ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಏರಿಕೆ ಕಂಡಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದೆ. ಶುಕ್ರವಾರ 242 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಇಂದು ಕೂಡ ಕೋವಿಡ್ನಿಂದ 4 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ-2, ಚಾಮರಾಜನಗರ-1, ಕೊಪ್ಪಳದಲ್ಲಿ 1 ಸಾವು ಪ್ರಕರಣ ವರದಿಯಾಗಿದೆ. ಉಳಿದೆಲ್ಲಾ ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣ ವರದಿಯಾಗಿದೆ.
ರಾಜ್ಯದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 29,93,139 ಕ್ಕೆ ತಲುಪಿದೆ. ಕೋವಿಡ್ನಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 38,169 ಕ್ಕೇರಿದೆ. ಇಂದು 329 ಮಂದಿ ಸೇರಿದಂತೆ ಈವರೆಗೆ 29,47,683 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 7,258 ಸಕ್ರಿಯ ಪ್ರಕರಣಗಳಿವೆ. ಕೋವಿಡ್ ಪ್ರಕರಣ ಪ್ರಮಾಣ ಶೇ. 0.26 ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.1.65 ಇದೆ. ಇದನ್ನೂ ಓದಿ: ರಾಹುಲ್, ರೋಹಿತ್ ಶತಕದ ಜೊತೆಯಾಟ- ಟಿ20 ಸರಣಿ ಗೆದ್ದ ಟೀಂ ಇಡಿಯಾ
ರಾಜ್ಯದಲ್ಲಿ ಇಂದು 2,39,454 ಮಂದಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ. ಅಲ್ಲದೇ 89,715 ಜನರಿಗೆ ಕೋವಿಡ್ ಪರೀಕ್ಷೆ (15,804 ರ್ಯಾಪಿಡ್ ಆ್ಯಂಟಿಜನ್ ಹಾಗೂ 73,911 ಆರ್ಟಿ-ಪಿಸಿಆರ್ ಪರೀಕ್ಷೆ) ನಡೆಸಲಾಗಿದೆ. ಇದನ್ನೂ ಓದಿ: ಬಿಡಿಎ ಅಧಿಕಾರಿಗಳಿಗೆ ಎಸಿಬಿ ಶಾಕ್- ಕಂತೆ ಕಂತೆ ನೋಟು, ಬ್ಯಾಗ್ಗಟ್ಟಲೆ ದಾಖಲೆಗಳು ವಶ!
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 144, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 3, ದಕ್ಷಿಣ ಕನ್ನಡ 12, ದಾವಣಗೆರೆ 0, ಧಾರವಾಡ 7, ಗದಗ 1, ಹಾಸನ 11, ಹಾವೇರಿ 1, ಕಲಬುರಗಿ 0, ಕೊಡಗು 11, ಕೋಲಾರ 0, ಕೊಪ್ಪಳ 0, ಮಂಡ್ಯ 5, ಮೈಸೂರು 5, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 14, ಉಡುಪಿ 5, ಉತ್ತರ ಕನ್ನಡ 10, ವಿಜಯಪುರ 1, ಯಾದಗಿರಿಯಲ್ಲಿ 1 ಪ್ರಕರಣ ದಾಖಲಾಗಿದೆ.