Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ಫೈಟಾ, ಬಂಟ-ಬಿಲ್ಲವ ಫೈಟಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ಫೈಟಾ, ಬಂಟ-ಬಿಲ್ಲವ ಫೈಟಾ?

Dakshina Kannada

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ಫೈಟಾ, ಬಂಟ-ಬಿಲ್ಲವ ಫೈಟಾ?

Public TV
Last updated: March 30, 2023 12:42 pm
Public TV
Share
4 Min Read
HARISH POONJA RAKSHIT SHIVARAM
SHARE

ಮಂಗಳೂರು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ (Belthangady Vidhanasabha Constituency) ರಾಜಕೀಯವಾಗಿ ವರ್ಣರಂಜಿತವಾದುದು. ಜಾಗತಿಕ ಮಟ್ಟದ ನಾಯಕಿಯಾಗಿದ್ದ ದಿವಂಗತ ಇಂದಿರಾ ಗಾಂಧಿ (Indira Gandhi) ಯವರಿಗೂ ಬೆಳ್ತಂಗಡಿಗೂ ನಿಕಟ ನಂಟಿದೆ. ಇದಕ್ಕೆ ಕಾರಣ ಇದು ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಭಾಗವಾಗಿದ್ದಿದ್ದು.

congress flag

ಹೌದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿದ್ದ ಬೆಳ್ತಂಗಡಿ ಮಾತ್ರ 2009ರವರೆಗೂ ಚಿಕ್ಕಮಗಳೂರು ಸಂಸದೀಯ ಕ್ಷೇತ್ರದ ಅಂಗವಾಗಿದ್ದು, ಕ್ಷೇತ್ರ ಮರುವಿಂಗಡಣೆಯಾದ ಬಳಿಕ 2009ರಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಸೇರಿತು. 1977ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ (Congress) ದೇಶದಲ್ಲಿ ಅಧಿಕಾರ ಕಳೆದುಕೊಂಡು ರಾಯ್‍ಬರೇಲಿಯಲ್ಲಿ ಇಂದಿರಾ ಗಾಂಧಿ ಸೋತರು. ಅಧಿಕಾರಕ್ಕೆ ಬಂದ ಜನತಾ ಪಕ್ಷದ ಸರ್ಕಾರ ಇಂದಿರಾರನ್ನು ಬಂಧಿಸಿತು. ಈ ವಿದ್ಯಮಾನದ ಬಳಿಕ ಇಂದಿರಾ ಗಾಂಧಿ ಮತ್ತೆ ಲೋಕಸಭೆ ಪ್ರವೇಶಿಸಲು ನಿರ್ಧರಿಸಿದರು. ಕಾಂಗ್ರೆಸ್ ಸಂಸದ ಡಿ.ಬಿ ಚಂದ್ರೇಗೌಡ (D B Chandregowda) ಚಿಕ್ಕಮಗಳೂರು ಸ್ಥಾನಕ್ಕೆ ರಾಜೀನಾಮೆ ನೀಡಿ ನಾಯಕಿ ಇಂದಿರಾ ಗಾಂಧಿಗೆ ಅನುವು ಮಾಡಿಕೊಟ್ಟರು. ಅದರಂತೆ 1978ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಇಂದಿರಾ ಗಾಂಧಿ ಚಿಕ್ಕಮಗಳೂರಿನಿಂದ ಕಣಕ್ಕಿಳಿದರು.

