Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ವೀಕೆಂಡ್‌ ಕರ್ಫ್ಯೂ ರದ್ದು – ಸಿಎಂ ಸಭೆಯಲ್ಲಿ ಚರ್ಚೆಯಾದ ಪ್ರಮುಖಾಂಶಗಳೇನು?

Public TV
Last updated: January 21, 2022 4:52 pm
Public TV
Share
3 Min Read
cm meeting 1
SHARE

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್‌ ಸ್ಥಿತಿ-ಗತಿ ಕುರಿತು ಇಂದು ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಚರ್ಚೆಯಾದ ಪ್ರಮುಖಾಂಶಗಳು ಹೀಗಿವೆ.

* ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದಲ್ಲಿ 2.85 ಲಕ್ಷ ಮಂದಿ ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ.

 cm meeting1

* ಒಟ್ಟು 5,344 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 340 ಜನ ಐಸಿಯುನಲ್ಲಿ ಇದ್ದಾರೆ. 127 ಮಂದಿ ವೆಂಟಿಲೇಟರ್‌ನಲ್ಲಿ ಇದ್ದಾರೆ.

* ಬೆಂಗಳೂರನ್ನು ಹೊರತುಪಡಿಸಿ ಮೈಸೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಜ.29 ವರೆಗೂ ಶಾಲೆಗಳು ಕ್ಲೋಸ್ – ಇತರೆಡೆ ಯಥಾಸ್ಥಿತಿ ಮುಂದುವರಿಕೆ

* ಪಾಸಿಟಿವಿ ದರ ಶೇ.19.94 ರಷ್ಟಿದೆ.

* ಮಕ್ಕಳ ಪಾಸಿಟಿವಿಟಿ ದರ ಶೇ.8 ರಷ್ಟಿದ್ದು, ವಯಸ್ಕರ ಪಾಸಿಟಿವಿಟಿ ದರ ಶೇ.16.57 ರಷ್ಟಿದೆ.

* ಅಸ್ಪತ್ರೆಗೆ ದಾಖಲಾಗಿರುವ ಮಕ್ಕಳ ಪ್ರಮಾಣದ ಮೇಲೆ ನಿಗಾ ವಹಿಸಲಾಗುತ್ತಿದೆ.

* ಕಳೆದ ಎರಡು ಮೂರು ದಿನಗಳಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿದೆ. ಇದರಲ್ಲಿ 60 ವರ್ಷ ಮೇಲ್ಪಟ್ಟವರು ಹಾಗೂ ಅನ್ಯರೋಗ ಇದ್ದವರ ಸಂಖ್ಯೆ ಹೆಚ್ಚಿದೆ.

* ರಾಜ್ಯದಲ್ಲಿ ಮಂಜೂರಾಗಿರುವ 243 ಪಿಎಸ್‌ ಪ್ಲಾಂಟ್‌ಗಳ ಪೈಕಿ 225 ಕಾರ್ಯಾರಂಭ ಮಾಡಿವೆ.

CM basavaraj bommai

* ಎಲ್ಲ ಜಿಲ್ಲಾ ಆಸ್ಪತ್ರೆಗಳು, 113 ತಾಲ್ಲೂಕು ಆಸ್ಪತ್ರೆಗಳಲ್ಲಿ ಪಿಎಸ್ ಎ ಪ್ಲಾಂಟ್‌ಗಳು ಕಾರ್ಯಾರಂಭ ಮಾಡಿವೆ.

* ಸರಾಸರಿ ಮೂರು ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಒಬ್ಬ ಸೋಂಕಿತನಿಂದ ಸರಾಸರಿ 2.6 ಜನರಿಗೆ ಹರಡುತ್ತಿದೆ.

* ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗಲುತ್ತಿದೆ.

* ಬೆಂಗಳೂರಿನ ಜೊತೆಗೆ ಇತರ ಜಿಲ್ಲೆಗಳಲ್ಲಿಯೂ ಕೋವಿಡ್’ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ.

* ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಕುರಿತು ತಜ್ಞರೊಂದಿಗೆ ಸವಿವರವಾಗಿ ಚರ್ಚಿಸಲಾಯಿತು. ಇದನ್ನೂ ಓದಿ: ಕರ್ನಾಟಕದಲ್ಲಿ ವೀಕೆಂಡ್‌ ಕರ್ಫ್ಯೂ ರದ್ದು – ಎರಡೇ ವಾರಕ್ಕೆ ಅಂತ್ಯ

* ಯಾವುದೇ ಸ್ಥಳದಲ್ಲಿ ಹೆಚ್ಚಿನ ಜನಸಂದಣಿಯಾಗದಂತೆ ನೋಡಿಕೊಳ್ಳುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಟ್ಟರು.

* ಕೋವಿಡ್ ಪ್ರಕರಣಗಳು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿದ್ದರೂ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಿನ ಏರಿಕೆ ಇಲ್ಲವೆಂಬ ಅಂಶವನ್ನು ಗಮನಿಸಲಾಯಿತು. ರಿಕವರಿ ಪ್ರಮಾಣವೂ ಹೆಚ್ಚಾಗಿದೆ.

* ಆದರೆ ಮುಂದಿನ ವಾರದಲ್ಲಿ ಪ್ರಕರಣಗಳ ಸಂಖ್ಯೆ ಉತ್ತುಂಗಕ್ಕೆ (peak) ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

* ಜೊತೆಗೆ ಕೋವಿಡ್-19 ನಿರ್ವಹಣೆಯ ಮುಂಚೂಣಿಯ ಕಾರ್ಯಕರ್ತರು ಹೆಚ್ಚಿನ ಪ್ರಮಾಣದಲ್ಲಿ ಸೋಂಕಿಗೆ ಒಳಗಾಗುತ್ತಿದ್ದಾರೆ.

* ಸಾಮಾಜಿಕ-ಆರ್ಥಿಕ ಪರಿಸ್ಥಿತಿಯ ಕುರಿತು ಸಹ ಚರ್ಚಿಸಲಾಯಿತು.

night curfew 1

ಈ ಎಲ್ಲ ಅಂಶಗಳನ್ನು ಪರಿಶೀಲಿಸಿ ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ರಾತ್ರಿ ಕರ್ಪೂ ಅವಧಿಯನ್ನು ವಾರದ ಏಳೂ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ನಿಗದಿಪಡಿಸಲು ನಿರ್ಧರಿಸಲಾಯಿತು.

ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ತಜ್ಞರೊಂದಿಗೆ ಚರ್ಚಿಸಿದ ಅಂಶಗಳನ್ನು ಆಧರಿಸಿ, ಈ ವಾರಾಂತ್ಯದಲ್ಲಿ ವಾರಾಂತ್ಯ ಕರ್ಫ್ಯೂ ಸದ್ಯಕ್ಕೆ ಹಿಂಪಡೆಯಲು ನಿರ್ಧರಿಸಲಾಯಿತು. ಆದರೆ ಮುಂದಿನ ವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವನ್ನು ನೋಡಿಕೊಂಡು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಸಭೆ ನಡೆಸಿ, ನಿರ್ಧಾರ ಕೈಗೊಳ್ಳಲಾಗುವುದು. ಆದ್ದರಿಂದ ಸಾರ್ವಜನರಿಕರು ಜವಾಬ್ದಾರಿಯುತವಾಗಿ ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಅತಿ ಅಗತ್ಯವಾಗಿದೆ. ಇದನ್ನೂ ಓದಿ: ಬಿಸಿಎಂ ಹಾಸ್ಟೆಲ್‌ನಲ್ಲಿ ಕೋವಿಡ್ ಕೇರ್ ಸೆಂಟರ್ – ಮಂಡ್ಯ ವಿದ್ಯಾರ್ಥಿಗಳ ವಿರೋಧ

ಮಾಲ್, ಹೋಟೆಲ್, ಬಾರ್, ಕ್ಲಬ್, ಪಬ್‌ಗಳು ಶೇ.50 ಆಸನ ಸಾಮರ್ಥ್ಯದೊಂದಿಗೆ ತೆರೆಯಲು ತೀರ್ಮಾನಿಸಲಾಯಿತು. ಎರಡೂ ಲಸಿಕೆ ಪಡೆಯುವುದು ಕಡ್ಡಾಯ ಎಂದು ತಿಳಿಸಲಾಗಿದೆ.

