Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೋಟ್ ಚೋರಿ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಕಹಳೆ – ಸಿದ್ದರಾಮಯ್ಯ, ಡಿಕೆಶಿ, ಸಚಿವರು, ಶಾಸಕರು ಭಾಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವೋಟ್ ಚೋರಿ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಕಹಳೆ – ಸಿದ್ದರಾಮಯ್ಯ, ಡಿಕೆಶಿ, ಸಚಿವರು, ಶಾಸಕರು ಭಾಗಿ

Latest

ವೋಟ್ ಚೋರಿ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಕಹಳೆ – ಸಿದ್ದರಾಮಯ್ಯ, ಡಿಕೆಶಿ, ಸಚಿವರು, ಶಾಸಕರು ಭಾಗಿ

Public TV
Last updated: December 14, 2025 1:36 pm
Public TV
Share
4 Min Read
vote chori congress protest
SHARE

– ಪ್ರತಿಭಟನೆ ನೆಪ; ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಜಪ

ನವದೆಹಲಿ: ದೇಶಾದ್ಯಂತ ಬಿಜೆಪಿಯಿಂದ ಮತಗಳವು ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ‘ವೋಟ್ ಚೋರಿ’ (Vote Chori) ವಿರುದ್ಧ ಕಾಂಗ್ರೆಸ್ (Congress) ಬೃಹತ್ ಕಹಳೆ ಮೊಳಗಿಸಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ನಡೆದಿದ್ದು, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್ ಸಚಿವರು, ಶಾಸಕರು ಭಾಗವಹಿಸಿದ್ದಾರೆ.

ಪ್ರತಿಭಟನೆ ನೆಪವಾಗಿಟ್ಟುಕೊಂಡು ದೆಹಲಿಯಲ್ಲಿ ಹೈಕಮಾಂಡ್ ಭೇಟಿಗೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ. ವೋಟ್ ಚೋರಿ ಪ್ರತಿಭಟನೆ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ‘ಕೈ’ ನಾಯಕರ ದಂಡು ಭೇಟಿ ಕೊಟ್ಟಿದೆ. ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಸಿಎಂ ಮತ್ತು ಡಿಸಿಎಂ ಎರಡು ಬಣಗಳ ಶಾಸಕರು, ಸಚಿವರಿಂದ ಪ್ರಯತ್ನ ನಡೆದಿದೆ. ಇದನ್ನೂ ಓದಿ: Video | ದೆಹಲಿಗೆ ಬಂದಿಳಿದ ಡಿಕೆಶಿ – ಸೋನಿಯಾ ಗಾಂಧಿ ಭೇಟಿ ಬಗ್ಗೆ ಗುಟ್ಟು ಬಿಟ್ಟುಕೊಡದ ಡಿಸಿಎಂ

ಇಂದು ಮತ್ತು ನಾಳೆ ದೆಹಲಿಯಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಉಳಿಯಲಿದ್ದಾರೆ. ನ್ಯಾಷನಲ್ ಹೆರಾಲ್ಡ್ಗೆ ಸಂಬಂಧಿಸಿದಂತೆ ಸಮನ್ಸ್ ಹಿನ್ನೆಲೆ ಡಿಸಿಎಂ ಉಳಿದುಕೊಳ್ಳಲಿದ್ದಾರೆ. ಸೋಮವಾರ ದೆಹಲಿ ಪೊಲೀಸರ ಮುಂದೆ ಡಿಕೆ ಬ್ರದರ್ಸ್ ಹಾಜರಾಗಲಿದ್ದಾರೆ. ಈ ಎರಡು ದಿನಗಳ ಅವಧಿಯಲ್ಲಿ ಸೋನಿಯಗಾಂಧಿ ಭೇಟಿಗೂ ಪ್ರಯತ್ನ ಸಾಧ್ಯತೆ ಇದೆ. ವೋಟ್ ಚೋರಿ ಪ್ರತಿಭಟನೆ ಬಳಿಕ ದೆಹಲಿಯಿಂದ ಸಿಎಂ ಸಿದ್ದರಾಮಯ್ಯ ವಾಪಸ್ ಆಗಲಿದ್ದಾರೆ. ಈ ನಡುವೆ ದೆಹಲಿಯಲ್ಲೇ ಕೂತು ಡಿಕೆ ಬ್ರದರ್ಸ್ ರಣತಂತ್ರ ಹೆಣೆದಿದ್ದಾರೆ.

