ರಾಜ್ಯದ ವಿವಿಧ ಜಿಲ್ಲೆಗಳಲ್ಲಿಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮುಂಜಾನೆ ವೇಳೆಗೆ ಮೋಡ ಕವಿದ ವಾತಾವರಣ ಇರಲಿದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ ಕರಾವಳಿ ಭಾಗದಲ್ಲಿಯೂ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 24-19
ಮಂಗಳೂರು: 33-26
ಶಿವಮೊಗ್ಗ: 32-20
ಬೆಳಗಾವಿ: 31-19
ಮೈಸೂರು: 28-19
ಮಂಡ್ಯ: 28-20
ಮಡಿಕೇರಿ: 27-17
ರಾಮನಗರ: 27-20
ಹಾಸನ: 27-18
ಚಾಮರಾಜನಗರ: 28-20
ಚಿಕ್ಕಬಳ್ಳಾಪುರ: 22-18
ಕೋಲಾರ: 28-23
ತುಮಕೂರು: 26-19
ಉಡುಪಿ: 34-26
ಕಾರವಾರ: 34-25
ಚಿಕ್ಕಮಗಳೂರು: 28-18
ದಾವಣಗೆರೆ: 31-20
ಹುಬ್ಬಳ್ಳಿ: 33-20
ಚಿತ್ರದುರ್ಗ: 29-19
ಹಾವೇರಿ: 33-20
ಬಳ್ಳಾರಿ: 30-22
ಗದಗ: 32-20
ಕೊಪ್ಪಳ: 32-21
ರಾಯಚೂರು: 31-22
ಯಾದಗಿರಿ: 32-23
ವಿಜಯಪುರ: 32-21
ಬೀದರ್: 29-20
ಕಲಬುರಗಿ: 32-22
ಬಾಗಲಕೋಟೆ: 33-22