Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಸೀದಿ ಗೇಟ್ ಹತ್ತಿರಕ್ಕೂ ಬಿಡಬಾರದು- ವಕ್ಫ್ ಬೋರ್ಡಿನಿಂದ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಸೀದಿ ಗೇಟ್ ಹತ್ತಿರಕ್ಕೂ ಬಿಡಬಾರದು- ವಕ್ಫ್ ಬೋರ್ಡಿನಿಂದ ಆದೇಶ

Bengaluru City

ಮಸೀದಿ ಗೇಟ್ ಹತ್ತಿರಕ್ಕೂ ಬಿಡಬಾರದು- ವಕ್ಫ್ ಬೋರ್ಡಿನಿಂದ ಆದೇಶ

Public TV
Last updated: April 7, 2020 6:04 pm
Public TV
Share
4 Min Read
Karachi Police
SHARE

– ರಾಜ್ಯದಲ್ಲಿ ಒಟ್ಟು 25 ಮಂದಿ ಬಿಡುಗಡೆ
– ಮೊದಲ ಬಾರಿಗೆ ಮಂಡ್ಯ, ಗದಗದಲ್ಲಿ ಕೊರೊನಾ ಪತ್ತೆ
– 4,030 ಐಸೋಲೇಷನ್ ಬೆಡ್‍ಗಳು ಸಿದ್ಧ

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ಪ್ರಕರಣಗಳು ಕೇಳಿ ಬಂದಿದ್ದರಿಂದ ಮಸೀದಿಗೆ ಬರಲೇಬಾರದು. ಅಷ್ಟೇ ಅಲ್ಲದೆ ಗೇಟ್ ಹತ್ತಿರಕ್ಕೂ ಬಿಡಬಾರದು ಅಂತ ವಕ್ಫ್ ಬೋರ್ಡ್ ನಿಂದ ಆದೇಶವಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಒಟ್ಟು 175 ಕೊರೊನಾ ಸೋಂಕಿತರಿದ್ದಾರೆ. ಮಂಗಳವಾರ ಸಂಜೆಯ ಸಿಕ್ಕ ಮಾಹಿತಿ ಪ್ರಕಾರ ಒಂದೇ ದಿನದಲ್ಲಿ 12 ಜನರಿಗೆ ಪಾಸಿಟಿವ್ ಬಂದಿದೆ. ವಿದೇಶದಿಂದ ಬಂದವರೆಲ್ಲರ ಹೋಂ ಕ್ವಾರಂಟೈನ್ ಮುಕ್ತಾಯವಾಗಿದೆ. ಈಗ ಯಾರು ಹೋಂ ಕ್ವಾರಂಟೈನ್‍ನಲ್ಲಿ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಅವರ ಮೇಲೆ ನಿಗಾ ಇಡಲಾಗಿದೆ ಎಂದು ಮಾಹಿತಿ ನೀಡಿದರು.

suresh kumar 1

ರಾಜ್ಯದಲ್ಲಿ 9 ಡೆಡಿಕೇಟ್ ಕೋವಿಡ್-19 ಹಾಸ್ಪಿಟಲ್‍ಗಳು ಇದ್ದವು. ಈಗ ಮತ್ತೆ 8 ಆಸ್ಪತ್ರೆಗಳು ಸೇರ್ಪಡೆ ಆಗಿದ್ದು, ಒಟ್ಟು 17 ಆಸ್ಪತ್ರೆಗಳು ಕೋವಿಡ್ ಹಾಸ್ಪಿಟಲ್‍ಗಳಾಗಿವೆ. ರಾಜ್ಯದಲ್ಲಿ 4,030 ಐಸೋಲೇಷನ್ ಬೆಡ್‍ಗಳನ್ನು ಸಿದ್ಧಪಡಿಕೊಳ್ಳಲಾಗಿದೆ, 494 ಐಸಿಯುಗಳು ಇವೆ ಎಂದು ಹೇಳಿದರು.

