Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೆಡ್ಡಿ ಕುಟುಂಬಗಳ ನಡುವಿನ ಕಾಳಗಕ್ಕೆ ಸಾಕ್ಷಿಯಾಗಲಿದೆಯಾ ಬಳ್ಳಾರಿ ನಗರ ಕ್ಷೇತ್ರ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ರೆಡ್ಡಿ ಕುಟುಂಬಗಳ ನಡುವಿನ ಕಾಳಗಕ್ಕೆ ಸಾಕ್ಷಿಯಾಗಲಿದೆಯಾ ಬಳ್ಳಾರಿ ನಗರ ಕ್ಷೇತ್ರ?

Bellary

ರೆಡ್ಡಿ ಕುಟುಂಬಗಳ ನಡುವಿನ ಕಾಳಗಕ್ಕೆ ಸಾಕ್ಷಿಯಾಗಲಿದೆಯಾ ಬಳ್ಳಾರಿ ನಗರ ಕ್ಷೇತ್ರ?

Public TV
Last updated: April 24, 2023 5:16 pm
Public TV
Share
5 Min Read
JANARDHAN REDDY SOMASHEKAR REDDY NARA BHARATH REDDY
SHARE

ಬಳ್ಳಾರಿ: ಗಣಿನಾಡು ಎಂದೇ ಪ್ರಸಿದ್ಧಿಯಾದ ಬಳ್ಳಾರಿ (Ballari) ಜಿಲ್ಲೆ ಅಪಾರ ಗಣಿ ಸಂಪತ್ತನ್ನು ಹೊಂದಿದೆ. ಹೀಗಾಗಿ ಜಿಲ್ಲೆಯ ನಗರದ ಆಡಳಿತದ ಮೇಲೆ ರಾಜಕಾರಣಿಗಳು ಕಣ್ಣಿಟ್ಟಿದ್ದಾರೆ. ಇದೇ ಕಾರಣಕ್ಕಾಗಿ ಈ ಕ್ಷೇತ್ರ ಈಗ ಜಿದ್ದಾಜಿದ್ದಿಗೆ ಕಾರಣವಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ಒಂದು ಸಾಮಾನ್ಯ ಕ್ಷೇತ್ರವಿರುವುದರಿಂದ ಪೈಪೋಟಿ ಸಾಮಾನ್ಯವಾಗಿ ಹೆಚ್ಚಿರುತ್ತದೆ. ಇಲ್ಲಿ ಪಕ್ಷದ ಚಿನ್ಹೆಗಿಂತ ವ್ಯಕ್ತಿಯ ವರ್ಚಸ್ಸಿನ ಮೇಲೆ ಚುನಾವಣೆ ನಡೆಯುತ್ತದೆ. ಈ ಬಾರಿ ಎರಡು ರೆಡ್ಡಿ ಕುಟುಂಬಗಳ ಮಧ್ಯೆ ಯುದ್ಧವಾಗುವ ಸಾಧ್ಯತೆಗಳಿವೆ. ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಕುಟುಂಬಕ್ಕೆ ಠಕ್ಕರ್ ಕೊಡಬಲ್ಲ ಮತ್ತೊಂದು ರೆಡ್ಡಿ ಕುಟುಂಬ ಎಂದರೆ ಅದು ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ ಕುಟುಂಬ.

BJP Congress

ಸೂರ್ಯನಾರಾಯಣ ರೆಡ್ಡಿ ಅವರ ಪುತ್ರ ನಾರಾ ಭರತ್ ರೆಡ್ಡಿ (Nara Bharath Reddy) ಅವರು ಈ ಬಾರಿ ಕಾಂಗ್ರೆಸ್‌ನಿಂದ (Congress) ಸ್ಪರ್ಧೆ ಮಾಡಿದ್ದಾರೆ. ಈ ನಡುವೆ ಜನಾರ್ದನ ರೆಡ್ಡಿ ಪತ್ನಿ ಅಖಾಡದಲ್ಲಿ ಇರುವುದರಿಂದ ಕ್ಷೇತ್ರದಲ್ಲಿ ಹೈ ವೋಲ್ಟೇಜ್ ಸ್ಪರ್ಧೆ ನಡೆಯಲಿದೆ. ಹಣ ಬಲ, ತೋಳ್ಬಲ ಈ ಎರಡೂ ಕುಟುಂಬದಲ್ಲಿ ಇರುವ ಕಾರಣ ಬಳ್ಳಾರಿ ನಗರ ಕ್ಷೇತ್ರ ಒಂದು ಪ್ರತಿಷ್ಠೆಯ ಕಣವಾಗಿದೆ.

