Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಫೈನಲ್ – 85ಕ್ಕೂ ಹೆಚ್ಚು ಹಾಲಿ ಶಾಸಕರ ಹೆಸರು ಫೈನಲ್?

Public TV
Last updated: April 9, 2023 9:52 pm
Public TV
Share
3 Min Read
BJP meeting
SHARE

– ಸಿಎಂ ಸಂಪುಟದ 21 ಸಚಿವರ ಕ್ಷೇತ್ರಗಳು ಚರ್ಚೆ ಇಲ್ಲದೇ ಕ್ಲಿಯರ್?

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election 2023) ಅಧಿಸೂಚನೆ ಹೊರಬೀಳಲು ಇನ್ನು ಕೇವಲ ನಾಲ್ಕು ದಿನವಷ್ಟೇ ಬಾಕಿ ಇದೆ. ಈ ಹೊತ್ತಲ್ಲಿ ರಾಜಕೀಯ ಚಟುವಟಿಕೆಗಳು ಚುರುಕು ಪಡೆದಿದೆ. ರಾಜ್ಯದಲ್ಲಿ ಹತ್ತಾರು ಸಭೆ ಮೂಲಕ ರೆಡಿ ಮಾಡಿದ್ದ ಸಂಭಾವ್ಯರ ಪಟ್ಟಿಯನ್ನು ಮೋದಿ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆ ಪರಿಶೀಲಿಸಿ, ಒಂದು ಅಂತಿಮ ಪಟ್ಟಿಯನ್ನು ಓಕೆ ಮಾಡಿದೆ.

ಶನಿವಾರ ಮಧ್ಯಾಹ್ನದಿಂದ ಮಧ್ಯರಾತ್ರಿವರೆಗೂ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಸಿತ್ತು. ಬಳಿಕ ಇಂದು ರಾಜ್ಯ ಪ್ರವಾಸ ಮುಗಿಸಿ ದೆಹಲಿಗೆ ಹಿಂತಿರುಗಿದ ಮೋದಿ ಸಮ್ಮುಖದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಿತು. ಇಂದು ಮಧ್ಯರಾತ್ರಿ ಅಥವಾ ನಾಳೆ ಬೆಳಗ್ಗೆ ಬಿಜೆಪಿಯ (BJP) ಮೊದಲ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ. ಅಭ್ಯರ್ಥಿಗಳ ಆಯ್ಕೆಗೆ ಯಾವ ಮಾನದಂಡ ಬಳಸಲಾಗಿದೆ ಎನ್ನುವುದನ್ನು ರಹಸ್ಯವಾಗಿಯೇ ಇಡಲಾಗಿದೆ. ಇದನ್ನೂ ಓದಿ: ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌ ಸೇರ್ಪಡೆ

BJP meeting1

ಬಹುತೇಕರ ಪ್ರಕಾರ, ಗುಜರಾತ್ ಮಾಡೆಲ್ ಅನುಸರಿಸಲಾಗಿದೆಯಂತೆ. ಗುಜರಾತ್ ಮಾದರಿ ಎಂಬ ಸುದ್ದಿಯೇ ಹಲವರ ನಿದ್ದೆಗೆಡಿಸಿದೆ. ಯಾಕಂದ್ರೆ ಗುಜರಾತ್‌ನಲ್ಲಿ 30ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಸದ್ಯ ರಾಜ್ಯ ಬಿಜೆಪಿಯ 24ಕ್ಕೂ ಹೆಚ್ಚು ಶಾಸಕರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಪಟ್ಟಿ ಪ್ರಕಟ ನಂತರ ಬಂಡಾಯ ಏಳದಂತೆ ಬಿಜೆಪಿ ಎಲ್ಲಾ ರೀತಿಯ ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ ಎಂದು ಕೂಡ ಹೇಳಲಾಗುತ್ತಿದೆ.

85ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಟಿಕೆಟ್?
ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮವಾಗಿದ್ದು, 85ಕ್ಕೂ ಹೆಚ್ಚು ಹಾಲಿ ಶಾಸಕರ ಕ್ಷೇತ್ರಗಳು ಕ್ಲಿಯರ್ ಆಗಿವೆ ಎಂದು ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲದೇ ಸಿಎಂ ಸೇರಿ ಬೊಮ್ಮಾಯಿ ಸಂಪುಟದ 21 ಸಚಿವರ ಕ್ಷೇತ್ರಗಳು ಕೂಡ ಚರ್ಚೆ ಇಲ್ಲದೇ ಕ್ಲಿಯರ್ ಆಗಿವೆ ಎನ್ನಲಾಗಿದೆ. ಇದನ್ನೂ ಓದಿ: ‘ಕೈ’ ತಪ್ಪಿದ ಟಿಕೆಟ್‌: ಸ್ವತಂತ್ರ ಅಭ್ಯರ್ಥಿಯಾಗಿ ವೈಎಸ್‌ವಿ ದತ್ತ ಸ್ಪರ್ಧೆ

