hours ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
13 hours ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
13 hours ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
13 hours ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
13 hours ago
KN Rajanna
Bengaluru City

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ – ಮುಂದೆ ದಲಿತರು ಸಿಎಂ ಆಗ್ಬೇಕು: ರಾಜಣ್ಣ ಸ್ಫೋಟಕ ಹೇಳಿಕೆ

Public TV
By Public TV
16 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?