ಮತ್ತೊಂದು ಸಾರಿ ಕ್ಷೇತ್ರದಲ್ಲಿ ಗೆದ್ದು ಮಂತ್ರಿ ಪದವಿ ಪಡೆಯಲೇ ಬೇಕು ಎನ್ನುವ ತವಕದಲ್ಲಿ ಸೋಮಶೇಖರ್ ರೆಡ್ಡಿ (G.Somashekar Reddy) ಇದ್ದಾರೆ. ನಗರ ಪ್ರದೇಶಗಳಲ್ಲಿ ನಡೆಯುತ್ತಿರುವ ಆಮೆಗತಿ ಕಾಮಗಾರಿಗಳು, ಕುಡಿಯುವ ನೀರಿನ ಸಮಸ್ಯೆಯಿಂದಾಗಿ ನಗರ ಪ್ರದೇಶದ ಜನರು ರೋಸಿ ಹೋಗಿದ್ದಾರೆ. ಹೀಗಾಗಿ ಶಾಸಕ ಸೋಮಶೇಖರ್ ರೆಡ್ಡಿಯವರಿಗೆ ದೊಡ್ಡ ವಿರೋಧ ವ್ಯಕ್ತವಾಗಿದೆ. ಇನ್ನು ಜನಾರ್ದನ ರೆಡ್ಡಿ ಮತ್ತು ರಾಮುಲು ನಡುವಿನ ಬಿರುಕು ರೆಡ್ಡಿ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರಲಿದೆ.

SOMASHEKAR REDDY

ಕಳೆದ ಒಂದು ತಿಂಗಳಿನಿಂದ ಸುಮಾರು 12 ಸಾವಿರ ಮನೆಗಳಿಗೆ ಪಟ್ಟಾ ವಿತರಣೆ ಮಾಡಿದ ಸೋಮಶೇಖರ್ ರೆಡ್ಡಿ ಮತ ನೀಡಿ ಒಂದು ಬಾರಿ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡುತ್ತಿದ್ದಾರೆ. ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ಕಾಂಬಿನೇಷನ್ ಬಳ್ಳಾರಿ ನಗರ ಕ್ಷೇತ್ರದ ಮೇಲೆ ಪ್ರಭಾವ ಬೀರಲಿದ್ದು, ಬಿಜೆಪಿಗೆ ಒಂದು ಶಕ್ತಿ ಬಂದಿದೆ.

ಕೈ-ಕಮಲ ಪಕ್ಷಗಳ ನಡುವೆ ಸಾಂಪ್ರದಾಯಿಕ ಹೋರಾಟಕ್ಕೆ ಸಾಕ್ಷಿಯಾಗುತ್ತಾ ಬಂದಿದ್ದ ಬಳ್ಳಾರಿ ನಗರ ಕ್ಷೇತ್ರದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅಸ್ವಿತ್ವಕ್ಕೆ ತಂದ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದ ಪ್ರವೇಶ ತೀವ್ರ ಕುತೂಹಲ ಮೂಡಿಸಿದೆ.

ARUNA LAKSHMI REDDY

ನಗರದಲ್ಲಿ ಕೆಆರ್‌ಪಿಪಿ (KRPP) ಪಕ್ಷದ ಅರುಣಾ ಲಕ್ಷ್ಮೀ ಸ್ಪರ್ಧೆಯಿಂದ ಕಾಂಗ್ರೆಸ್ ವೋಟ್‌ಬ್ಯಾಂಕ್ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ನಗರ ಪ್ರದೇಶದಲ್ಲಿ ಸಾಲು ಸಾಲು ಸಮಸ್ಯೆಗಳಿವೆ. ಹಾಳಾದ ರಸ್ತೆ ಹಾಗೂ ಕುಡಿಯುವ ನೀರಿನ ಸಮಸ್ಯೆಯಿದ್ದು, ಅಭಿವೃದ್ಧಿಯಲ್ಲಿ ತೀರಾ ಹಿಂದಿರುವ ನಗರವಾಗಿದೆ. ಕೋಟಿ ಕೋಟಿ ಹಣವಿದ್ದರೂ ಅಭಿವೃದ್ಧಿ ಕುಂಠಿತವಾಗಿದ್ದು, ಬಿಜೆಪಿಗೆ ತಲೆನೋವು ತಂದಿದೆ. ಬಿಜೆಪಿ ಕಾರ್ಯಕರ್ತರ ಕಡೆಗಣನೆ, ರೆಡ್ಡಿ ವಿರುದ್ಧದ ಕಾರ್ಯಕರ್ತರ ಅಸಮಾಧಾನ, ಬಿಜೆಪಿ ಆಡಳಿತ ವಿರೋಧಿ ಅಲೆ ಹೆಚ್ಚಾಗಿದ್ದು, ಕಾಂಗ್ರೆಸ್ ಇದರ ಲಾಭ ಪಡೆಯಲು ಮುಂದಾಗಿದೆ.

