ಬೆಂಗಳೂರು: ಕೊರೊನಾ 4ನೇ ಅಲೆ ಪ್ರಾರಂಭವಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ನಿನ್ನೆಗಿಂತ ಇಂದು ಕೊರೊನಾ ಪ್ರಮಾಣ ಕಡಿಮೆಯಿದ್ದು, 171 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ರಾಜ್ಯದಲ್ಲಿ ನಿನ್ನೆ ಸೋಂಕಿನಿಂದ ಒಬ್ಬ ಮೃತಪಟ್ಟಿದ್ದ. ಈ ಹಿನ್ನೆಲೆ ರಾಜ್ಯದಲ್ಲಿ ಸ್ವಲ್ಪ ಆತಂಕ ಸೃಷ್ಟಿಯಾಗಿತ್ತು. ಆದರೆ ಇಂದು ರಾಜ್ಯದಲ್ಲಿ ಶೂನ್ಯ ಮರಣ ಪ್ರಮಾಣವಿದ್ದು,121 ಜನ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 1,945 ಕೊರೊನಾ ಸಕ್ರಿಯ ಪ್ರಕರಣಗಳು ದಾಖಲಾಗಿದೆ . 15,647 ಜನರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಬಿಜೆಪಿಯಲ್ಲಿ ಸಿಎಂ, ಸಚಿವ ಸ್ಥಾನ ಲಾಭಿಗೆ ಅವಕಾಶವಿಲ್ಲ, ಯತ್ನಾಳ್ ಹೇಳಿಕೆ ತಪ್ಪು: ರೇಣುಕಾಚಾರ್ಯ
ರಾಜ್ಯದಲ್ಲಿ ಒಟ್ಟು ಖಚಿತ ಪ್ರಕರಣಗಳು ಶೇ.1.09 ಮತ್ತು ಶೇ.0.00 ಮರಣ ಪ್ರಮಾಣವಿದೆ. ರಾಜ್ಯದಲ್ಲಿ ಇಂದು 88,069 ಜನರಿಗೆ ಲಸಿಕೆಯನ್ನು ಹಾಕಿಸಲಾಗಿದೆ. ಒಟ್ಟು 15,647 ಸ್ಯಾಂಪಲ್ (ಆರ್ಟಿಪಿಸಿಆರ್ 11,520+ 4,127 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಬುಲೆಟಿನ್ ಪ್ರಕಾರ, ಬೆಂಗಳೂರು ಗ್ರಾಮಾಂತರ 01, ಬೆಂಗಳೂರು ನಗರ 155, ಬೀದರ್ 01, ದ.ಕನ್ನಡ 02, ಧಾರವಾಡ 01, ಮೈಸೂರು 10, ಉಡುಪಿ 01 ಕೊರೊನಾ ಸೋಂಕು ಪ್ರಕರಣ ವರದಿಯಾಗಿದೆ. 23 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಮಠದ ಶ್ರೀಗಳಂತೆ ಮಾತನಾಡಿದ್ರು: ಸಿದ್ದು ಹೊಗಳಿದ ಡಿಕೆಶಿ