Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕೋಡಿ ಚುನಾವಣಾ ಅಖಾಡ ಹೇಗಿದೆ? ಕಾಂಗ್ರೆಸ್ ಅಡ್ಡಕ್ಕೆ ಕೈ ಹಾಕುತ್ತಾ ಬಿಜೆಪಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಚಿಕ್ಕೋಡಿ ಚುನಾವಣಾ ಅಖಾಡ ಹೇಗಿದೆ? ಕಾಂಗ್ರೆಸ್ ಅಡ್ಡಕ್ಕೆ ಕೈ ಹಾಕುತ್ತಾ ಬಿಜೆಪಿ?

Belgaum

ಚಿಕ್ಕೋಡಿ ಚುನಾವಣಾ ಅಖಾಡ ಹೇಗಿದೆ? ಕಾಂಗ್ರೆಸ್ ಅಡ್ಡಕ್ಕೆ ಕೈ ಹಾಕುತ್ತಾ ಬಿಜೆಪಿ?

Public TV
Last updated: April 22, 2023 3:28 pm
Public TV
Share
3 Min Read
CHIKKODI ELECTION
SHARE

ಚಿಕ್ಕೋಡಿ: ಕಳೆದ ಬಾರಿ ಗಣೇಶ ಹುಕ್ಕೇರಿ, ಬಿಜೆಪಿ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ವಿರುದ್ಧ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ಗಣೇಶ ಅವರಿಗೆ ಬಿಜೆಪಿಯಿಂದ ಮಾಜಿ ಸಂಸದ ರಮೇಶ ಕತ್ತಿ (Ramesh Katti) ಪ್ರತಿಸ್ಪರ್ಧಿಯಾಗಿದ್ದಾರೆ.

ಚಿಕ್ಕೋಡಿ(Chikkodi) ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಪಕ್ಷದ ಅಭ್ಯರ್ಥಿ ಗಣೇಶ ಹುಕ್ಕೇರಿ (Ganesh hukkeri) ಹಾಗೂ ಅವರ ತಂದೆ ಪ್ರಕಾಶ ಹುಕ್ಕೇರಿ (Prakash Hukkeri) ಅಪಾರ ಅಭಿಮಾನ ಬಳಗ ಹೊಂದಿದ್ದಾರೆ. ಆದರೆ ಬಿಜೆಪಿಗೆ (BJP) ಕಾರ್ಯಕರ್ತರ ಕೊರತೆಯಿದೆ. ಇದು ರಮೇಶ ಕತ್ತಿಯವರಿಗೆ ಹುಕ್ಕೇರಿ ಕ್ಷೇತ್ರದಲ್ಲಿ ವರ್ಚಸ್ಸು ಕಡಿಮೆಯಾಗಲು ಕಾರಣವಾಗಿದೆ.

ಬಿಜೆಪಿಗೆ ಧನಾತ್ಮಕ ಅಂಶಗಳು
ಬಿಜೆಪಿ ಅಭ್ಯರ್ಥಿ ರಮೇಶ ಕತ್ತಿ ತನ್ನದೇ ಅಭಿಮಾನ ಬಳಗ ಹೊಂದಿದ್ದಾರೆ. ಜೊಲ್ಲೆ ಕುಟುಂಬ ಕವಟಗಿಮಠ ಕ್ಷೇತ್ರದ ರಾಜಕಾರಣದಲ್ಲಿ ಸಕ್ರಿಯವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆ ಜನರಿಗೆ ಮನವರಿಕೆಯಾಗಿದೆ. ಲಿಂಗಾಯತ ಮತಗಳೇ ನಿರ್ಣಾಯಕವಾಗಿದ್ದರಿಂದ ಸಹಜವಾಗಿಯೆ ಬಿಜೆಪಿಗೆ ಇದು ಅನುಕೂಲಕರವಾಗಿದೆ.

BJP Congress

ಬಿಜೆಪಿಗೆ ಋಣಾತ್ಮಕ ಅಂಶಗಳು
ವಸ್ತುಗಳ ಬೆಲೆ ಏರಿಕೆ ವಿಚಾರದಲ್ಲಿ ಜನ ಬೇಸತ್ತಿದ್ದಾರೆ. ಅಲ್ಲದೆ ಸದಲಗಾ ಭಾಗದಲ್ಲಿ ಪ್ರಕಾಶ ಹುಕ್ಕೇರಿ ಪ್ರಭಾವ ಬಹಳವಿದೆ. ಹೀಗಾಗಿ ಬಿಜೆಪಿಗೆ ಬರುವ ಮತಗಳು ಚದುರುವ ಸಾಧ್ಯತೆ ಇದೆ.