1957ರಲ್ಲಿ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಮುಂಡ್ಲೂರು ಗಂಗಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಕಾಂಗ್ರೆಸ್ ವಿರುದ್ಧ ಜಯಗಳಿಸಿದ್ದರು. 1962ರಲ್ಲಿ ಕಾಂಗ್ರೆಸ್‌ನಿಂದ ಟಿ.ಜಿ.ಸತ್ಯನಾರಾಯಣ ಜಯಗಳಿಸಿದರೆ, 1967ರಲ್ಲಿ ಎಸ್‌ಡಬ್ಲ್ಯುಎಂ ಪಕ್ಷದಿಂದ ಸ್ಪರ್ಧಿಸಿದ ವಿ.ನಾಗಪ್ಪ ಅವರು ಕಾಂಗ್ರೆಸ್ ವಿರುದ್ಧ ಗೆಲ್ಲುತ್ತಾರೆ. 1972ರಲ್ಲಿ ಎನ್‌ಸಿಒ ಪಕ್ಷದಿಂದ ಇವರು ಮರು ಆಯ್ಕೆಯಾಗುತ್ತಾರೆ. 1978ರಲ್ಲಿ ಕೆ.ಭಾಸ್ಕರ್ ನಾಯ್ಡು ಕಾಂಗ್ರೆಸ್ (ಐ) ಪಕ್ಷದಿಂದ ಗೆಲ್ಲುತ್ತಾರೆ. ನಂತರ ಮುಂಡ್ಲೂರು ಕುಟುಂಬದ ರಾಜಕಾರಣ ಆರಂಭವಾಗುತ್ತದೆ.

NARA BHARTH REDDY

1982ರಲ್ಲಿ ಜೆಎನ್‌ಪಿ ಪಕ್ಷದಿಂದ ಸ್ಪರ್ಧಿಸಿದ್ದ ಮುಂಡ್ಲೂರು ರಾಮಪ್ಪ ಕಾಂಗ್ರೆಸ್ ವಿರುದ್ಧ ಭರ್ಜರಿ ಜಯಗಳಿಸುತ್ತಾರೆ. ನಂತರ 1985 ಹಾಗೂ 1989ರಲ್ಲಿ ನಡೆದ ಎರಡು ಚುನಾವಣೆಗಳಲ್ಲೂ ಇವರೇ ಪುನರಾಯ್ಕೆಯಾಗುತ್ತಾರೆ. 1994ರಲ್ಲಿ ಪಕ್ಷೇತರರಾಗಿ ಪ್ರಥಮ ಜಯಗಳಿಸಿದ ಮಾಜಿ ಸಚಿವ ಎಂ.ದಿವಾಕರ ಬಾಬು 1999ರ ಹೈವೋಲ್ಟೇಜ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮತ್ತೊಮ್ಮೆ ಗೆಲುವು ದಾಖಲಿಸುತ್ತಾರೆ. 2004ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಹಾಲಿ ಸಚಿವ ಬಿ.ಶ್ರೀರಾಮುಲು ಮೊದಲ ಗೆಲುವನ್ನು ಪಡೆಯುತ್ತಾರೆ. 2008ರಲ್ಲಿ ಕ್ಷೇತ್ರ ಮರುವಿಂಗಡಣೆಯಾಗಿ ಬಳ್ಳಾರಿ ನಗರ ಕ್ಷೇತ್ರವಾದ ಬಳಿಕ 2008ರಲ್ಲಿ ಶಾಸಕ ಜಿ.ಸೋಮಶೇಖರ ರೆಡ್ಡಿ ಹಾಗೂ 2013ರಲ್ಲಿ ಅನಿಲ್ ಲಾಡ್ ಆಯ್ಕೆಯಾಗಿದ್ದಾರೆ. ಬಳಿಕ 2018ರಲ್ಲಿ ಗಾಲಿ ಸೋಮಶೇಖರ್ ರೆಡ್ಡಿ ಬಿಜೆಪಿಯಿಂದ ಆಯ್ಕೆಯಾದರು.