narendra modi j.p.nadda

21 ಸಚಿವರು ಯಾರು?
ಬಸವರಾಜ ಬೊಮ್ಮಾಯಿ- ಶಿಗ್ಗಾಂವಿ, ಗೋವಿಂದ ಕಾರಜೋಳ- ಮುಧೋಳ, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಅಶೋಕ್- ಪದ್ಮನಾಭನಗರ, ಶ್ರೀರಾಮುಲು- ಬಳ್ಳಾರಿ ಗ್ರಾಮೀಣ, ಡಾ.ಸಿ.ಅಶ್ವತ್ಥನಾರಾಯಣ್- ಮಲ್ಲೇಶ್ವರಂ, ಸಿ.ಸಿ.ಪಾಟೀಲ್- ನರಗುಂದ, ಮುರುಗೇಶ್ ನಿರಾಣಿ- ಬೀಳಗಿ, ಸುನೀಲ್ ಕುಮಾರ್- ಕಾರ್ಕಳ, ಬಿ.ಸಿ.ನಾಗೇಶ್- ತಿಪಟೂರು, ಶಂಕರಪಾಟೀಲ್ ಮುನೇನಕೊಪ್ಪ- ನವಲಗುಂದ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಪ್ರಭು ಚವ್ಹಾಣ್- ಔರಾದ್.

ವಲಸಿಗ ಸಚಿವರ ಕ್ಷೇತ್ರಗಳ ಕ್ಲಿಯರ್
ಡಾ.ಕೆ.ಸುಧಾಕರ್- ಚಿಕ್ಕಬಳ್ಳಾಪುರ, ಆನಂದ್ ಸಿಂಗ್- ವಿಜಯನಗರ, ಮುನಿರತ್ನ- ರಾಜರಾಜೇಶ್ವರಿ ನಗರ, ಎಸ್.ಟಿ.ಸೋಮಶೇಖರ್- ಯಶವಂತಪುರ, ಬೈರತಿ ಬಸವರಾಜು- ಕೆ.ಆರ್.ಪುರಂ, ಗೋಪಾಲಯ್ಯ- ಮಹಾಲಕ್ಷ್ಮೀ ಲೇಔಟ್, ಶಿವರಾಂ ಹೆಬ್ಬಾರ್- ಯಲ್ಲಾಪುರ, ಬಿ.ಸಿ.ಪಾಟೀಲ್- ಹಿರೇಕೆರೂರು, ನಾರಾಯಣಗೌಡ- ಕೆ.ಆರ್.ಪೇಟೆ.

BJP meeting2

ಆದರೆ 5 ಸಚಿವರ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಸೋಮಣ್ಣ, ಹಾಲಪ್ಪ ಆಚಾರ್, ಆರಗ ಜ್ಞಾನೇಂದ್ರ, ಎಂ.ಟಿ.ಬಿ.ನಾಗರಾಜ್, ಅಂಗಾರ ಕ್ಷೇತ್ರಗಳ ಬಗ್ಗೆ ಇನ್ನೂ ಫೈನಲ್ ಆಗಿಲ್ಲ. ಹಾಗಾದ್ರೆ ಆ ಐವರು ಸಚಿವರ ಕ್ಷೇತ್ರಗಳು ಅವರಿಗೆ ಉಳಿದುಕೊಳ್ಳುತ್ತಾ ಅಥವಾ ಕೆಲವರಿಗೆ ಸಿಗುವುದಿಲ್ಲವಾ ಎಂಬ ಪ್ರಶ್ನೆ ಉದ್ಭವಿಸಿದೆ. ಇದನ್ನೂ ಓದಿ: ನೇಕಾರರ ನಾಡಲ್ಲಿ ಯಾರಿಗೆ ಟಿಕೆಟ್- ಎರಡೂ ಪಕ್ಷದಲ್ಲೂ ಎದ್ದಿದೆ ಅಸಮಾಧಾನದ ಬಿರುಗಾಳಿ