ಭಟ್ಕಳ, ನಂಜನಗೂಡು, ಗೌರಿಬಿದನೂರು ಹಾಟ್‍ಸ್ಪಾಟ್‍ನಲ್ಲಿ ಹೊಸ ಪ್ರಕರಣ ಪತ್ತೆಯಾಗಿಲ್ಲ. ಸೋಂಕು ಪೀಡಿತ ಪ್ರದೇಶದಲ್ಲಿ ಯಾರಿಗಾದ್ರೂ ಪ್ಲೂನಂತಹ ಲಕ್ಷಣ ಕಂಡುಬಂದರೆ ಅವರಿಗೆ ರ‍್ಯಾಂಡಮ್ ಟೆಸ್ಟ್ ಮಾಡಲಾಗುತ್ತದೆ. ಆಹಾರಧಾನ್ಯ ದಾಸ್ತುನು ಇದೆ. ಎಲ್ಲೂ ಕೊರತೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.

mys nanjanagudu

ಲಾಕ್‍ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದರೆ ಡಾ.ದೇವಿಶೆಟ್ಟಿ, ಜಯದೇವ ಮಂಜುನಾಥ್ ಬಳಿ ನಾವು ಈ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಗದಗ ಹಾಗೂ ಕಲಬುರಗಿಯ ವ್ಯಕ್ತಿಗಳಿಗೆ ಕೊರೊನಾ ಪಾಸಿಟಿವ್ ವಿಚಾರವಾಗಿ ಮಾತನಾಡಿ ಸಚಿವರು, ಈಗಾಗಲೇ ಉಸಿರಾಟದ ತೊಂದರೆಯಿದ್ದವರ ಸ್ಯಾಂಪಲ್ಸ್ ಕಲೆಕ್ಟ್ ಮಾಡಿದ್ವಿ. ಆಗ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಈಗ ವೈದ್ಯಕೀಯ ತನಿಖೆ ಶುರುಮಾಡುತ್ತೇವೆ ಎಂದು ಮಾಹಿತಿ ನೀಡಿದರು.

Coronavirus India

ಇಂದು 12 ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿದ್ದು, ಮಂಡ್ಯದಲ್ಲಿ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ದೆಹಲಿಯ ನಿಜಾಮುದ್ದೀನ್ ಕಾರ್ಯಕ್ರಮಕ್ಕೆ ಹೋದವರ ನಿರ್ಲಕ್ಷ್ಯದಿಂದ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಪ್ರಾಥಮಿಕ ಸಂಪರ್ಕದಲ್ಲಿರುವವರಿಗೂ ಕೊರೊನಾ ಪಾಸಿಟಿವ್ ಕಂಡು ಬರುತ್ತಿದೆ.

ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ನಿಜಾಮುದ್ದೀನ್‍ಗೆ ಹೋಗಿ ಬಂದವರ ಸಂಪರ್ಕದಲ್ಲಿರುವವರಿಗೆ ಕೊರೊನಾ ಸೋಂಕು ತಗಲಿದ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ನಿಜಾಮುದ್ದೀನ್‍ಗೆ ಹೋಗಿ ಬಂದವರು ಸರಿಯಾಗಿ ಕ್ವಾರಂಟೈನ್ ಆಗದ ಪರಿಣಾಮ ಈಗ ಅವರ ಜೊತೆ ಸಂಪರ್ಕದಲ್ಲಿದ್ದವರಿಗೂ ಕೊರೋನಾ ಭೀತಿ ಉಂಟಾಗಿದೆ.

Corona Kar 2

ಕೊರೊನಾ ಸೋಂಕಿತರ ವಿವರಗಳು
ರೋಗಿ 164 – 33 ವರ್ಷದ ಪುರುಷನಾಗಿದ್ದು, ಬಾಗಲಕೋಟೆಯ ಮುಧೋಳ್ ನಿವಾಸಿ. ಮಾರ್ಚ್ 13 ರಿಂದ 18ರವರೆಗೆ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸದ್ಯಕ್ಕೆ ಬಾಗಲಕೋಟೆಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 165 – 41 ವರ್ಷದ ಮಹಿಳೆಯಾಗಿದ್ದು ಬಾಗಲಕೋಟೆ ನಿವಾಸಿಯಾಗಿದ್ದಾರೆ. ಇವರು 125ರ ಸೋಂಕಿತ ರೋಗಿಯ ನೆರೆಹೊರೆಯವರು. ಬಾಗಲಕೋಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೋಗಿ 166 – 80 ವರ್ಷ ವೃದ್ಧೆಯಾಗಿದ್ದು, ಗದಗ ನಿವಾಸಿ ಜಿಲ್ಲೆಯವರಾಗಿದ್ದಾರೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ, ಸೋಂಕಿತರ ಜೊತೆ ಸಂಪರ್ಕವೂ ಇಲ್ಲ. ಆದರೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರಿಗೆ ಕೊರೊನಾ ಬಂದಿದೆ. ಗದಗ ಆಸ್ಪತ್ರೆಯಲ್ಲಿ ಪ್ರತ್ಯೇಕವಾದ ವಾರ್ಡಿನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 167 – 29 ವರ್ಷದ ಪುರುಷನಾಗಿದ್ದು, ಬೆಂಗಳೂರು ನಗರದ ನಿವಾಸಿ. ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