ಕಾಂಗ್ರೆಸ್ ಧನಾತ್ಮಕ ಅಂಶಗಳು
ಪ್ರಕಾಶ ಹುಕ್ಕೇರಿ ಹಾಗೂ ಗಣೇಶ ಹುಕ್ಕೇರಿ ವರ್ಚಸ್ಸು ಕ್ಷೇತ್ರದಲ್ಲಿದೆ. ಇಬ್ಬರೂ ಕಾರ್ಯಕರ್ತರಿಗೆ ಸುಲಭವಾಗಿ ಲಭ್ಯವಾಗುವ ನಾಯಕರಾಗಿದ್ದಾರೆ. ವಿಧಾನಸಭಾ ಹಾಗೂ ಪರಿಷತ್‍ನಲ್ಲಿ ತಂದೆ ಮಕ್ಕಳ ಆಯ್ಕೆ, ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಸಹಾಯಕವಾಗಲಿದೆ.

ಕಾಂಗ್ರೆಸ್ ಋಣಾತ್ಮಕ ಅಂಶಗಳು
ಕುಟುಂಬ ರಾಜಕಾರಣದಿಂದ ಬೇಸತ್ತ ಜನರು ಬೇರೆ ಪಕ್ಷದ ಅಭ್ಯರ್ಥಿಗೆ ಮತ ನೀಡುವ ಸಾಧ್ಯತೆಯಿದೆ. ಬಹಳ ವರ್ಷಗಳಿಂದ ಒಂದೇ ಕುಟುಂಬಕ್ಕೆ ಸೀಮಿತವಾಗಿರುವ ಅಧಿಕಾರ ಕಾಂಗ್ರೆಸ್‍ಗೆ ಮುಳುವಾಗಬಹುದು. ಬೆಳಗಾವಿಯನ್ನು ಹೊರತುಪಡಿಸಿದರೆ ಮತ್ತೊಂದು ಉಪವಿಭಾಗ ಮತ್ತು ಲೋಕಸಭಾ ಕ್ಷೇತ್ರ ಚಿಕ್ಕೋಡಿ. ಪ್ರಕಾಶ್ ಹುಕ್ಕೇರಿ ಇಲ್ಲಿಂದ ಸತತವಾಗಿ ಆರಿಸಿ ಬಂದಿದ್ದಾರೆ. ಈ ಹಿಂದಿನ ಲೋಕಸಭೆಗೆ ಪ್ರಕಾಶ್ ಹುಕ್ಕೇರಿಯವರು ಸ್ಪರ್ಧೆ ಮಾಡಿರಲಿಲ್ಲ. ಅವರಿಂದ ತೆರವಾದ ಕ್ಷೇತ್ರಕ್ಕೆ ಅವರ ಮಗ ಗಣೇಶ ಹುಕ್ಕೇರಿಯವರನ್ನು ನಿಲ್ಲಿಸಿದ್ದರು. ಗಣೇಶ ಹುಕ್ಕೇರಿಯವರೂ ಸಹ ಸತತ ಎರಡು ಬಾರಿ ಈ ಮತಕ್ಷೇತ್ರದಿಂದ ತಂದೆಯಂತೆ ಆರಿಸಿ ಬಂದಿದ್ದಾರೆ. ಚಿಕ್ಕೋಡಿಯಲ್ಲಿಯೇ ಪ್ರಭಾವಿ ಬಿಜೆಪಿ ನಾಯಕರಿದ್ದರೂ ಸಹ ಈವರೆಗೂ ಚಿಕ್ಕೋಡಿ ವಿಧಾನಸಭಾ ಮತಕ್ಷೇತ್ರವನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ.

