Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೆಡ್ಡಿ ಕುಟುಂಬಗಳ ನಡುವಿನ ಕಾಳಗಕ್ಕೆ ಸಾಕ್ಷಿಯಾಗಲಿದೆಯಾ ಬಳ್ಳಾರಿ ನಗರ ಕ್ಷೇತ್ರ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ರೆಡ್ಡಿ ಕುಟುಂಬಗಳ ನಡುವಿನ ಕಾಳಗಕ್ಕೆ ಸಾಕ್ಷಿಯಾಗಲಿದೆಯಾ ಬಳ್ಳಾರಿ ನಗರ ಕ್ಷೇತ್ರ?

Bellary

ರೆಡ್ಡಿ ಕುಟುಂಬಗಳ ನಡುವಿನ ಕಾಳಗಕ್ಕೆ ಸಾಕ್ಷಿಯಾಗಲಿದೆಯಾ ಬಳ್ಳಾರಿ ನಗರ ಕ್ಷೇತ್ರ?

Public TV
Last updated: April 24, 2023 5:16 pm
Public TV
Share
5 Min Read
JANARDHAN REDDY SOMASHEKAR REDDY NARA BHARATH REDDY
SHARE

ಬಳ್ಳಾರಿ: ಗಣಿನಾಡು ಎಂದೇ ಪ್ರಸಿದ್ಧಿಯಾದ ಬಳ್ಳಾರಿ (Ballari) ಜಿಲ್ಲೆ ಅಪಾರ ಗಣಿ ಸಂಪತ್ತನ್ನು ಹೊಂದಿದೆ. ಹೀಗಾಗಿ ಜಿಲ್ಲೆಯ ನಗರದ ಆಡಳಿತದ ಮೇಲೆ ರಾಜಕಾರಣಿಗಳು ಕಣ್ಣಿಟ್ಟಿದ್ದಾರೆ. ಇದೇ ಕಾರಣಕ್ಕಾಗಿ ಈ ಕ್ಷೇತ್ರ ಈಗ ಜಿದ್ದಾಜಿದ್ದಿಗೆ ಕಾರಣವಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ಒಂದು ಸಾಮಾನ್ಯ ಕ್ಷೇತ್ರವಿರುವುದರಿಂದ ಪೈಪೋಟಿ ಸಾಮಾನ್ಯವಾಗಿ ಹೆಚ್ಚಿರುತ್ತದೆ. ಇಲ್ಲಿ ಪಕ್ಷದ ಚಿನ್ಹೆಗಿಂತ ವ್ಯಕ್ತಿಯ ವರ್ಚಸ್ಸಿನ ಮೇಲೆ ಚುನಾವಣೆ ನಡೆಯುತ್ತದೆ. ಈ ಬಾರಿ ಎರಡು ರೆಡ್ಡಿ ಕುಟುಂಬಗಳ ಮಧ್ಯೆ ಯುದ್ಧವಾಗುವ ಸಾಧ್ಯತೆಗಳಿವೆ. ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಕುಟುಂಬಕ್ಕೆ ಠಕ್ಕರ್ ಕೊಡಬಲ್ಲ ಮತ್ತೊಂದು ರೆಡ್ಡಿ ಕುಟುಂಬ ಎಂದರೆ ಅದು ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ ಕುಟುಂಬ.

BJP Congress

ಸೂರ್ಯನಾರಾಯಣ ರೆಡ್ಡಿ ಅವರ ಪುತ್ರ ನಾರಾ ಭರತ್ ರೆಡ್ಡಿ (Nara Bharath Reddy) ಅವರು ಈ ಬಾರಿ ಕಾಂಗ್ರೆಸ್‌ನಿಂದ (Congress) ಸ್ಪರ್ಧೆ ಮಾಡಿದ್ದಾರೆ. ಈ ನಡುವೆ ಜನಾರ್ದನ ರೆಡ್ಡಿ ಪತ್ನಿ ಅಖಾಡದಲ್ಲಿ ಇರುವುದರಿಂದ ಕ್ಷೇತ್ರದಲ್ಲಿ ಹೈ ವೋಲ್ಟೇಜ್ ಸ್ಪರ್ಧೆ ನಡೆಯಲಿದೆ. ಹಣ ಬಲ, ತೋಳ್ಬಲ ಈ ಎರಡೂ ಕುಟುಂಬದಲ್ಲಿ ಇರುವ ಕಾರಣ ಬಳ್ಳಾರಿ ನಗರ ಕ್ಷೇತ್ರ ಒಂದು ಪ್ರತಿಷ್ಠೆಯ ಕಣವಾಗಿದೆ.