ದೆಹಲಿಯಲ್ಲಿ ಡಿ.ಕೆ.ಶಿಕುಮಾರ್ ಮಾತನಾಡಿ, ಪ್ರಜಾಪ್ರಭುತ್ವ ಅಡಿಯಲ್ಲಿ ಮತ ಚಲಾಯಿಸಿಸುವುದು ಪ್ರತಿಯೊಬ್ಬನ ಕರ್ತವ್ಯ. 1 ಕೋಟಿ 33 ಲಕ್ಷ ಸಹಿ ಸಂಗ್ರಹ ಆಗಿದೆ ಎಂದು ತಿಳಿಸಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ಬಿಜೆಪಿಯವರು ಕಳ್ಳರು. ಕಳ್ಳ ಮತಗಳಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚುಕ್ಕಾಣಿಯನ್ನ ಹಿಡಿದಿದ್ದಾರೆ. ಬಿಜೆಪಿ ಬಹಳಷ್ಟು ರಾಜ್ಯಗಳಲ್ಲಿ ವೋಟ್ ಚೋರಿಯಿಂದಲೇ ಅಧಿಕಾರಕ್ಕೆ ಬಂದಿದ್ದಾರೆ. ಇದರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಈ ಮೂಲಕ ಪ್ರಧಾನಿ ಮೋದಿ, ಎಲೆಕ್ಷನ್ ಕಮಿಷನ್, ಅಮಿತ್ ಶಾಗೆ ಪ್ರಶ್ನೆ ಮಾಡುತ್ತೇವೆ. ಚುನಾವಣಾ ಆಯೋಗ, ಇಡಿ, ಐಟಿ ಇವರ ನಿರ್ದೇಶನದಲ್ಲೇ ಕಾರ್ಯನಿರ್ವಹಿಸುತ್ತವೆ. ಬೆಂಗಳೂರು ಸೆಂಟ್ರಲ್, ಆಳಂದದಲ್ಲಿ ವೋಟ್ ಚೋರಿ ಆಗಿದೆ ಅಂತ ದಾಖಲೆ ಕೊಟ್ಟಿದ್ದೇವೆ. ಮುಂದಿನ ಚುನಾವಣೆಗಳಲ್ಲಿ ಮತಗಳ್ಳತನ ಮುಂದುವರೆಯಬಾರದು ಎಂಬುದು ಇದರ ಉದ್ದೇಶ ಎಂದು ತಿಳಿಸಿದ್ದಾರೆ.

ಸಚಿವ ಬೋಸರಾಜು ಪ್ರತಿಕ್ರಿಯಿಸಿ, ವೋಟ್ ಚೋರಿಗಾಗಿ ಪ್ರತಿಭಟಗೆ ದೆಹಲಿಗೆ ಆಗಮಿಸಿದ್ದೇವೆ. ಮಧ್ಯಾಹ್ನ ಎಐಸಿಸಿಗೆ ಹೋಗಿ ಅಲ್ಲಿಂದ ರಾಮಲೀಲಾ ಮೈದಾನಕ್ಕೆ ಹೋಗ್ತಿವಿ. ಹೈಕಮಾಂಡ್ ನಾಯಕರ ಜೊತೆಗೆ ಯಾವುದೇ ಚರ್ಚೆ ಇಲ್ಲ. ಐವತ್ತು ವರ್ಷದಿಂದ ಪಕ್ಷದಲ್ಲಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ; ಮಮತಾ ಬ್ಯಾನರ್ಜಿ ಬಂಧನಕ್ಕೆ ಅಸ್ಸಾಂ ಸಿಎಂ ಆಗ್ರಹ