1999ರಲ್ಲಿ ನಡೆದ ಸೋನಿಯಾಗಾಂಧಿ ಹಾಗೂ ಸುಷ್ಮಾಸ್ವರಾಜ್ ಅವರ ನಡುವಿನ ಲೋಕಸಭಾ ಚುನಾವಣಾ ಸ್ಪರ್ಧೆಯು ಕಾಂಗ್ರೆಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಬಳ್ಳಾರಿಯಲ್ಲಿ ಕಮಲ ಅರಳಿಸಲು ಕಾರಣವಾಯಿತು.

2004ರಲ್ಲಿ ಈಗಿನ ಸಾರಿಗೆ ಸಚಿವ ಬಿ.ಶ್ರೀರಾಮುಲು ಬಿಜೆಪಿಯಿಂದ ಸ್ಪರ್ಧಿಸಿ ಮೊದಲ ಬಾರಿಗೆ ಕಮಲ ಅರಳಿಸಿದರೆ, 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಜನಾರ್ದನ ರೆಡ್ಡಿ ಸಹೋದರ ಜಿ.ಸೋಮಶೇಖರ ರೆಡ್ಡಿ ಗೆದ್ದಿದ್ದಾರೆ. 2013ರಲ್ಲಿ ಕಾಂಗ್ರೆಸ್‌ನ ಅನಿಲ್ ಲಾಡ್ ಜಯ ಪಡೆದರೆ, 2018ರಲ್ಲಿ ಸೋಮಶೇಖರ ರೆಡ್ಡಿ ಮತ್ತೆ ಜಯ ಗಳಿಸಿದ್ದಾರೆ. ಆದರೆ ಈಗ ಮತ್ತೊಂದು ಸಾರಿ ಕ್ಷೇತ್ರದಲ್ಲಿ ಗೆಲ್ಲಲೇ ಬೇಕು ಎನ್ನುವ ಹಠಕ್ಕೆ ರೆಡ್ಡಿ ಬಿದ್ದಿದ್ದಾರೆ. ಅವರ ಸಹೋದರ ಗಾಲಿ ಜನಾರ್ದನ ರೆಡ್ಡಿ, ಅವರ ಪತ್ನಿ ಅರುಣಾ ಲಕ್ಷ್ಮೀ ಸಹ ಕಣಕ್ಕಿಳಿದಿದ್ದು, ತಮ್ಮ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.

ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಗೊಂದಲವಿದ್ದು, ಕಾಂಗ್ರೆಸ್‌ನ ಭದ್ರ ಕೋಟೆ ಎಂದು ಕರೆಸಿಕೊಳ್ಳುವ ಬಳ್ಳಾರಿ ನಗರ ಕ್ಷೇತ್ರವನ್ನು ಕಾಂಗ್ರೆಸ್ ಲೀಲಾಜಾಲವಾಗಿ ಗೆಲ್ಲಬಹುದು. ಯಾಕೆಂದರೆ ಕಳೆದ ಸಾರಿ ನಡೆದ ಬಳ್ಳಾರಿ ಮಹಾ ನಗರ ಪಾಲಿಕೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತು ಸುಣ್ಣವಾಗಿತ್ತು. ಅಲ್ಲದೇ ಬಳ್ಳಾರಿ ನಗರದಲ್ಲಿ ಕಾಂಗ್ರೆಸ್ ಅಲೆಯಿದ್ದು, ಸೋಮಶೇಖರ್ ರೆಡ್ಡಿ ವಿರುದ್ಧ ಆಡಳಿತ ವಿರೋಧಿ ಅಲೆ ದೊಡ್ಡ ಮಟ್ಟದಲ್ಲಿದೆ. ಹೀಗಾಗಿ ಕಾಂಗ್ರೆಸ್ ಹೋರಾಟ ಮಾಡಿದ್ದೇ ಆದಲ್ಲಿ ಈ ಕ್ಷೇತ್ರದಲ್ಲಿ ಗೆಲ್ಲಬಹುದು. ಆದರೆ ಈ ಮಧ್ಯೆ ಕೆಆರ್‌ಪಿಪಿ ನಗರ ಪ್ರದೇಶದ ಮುಸ್ಲಿಂ ಹಾಗೂ ಸ್ಲಂ ಜನರ ಮೇಲೆ ಕಣ್ಣಿಟ್ಟು ಕಾಂಗ್ರೆಸ್ ಮತಗಳನ್ನು ಸೆಳೆದರೆ ಸೋಮಶೇಖರ್ ರೆಡ್ಡಿಗೆ ಸಹಾಯವಾಗಬಹುದು. ಮಹಾನಗರ ಪಾಲಿಕೆ ಕಾಂಗ್ರೆಸ್ ಹಿಡಿತದಲ್ಲಿ ಇರುವ ಕಾರಣ ಕೆಆರ್‌ಪಿಪಿ ಕಾಂಗ್ರೆಸ್‌ಗೆ ಹೆಚ್ಚಿನ ಡ್ಯಾಮೇಜ್ ಮಾಡಲು ಸಾಧ್ಯವಿಲ್ಲ. ಆದರೆ ಚುನಾವಣೆಗೆ ಇನ್ನೂ ಎರಡು ವಾರ ಇರುವ ಕಾರಣ ಕೊನೆಯ ಕ್ಷಣದಲ್ಲಿ ಮತದಾರರನ್ನು ಹೇಗೆ ಮತ್ತು ಯಾರು ಸೆಳೆಯುತ್ತಾರೆ ಎಂಬುದು ಸದ್ಯದ ಕುತೂಹಲ.