ಮತ್ತೊಂದು ಸಾರಿ ಕ್ಷೇತ್ರದಲ್ಲಿ ಗೆದ್ದು ಮಂತ್ರಿ ಪದವಿ ಪಡೆಯಲೇ ಬೇಕು ಎನ್ನುವ ತವಕದಲ್ಲಿ ಸೋಮಶೇಖರ್ ರೆಡ್ಡಿ (G.Somashekar Reddy) ಇದ್ದಾರೆ. ನಗರ ಪ್ರದೇಶಗಳಲ್ಲಿ ನಡೆಯುತ್ತಿರುವ ಆಮೆಗತಿ ಕಾಮಗಾರಿಗಳು, ಕುಡಿಯುವ ನೀರಿನ ಸಮಸ್ಯೆಯಿಂದಾಗಿ ನಗರ ಪ್ರದೇಶದ ಜನರು ರೋಸಿ ಹೋಗಿದ್ದಾರೆ. ಹೀಗಾಗಿ ಶಾಸಕ ಸೋಮಶೇಖರ್ ರೆಡ್ಡಿಯವರಿಗೆ ದೊಡ್ಡ ವಿರೋಧ ವ್ಯಕ್ತವಾಗಿದೆ. ಇನ್ನು ಜನಾರ್ದನ ರೆಡ್ಡಿ ಮತ್ತು ರಾಮುಲು ನಡುವಿನ ಬಿರುಕು ರೆಡ್ಡಿ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರಲಿದೆ.

SOMASHEKAR REDDY

ಕಳೆದ ಒಂದು ತಿಂಗಳಿನಿಂದ ಸುಮಾರು 12 ಸಾವಿರ ಮನೆಗಳಿಗೆ ಪಟ್ಟಾ ವಿತರಣೆ ಮಾಡಿದ ಸೋಮಶೇಖರ್ ರೆಡ್ಡಿ ಮತ ನೀಡಿ ಒಂದು ಬಾರಿ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡುತ್ತಿದ್ದಾರೆ. ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ಕಾಂಬಿನೇಷನ್ ಬಳ್ಳಾರಿ ನಗರ ಕ್ಷೇತ್ರದ ಮೇಲೆ ಪ್ರಭಾವ ಬೀರಲಿದ್ದು, ಬಿಜೆಪಿಗೆ ಒಂದು ಶಕ್ತಿ ಬಂದಿದೆ.

ಕೈ-ಕಮಲ ಪಕ್ಷಗಳ ನಡುವೆ ಸಾಂಪ್ರದಾಯಿಕ ಹೋರಾಟಕ್ಕೆ ಸಾಕ್ಷಿಯಾಗುತ್ತಾ ಬಂದಿದ್ದ ಬಳ್ಳಾರಿ ನಗರ ಕ್ಷೇತ್ರದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅಸ್ವಿತ್ವಕ್ಕೆ ತಂದ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದ ಪ್ರವೇಶ ತೀವ್ರ ಕುತೂಹಲ ಮೂಡಿಸಿದೆ.

