Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ, ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆ – ಬಸವಕಲ್ಯಾಣ ಕ್ಷೇತ್ರದ ಅಖಾಡ ಹೇಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿ, ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆ – ಬಸವಕಲ್ಯಾಣ ಕ್ಷೇತ್ರದ ಅಖಾಡ ಹೇಗಿದೆ?

Districts

ಬಿಜೆಪಿ, ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆ – ಬಸವಕಲ್ಯಾಣ ಕ್ಷೇತ್ರದ ಅಖಾಡ ಹೇಗಿದೆ?

Public TV
Last updated: April 17, 2023 4:56 pm
Public TV
Share
4 Min Read
Basavakalya Candidates 2023
SHARE

ಬೀದರ್: ವಿಶ್ವಗುರು ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣ (Basavakalyan) ಕ್ಷೇತ್ರದಲ್ಲಿ ಎಲ್ಲಾ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಬಿಜೆಪಿಯಿಂದ (BJP)ಮತ್ತೊಮ್ಮೆ ಶರಣು ಸಲಗರ್ (Sharanu Salagar) ಅಗ್ನಿ ಪರೀಕ್ಷೆಗೆ ಇಳಿದರೆ ಕಾಂಗ್ರೆಸ್‌ನಿಂದ (Congress) ಮಾಜಿ ಸಿಎಂ ಎನ್ ಧರಂ ಸಿಂಗ್ (Dharam Singh) ಪುತ್ರ ವಿಜಯ್ ಸಿಂಗ್ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್‌ನಿಂದ (JDS) ಈಗಾಗಲೇ ಸೈಯದ್ ಯಾಸ್ರಬ್ ಅಲಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯಿಂದ ಬಸವಕಲ್ಯಾಣ ಕ್ಷೇತ್ರದಲ್ಲಿ ಹುಲಸೂರು ಮತ ಕ್ಷೇತ್ರದ ಕೆಲವು ಗ್ರಾಮಗಳ ವಿಲೀನಗೊಂಡಿದೆ. ಹೀಗಾಗಿ ಕ್ಷೇತ್ರದ ಸ್ವರೂಪವೂ ಬದಲಾಗಿದೆ. ಒಟ್ಟಾರೆ ಬಸವಕಲ್ಯಾಣ ಕ್ಷೇತ್ರ ಜಿಲ್ಲೆಯ ಪ್ರಮುಖ ರಾಜಕೀಯ ಚಟುವಟಿಕೆ ಕೇಂದ್ರವಾಗಿ ಮಾರ್ಪಟ್ಟಿದೆ.

1957ರಿಂದ ಬಸವಕಲ್ಯಾಣ ಕ್ಷೇತ್ರ ಒಟ್ಟು 15 ಚುನಾವಣೆಗಳನ್ನು ಕಂಡಿದ್ದು 16ನೇ ಚುನಾವಣೆಗೆ ಕ್ಷೇತ್ರದಲ್ಲಿ 2.41 ಲಕ್ಷ ಮತದಾರರಿದ್ದಾರೆ. ಮತದಾರ 5 ಬಾರಿ ಕಾಂಗ್ರೆಸ್‍ನ ಕೈ ಹಿಡಿದರೆ, 7 ಬಾರಿ ಜನತಾ ಪರಿವಾರಕ್ಕೆ ಮಣೆ ಹಾಕಿದ್ದಾನೆ. ಒಂದು ಬಾರಿ ಪಕ್ಷೇತರ, ಎರಡು ಸಲ ಕಮಲ ಅರಳಿದೆ. ಜಿಲ್ಲೆಯಲ್ಲೇ ಮೊದಲ ಬಾರಿ ಮಹಿಳಾ ಪ್ರತಿನಿಧಿಯನ್ನು ಆಯ್ಕೆ ಮಾಡಿ ವಿಧಾನಸೌಧಕ್ಕೆ ಕಳುಹಿಸಿದ ಸಮಾನತೆ ಸಾರಿದ ಕ್ಷೇತ್ರ ಎನ್ನುವುದು ವಿಶೇಷ.