PRAKASH HUKKERI 1

ಪ್ರತಿ ಬಾರಿಯೂ ಕೃಷ್ಣಾ ನದಿಯ ಪ್ರವಾಹ ಅಪ್ಪಳಿಸಿದಾಗ ಸಾವಿರಾರು ಜನ ಬೀದಿಗೆ ಬೀಳುವ ಪರಿಸ್ಥಿತಿ ಇದೆ. ಹೀಗಿದ್ದರೂ ಸಹ ಇಲ್ಲಿ ಪ್ರಕಾಶ್ ಹುಕ್ಕೇರಿ ಕಳೆದ 5 ಬಾರಿ ಆರಿಸಿ ಬಂದು ಸಚಿವರಾಗಿದ್ದರು. ನಂತರ ಅವರ ಮಗ ಗಣೇಶ ಹುಕ್ಕೇರಿ ಎರಡು ಬಾರಿ ಆರಿಸಿ ಬಂದು ಈಗ ಮೂರನೇ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿಗೆ ಇಲ್ಲಿ ಸಮಬಲವಿದ್ದರೂ ಸಹ ಪ್ರಕಾಶ್ ಹುಕ್ಕೇರಿಯವರು ಕ್ಷೇತ್ರದಾದ್ಯಂತ ಮಾಡಿರುವ ಅಭಿವೃದ್ದಿ ಕೆಲಸಗಳು ಹಾಗೂ ಜನರಿಗೆ ಸ್ಪಂದಿಸುವ ರೀತಿಯಿಂದ ಜನ ಹುಕ್ಕೇರಿ ಮನೆತನಕ್ಕೆ ಮಣೆ ಹಾಕುತ್ತಾರೆ ಎಂಬ ಮಾತಿದೆ. ಮೀಸೆ ಮಾವ ಎಂದೇ ಪ್ರಖ್ಯಾತಿ ಹೊಂದಿರುವ ಪ್ರಕಾಶ್ ಹುಕ್ಕೇರಿಯವರ ಅಭಿವೃದ್ಧಿಯ ಆಲೋಚನೆಗಳು ಕಳೆದ ಎರಡು ಚುನಾವಣೆಗಳಲ್ಲಿ ಅವರ ಮಗ ಗಣೇಶ ಹುಕ್ಕೇರಿಯವರ ಕೈ ಹಿಡಿದಿವೆ. ಸಮರ್ಥ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕಿಳಿಸಿದರೆ ಕಾಂಗ್ರೆಸ್ ಕೋಟೆ ಬಿಜೆಪಿಗೆ ಕೈ ಸೇರಲಿದೆ ಎಂಬ ಲೆಕ್ಕಾಚಾರಗಳಿದ್ದರೂ ಸಹ ಈ ವರೆಗೂ ಅದು ಸಾಧ್ಯವಾಗಿಲ್ಲ.

ಈಗಾಗಲೇ ಒಂದು ಬಾರಿ ಅಣ್ಣಾಸಾಹೇಬ್ ಜೊಲ್ಲೆ ಮತ್ತೊಂದು ಬಾರಿ ಮಾಜಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಇಬ್ಬರೂ ಸಹ ತಂದೆ ಪ್ರಕಾಶ ಹುಕ್ಕೇರಿ ಹಾಗೂ ಮಗ ಗಣೇಶ ಹುಕ್ಕೇರಿ ವಿರುದ್ಧ ಪರಾಭವಗೊಂಡಿದ್ದಾರೆ. ಹೇಳಿಕೊಳ್ಳುವ ವ್ಯವಹಾರದ ಲಾಬಿ ಇಲ್ಲದಿದ್ದರೂ ಸಹ ಕ್ಷೇತ್ರದಾದ್ಯಂತ ಪ್ರಕಾಶ ಹುಕ್ಕೇರಿಯವರ ಹಿಡಿತ ಸಾಧ್ಯವಾಗಿದೆ ಎನ್ನುವುದು ಒಂದು ವಿಶ್ಲೇಷಣೆ. ಆದರೆ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳು ಮಾತ್ರ ಹುಕ್ಕೇರಿ ಮನೆತನದ ಕೈ ಹಿಡಿದಿವೆ ಎನ್ನುವುದು ರಾಜಕೀಯ ಪಂಡಿತರ ವಾದವಾಗಿದೆ.

ಚಿಕ್ಕೋಡಿ ಕ್ಷೇತ್ರದ ಜಾತಿವಾರು ಮತದಾರರ ಲೆಕ್ಕಾಚಾರ
ಒಟ್ಟು ಮತದಾರರು
2,15,711
ಪುರುಷ : 1,08,686
ಮಹಿಳೆಯರು : 1,07,025

ಜಾತಿ ಲೆಕ್ಕಾಚಾರ
ಲಿಂಗಾಯತರು: 40,000
ಬ್ರಾಹ್ಮಣ: 10,000
ಎಸ್ ಸಿ ಎಸ್ ಟಿ; 25,000
ಮುಸ್ಲಿಂ: 28000
ಕುಂಬಾರ: 6000
ಜೈನ್: 35000
ಮರಾಠ: 18000
ಬಲಜಿಗ: 5000
ನೇಕಾರ: 5000
ವಿಶ್ವಕರ್ಮ: 3000
ಮಡಿವಾಳ: 3000

TAGGED:chikkodiChikkodi constituencyelectionGanesh hukkeriKarnataka Election 2023Prakash hukkeriRamesh katti
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
19 minutes ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
45 minutes ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
1 hour ago
Delhi Assembly Masked man arrested
Court

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ ಕೇಸ್ – ಆರೋಪಿಯನ್ನ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

Public TV
By Public TV
1 hour ago
sergio gor and donald trump
Latest

ಇರಾನ್‌ ಡೆಡ್‌ಲೈನ್‌| ಅಮೆರಿಕದ ಭಾರತೀಯ ರಾಯಭಾರಿಯನ್ನು ಶ್ವೇತಭವನಕ್ಕೆ ಆಹ್ವಾನಿಸಿದ ಟ್ರಂಪ್‌

Public TV
By Public TV
2 hours ago
Hubballi Gym Trainer Arrest
Crime

ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡ್ತಿದ್ದ ಜಿಮ್ ಟ್ರೇನರ್ ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?