ARUNA LAKSHMI REDDY

ನಗರದಲ್ಲಿ ಕೆಆರ್‌ಪಿಪಿ (KRPP) ಪಕ್ಷದ ಅರುಣಾ ಲಕ್ಷ್ಮೀ ಸ್ಪರ್ಧೆಯಿಂದ ಕಾಂಗ್ರೆಸ್ ವೋಟ್‌ಬ್ಯಾಂಕ್ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ನಗರ ಪ್ರದೇಶದಲ್ಲಿ ಸಾಲು ಸಾಲು ಸಮಸ್ಯೆಗಳಿವೆ. ಹಾಳಾದ ರಸ್ತೆ ಹಾಗೂ ಕುಡಿಯುವ ನೀರಿನ ಸಮಸ್ಯೆಯಿದ್ದು, ಅಭಿವೃದ್ಧಿಯಲ್ಲಿ ತೀರಾ ಹಿಂದಿರುವ ನಗರವಾಗಿದೆ. ಕೋಟಿ ಕೋಟಿ ಹಣವಿದ್ದರೂ ಅಭಿವೃದ್ಧಿ ಕುಂಠಿತವಾಗಿದ್ದು, ಬಿಜೆಪಿಗೆ ತಲೆನೋವು ತಂದಿದೆ. ಬಿಜೆಪಿ ಕಾರ್ಯಕರ್ತರ ಕಡೆಗಣನೆ, ರೆಡ್ಡಿ ವಿರುದ್ಧದ ಕಾರ್ಯಕರ್ತರ ಅಸಮಾಧಾನ, ಬಿಜೆಪಿ ಆಡಳಿತ ವಿರೋಧಿ ಅಲೆ ಹೆಚ್ಚಾಗಿದ್ದು, ಕಾಂಗ್ರೆಸ್ ಇದರ ಲಾಭ ಪಡೆಯಲು ಮುಂದಾಗಿದೆ.

1957ರಲ್ಲಿ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಮುಂಡ್ಲೂರು ಗಂಗಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಕಾಂಗ್ರೆಸ್ ವಿರುದ್ಧ ಜಯಗಳಿಸಿದ್ದರು. 1962ರಲ್ಲಿ ಕಾಂಗ್ರೆಸ್‌ನಿಂದ ಟಿ.ಜಿ.ಸತ್ಯನಾರಾಯಣ ಜಯಗಳಿಸಿದರೆ, 1967ರಲ್ಲಿ ಎಸ್‌ಡಬ್ಲ್ಯುಎಂ ಪಕ್ಷದಿಂದ ಸ್ಪರ್ಧಿಸಿದ ವಿ.ನಾಗಪ್ಪ ಅವರು ಕಾಂಗ್ರೆಸ್ ವಿರುದ್ಧ ಗೆಲ್ಲುತ್ತಾರೆ. 1972ರಲ್ಲಿ ಎನ್‌ಸಿಒ ಪಕ್ಷದಿಂದ ಇವರು ಮರು ಆಯ್ಕೆಯಾಗುತ್ತಾರೆ. 1978ರಲ್ಲಿ ಕೆ.ಭಾಸ್ಕರ್ ನಾಯ್ಡು ಕಾಂಗ್ರೆಸ್ (ಐ) ಪಕ್ಷದಿಂದ ಗೆಲ್ಲುತ್ತಾರೆ. ನಂತರ ಮುಂಡ್ಲೂರು ಕುಟುಂಬದ ರಾಜಕಾರಣ ಆರಂಭವಾಗುತ್ತದೆ.

NARA BHARTH REDDY

1982ರಲ್ಲಿ ಜೆಎನ್‌ಪಿ ಪಕ್ಷದಿಂದ ಸ್ಪರ್ಧಿಸಿದ್ದ ಮುಂಡ್ಲೂರು ರಾಮಪ್ಪ ಕಾಂಗ್ರೆಸ್ ವಿರುದ್ಧ ಭರ್ಜರಿ ಜಯಗಳಿಸುತ್ತಾರೆ. ನಂತರ 1985 ಹಾಗೂ 1989ರಲ್ಲಿ ನಡೆದ ಎರಡು ಚುನಾವಣೆಗಳಲ್ಲೂ ಇವರೇ ಪುನರಾಯ್ಕೆಯಾಗುತ್ತಾರೆ. 1994ರಲ್ಲಿ ಪಕ್ಷೇತರರಾಗಿ ಪ್ರಥಮ ಜಯಗಳಿಸಿದ ಮಾಜಿ ಸಚಿವ ಎಂ.ದಿವಾಕರ ಬಾಬು 1999ರ ಹೈವೋಲ್ಟೇಜ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮತ್ತೊಮ್ಮೆ ಗೆಲುವು ದಾಖಲಿಸುತ್ತಾರೆ. 2004ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಹಾಲಿ ಸಚಿವ ಬಿ.ಶ್ರೀರಾಮುಲು ಮೊದಲ ಗೆಲುವನ್ನು ಪಡೆಯುತ್ತಾರೆ. 2008ರಲ್ಲಿ ಕ್ಷೇತ್ರ ಮರುವಿಂಗಡಣೆಯಾಗಿ ಬಳ್ಳಾರಿ ನಗರ ಕ್ಷೇತ್ರವಾದ ಬಳಿಕ 2008ರಲ್ಲಿ ಶಾಸಕ ಜಿ.ಸೋಮಶೇಖರ ರೆಡ್ಡಿ ಹಾಗೂ 2013ರಲ್ಲಿ ಅನಿಲ್ ಲಾಡ್ ಆಯ್ಕೆಯಾಗಿದ್ದಾರೆ. ಬಳಿಕ 2018ರಲ್ಲಿ ಗಾಲಿ ಸೋಮಶೇಖರ್ ರೆಡ್ಡಿ ಬಿಜೆಪಿಯಿಂದ ಆಯ್ಕೆಯಾದರು.