ಗೋವಿಂದ ಕಾರಜೋಳ, ಈಶ್ವರಪ್ಪ, ಸೋಮಣ್ಣ ಹಾಗೂ ಜಗದೀಶ್ ಶೆಟ್ಟರ್‌ಗೂ ಟಿಕೆಟ್ ಪಕ್ಕಾ ಎನ್ನಲಾಗಿದೆ. ವಯಸ್ಸಿನ ಕಾರಣ ಕೆಲವರಿಗಷ್ಟೇ ಅನ್ವಯವಾಗುತ್ತೆ ಎಂದು ಅಮಿತ್ ಶಾ ಅವರು ಸಂದೇಶ ರವಾನಿಸಿದ್ದಾರೆ. ಆ ಮೂಲಕ ಘಟಾನುಘಟಿಗಳನ್ನ ಬದಿಗೆ ಸರಿಸದಿರಲು ಹೈಕಮಾಂಡ್ ನಿರ್ಧಾರಿಸಿದೆ ಎಂದು ಹೇಳಲಾಗಿದೆ.

ಇನ್ನೂ ಸಭೆಯಲ್ಲಿ ಆಪ್ತರೆಲ್ಲರ ಪರವೂ ಯಡಿಯೂರಪ್ಪ (BJP) ಬ್ಯಾಟಿಂಗ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸಭೆಯಲ್ಲಿ ಬಿಎಸ್‌ವೈ ಹೆಚ್ಚು ಮಾತನಾಡಿದ್ದಾರೆ. ಪುತ್ರನ ಶಿಕಾರಿಪುರ ಸ್ಪರ್ಧೆ ವಿಚಾರದ ಬಗ್ಗೆಯೂ ಪ್ರಸ್ತಾಪಿಸದೇ ಬಿಎಸ್‌ವೈ ಕುಳಿತಿದ್ದರು. ಈ ವೇಳೆ ಶಿಕಾರಿಪುರ ಕ್ಷೇತ್ರಕ್ಕೆ ವಿಜಯೇಂದ್ರ ಹೆಸರು ಪ್ರಸ್ತಾಪದ ಮಾಹಿತಿಯನ್ನು ಜೆ.ಪಿ.ನಡ್ಡಾ ಸಭೆ ಮುಂದಿಟ್ಟರು ಎಂದು ಮೂಲಗಳು ಹೇಳಿವೆ.

TAGGED:Amit ShahBasavaraj BommaibjpCandidates ListKarnataka Election 2023narendra modiYediyurappaಅಭ್ಯರ್ಥಿಗಳ ಪಟ್ಟಿಅಮಿತ್‌ ಶಾನನರೇಂದ್ರ ಮೋದಿನವದೆಹಲಿಬಸವರಾಜ ಬೊಮ್ಮಾಯಿಬಿಜೆಪಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema Updates

Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
6 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
16 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
18 hours ago

You Might Also Like

Tim David
Cricket

ಆರ್‌ಸಿಬಿಗೆ ಡಬಲ್‌ ಶಾಕ್‌ – ಟಿಮ್‌ ಡೇವಿಡ್‌ ಆಡೋದು ಡೌಟ್‌!

Public TV
By Public TV
17 minutes ago
Harangi Dam Kodagu
Districts

ಹಾರಂಗಿ ಬಹುತೇಕ ಭರ್ತಿ – ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಾಂತ್ಯದಲ್ಲಿ ಹೆಚ್ಚು ಪ್ರಮಾಣದ ನೀರು ಸಂಗ್ರಹ

Public TV
By Public TV
41 minutes ago
bengaluru police commissioner b dayanand
Bengaluru City

IPL Final | ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ – ಬಿ.ದಯಾನಂದ್

Public TV
By Public TV
1 hour ago
Narendra Modi Stadium 2
Cricket

IPL 2025 Final – ಪಂದ್ಯಕ್ಕೂ ಮುನ್ನವೇ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಬ್ಲಾಸ್ಟ್

Public TV
By Public TV
1 hour ago
Chamarajanagar Mariyala School
Chamarajanagar

Chamarajanagar | ಶಿಕ್ಷಕರ ಒಳಜಗಳ ಆರೋಪ – ಮರಿಯಾಲ ಸರ್ಕಾರಿ ಶಾಲೆಯಲ್ಲಿ ಝೀರೋ ಅಡ್ಮಿಷನ್

Public TV
By Public TV
2 hours ago
Mysuru Road Accident
Bengaluru City

ಬೆಂಗಳೂರು| ಓವರ್‌ಟೇಕ್ ಮಾಡಲು ಹೋಗಿ ಪರಸ್ಪರ ಬೈಕ್ ಡಿಕ್ಕಿ – ಇಬ್ಬರು ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?