CORONA

ರೋಗಿ 168 – 50 ವರ್ಷದ ವ್ಯಕ್ತಿ ಬೆಂಗಳೂರು ನಗರದ ನಿವಾಸಿಯಾಗಿದ್ದು, ನಿಜಾಮುದ್ದೀನ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ರೋಗಿ 169 – 35 ವರ್ಷದ ಬೆಂಗಳೂರು ನಗರದ ನಿವಾಸಿಯಾಗಿದ್ದು, ನಿಜಾಮುದ್ದೀನ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ರೋಗಿ 170 – 68 ವರ್ಷ ವೃದ್ಧನಾಗಿದ್ದು, ಬೆಂಗಳೂರಿನ ಬಿಬಿಎಂಪಿ ನಿವಾಸಿಯಾಗಿದ್ದಾರೆ. ದುಬೈನಿಂದ ಬಂದಿರುವ ಇತಿಹಾಸವಿದೆ. ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 171 – 32 ವರ್ಷದ ಪುರುಷನಾಗಿದ್ದು, ಮಂಡ್ಯ ನಿವಾಸಿ. ಇವರು ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಹೋಗಿದ್ದ 134, 135, 136, 137 ಮತ್ತು 138 ಸೋಂಕಿತರ ಜೊತೆ ಸಂಪರ್ಕದಲ್ಲಿದ್ದರು. ಸದ್ಯಕ್ಕೆ ಮಂಡ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

851527 corona testing kit

ರೋಗಿ 172 – 36 ವರ್ಷದ ಪುರುಷನಾಗಿದ್ದು, ಮಂಡ್ಯ ನಿವಾಸಿ. ಇವರು ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಹೋಗಿದ್ದ 134, 135, 136, 137 ಮತ್ತು 138 ಕೊರೊನಾ ಸೋಂಕಿತರ ಜೊತೆ ಸಂಪರ್ಕದಲ್ಲಿದ್ದರು. ಸದ್ಯಕ್ಕೆ ಮಂಡ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 173 – 65 ವರ್ಷದ ವ್ಯಕ್ತಿ, ಮಂಡ್ಯ ನಿವಾಸಿ. ನಿಜಾಮುದ್ದೀನ್ ಕಾರ್ಯಕ್ರಮಕ್ಕೆ ಹೋಗಿದ್ದ 134, 135, 136, 137 ಮತ್ತು 138 ಸೋಂಕಿತರ ಜೊತೆ ಸಂಪರ್ಕದಲ್ಲಿದ್ದರು. ಸದ್ಯಕ್ಕೆ ಮಂಡ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 174 – 28 ವರ್ಷದ ಮಹಿಳೆಯಾಗಿದ್ದು, ಕಲಬುರಗಿ ನಿವಾಸಿಯಾಗಿದ್ದಾರೆ. ಕೊರೊನಾ ರೋಗಿ 124 ಸೋಂಕಿತರ ಸಂಪರ್ಕದಲ್ಲಿದ್ದರು. ಅಲ್ಲದೇ ಈ ರೋಗಿಯ ಸೊಸೆಯಾಗಿದ್ದಾರೆ. ಸದ್ಯಕ್ಕೆ ಕಲಬುರಗಿಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ.

ರೋಗಿ 175 – 57 ವರ್ಷದ ಪುರುಷನಾಗಿದ್ದು, ಕಲಬುರಗಿ ನಿವಾಸಿ. ಟ್ರಾವೆಲ್ ಹಿಸ್ಟರಿ ಇರದೇ ಇದ್ದರೂ ಅತಿ ಹೆಚ್ಚು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಲಬುರಗಿ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