VASANTH BANGERA

ಜನತಾ ಪಾರ್ಟಿಯಿಂದ ವೀರೇಂದ್ರ ಪಾಟೀಲ್ (Veerendra Patil) ಎದುರಾಳಿಯಾದರು. ಚುನಾವಣಾ ಪ್ರಚಾರಕ್ಕೆ ಬಂದಿದ್ದ ಇಂದಿರಾ ಗಾಂಧಿ ಬೆಳ್ತಂಗಡಿ, ಉಜಿರೆಗಳಲ್ಲಿ ಸುತ್ತಾಡಿದ್ದರು. ಆಗ ಇಡೀ ದೇಶದ ಗಮನವನ್ನು ಬೆಳ್ತಂಗಡಿ ಸೇರಿದಂತೆ ಚಿಕ್ಕಮಗಳೂರು ಕ್ಷೇತ್ರ ಸೆಳೆದಿತ್ತು. ಇದೀಗ ಇದೇ ಕ್ಷೇತ್ರ ಕಾಂಗ್ರೆಸ್ ಗೆ ಹೈ ಟೆನ್ಷನ್ ಕ್ಷೇತ್ರವಾಗಿದೆ. ಪ್ರಸ್ತುತ ಕಾಂಗ್ರೆಸ್ ಮುಖಂಡರಾದ ವಸಂತ ಬಂಗೇರ ಮತ್ತು ಗಂಗಾಧರ ಗೌಡ ಇಬ್ಬರೂ ಬಿಜೆಪಿ (BJP), ಜೆಡಿಎಸ್ (JDS) ಮತ್ತು ಕಾಂಗ್ರೆಸ್ ಪಕ್ಷಗಳಲ್ಲಿ ಉಂಡವರು. ಗಂಗಾಧರ ಗೌಡ-ಬಂಗೇರ 5 ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮುಖಾಮುಖಿಯಾಗಿದ್ದಾರೆ. ಬಂಗೇರರ ವಿರುದ್ಧ ಗಂಗಾಧರ ಗೌಡರ ಪುತ್ರ ರಂಜನ್ ಗೌಡ ಕೂಡ ಸ್ಪರ್ಧಿಸಿದ್ದರು. ಬಂಗೇರರು ಜೆಡಿಎಸ್‍ನಲ್ಲಿದ್ದಾಗ ಕಾಂಗ್ರೆಸ್‍ನಿಂದ ಹರೀಶ್ ಕುಮಾರ್ ಎದುರಾಳಿಯಾಗಿ ಸ್ಪರ್ಧಿಸಿದ್ದರು. ಆಗ ಎದುರಾಳಿಯಾಗಿದ್ದ ಈ ಎಲ್ಲರೂ ಈಗ ಕಾಂಗ್ರೆಸ್‍ನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಇದನ್ನೂ ಓದಿ: ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಟಿಕೆಟ್ ಫೈಟ್‍ನ ಲಾಭ ಪಡೆಯಲಿದೆಯೇ ಬಿಜೆಪಿ?

harish poonja

ಕಳೆದ ಚುನಾವಣೆ ಸಂದರ್ಭ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸುವವರು ಯಾರು ಎಂಬ ಪ್ರಶ್ನೆ ಇತ್ತು. ಪೈಪೋಟಿಗೆ ಹಲವು ಮುಖಗಳಿದ್ದವು. ಈ ಬಾರಿ ಗೊಂದಲಗಳಿಲ್ಲ. ದೆಹಲಿವರೆಗೂ ವರ್ಚಸ್ಸು ವಿಸ್ತರಿಸಿಕೊಂಡು ಸ್ಥಾನ ಗಟ್ಟಿ ಮಾಡಿಕೊಂಡಿರುವ ಶಾಸಕ ಹರೀಶ್ ಪೂಂಜ (Harish Poonja) ಬಿಜೆಪಿಯಿಂದ ಮತ್ತೆ ಕಣಕ್ಕಿಳಿಯುವುದು ಖಚಿತ. ಹಾಗೆಂದು ಪಕ್ಷದಲ್ಲಿ ಬೇರೆ ಆಕಾಂಕ್ಷಿಗಳಿಲ್ಲ ಎಂದಲ್ಲ, ಈ ಹಿಂದೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದ ಆರ್.ಎಸ್.ಎಸ್ (RSS). ಹಿನ್ನೆಲೆಯುಳ್ಳ ಸಂಪತ್ ಬಿ.ಸುವರ್ಣ (Sampath B Suvarna) ಅವರು ತಾವೂ ಆಕಾಂಕ್ಷಿ ಎಂದು ಹೇಳಿದ್ದಾರೆ. ಉಳಿದಂತೆ ಉದ್ಯಮಿ ಬರೋಡ ಶಶಿಧರ್ ಶೆಟ್ಟಿ ಹೆಸರೂ ಕೇಳಿಬರುತ್ತಿದೆ.