bidar

ಬಸವಕಲ್ಯಾಣ ಕ್ಷೇತ್ರದದಲ್ಲಿ ಈಗ ಅನುಭವ ಮಂಟಪ ಕಾಮಗಾರಿ ಭರದಿಂದ ಸಾಗುತ್ತಿದ್ದು ಜನತಾ ಪರಿವಾರದಿಂದ ಬಸವರಾಜ ಪಾಟೀಲ್ ಅಟ್ಟೂರು ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ. ಬಿ. ನಾರಾಯಣರಾವ್ ಅವರ ಅಕಾಲಿಕ ನಿಧನದಿಂದ ಒಂದು ಬಾರಿ ಉಪ ಚುನಾವಣೆ ನಡೆದಿದೆ.

2018ರಲ್ಲಿ ಶೇ.42.27ರಷ್ಟು ಮತ ಪಡೆದು ಕಾಂಗ್ರೆಸ್‌ನ ಬಿ. ನಾರಾಯಣರಾವ್ (B. Narayan Rao) ಗೆಲುವು ಪಡೆದಿದ್ದರು. ಬಿಜೆಪಿಯ ಮಲ್ಲಿಕಾರ್ಜುನ ಖೂಬಾಗೆ ಶೇ.30.38 ರಷ್ಟು ಮತ ಬಿದ್ದರೆ ಜೆಡಿಎಸ್ ಪಿಜಿ ಆರ್‌ ಸಿಂಧಿಯಾ 21.62 ರಷ್ಟು ಮತ ಪಡೆದಿದ್ದರು. 2021ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಶರಣು ಸಲಗರ ಶೇ.41.17ರಷ್ಟು ಮತ ಪಡೆದು ಗೆದ್ದರೆ ಕಾಂಗ್ರೆಸ್‍ನ ಮಾಲಾ ಬಿ ನಾರಾಯಣರಾವ್ ಶೇ.34.17 ಮತಗಳನ್ನು ಪಡೆದು ಎರಡನೇಯ ಸ್ಥಾನ ಪಡೆದರು.

ಬಸವಕಲ್ಯಾಣ ಕ್ಷೇತ್ರದಲ್ಲಿ ಒಟ್ಟು 2,43,089 ಮತದಾರರು ಇದ್ದು ಇದರಲ್ಲಿ 1,26,681 ಪುರುಷ ಮತದಾರರು ಹಾಗೂ 1,16,408 ಮಹಿಳಾ ಮತದಾರರು ಇದ್ದಾರೆ. 60 ಸಾವಿರ ಲಿಂಗಾಯತ, 45 ಸಾವಿರ ಮರಾಠ, 50 ಸಾವಿರ ಮುಸ್ಲಿಂ, 35 ಸಾವಿರ ಎಸ್‌ಸಿ, 15 ಸಾವಿರ ಎಸ್‌ಟಿ, 18 ಸಾವಿರ ಕೋಳಿ, ಇತರೆ 20 ಸಾವಿರ ಮತದಾರರು ಇದ್ದಾರೆ. ಒಟ್ಟಾರೆಯಾಗಿ ಲಿಂಗಾಯತರು, ಮುಸ್ಲಿಮರು ಹಾಗೂ ಮರಾಠಿಗ ಮತದಾರರೇ ಇಲ್ಲಿ ಪಕ್ಷಗಳ ಗೆಲುವಿಗೆ ನಿರ್ಣಾಯಕ.