coronavirus india

ಗದಗ ಹಾಗೂ ಕಲಬುರಗಿಯ ಎರಡು ಹೊಸ ಪ್ರಕರಣದಿಂದ ಆರೋಗ್ಯ ಇಲಾಖೆಗೆ ಆತಂಕ ಶುರುವಾಗಿದೆ. ಯಾಕೆಂದರೆ ಗದಗ ಹಾಗೂ ಕಲಬುರ್ಗಿ ಇಬ್ಬರು ಸೋಂಕಿತರಲ್ಲಿ ಟ್ರಾವೆಲ್ ಹಿಸ್ಟರಿ ಇಲ್ಲ, ಸೋಂಕಿತರ ಜೊತೆ ಸಂಪರ್ಕವೂ ಇಲ್ಲ. ಆದರೂ ಉಸಿರಾಟದ ತೊಂದರೆ ಮತ್ತು ಶ್ವಾಸಕೋಶ ಸಮಸ್ಯೆ ಇದೆ. ಇಂತಹವರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಈ ಮೂಲಕ ಉಸಿರಾಟದ ತೊಂದರೆ ಇರುವವರಿಗೆ ಅತೀ ಬೇಗ ಕೊರೊನಾಗೆ ತುತ್ತಾಗುತ್ತಿರುವ ಪ್ರಕರಣ ಕಂಡುಬರುತ್ತಿದೆ.

TAGGED:CoronaviruskarnatakaministermosquePublic TVsuresh kumarWaqf Boardಕರ್ನಾಟಕಕಲಬುರಗಿಕೊರೊನಾ ವೈರಸ್ಗದಗಪಬ್ಲಿಕ್ ಟಿವಿಮಸೀದಿಲಾಕ್‍ಡೌನ್ವಕ್ಫ್ ಬೋರ್ಡ್
Share This Article
Facebook Whatsapp Whatsapp Telegram

Cinema news

Sai Pallavi
ಎಂ.ಎಸ್ ಸುಬ್ಬಲಕ್ಷ್ಮಿ ಬಯೋಪಿಕ್‌ನಲ್ಲಿ ಸಾಯಿಪಲ್ಲವಿ ನಟನೆ ಫಿಕ್ಸ್‌
Bollywood Cinema Latest Top Stories
Sohail Khan
ಮಾಡಿದ ತಪ್ಪಿಗೆ ಕ್ಷಮೆ ಕೇಳಿದ ಸಲ್ಮಾನ್ ಖಾನ್ ಸಹೋದರ
Bollywood Cinema Latest
Kichcha Sudeep 2
ಮಸ್ತ್ ಮಲೈಕಾ ಜೊತೆ ಕಿಚ್ಚ ಸಖತ್ ಡಾನ್ಸ್‌
Cinema Latest Sandalwood
Actor Shivamanju
ನಿರ್ದೇಶಕನಾದ ಹಾಸ್ಯ ನಟ ಶಿವಮಂಜು
Cinema Latest Sandalwood Top Stories

You Might Also Like

Pahalgam Terror Attack 2 1
Latest

TRF ಮುನ್ನಡೆಸುತ್ತಿದ್ದ ಪಾಕ್‌ ಉಗ್ರನೇ ಪಹಲ್ಗಾಮ್‌ ನರಮೇಧದ ಮಾಸ್ಟರ್‌ ಮೈಂಡ್‌: ಎನ್‌ಐಎ

Public TV
By Public TV
2 hours ago
Bengaluru Living heart transport
Bengaluru City

ಬೆಂಗ್ಳೂರು ಟ್ರಾಫಿಕ್ ನಡುವೆ ಜೀವಂತ ಹೃದಯ ರವಾನೆ – 7 ನಿಮಿಷದಲ್ಲೇ 10 ಕಿ.ಮೀ ಯಶಸ್ವಿ ಸಾಗಾಟ

Public TV
By Public TV
3 hours ago
01 8
Big Bulletin

ಬಿಗ್‌ ಬುಲೆಟಿನ್‌ 15 December 2025 ಭಾಗ-1

Public TV
By Public TV
3 hours ago
Nagalakshmi Choudhary 2
Bengaluru City

ಗರ್ಭಕಂಠ ಕ್ಯಾನ್ಸರ್‌ ತಡೆಗೆ ಉಚಿತ ಲಸಿಕೆ ನೀಡಿ – ಆರೋಗ್ಯ ಸಚಿವರಿಗೆ ಮಹಿಳಾ ಆಯೋಗ ಪತ್ರ

Public TV
By Public TV
3 hours ago
02 6
Big Bulletin

ಬಿಗ್‌ ಬುಲೆಟಿನ್‌ 15 December 2025 ಭಾಗ-2

Public TV
By Public TV
3 hours ago
03 6
Big Bulletin

ಬಿಗ್‌ ಬುಲೆಟಿನ್‌ 15 December 2025 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?