NIGHT CURFEW 5 1

ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್‌.ಅಶೋಕ್‌, ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಜಾರಿಯಲ್ಲಿದ್ದ ವೀಕೆಂಡ್‌ ಕರ್ಫ್ಯೂ ತೆರವುಗೊಳಿಸಲಾಗಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾದಲ್ಲಿ ಮತ್ತೆ ವೀಕೆಂಡ್‌ ಕರ್ಫ್ಯೂ ಜಾರಿಗೊಳಿಸುವ ಬಗ್ಗೆ ಸಿಎಂ ತಿಳಿಸಿದ್ದಾರೆಂದು ಸ್ಪಷ್ಟಪಡಿಸಿದ್ದಾರೆ.

ವೀಕೆಂಡ್‌ ಕರ್ಫ್ಯೂ ತೆರವುಗೊಳಿಸಬೇಕು ಎಂದು ವಿವಿಧ ಸಂಘಟನೆಗಳು, ವಿಪಕ್ಷ ನಾಯಕರು, ಜನರ ಒತ್ತಾಯ ಇತ್ತು. ಆದರೆ ತಜ್ಞರ ವರದಿ ಆಧರಿಸಿ ವೀಕೆಂಡ್‌ ಕರ್ಫ್ಯೂ ಹಿಂಪಡೆಯಲಾಗಿದೆ. ಕೋವಿಡ್‌ ಪ್ರಕರಣಗಳ ನಿಯಂತ್ರಣಕ್ಕೆ ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ನೈಟ್‌ ಕರ್ಫ್ಯೂ ಎಂದಿನಂತೆ ಮುಂದುವರಿಯಲಿದೆ. ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿರಲಿದೆ. ಈಗಾಗಲೇ ಜಾರಿಯಲ್ಲಿದ್ದ ಇತರೆ ನಿಯಮಗಳೂ ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.

TAGGED:CM Basavaraj BommaiCorona Viruskarnataka curfewr ashokWeekend Curfewಆರ್‌.ಅಶೋಕ್‌ಕೊರೊನಾಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವೀಕೆಂಡ್ ಕರ್ಫ್ಯೂ
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
7 minutes ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
4 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
7 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
18 hours ago

You Might Also Like

KH Muniyappa
Bengaluru City

ನೋಂದಣಿ ಮಾಡಿರುವ ರೈತರ ಜೋಳ ಖರೀದಿಸಲು ರೈತರ ನಿಯೋಗದಿಂದ ಆಹಾರ ಸಚಿವರಿಗೆ ಮನವಿ

Public TV
By Public TV
25 minutes ago
manoj Bhandage family
Cricket

RCB ಇಂಪ್ಯಾಕ್ಟ್ ಪ್ಲೇಯರ್ ಆಗಿ ಸಿಂಧನೂರಿನ ಮನೋಜ್ ಬಾಂಡಗೆ – ಕುಟುಂಬಸ್ಥರಿಂದ ಗೆಲುವಿನ ಶುಭಹಾರೈಕೆ

Public TV
By Public TV
42 minutes ago
Narendra Modi Stadium 2
Cricket

IPL 2025 Final – ಪಂದ್ಯಕ್ಕೂ ಮುನ್ನವೇ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಬ್ಲಾಸ್ಟ್

Public TV
By Public TV
42 minutes ago
Tim David
Cricket

ಆರ್‌ಸಿಬಿಗೆ ಶಾಕ್‌ – ಟಿಮ್‌ ಡೇವಿಡ್‌ ಆಡೋದು ಡೌಟ್‌!

Public TV
By Public TV
43 minutes ago
Phil Salt 2
Cricket

ಆರ್‌ಸಿಬಿಗೆ ದೊಡ್ಡ ಶಾಕ್‌ – ಸಾಲ್ಟ್‌ ಆಡೋದು ಅನುಮಾನ

Public TV
By Public TV
44 minutes ago
Phil Salt
Cricket

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್ – ಐಪಿಎಲ್ ಫೈನಲ್‌ನಲ್ಲಿ ಆಡಲಿದ್ದಾರೆ ಫಿಲ್ ಸಾಲ್ಟ್

Public TV
By Public TV
45 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?