ಬಿಜೆಪಿ ಧನಾತ್ಮಕ ಅಂಶಗಳು
ಚುನಾವಣಾ ಚಾಣಕ್ಯ ಅಮಿತ್ ಶಾ ಕಲ್ಯಾಣ ಅನುಭವ ಮಂಟಪದಿಂದ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಕೊಟ್ಟಿದ್ದು ಬಿಜೆಪಿಗೆ ವರದಾನ. ಎಲ್ಲರ ಜೊತೆ ಕೆಲಸ ಮಾಡುವ ಬಿಜೆಪಿಯ ಶರಣು ಸಲಗರ್ ಕಡೆ ಜನರ ಒಲವಿದೆ. ಕಲ್ಯಾಣದ ನೂತನ ಅನುಭವ ಮಂಟಪಕ್ಕೆ ಬಿಜೆಪಿ ಸರ್ಕಾರ 500 ಕೋಟಿ ರೂ. ಅನುದಾನ ನೀಡಿದ್ದು ಕಾಮಗಾರಿ ಕಾರ್ಯ ಭರದಿಂದ ಸಾಗುತ್ತಿದ್ದು ಲಿಂಗಾಯತರ ಮತಗಳು ಬಿಜೆಪಿಗೆ ಬೀಳಬಹುದು. ಮರಾಠಿಗರನ್ನು ಸೆಳೆಯಲು ಶಿವಾಜಿ ಪಾರ್ಕ್‌ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿದೆ. ಸರ್ಕಾರದಿಂದ ಕೋಟ್ಯಂತರ ರೂ. ಅನುದಾನ ತಂದು ಹಲವು ಅಭಿವೃದ್ಧಿ ಕೆಲಸ ಮಾಡಲಾಗಿದೆ.

ಬಿಜೆಪಿ ಋಣಾತ್ಮಕ ಅಂಶಗಳು
ಕಾಂಗ್ರೆಸ್‌ನಿಂದ ವಿಜಯ್ ಸಿಂಗ್‌ಗೆ ಟಿಕೆಟ್ ಸಿಕ್ಕಿದ್ದರಿಂದ ನೇರಾನೇರ ಸ್ಪರ್ಧೆ ನಡೆಯುವ ಸಾಧ್ಯತೆಯಿದೆ. ಕೊನೆಯ ಕ್ಷಣದಲ್ಲಿ ಜೆಡಿಎಸ್‌ನಿಂದ ಮಲ್ಲಿಕಾರ್ಜುನ ಖೂಬಾಗೆ ಟಿಕೆಟ್ ಸಿಕ್ಕರೆ ತ್ರಿಕೋನ ಸ್ಪರ್ಧೆ ನಡೆಯಬಹುದು. ಕಳೆದ ಬಾರಿ ಟಿಕೆಟ್ ಸಿಗುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕೇಂದ್ರ ಸಚಿವ ಭಗವಂತ್ ಖೂಬಾ ಹಾಗೂ ಶಾಸಕ ಸಲಗರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿರುವುದು ಹಿನ್ನಡೆಯಾಬಹುದು. ಕಾಂಗ್ರೆಸ್ ಮಾಜಿ ಸಿಎಂ ಪುತ್ರನಿಗೆ ಟಿಕೆಟ್ ಸಿಕ್ಕಿದ್ದು ಮರಾಠ, ಅಲ್ಪಸಂಖ್ಯಾತರು, ಒಬಿಸಿ ಮತಗಳನ್ನು ಸೆಳೆಯುವ ಸಾಧ್ಯತೆಯಿದೆ.

ಕಾಂಗ್ರೆಸ್‌ ಧನಾತ್ಮಕ ಅಂಶಗಳು
ಮಾಜಿ ಸಿಎಂ ಧರಂಸಿಂಗ್‌ ಪುತ್ರ ವಿಜಯ್ ಸಿಂಗ್‌ಗೆ ಟಿಕೆಟ್‌ ಸಿಕ್ಕಿದೆ. ಮರಾಠರು, ಅಲ್ಪಸಂಖ್ಯಾತರು ಹಾಗೂ ಒಬಿಸಿ ಮತದಾರರು ಹೆಚ್ಚಾಗಿದ್ದಾರೆ. ವಿಜಯ್ ಸಿಂಗ್ ತಮ್ಮದೇಯಾದ ಕಾರ್ಯಕರ್ತರ ಹಾಗೂ ಯುವಕರ ಪಡೆ ಕಟ್ಟಿಕೊಂಡು ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಪತಿಯನ್ನು ತಬ್ಬಿ ಕಣ್ಣೀರಿಟ್ಟ ಶಿಲ್ಪಾ ಜಗದೀಶ್

