ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ಸಾವು ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದೆ. ಇಂದು 178 ಹೊಸ ಕೊರೊನಾ ಪ್ರಕರಣ ವರದಿಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ.
ಬೆಂಗಳೂರು ನಗರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಇಂದು ತಲಾ ಒಂದು ಕೋವಿಡ್ ಮರಣ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ 373 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,867 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಈವರೆಗೆ ರಾಜ್ಯದಲ್ಲಿ ಒಟ್ಟು 29,93,777 ಮಂದಿಗೆ ಕೊರೊನಾ ಬಂದಿದೆ. 29,48,701 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.31 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.1.12 ರಷ್ಟಿದೆ. ಇದನ್ನೂ ಓದಿ: ಕಂಗನಾ ವಿರುದ್ಧ FIR ದಾಖಲಿಸುವಂತೆ ಸಿಖ್ ಸಮುದಾಯದ ಮನವಿ
ಇಂದು ರಾಜ್ಯದಲ್ಲಿ ಒಟ್ಟು 1, 77,720 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು ಸ್ಯಾಂಪಲ್ (ಆರ್ಟಿ ಪಿಸಿಆರ್ 49,385 + 6,314 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕುಟುಂಬ ರಾಜಕಾರಣ ಕೊನೆಗಾಣಿಸಲು ರಾಷ್ಟ್ರೀಯ ಪಕ್ಷಗಳೇ ಹೊಸ ಕಾನೂನು ತರಲಿ: ಹೆಚ್.ಡಿ.ರೇವಣ್ಣ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 112, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 1, ದಕ್ಷಿಣ ಕನ್ನಡ 16, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 3, ಹಾವೇರಿ 0, ಕಲಬುರಗಿ 0, ಕೊಡಗು 7, ಕೋಲಾರ 1, ಕೊಪ್ಪಳ 0, ಮಂಡ್ಯ 3, ಮೈಸೂರು 14, ರಾಯಚೂರು 0, ರಾಮನಗರ 0, ಶಿವಮೊಗ್ಗ 0, ತುಮಕೂರು 3, ಉಡುಪಿ 4, ಉತ್ತರ ಕನ್ನಡ 1, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.