CongressFlags1 e1613454851608

ಆದರೆ ಕಾಂಗ್ರೆಸ್‍ನಲ್ಲಿ ಕೆಪಿಸಿಸಿ ಕಾರ್ಯದರ್ಶಿ, ಯುವನಾಯಕ ರಕ್ಷಿತ್ ಶಿವರಾಂ (Rakshit Shivaram) ಗೆ ಬೆಳ್ತಂಗಡಿ ಟಿಕೆಟ್ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸಹೋದರ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಪುತ್ರ ರಕ್ಷಿತ್ ಶಿವರಾಂಗೆ ಟಿಕೆಟ್ ನೀಡುವುದನ್ನು ಮಾಜಿ ಶಾಸಕ ವಸಂತ ಬಂಗೇರಾ (vasantha Bangera), ಗಂಗಾಧರ ಗೌಡ (Gangadhar Gowda) ಸೇರಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ದಾಖಲೆ ಬರೆದ ಸುಳ್ಯದ ಎಸ್ ಅಂಗಾರ

JDS FLAG

ಜೆಡಿಎಸ್‍ (JDS) ನಲ್ಲಿ ಈವರೆಗೆ ಬೆಳ್ತಂಗಡಿ ಕ್ಷೇತ್ರದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಗತಿ ಚರ್ಚೆಗೆ ಬಂದಿಲ್ಲ. ಬಹುತೇಕ ನಾಯಕರು ಬಿಜೆಪಿ, ಕಾಂಗ್ರೆಸ್ ಪಾಳಯದಲ್ಲಿ ಸಮ್ಮಿಳಿತಗೊಂಡಿದ್ದಾರೆ. ಈ ಮಧ್ಯೆ ಎಸ್.ಡಿ.ಪಿ.ಐ. ಈಗಾಗಲೇ ಅಕ್ಬರ್ ಬೆಳ್ತಂಗಡಿಯನ್ನು ಅಭ್ಯರ್ಥಿಯೆಂದು ಘೋಷಿಸಿದೆ. ಹಾಗೆಯೇ ತುಳುನಾಡ ಪಕ್ಷದ ಅಭ್ಯರ್ಥಿಯಾಗಿ ಶೈಲೇಶ್ ಆರ್.ಜೆ (Shailesh R J). ಸ್ಪರ್ಧೆಗೆ ಸಜ್ಜಾಗುತ್ತಿದ್ದಾರೆ. ಬೆಳ್ತಂಗಡಿಯಲ್ಲಿ ಪಕ್ಷಗಳಿಗೇನು ಕಮ್ಮಿ ಇಲ್ಲ ಎಂಬಂತೆ ಸರ್ವೋದಯ ಕರ್ನಾಟಕ ಪಕ್ಷವೂ ಆದಿತ್ಯ ನಾರಾಯಣ ಕಲ್ಲಾಜೆಯನ್ನು ಅಭ್ಯರ್ಥಿಯಾಗಿಸಿದೆ.