ಶಾಸಕ ಬಿಆರ್ ಪಾಟೀಲ್ ಮಾತನಾಡಿ, ಕರ್ನಾಟಕದಲ್ಲಿ ವೋಟ್ ಚೋರಿ ಆಗಿದೆ. ಕರ್ನಾಟಕಲ್ಲಿ ಇನ್ನೆರೆಡು ಮೂರು ಪ್ರಕರಣದಲ್ಲಿ ಹೀಗಾಗಿದೆ. ನನ್ನ ಹತ್ತಿರ ಮಾಹಿತಿ ಇದೆ. ನಮ್ಮ ವರಿಷ್ಠರು ಈ ಬಗ್ಗೆ ಕೇಳಿದಾಗ ಹೇಳುತ್ತೇನೆ. ಕರ್ನಾಟಕದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಮತಗಳ್ಳತನ ಆಗಿದೆ. ಬಿಜೆಪಿಯವರು ಕುತಂತ್ರದಿಂದ ಹೈಜಾಕ್ ಮಾಡಿ ಅಧಿಕಾರ ಪಡೆದಿದ್ದಾರೆ. ಜನಾದೇಶ ಅವರಿಗೆ ಕೊಡ್ತಿಲ್ಲ. ಹೀಗಾಗಿ ಬಿಜೆಪಿ ವೋಟ್ ಚೋರಿ ಮಾಡ್ತಿದೆ. ನಮ್ಮ ಪಕ್ಷದಿಂದ ಇಂದು ಬೃಹತ್ ಹೋರಾಟ ನಡೆಯುತ್ತಿದೆ. ಪ್ರಧಾನಿ ಮೋದಿ, ಅಮಿತ್ ಶಾ ಅಧಿಕಾರದಲ್ಲಿ ಮುಂದುವರೆಯಲು ಏನು ಬೇಕಾದ್ರೂ ಮಾಡಲು ತಯಾರಿದ್ದಾರೆ ಎಂದು ತಿಳಿಸಿದ್ದಾರೆ.

ಸಲೀಂ ಅಹಮದ್ ಮಾತನಾಡಿ, ಇದು ವೋಟ್ ಚೋರಿಯಲ್ಲ, ವೋಟ್ ಡಕಾಯಿತಿ. ಇದು ಮತಗಳ ಲೂಟಿ. ಅದು ಎಲೆಕ್ಷನ್ ಕಮಿಷನ್ ಅಲ್ಲ, ಬಿಜೆಪಿಯ ಕಮಿಷನ್. ಬಿಜೆಪಿ, ಎಲೆಕ್ಷನ್ ಕಮಿಷನ್ ಸೇರಿ ಮೂರು ರಾಜ್ಯಗಳಲ್ಲಿ ಗೆಲ್ಲಿಸಿದ್ದಾರೆ. ಬಿಹಾರ ಜನರ ಗೆಲುವಲ್ಲ, ಎಲೆಕ್ಷನ್ ಕಮಿಷನ್ ಗೆಲುವು. ಕೇಂದ್ರ ಸರ್ಕಾರದ ಗೆಲುವು. ಸಿಎಂ ನಿತೀಶ್ ಕುಮಾರ್‌ಗೆ ವಯಸ್ಸಾಗಿದೆ. ಹುಷಾರಿಲ್ಲ ಆದ್ರೂ ಗೆದ್ದಿದ್ದಾರೆ. ಅವರ ಗೆಲುವನ್ನ ನಂಬೋಕೆ ಆಗೋದಿಲ್ಲ. ಎಲೆಕ್ಷನ್ ಕಮಿಷನ್‌ನ ತಮ್ಮ ಕಪಿಮುಷ್ಟಿಯಲ್ಲಿ ಹಿಡಿದುಕೊಂಡು ಬಿಜೆಪಿ ಕೆಲಸ ಮಾಡಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಸಚಿವ ಆರ್‌ಬಿ ತಿಮ್ಮಾಪುರ ಪ್ರತಿಕ್ರಿಯಿಸಿ, ಇಂದಿನ ದಿನಗಳಲ್ಲಿ ಮತಗಳ್ಳತನ ನಡೆಯುತ್ತಿದೆ. ಅಡ್ಡದಾರಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬುಡಮೇಲು ಮಾಡಲು ಬಿಜೆಪಿ ಹೊರಟಿದೆ. ಇದರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಶಾಸಕ ರವಿ ಗಣಿಗ ಮಾತನಾಡಿ, ಇಂದು ರಾಮ್ ಲೀಲಾ ಮೈದಾನದಲ್ಲಿ ಹೋರಾಟ ಮಾಡಲಾಗುತ್ತಿದೆ. ನಾವು ನಮ್ಮ ಕ್ಷೇತ್ರದಿಂದ 200 ಜನ ಕಾರ್ಯಕರ್ತರು ಬಂದಿದ್ದಾರೆ ಭಾಗವಹಿಸುತ್ತೇವೆ ಎಂದು ತಿಳಿಸಿದ್ದಾರೆ.

