Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೀಕೆಂಡ್‌ ಕರ್ಫ್ಯೂ ರದ್ದು – ಸಿಎಂ ಸಭೆಯಲ್ಲಿ ಚರ್ಚೆಯಾದ ಪ್ರಮುಖಾಂಶಗಳೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ವೀಕೆಂಡ್‌ ಕರ್ಫ್ಯೂ ರದ್ದು – ಸಿಎಂ ಸಭೆಯಲ್ಲಿ ಚರ್ಚೆಯಾದ ಪ್ರಮುಖಾಂಶಗಳೇನು?

Karnataka

ವೀಕೆಂಡ್‌ ಕರ್ಫ್ಯೂ ರದ್ದು – ಸಿಎಂ ಸಭೆಯಲ್ಲಿ ಚರ್ಚೆಯಾದ ಪ್ರಮುಖಾಂಶಗಳೇನು?

Public TV
Last updated: January 21, 2022 4:52 pm
Public TV
Share
3 Min Read
cm meeting 1
SHARE

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್‌ ಸ್ಥಿತಿ-ಗತಿ ಕುರಿತು ಇಂದು ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಚರ್ಚೆಯಾದ ಪ್ರಮುಖಾಂಶಗಳು ಹೀಗಿವೆ.

* ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದಲ್ಲಿ 2.85 ಲಕ್ಷ ಮಂದಿ ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ.

 cm meeting1

* ಒಟ್ಟು 5,344 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 340 ಜನ ಐಸಿಯುನಲ್ಲಿ ಇದ್ದಾರೆ. 127 ಮಂದಿ ವೆಂಟಿಲೇಟರ್‌ನಲ್ಲಿ ಇದ್ದಾರೆ.

* ಬೆಂಗಳೂರನ್ನು ಹೊರತುಪಡಿಸಿ ಮೈಸೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಜ.29 ವರೆಗೂ ಶಾಲೆಗಳು ಕ್ಲೋಸ್ – ಇತರೆಡೆ ಯಥಾಸ್ಥಿತಿ ಮುಂದುವರಿಕೆ

* ಪಾಸಿಟಿವಿ ದರ ಶೇ.19.94 ರಷ್ಟಿದೆ.

* ಮಕ್ಕಳ ಪಾಸಿಟಿವಿಟಿ ದರ ಶೇ.8 ರಷ್ಟಿದ್ದು, ವಯಸ್ಕರ ಪಾಸಿಟಿವಿಟಿ ದರ ಶೇ.16.57 ರಷ್ಟಿದೆ.

* ಅಸ್ಪತ್ರೆಗೆ ದಾಖಲಾಗಿರುವ ಮಕ್ಕಳ ಪ್ರಮಾಣದ ಮೇಲೆ ನಿಗಾ ವಹಿಸಲಾಗುತ್ತಿದೆ.

* ಕಳೆದ ಎರಡು ಮೂರು ದಿನಗಳಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿದೆ. ಇದರಲ್ಲಿ 60 ವರ್ಷ ಮೇಲ್ಪಟ್ಟವರು ಹಾಗೂ ಅನ್ಯರೋಗ ಇದ್ದವರ ಸಂಖ್ಯೆ ಹೆಚ್ಚಿದೆ.

* ರಾಜ್ಯದಲ್ಲಿ ಮಂಜೂರಾಗಿರುವ 243 ಪಿಎಸ್‌ ಪ್ಲಾಂಟ್‌ಗಳ ಪೈಕಿ 225 ಕಾರ್ಯಾರಂಭ ಮಾಡಿವೆ.

CM basavaraj bommai

* ಎಲ್ಲ ಜಿಲ್ಲಾ ಆಸ್ಪತ್ರೆಗಳು, 113 ತಾಲ್ಲೂಕು ಆಸ್ಪತ್ರೆಗಳಲ್ಲಿ ಪಿಎಸ್ ಎ ಪ್ಲಾಂಟ್‌ಗಳು ಕಾರ್ಯಾರಂಭ ಮಾಡಿವೆ.

* ಸರಾಸರಿ ಮೂರು ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಒಬ್ಬ ಸೋಂಕಿತನಿಂದ ಸರಾಸರಿ 2.6 ಜನರಿಗೆ ಹರಡುತ್ತಿದೆ.

* ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗಲುತ್ತಿದೆ.

* ಬೆಂಗಳೂರಿನ ಜೊತೆಗೆ ಇತರ ಜಿಲ್ಲೆಗಳಲ್ಲಿಯೂ ಕೋವಿಡ್’ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ.

* ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಕುರಿತು ತಜ್ಞರೊಂದಿಗೆ ಸವಿವರವಾಗಿ ಚರ್ಚಿಸಲಾಯಿತು. ಇದನ್ನೂ ಓದಿ: ಕರ್ನಾಟಕದಲ್ಲಿ ವೀಕೆಂಡ್‌ ಕರ್ಫ್ಯೂ ರದ್ದು – ಎರಡೇ ವಾರಕ್ಕೆ ಅಂತ್ಯ

* ಯಾವುದೇ ಸ್ಥಳದಲ್ಲಿ ಹೆಚ್ಚಿನ ಜನಸಂದಣಿಯಾಗದಂತೆ ನೋಡಿಕೊಳ್ಳುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಟ್ಟರು.

* ಕೋವಿಡ್ ಪ್ರಕರಣಗಳು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿದ್ದರೂ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಿನ ಏರಿಕೆ ಇಲ್ಲವೆಂಬ ಅಂಶವನ್ನು ಗಮನಿಸಲಾಯಿತು. ರಿಕವರಿ ಪ್ರಮಾಣವೂ ಹೆಚ್ಚಾಗಿದೆ.

* ಆದರೆ ಮುಂದಿನ ವಾರದಲ್ಲಿ ಪ್ರಕರಣಗಳ ಸಂಖ್ಯೆ ಉತ್ತುಂಗಕ್ಕೆ (peak) ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

* ಜೊತೆಗೆ ಕೋವಿಡ್-19 ನಿರ್ವಹಣೆಯ ಮುಂಚೂಣಿಯ ಕಾರ್ಯಕರ್ತರು ಹೆಚ್ಚಿನ ಪ್ರಮಾಣದಲ್ಲಿ ಸೋಂಕಿಗೆ ಒಳಗಾಗುತ್ತಿದ್ದಾರೆ.

* ಸಾಮಾಜಿಕ-ಆರ್ಥಿಕ ಪರಿಸ್ಥಿತಿಯ ಕುರಿತು ಸಹ ಚರ್ಚಿಸಲಾಯಿತು.

night curfew 1

ಈ ಎಲ್ಲ ಅಂಶಗಳನ್ನು ಪರಿಶೀಲಿಸಿ ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ರಾತ್ರಿ ಕರ್ಪೂ ಅವಧಿಯನ್ನು ವಾರದ ಏಳೂ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ನಿಗದಿಪಡಿಸಲು ನಿರ್ಧರಿಸಲಾಯಿತು.

ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ತಜ್ಞರೊಂದಿಗೆ ಚರ್ಚಿಸಿದ ಅಂಶಗಳನ್ನು ಆಧರಿಸಿ, ಈ ವಾರಾಂತ್ಯದಲ್ಲಿ ವಾರಾಂತ್ಯ ಕರ್ಫ್ಯೂ ಸದ್ಯಕ್ಕೆ ಹಿಂಪಡೆಯಲು ನಿರ್ಧರಿಸಲಾಯಿತು. ಆದರೆ ಮುಂದಿನ ವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವನ್ನು ನೋಡಿಕೊಂಡು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಸಭೆ ನಡೆಸಿ, ನಿರ್ಧಾರ ಕೈಗೊಳ್ಳಲಾಗುವುದು. ಆದ್ದರಿಂದ ಸಾರ್ವಜನರಿಕರು ಜವಾಬ್ದಾರಿಯುತವಾಗಿ ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಅತಿ ಅಗತ್ಯವಾಗಿದೆ. ಇದನ್ನೂ ಓದಿ: ಬಿಸಿಎಂ ಹಾಸ್ಟೆಲ್‌ನಲ್ಲಿ ಕೋವಿಡ್ ಕೇರ್ ಸೆಂಟರ್ – ಮಂಡ್ಯ ವಿದ್ಯಾರ್ಥಿಗಳ ವಿರೋಧ

ಮಾಲ್, ಹೋಟೆಲ್, ಬಾರ್, ಕ್ಲಬ್, ಪಬ್‌ಗಳು ಶೇ.50 ಆಸನ ಸಾಮರ್ಥ್ಯದೊಂದಿಗೆ ತೆರೆಯಲು ತೀರ್ಮಾನಿಸಲಾಯಿತು. ಎರಡೂ ಲಸಿಕೆ ಪಡೆಯುವುದು ಕಡ್ಡಾಯ ಎಂದು ತಿಳಿಸಲಾಗಿದೆ.

NIGHT CURFEW 5 1

ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್‌.ಅಶೋಕ್‌, ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಜಾರಿಯಲ್ಲಿದ್ದ ವೀಕೆಂಡ್‌ ಕರ್ಫ್ಯೂ ತೆರವುಗೊಳಿಸಲಾಗಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾದಲ್ಲಿ ಮತ್ತೆ ವೀಕೆಂಡ್‌ ಕರ್ಫ್ಯೂ ಜಾರಿಗೊಳಿಸುವ ಬಗ್ಗೆ ಸಿಎಂ ತಿಳಿಸಿದ್ದಾರೆಂದು ಸ್ಪಷ್ಟಪಡಿಸಿದ್ದಾರೆ.