Harish Poonja 1

ಹರೀಶ್ ಪೂಂಜ- ರಕ್ಷಿತ್ ಶಿವರಾಂ ನಡುವೆ ಹಲವು ಸಾಮ್ಯತೆಗಳಿವೆ. ಇಬ್ಬರೂ ಹೆಚ್ಚು ಕಡಿಮೆ ಒಂದೇ ವಯಸ್ಸಿನ ಯುವಕರು. ಹೈಕೋರ್ಟ್ ವಕೀಲರಾಗಿದ್ದ ಹರೀಶ್ ಪೂಂಜ 2018ರ ವಿಧಾನಸಭಾ ಚುನಾವಣೆಗಿಂತ ಕೆಲವರ್ಷ ಮೊದಲು ಕ್ಷೇತ್ರದಲ್ಲಿ ತಿರುಗಾಟ ಆರಂಭಿಸಿ ಜನಪ್ರಿಯರಾದವರು. ದೇವಸ್ಥಾನ ಬ್ರಹ್ಮಕಲಶೋತ್ಸವಗಳು, ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾಗಿ ಹಲವು ಹೋರಾಟ ಸಂಘಟಿಸಿದ್ದರು. ರಕ್ಷಿತ್ ಶಿವರಾಂ ಕೂಡ ಹೈಕೋರ್ಟ್ ವಕೀಲ. ಮೂರ್ನಾಲ್ಕು ವರ್ಷಗಳಿಂದ ಕ್ಷೇತ್ರದಲ್ಲಿ ಶಿಕ್ಷಣ, ಸಮಾಜ ಸೇವೆ, ದೇವಸ್ಥಾನಗಳ ಬ್ರಹ್ಮಕಲಶೋತ್ಸವ ಮತ್ತಿತರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್‍ನಿಂದ ಹಲವು ಹೋರಾಟಗಳನ್ನು ಸಂಘಟಿಸುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಎರಡನೇ ಗೆಲುವಿನ ಕೊಡುಗೆ ನೀಡಲಿದೆಯೇ ಮೂಡುಬಿದಿರೆ ಕ್ಷೇತ್ರ?

bjp flag

ಹರೀಶ್ ಪೂಂಜಾ ಬಂಟ ಸಮುದಾಯಕ್ಕೆ ಸೇರಿದ್ದರೆ, ರಕ್ಷಿತ್ ಶಿವರಾಂ ಬಿಲ್ಲವ ಸಮಾಜಯದ ಯುವಕ. ಈ ಕ್ಷೇತ್ರದಲ್ಲಿ ಅತೀ ಹೆಚ್ಚು ಬಿಲ್ಲವ ಮತದಾರರಿದ್ದು ಕಾಂಗ್ರೆಸ್ ಗೆ ವರದಾನ ಆಗುತ್ತೆ ಅನ್ನೋ ಲೆಕ್ಕಾಚಾರ ಇದ್ರೂ ಬಿಲ್ಲವ ಮತದಾರರು ಹಿಂದುತ್ವ, ಬಿಜೆಪಿ, ಹರೀಶ್ ಪೂಂಜಾ ಅನ್ನುತ್ತಿರೋದು ಬಿಜೆಪಿಗೆ ಲಾಭ ಆಗುತ್ತೆ ಅನ್ನೋ ಲೆಕ್ಕಾಚಾರವೂ ಇದೆ. ಈ ಬಾರಿ ನಾರಾಯಣಗುರು ಪುಸ್ತಕ ವಿವಾದ ಸಡೆರಿದಂತೆ ಹಲವು ವಿಚಾರಗಳಲ್ಲಿ ಬಿಲ್ಲವರನ್ನು ಎದುರು ಹಾಕಿಕೊಂಡಿರುವ ಬಂಟ ಸಮುದಾಯದ ಹರೀಶ್ ಪೂಂಜಾಗೆ ಬಿಲ್ಲವರು ತಕ್ಕ ಉತ್ತರ ನೀಡ್ತಾರೆ ಅನ್ನೋ ಮಾತೂ ಕೇಳಿ ಬರ್ತಿದೆ. ಒಟ್ಟಿನಲ್ಲಿ ಈಗ ಇಬ್ಬರು ಯುವನಾಯಕರ ನಡುವೆ ಸ್ಪರ್ಧೆ ಏರ್ಪಡುವುದು ಖಚಿತವಾಗಿದೆ.

TAGGED:beltangady constituencybjpcongressdakshina kannadaharish poonjaKarnataka Election 2023Vidhanasabha electionಕರ್ನಾಟಕ ಚುನಾವಣೆ 2023ಕಾಂಗ್ರೆಸ್ದಕ್ಷಿಣ ಕನ್ನಡಬಿಜೆಪಿಬೆಳ್ತಂಗಡಿ ಕ್ಷೇತ್ರವಿಧಾನಸಭಾ ಚುನಾವಣೆಹರೀಶ್ ಪೂಂಜ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
2 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
11 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
46 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?