ಸಚಿವರಾದ ಆರ್.ಬಿ.ತಿಮ್ಮಾಪುರ, ಮಂಕಾಳ ವೈದ್ಯ, ಮಾಜಿ ಸಚಿವ ತನ್ವಿರ್ ಸೇಠ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಆನೇಕಲ್ ಶಿವಣ್ಣ, ಎ.ಸಿ.ಶ್ರೀನಿವಾಸ್, ಪ್ರದೀಪ್ ಈಶ್ವರ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಎಂಎಲ್ಸಿಗಳಾದ ಪುಟ್ಟಣ್ಣ, ಮಂಜುನಾಥ್ ಭಂಡಾರಿ, ವಸಂತಕುಮಾರ್, ಬಸನಗೌಡ ಬಾದರ್ಲಿ, ಶ್ರೀನಿವಾಸ್, ಮಾಜಿ ಎಂಎಲ್ಸಿ ಯು.ಬಿ.ವೆಂಕಟೇಶ್ ಮತ್ತಿತರರು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಭವನದಲ್ಲಿ ಭಾನುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಅವರ ಜೊತೆ ಡಿಸಿಎಂ ಅವರು ಉಪಾಹಾರ ಸೇವಿಸಿದರು.

TAGGED:congressd k shivakumardelhisiddaramaiahVote Choriಕಾಂಗ್ರೆಸ್ಡಿ.ಕೆ.ಶಿವಕುಮಾರ್ದೆಹಲಿವೋಟ್‌ ಚೋರಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

mohammed bin salman and trump 1
Latest

Kissing My Ass – ಸೌದಿ ರಾಜ ಎಂಬಿಎಸ್‌ಗೆ ಟ್ರಂಪ್‌ ವ್ಯಂಗ್ಯ

Public TV
By Public TV
9 minutes ago
rainfall disrupts daily life in mudigere chikkamagaluru
Chikkamagaluru

ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

Public TV
By Public TV
19 minutes ago
Jewar Airport
Latest

ನೋಯ್ಡಾದ ಜೇವರ್ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ ಉದ್ಘಾಟಿಸಿದ ಮೋದಿ – 3,900 ಮೀಟರ್ ರನ್‌ವೇ; ಏನೇನಿದೆ ವಿಶೇಷತೆ?

Public TV
By Public TV
42 minutes ago
Delhi Police arrest suspect in Mysuru for making bomb threats to courts airports schools
Crime

ಕೋರ್ಟ್‌, ಏರ್‌ಪೋರ್ಟ್‌ಗೆ 1,100 ಹುಸಿ ಬಾಂಬ್ ಬೆದರಿಕೆ – ಮೈಸೂರಲ್ಲಿ ಆರೋಪಿ ಅರೆಸ್ಟ್‌

Public TV
By Public TV
47 minutes ago
Bengaluru Byadarahalli Kidnap
Bengaluru City

ಹಾಡಹಗಲೇ ಪುಂಡರಿಂದ ಆಟೋದಲ್ಲಿ ಯುವಕನ ಕಿಡ್ನ್ಯಾಪ್ – ಸಹೋದರಿಗೆ ಕರೆ ಮಾಡಿ ಅವಹೇಳನ

Public TV
By Public TV
1 hour ago
Nelamangala Student
Bengaluru Rural

ನೈಟ್‌ ಔಟ್‌ ವೇಳೆ ಬೈಕ್‌ಗೆ ಲಾರಿ ಡಿಕ್ಕಿ – ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?