ಮಲ್ಲಿಕಾರ್ಜುನ ಖೂಬಾ ಜೆಡಿಎಸ್‌ಗೆ ಮತ್ತೆ ಬಂದಿದ್ದು ಟಿಕೆಟ್ ಸಿಕ್ಕರೆ ಕಾಂಗ್ರೆಸ್ ಮತಗಳು ಜೆಡಿಎಸ್ ಗೆ ಶಿಫ್ಟ್ ಆಗುವ ಸಾಧ್ಯತೆಯಿದೆ. ಈ ಬಾರಿ ದಿವಂಗತ ಬಿ. ನಾರಾಯಣರಾವ್ ಅನುಕಂಪ ಮತಗಳು ಕಾಂಗ್ರೆಸ್‌ಗೆ ಬೀಳುವುದು ಅನುಮಾನ. ನೂತನ ಅನುಭವ ಮಂಟಪ ಸೇರಿದಂತೆ ವಿವಿಧ ಬಿಜೆಪಿ ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್‌ಗೆ ಹಿನ್ನಡೆಯಾಗಬಹುದು.

ಜೆಡಿಎಸ್‌ ಧನಾತ್ಮಕ ಅಂಶಗಳು
ವಿಜಯ್ ಸಿಂಗ್‌ಗೆ ಕಾಂಗ್ರೆಸ್ ನಿಂದ ಟಿಕೆಟ್ ಘೋಷಣೆಯಾಗಿದ್ದು ಲಿಂಗಾಯತ ಟಿಕೆಟ್ ಆಕಾಂಕ್ಷಿಗಳು ಬಂಡಾಯದ ಬಾವುಟ ಹಾರಿಸಿದ್ದಾರೆ. ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಜೆಡಿಎಸ್‌ ಋಣಾತ್ಮಕ ಅಂಶಗಳು
ಕಲ್ಯಾಣ ನಾಡಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಯಾತ್ರೆಗಳನ್ನು ಮಾಡಿದರೂ ಜೆಡಿಎಸ್‌ನಿಂದ ಯಾವುದೇ ದೊಡ್ಡ ಮಟ್ಟದ ಕಾರ್ಯಕ್ರಮ ನಡೆದಿಲ್ಲ. ಇನ್ನೂ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಿದರೂ ಯಾರಿಗೆ ಬಿ ಫಾರಂ ಸಿಗುತ್ತದೆ ಎಂಬ ಗೊಂದಲದಲ್ಲಿ ಕಾರ್ಯಕರ್ತರಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಪೈಪೋಟಿಗೆ ಬಿದ್ದಂತೆ ಪ್ರಚಾರ ಮಾಡುತ್ತಿದ್ದರೂ ಜೆಡಿಎಸ್‌ನಿಂದ ದೊಡ್ಡ ಮಟ್ಟದ ಪ್ರಚಾರ ನಡೆದಿಲ್ಲ.

TAGGED:BasavakalyanabidarbjpcongressjdsKarnataka Electionಕರ್ನಾಟಕ ಚುನಾವಣೆಕಾಂಗ್ರೆಸ್ಬಸವ ಕಲ್ಯಾಣಬಿಜೆಪಿಬೀದರ್
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

T20 World Cup 1
Cricket

T20 World Cup | 20 ತಂಡಗಳ ನಾಯಕರ ಬಲ ಹೇಗಿದೆ? ಆತಿಥ್ಯ ವಹಿಸಲಿರುವ ಕ್ರೀಡಾಂಗಣಗಳು ಯಾವುವು?

Public TV
By Public TV
3 minutes ago
team india t20 world Cup 1
Cricket

ಇಂಡೋ – ಪಾಕ್‌ ವಿವಾದದ ನಡುವೆ ಚುಟುಕು ಕ್ರಿಕೆಟ್‌ ಕದನ – ಇಂದಿನಿಂದ ವಿಶ್ವಕಪ್‌ ಹಬ್ಬ!

Public TV
By Public TV
29 minutes ago
KSRTC BMTC Tobacco Advertisement
Bengaluru City

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Public TV
By Public TV
42 minutes ago
delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
9 hours ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
9 hours ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?