ಬೆಂಗಳೂರು: ವರುಣಾದಲ್ಲಿ ಸಿದ್ದರಾಮಯ್ಯ (Siddaramaiah) ಅವರನ್ನು ಕಟ್ಟಿ ಹಾಕಲು ಸೋಮಣ್ಣಗೆ (Somanna) ಬಿಜೆಪಿ ಟಿಕೆಟ್ ನೀಡಿದ ಬೆನ್ನಲ್ಲೇ ಚಾಮರಾಜನಗರದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ (Congress) ಪ್ಲ್ಯಾನ್ ಮಾಡಿದೆ.
ಬೆಂಗಳೂರಿನ ಗೋವಿಂದರಾಜನಗರದ ಶಾಸಕರಾಗಿರುವ ಸೋಮಣ್ಣ ಅವರಿಗೆ ಬಿಜೆಪಿ ಹೈಕಮಾಂಡ್ ಚಾಮರಾಜನಗರ (Chamarajanagara) ಮತ್ತು ವರುಣಾದಲ್ಲಿ (Varuna) ಟಿಕೆಟ್ ನೀಡಿದೆ. ಇದನ್ನೂ ಓದಿ: ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ?
ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧವೇ ಸೋಮಣ್ಣ ಕಣಕ್ಕೆ ಇಳಿಯುತ್ತಿರುವ ಕಾರಣ ಚಾಮರಾಜನಗರದಲ್ಲಿಸೋಮಣ್ಣ ಅವರನ್ನು ಕಟ್ಟಿ ಹಾಕಲು ಬಂಡಾಯ ಬಿಜೆಪಿ ನಾಯಕರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿದೆ.
ಈಗಾಗಲೇ ಚಾಮರಾಜನಗರದಲ್ಲಿ ಕಾಂಗ್ರೆಸ್ ಪುಟ್ಟರಂಗಶೆಟ್ಟಿ ಅವರಿಗೆ ಟಿಕೆಟ್ ನೀಡಿದೆ. ಈಗ ಬಿಜೆಪಿ ಟಿಕೆಟ್ ಬಯಸಿದ್ದ ನಾಯಕರನ್ನು ಸಿದ್ದರಾಮಯ್ಯ ತಂಡ ಸಂರ್ಪಕಿಸಿದೆ. ಬಂಡಾಯ ನಾಯಕರು ಎರಡು ದಿನ ಸಮಯ ಕೇಳಿದ್ದಾರೆ.