ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಇಳಿಮುಖವಾಗುತ್ತಿದೆ. ಇಂದು ರಾಜ್ಯದಲ್ಲಿ 941 ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಓರ್ವ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 788 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 40,08,698 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 23,101 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,86,86,074 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಚೈತ್ರಾ ಹಳ್ಳಿಕೇರಿ – ಅಕ್ಷತಾ ಕುಕ್ಕಿ ಔಟ್
ಕೋವಿಡ್ನಿಂದ ಇಂದು ಒಂದೇ ಒಂದು ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,203 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.4.07 ಇದೆ. 5,203 ಸಕ್ರಿಯ ಪ್ರಕರಣಗಳಿವೆ. ಇಂದು 23,101 ಮಂದಿಯನ್ನು (6,522 ರ್ಯಾಪಿಡ್ ಆಂಟಿಜನ್, 16,579 ಆರ್ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 31,457 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಏರೋಪ್ಲೇನ್ ಕದ್ದು ಹಾರಾಟ ನಡೆಸಿದ ಪೈಲಟ್ – ವಾಲ್ಮಾರ್ಟ್ಗೆ ಗುದ್ದುತ್ತೇನೆಂದು ಬೆದರಿಕೆ
ಬೆಂಗಳೂರು ನಗರದಲ್ಲೇ 526 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 16, ಬಾಗಲಕೋಟೆ 2, ಬಳ್ಳಾರಿ 13, ಬೆಳಗಾವಿ 12, ಬೀದರ್ 0, ಚಾಮರಾಜನಗರ 24, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 18, ಚಿತ್ರದುರ್ಗ 1, ದಕ್ಷಿಣ ಕನ್ನಡ 29, ದಾವಣಗೆರೆ 4, ಧಾರವಾಡ 4, ಗದಗ 0, ಹಾಸನ 36, ಹಾವೇರಿ 1, ಕಲಬುರಗಿ 15, ಕೊಡಗು 13, ಕೋಲಾರ 15, ಕೊಪ್ಪಳ 2, ಮಂಡ್ಯ 9, ಮೈಸೂರು 99, ರಾಯಚೂರು 10, ಶಿವಮೊಗ್ಗ 24, ತುಮಕೂರು 7, ಉಡುಪಿ 13, ಉತ್ತರ ಕನ್ನಡ 10, ವಿಜಯಪುರದಲ್ಲಿ 1 ಪ್ರಕರಣ ಪತ್ತೆಯಾಗಿದ್ದು ರಾಮನಗರ ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.