ವೀಕೆಂಡ್‌ ಕರ್ಫ್ಯೂ ತೆರವುಗೊಳಿಸಬೇಕು ಎಂದು ವಿವಿಧ ಸಂಘಟನೆಗಳು, ವಿಪಕ್ಷ ನಾಯಕರು, ಜನರ ಒತ್ತಾಯ ಇತ್ತು. ಆದರೆ ತಜ್ಞರ ವರದಿ ಆಧರಿಸಿ ವೀಕೆಂಡ್‌ ಕರ್ಫ್ಯೂ ಹಿಂಪಡೆಯಲಾಗಿದೆ. ಕೋವಿಡ್‌ ಪ್ರಕರಣಗಳ ನಿಯಂತ್ರಣಕ್ಕೆ ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ನೈಟ್‌ ಕರ್ಫ್ಯೂ ಎಂದಿನಂತೆ ಮುಂದುವರಿಯಲಿದೆ. ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿರಲಿದೆ. ಈಗಾಗಲೇ ಜಾರಿಯಲ್ಲಿದ್ದ ಇತರೆ ನಿಯಮಗಳೂ ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.

TAGGED:CM Basavaraj BommaiCorona Viruskarnataka curfewr ashokWeekend Curfewಆರ್‌.ಅಶೋಕ್‌ಕೊರೊನಾಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವೀಕೆಂಡ್ ಕರ್ಫ್ಯೂ
Share This Article
Facebook Whatsapp Whatsapp Telegram

Cinema news

Gill and Ashwini Gowda
ಕಿತ್ತಾಟದಿಂದ ಕ್ಷಮೆಯತ್ತ – ಒಬ್ಬರಿಗೊಬ್ಬರು Sorry ಕೇಳಿ, ನಗುವಿನ ಅಪ್ಪುಗೆ ನೀಡಿದ ಗಿಲ್ಲಿ, ಅಶ್ವಿನಿ
Cinema Latest Main Post Sandalwood TV Shows
Karunya Ram Samrudhi Ram
25 ಲಕ್ಷ ವಂಚನೆ – ತಂಗಿ ವಿರುದ್ಧವೇ ನಟಿ ಕಾರುಣ್ಯಾ ರಾಮ್‌ ದೂರು
Cinema Crime Latest Main Post Sandalwood
Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories

You Might Also Like

iran protest 1
Latest

ಇರಾನ್‌ನಲ್ಲಿರೋ ಭಾರತೀಯರ ಸ್ಥಳಾಂತಕ್ಕೆ ಕೇಂದ್ರ ಸಿದ್ಧತೆ; ನಾಳೆ ಮೊದಲ ಬ್ಯಾಚ್‌ ಆಗಮನದ ನಿರೀಕ್ಷೆ

Public TV
By Public TV
5 minutes ago
Crime 1
Crime

ಸಂಬಂಧಿ ಮೇಲೆ ನಿರಂತರ ಅತ್ಯಾಚಾರ – ವೀಡಿಯೊ ಮಾಡಿ ಪೋಸ್ಟ್‌ ಮಾಡ್ತಿದ್ದ ಕಾಮುಕ ಅರೆಸ್ಟ್‌

Public TV
By Public TV
25 minutes ago
donald trump iran
Latest

ಈ ಬಾರಿ ಬುಲೆಟ್‌ ಮಿಸ್‌ ಆಗಲ್ಲ: ಟ್ರಂಪ್‌ಗೆ ಇರಾನ್‌ ಹತ್ಯೆ ಬೆದರಿಕೆ

Public TV
By Public TV
29 minutes ago
Siddaramaiah
Districts

ಕಾಗಿನೆಲೆ ಪೀಠದ ಶ್ರೀಗಳ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

Public TV
By Public TV
56 minutes ago
DK Shivakumar 9
Bengaluru City

ನಾಳೆ ದೆಹಲಿಯಲ್ಲಿ ರಾಹುಲ್‌ ಗಾಂಧಿ ಭೇಟಿ ಮಾಡ್ತೀನಿ: ಡಿಕೆಶಿ

Public TV
By Public TV
1 hour ago
Gavi
Bengaluru City

ʻಸಂಕ್ರಾಂತಿʼ ವಿಸ್ಮಯಕ್ಕೆ ಸಾಕ್ಷಿಯಾದ ಸನ್ನಿಧಿ – ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸಿದ ಸೂರ್ಯ ರಶ್ಮಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?