ಬಳ್ಲಾರಿ ನಗರ ಕ್ಷೇತ್ರದ ಮತದಾರರೆಷ್ಟು?
ಬಳ್ಳಾರಿ ನಗರ ಸಾಮಾನ್ಯ ಕ್ಷೇತ್ರದಲ್ಲಿ ಒಟ್ಟು 2,55,385 ಮತದಾರರಿದ್ದಾರೆ. ಅದರಲ್ಲಿ ಪುರುಷರು 1,24,199 ಪುರುಷ ಮತದಾರರಿದ್ದು, 1,31,557 ಮಹಿಳಾ ಮತದಾರರು ಇದ್ದಾರೆ.

ಯಾರ ವೋಟು ಎಷ್ಟು?
ಲಿಂಗಾಯಿತರು: 45,000
ಕುರುಬರು: 25,000
ಮುಸ್ಲಿಂ: 35,000
ಬಲಿಜ, ರೆಡ್ಡಿ, ಕಮ್ಮ: 60,000
ಎಸ್.ಟಿ: 20,000
ಎಸ್.ಸಿ (ಎಲ್ಲಾ ವರ್ಗ): 25,000
ಬ್ರಾಹ್ಮಣ, ಶೆಟ್ಟಿ ಮತ್ತು ಇತರೆ: 25,000

TAGGED:ARUNA LAKSHMI REDDYBALLARI CITY CONSTITUENCYbjpcongressG.SOMASHEKAR REDDYGali Janardhan ReddyKRPPnara bharath reddyಅರುಣಾ ಲಕ್ಷ್ಮೀ ರೆಡ್ಡಿಕಾಂಗ್ರೆಸ್ಕೆಆರ್‌ಪಿಪಿಗಾಲಿ ಜನಾರ್ದನ ರೆಡ್ಡಿಜಿ.ಸೋಮಶೇಖರ ರೆಡ್ಡಿನಾರಾ ಭರತ್ ರೆಡ್ಡಿಬಳ್ಳಾರಿ ನಗರ ಕ್ಷೇತ್ರಬಿಜೆಪಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ

Public TV
By Public TV
1 hour ago
Bagalkote Tractor Trolley Overturned
Bagalkot

ಕೂಲಿ ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿ – ಮಗು ಸೇರಿ ನಾಲ್ವರು ದುರ್ಮರಣ

Public TV
By Public TV
1 hour ago
tumakuru refuse entry to temple for dalits
Latest

ಗೃಹ ಸಚಿವರ ತವರಲ್ಲಿ ಅಸ್ಪೃಶ್ಯತೆ ಜೀವಂತ – ದೇವರು ಬಂದಂತೆ ನಾಟಕವಾಡಿ ದಲಿತರನ್ನ ದೇವಾಲಯದಿಂದ ಹೊರಕಳಿಸಿದ ಗ್ರಾಮಸ್ಥ

Public TV
By Public TV
2 hours ago
Shivamogga Suicide
Crime

ಪತಿ ಸಾವಿನ ಬಳಿಕ ಪೇದೆ ಕಾಟ, ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ – ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ

Public TV
By Public TV
2 hours ago
Anekal Old Man Arrest For Sexually Harassing Minors
Bengaluru City

ಚಾಕೊಲೇಟ್ ಆಸೆ ತೋರಿಸಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ – 64ರ ವೃದ್ಧ ಅರೆಸ್ಟ್

Public TV
By Public TV
2 hours ago
terrorist arshad khan
Bengaluru City

ಬೆಂಗಳೂರಲ್ಲಿ ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರ ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?