1999ರಲ್ಲಿ ನಡೆದ ಸೋನಿಯಾಗಾಂಧಿ ಹಾಗೂ ಸುಷ್ಮಾಸ್ವರಾಜ್ ಅವರ ನಡುವಿನ ಲೋಕಸಭಾ ಚುನಾವಣಾ ಸ್ಪರ್ಧೆಯು ಕಾಂಗ್ರೆಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಬಳ್ಳಾರಿಯಲ್ಲಿ ಕಮಲ ಅರಳಿಸಲು ಕಾರಣವಾಯಿತು.

2004ರಲ್ಲಿ ಈಗಿನ ಸಾರಿಗೆ ಸಚಿವ ಬಿ.ಶ್ರೀರಾಮುಲು ಬಿಜೆಪಿಯಿಂದ ಸ್ಪರ್ಧಿಸಿ ಮೊದಲ ಬಾರಿಗೆ ಕಮಲ ಅರಳಿಸಿದರೆ, 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಜನಾರ್ದನ ರೆಡ್ಡಿ ಸಹೋದರ ಜಿ.ಸೋಮಶೇಖರ ರೆಡ್ಡಿ ಗೆದ್ದಿದ್ದಾರೆ. 2013ರಲ್ಲಿ ಕಾಂಗ್ರೆಸ್‌ನ ಅನಿಲ್ ಲಾಡ್ ಜಯ ಪಡೆದರೆ, 2018ರಲ್ಲಿ ಸೋಮಶೇಖರ ರೆಡ್ಡಿ ಮತ್ತೆ ಜಯ ಗಳಿಸಿದ್ದಾರೆ. ಆದರೆ ಈಗ ಮತ್ತೊಂದು ಸಾರಿ ಕ್ಷೇತ್ರದಲ್ಲಿ ಗೆಲ್ಲಲೇ ಬೇಕು ಎನ್ನುವ ಹಠಕ್ಕೆ ರೆಡ್ಡಿ ಬಿದ್ದಿದ್ದಾರೆ. ಅವರ ಸಹೋದರ ಗಾಲಿ ಜನಾರ್ದನ ರೆಡ್ಡಿ, ಅವರ ಪತ್ನಿ ಅರುಣಾ ಲಕ್ಷ್ಮೀ ಸಹ ಕಣಕ್ಕಿಳಿದಿದ್ದು, ತಮ್ಮ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.

ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಗೊಂದಲವಿದ್ದು, ಕಾಂಗ್ರೆಸ್‌ನ ಭದ್ರ ಕೋಟೆ ಎಂದು ಕರೆಸಿಕೊಳ್ಳುವ ಬಳ್ಳಾರಿ ನಗರ ಕ್ಷೇತ್ರವನ್ನು ಕಾಂಗ್ರೆಸ್ ಲೀಲಾಜಾಲವಾಗಿ ಗೆಲ್ಲಬಹುದು. ಯಾಕೆಂದರೆ ಕಳೆದ ಸಾರಿ ನಡೆದ ಬಳ್ಳಾರಿ ಮಹಾ ನಗರ ಪಾಲಿಕೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತು ಸುಣ್ಣವಾಗಿತ್ತು. ಅಲ್ಲದೇ ಬಳ್ಳಾರಿ ನಗರದಲ್ಲಿ ಕಾಂಗ್ರೆಸ್ ಅಲೆಯಿದ್ದು, ಸೋಮಶೇಖರ್ ರೆಡ್ಡಿ ವಿರುದ್ಧ ಆಡಳಿತ ವಿರೋಧಿ ಅಲೆ ದೊಡ್ಡ ಮಟ್ಟದಲ್ಲಿದೆ. ಹೀಗಾಗಿ ಕಾಂಗ್ರೆಸ್ ಹೋರಾಟ ಮಾಡಿದ್ದೇ ಆದಲ್ಲಿ ಈ ಕ್ಷೇತ್ರದಲ್ಲಿ ಗೆಲ್ಲಬಹುದು. ಆದರೆ ಈ ಮಧ್ಯೆ ಕೆಆರ್‌ಪಿಪಿ ನಗರ ಪ್ರದೇಶದ ಮುಸ್ಲಿಂ ಹಾಗೂ ಸ್ಲಂ ಜನರ ಮೇಲೆ ಕಣ್ಣಿಟ್ಟು ಕಾಂಗ್ರೆಸ್ ಮತಗಳನ್ನು ಸೆಳೆದರೆ ಸೋಮಶೇಖರ್ ರೆಡ್ಡಿಗೆ ಸಹಾಯವಾಗಬಹುದು. ಮಹಾನಗರ ಪಾಲಿಕೆ ಕಾಂಗ್ರೆಸ್ ಹಿಡಿತದಲ್ಲಿ ಇರುವ ಕಾರಣ ಕೆಆರ್‌ಪಿಪಿ ಕಾಂಗ್ರೆಸ್‌ಗೆ ಹೆಚ್ಚಿನ ಡ್ಯಾಮೇಜ್ ಮಾಡಲು ಸಾಧ್ಯವಿಲ್ಲ. ಆದರೆ ಚುನಾವಣೆಗೆ ಇನ್ನೂ ಎರಡು ವಾರ ಇರುವ ಕಾರಣ ಕೊನೆಯ ಕ್ಷಣದಲ್ಲಿ ಮತದಾರರನ್ನು ಹೇಗೆ ಮತ್ತು ಯಾರು ಸೆಳೆಯುತ್ತಾರೆ ಎಂಬುದು ಸದ್ಯದ ಕುತೂಹಲ.

ಬಳ್ಲಾರಿ ನಗರ ಕ್ಷೇತ್ರದ ಮತದಾರರೆಷ್ಟು?
ಬಳ್ಳಾರಿ ನಗರ ಸಾಮಾನ್ಯ ಕ್ಷೇತ್ರದಲ್ಲಿ ಒಟ್ಟು 2,55,385 ಮತದಾರರಿದ್ದಾರೆ. ಅದರಲ್ಲಿ ಪುರುಷರು 1,24,199 ಪುರುಷ ಮತದಾರರಿದ್ದು, 1,31,557 ಮಹಿಳಾ ಮತದಾರರು ಇದ್ದಾರೆ.

ಯಾರ ವೋಟು ಎಷ್ಟು?
ಲಿಂಗಾಯಿತರು: 45,000
ಕುರುಬರು: 25,000
ಮುಸ್ಲಿಂ: 35,000
ಬಲಿಜ, ರೆಡ್ಡಿ, ಕಮ್ಮ: 60,000
ಎಸ್.ಟಿ: 20,000
ಎಸ್.ಸಿ (ಎಲ್ಲಾ ವರ್ಗ): 25,000
ಬ್ರಾಹ್ಮಣ, ಶೆಟ್ಟಿ ಮತ್ತು ಇತರೆ: 25,000

TAGGED:ARUNA LAKSHMI REDDYBALLARI CITY CONSTITUENCYbjpcongressG.SOMASHEKAR REDDYGali Janardhan ReddyKRPPnara bharath reddyಅರುಣಾ ಲಕ್ಷ್ಮೀ ರೆಡ್ಡಿಕಾಂಗ್ರೆಸ್ಕೆಆರ್‌ಪಿಪಿಗಾಲಿ ಜನಾರ್ದನ ರೆಡ್ಡಿಜಿ.ಸೋಮಶೇಖರ ರೆಡ್ಡಿನಾರಾ ಭರತ್ ರೆಡ್ಡಿಬಳ್ಳಾರಿ ನಗರ ಕ್ಷೇತ್ರಬಿಜೆಪಿ
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
2 minutes ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
30 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
48 minutes ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
60 minutes ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
2 hours ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?