ರಾಯಚೂರು: ಪ್ರಾತ್ಯಕ್ಷಿಕೆ ನೀಡುವ ವೇಳೆ ಮತಯಂತ್ರಗಳಲ್ಲಿ ದೋಷವಿರುವುದು ಕಂಡು ಬಂದಿದ್ದು, ಯಾವುದೋ ಅಭ್ಯರ್ಥಿಗೆ ವೋಟ್ ಹಾಕಿದ್ದರೆ ವಿವಿಪ್ಯಾಟ್ನಲ್ಲಿ ಇನ್ಯಾರಿಗೋ ಮತ ಬಿದ್ದಿದೆ.
ರಾಯಚೂರಿನ ಕ್ರಾಫ್ಟ್ ಹಾಲ್ನಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮತ್ತು ಮಾಧ್ಯಮಗಳಿಗೆ ಏರ್ಪಡಿಸಿದ್ದ ಪ್ರಾತ್ಯಕ್ಷಿಕೆಯಲ್ಲಿ ವಿವಿಪ್ಯಾಟ್ನಲ್ಲಿ ದೋಷಗಳು ಕಂಡುಬಂದಿವೆ. ಈ ದೋಷಕ್ಕೆ ಇವಿಎಂ ಯಂತ್ರದ ಬ್ಯಾಟರಿ ಕಡಿಮೆಯಿರುವುದು ಅಥವಾ ಪ್ರಿಂಟರ್ ಸಮಸ್ಯೆಯಿಂದ ಹೀಗೆ ಆಗುತ್ತದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಹೇಳಿದ್ದಾರೆ.
- Advertisement 2
ಆಗಿದ್ದು ಏನು?
ಪ್ರಾತ್ಯಕ್ಷಿಕೆ ವೇಳೆಯಲ್ಲಿ ಆರಂಭದಲ್ಲಿ ಬ್ಯಾಲೆಟ್ ಬಾಕ್ಸ್ ಮೂಲಕ 2 ಮತ ಹಾಕಲಾಯಿತು. ಆದರೆ ವಿವಿಪ್ಯಾಟ್ ನಲ್ಲಿ ಯಾವ ಸಂಖ್ಯೆ ಮತ ಹಾಕಲಾಗಿದೆಯೋ ಆ ಸಂಖ್ಯೆ ಕಾಣಿಸದೇ ಬೇರೆ ಸಂಖ್ಯೆ ಕಾಣಿಸಿದೆ. ಈ ದೋಷ ಕಂಡುಬಂದ ಕೂಡಲೇ ವಿವಿಪ್ಯಾಟ್ ಬದಲಿಸಿ ಬೇರೊಂದು ವಿವಿಪ್ಯಾಟ್ ತಂದು ಪ್ರಾತ್ಯಕ್ಷಿಕೆ ನಡೆಸಲಾಯಿತು. ಒಟ್ಟು 27 ಮತಗಳನ್ನು ಚಲಾವಣೆ ಮಾಡಿದ್ದು ವಿವಿಪ್ಯಾಟ್ ನಲ್ಲಿ ಸರಿಯಾಗಿ ತೋರಿಸಿದೆ. ಕೊನೆಗೆ ಎಲ್ಲ ಮತಗಳನ್ನು ಎಣಿಕೆ ಮಾಡಿದ್ದು ಎಲ್ಲ ಮತಗಳು ಸರಿಯಾಗಿ ಬಿದ್ದಿದೆ.
- Advertisement 3
ಮತಯಂತ್ರಗಳಲ್ಲಿ ದೋಷಕಂಡುಬಂದಿರುವುದಕ್ಕೆ ವಿವಿಧ ಪಕ್ಷದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದ ಕ್ರಾಫ್ಟ್ ರೂಂನಲ್ಲಿ ಉತ್ತರಪ್ರದೇಶದಿಂದ ಬಂದಿರುವ ಇವಿಎಂ ವಿವಿ ಪ್ಯಾಟ್ ಮತಯಂತ್ರಗಳನ್ನ ಭದ್ರವಾಗಿ ಇಡಲಾಗಿದೆ.
- Advertisement 4
ಕಳೆದ ಚುನಾವಣೆಯಲ್ಲಿ ಮತದಾನ ಸಂದರ್ಭದಲ್ಲಿ ಕಂಟ್ರೋಲ್ ಯುನಿಟ್, ಬ್ಯಾಲೆಟ್ ಯುನಿಟ್ ಮಾತ್ರ ಬಳಸಲಾಗುತ್ತಿತ್ತು. ಆದರೆ ಈ ಬಾರಿ ಕರ್ನಾಟಕ ವಿಧಾನ ಸಭಾ ಚುನಾವಣೆಯ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಮತದಾರರ ಮತ ಖಾತ್ರಿಪಡಿಸುವ ಸಲುವಾಗಿ ವಿವಿಪ್ಯಾಟ್ ಯಂತ್ರವನ್ನು ಬಳಸಲಾಗುತ್ತಿದೆ.
ವಿವಿಪಿಎಟಿ ಅಂದ್ರೇನು?: ಕಳೆದ ವರ್ಷ ಕರ್ನಾಟಕದಲ್ಲಿ ನಡೆದ ಎರಡು ಉಪಚುನಾವಣೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್(ವಿವಿಪಿಎಟಿ) ವ್ಯವಸ್ಥೆಯನ್ನು ಜಾರಿ ಮಾಡಲಾಗಿತ್ತು. ಈ ವ್ಯವಸ್ಥೆಯಲ್ಲಿ ವೋಟ್ ಹಾಕಿದ 7 ಸೆಕೆಂಡ್ ಬಳಿಕ ಮತದಾರರ ಕೈಗೆ ಒಂದು ಪೇಪರ್ ಬರುತ್ತದೆ. ಇದರಲ್ಲಿ ವೋಟ್ ಯಾರಿಗೆ ಬಿದ್ದಿದೆ ಎನ್ನುವುದನ್ನು ನೋಡಿಕೊಳ್ಳಬಹುದು. ಆದರೆ ಈ ಪೇಪರ್ ಅನ್ನು ಬೂತ್ನಿಂದ ಹೊರಗಡೆ ತೆಗೆದುಕೊಂಡು ಹೋಗುವಂತಿಲ್ಲ. ಮತದಾರ ತಾನು ಹಾಕಿರುವ ಅಭ್ಯರ್ಥಿಗೆ ಮತ ಬಿದ್ದಿದೆಯೋ ಇಲ್ಲವೋ ಎನ್ನುವುದನ್ನು ಖಚಿತಪಡಿಸಿ ಅಲ್ಲೇ ಇರುವ ಪೆಟ್ಟಿಗೆಯ ಒಳಗಡೆ ಚೀಟಿಯನ್ನು ಹಾಕಬೇಕಾಗುತ್ತದೆ. ಇವಿಎಂ ಬಗ್ಗೆ ಹಲವು ಮಂದಿ ಆಕ್ಷೇಪ ಎತ್ತಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ವ್ಯವಸ್ಥೆಯನ್ನು ಅಳವಡಿಸುವಂತೆ ಚುನಾವಣಾ ಆಯೋಗಕ್ಕೆ 2016ರಲ್ಲಿ ಸಲಹೆ ನೀಡಿತ್ತು.