Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿವೃದ್ಧಿ ಮಾಡಿದ್ದು ಯಾರು? – ವೇದಿಕೆಯಲ್ಲೇ ಅಶ್ವಥ್ ನಾರಾಯಣ್ Vs ಅನಿತಾ ಕುಮಾರಸ್ವಾಮಿ ವಾಗ್ವಾದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಭಿವೃದ್ಧಿ ಮಾಡಿದ್ದು ಯಾರು? – ವೇದಿಕೆಯಲ್ಲೇ ಅಶ್ವಥ್ ನಾರಾಯಣ್ Vs ಅನಿತಾ ಕುಮಾರಸ್ವಾಮಿ ವಾಗ್ವಾದ

Districts

ಅಭಿವೃದ್ಧಿ ಮಾಡಿದ್ದು ಯಾರು? – ವೇದಿಕೆಯಲ್ಲೇ ಅಶ್ವಥ್ ನಾರಾಯಣ್ Vs ಅನಿತಾ ಕುಮಾರಸ್ವಾಮಿ ವಾಗ್ವಾದ

Public TV
Last updated: February 21, 2023 2:55 pm
Public TV
Share
3 Min Read
Ashwath Naryana Vs Anitha Kumaraswamy 1
SHARE

– ಘೋಷಣೆ ಮಾಡುವುದಲ್ಲ ಕೆಲಸ ಮಾಡಬೇಕು ಎಂದ ಸಚಿವ
– ಬುರುಡೇ ಬಿಡುವುದಲ್ಲ, ಮಲ್ಲೇಶ್ವರಂನಲ್ಲಿ ಅಭಿವೃದ್ಧಿ ಮಾಡಲಿ

ರಾಮನಗರ: ರೇಷ್ಮೆನಾಡು ರಾಮನಗರದಲ್ಲಿ (Ramanagara) ಬಿಜೆಪಿ, ಜೆಡಿಎಸ್ ನಡುವಿನ ಟಾಕ್ ಫೈಟ್ ಮುಂದುವರಿದಿದೆ. ಹಾರೋಹಳ್ಳಿ ನೂತನ ತಾಲೂಕು ಕೇಂದ್ರ ಉದ್ಘಾಟನಾ ಸಮಾರಂಭ ಮತ್ತೊಂದು ಮಾತಿನ ಜಟಾಪಟಿಗೆ ಸಾಕ್ಷಿಯಾಗಿದೆ. ಸಚಿವ ಅಶ್ವಥ್ ನಾರಾಯಣ್ (Ashwath Narayan) ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ (Anitha Kumaraswamy) ನಡುವೆ ಅಭಿವೃದ್ಧಿ ವಿಚಾರದ ಬಗ್ಗೆ ಕ್ರೆಡಿಟ್ ವಾರ್ ನಡೆದಿದ್ದು ವೇದಿಕೆ ಮೇಲೆಯೇ ಇಬ್ಬರು ವಾಗ್ವಾದ ನಡೆಸಿದ್ದಾರೆ.

ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಬಿಟ್ಟು ಕಚೇರಿ ಉದ್ಘಾಟನೆ ನಡೆಸಿದ್ದ ಜೆಡಿಎಸ್ (JDS) ಕಾರ್ಯಕರ್ತರನ್ನ ಕೆರಳಿಸಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೂ ಕಿಡಿಕಾರಿದ್ದಾರೆ.

Ashwath Naryana Vs Anitha Kumaraswamy 2

ನೂತನ ತಾಲೂಕು ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್, ನಮ್ಮ ಸರ್ಕಾರದಲ್ಲಿ ಈಗ ಎರಡು ತಾಲೂಕು ಕೇಂದ್ರ ಮಾಡಿದ್ದೇವೆ. ತಾಲೂಕು ಕೇಂದ್ರಕ್ಕೆ ಪೋಸ್ಟ್ ಸ್ಯಾಂಕ್ಷನ್ ಮಾಡಿದ್ದೇವೆ. ಇದು ಕೇವಲ ಒಂದು ದಿನದಲ್ಲಿ ಆಗುವ ಕೆಲಸ ಅಲ್ಲ. ಚುನಾವಣೆ ಸಮಯದಲ್ಲಿ ವೇಗವಾಗಿ ಕೆಲಸ ಮಾಡಿ ತಾಲೂಕು ರಚನೆ ಆಗಿದೆ. ರಾಮನಗರ ಜಿಲ್ಲೆಗೆ ಶೈಕ್ಷಣಿಕ ಯೋಜನೆ ನೀಡಲಾಗುತ್ತಿದೆ. ಹಿಂದೆ ಬೇಸಿಗೆ ಅರಂಭ ಆದರೆ ಜಿಲ್ಲೆಯಲ್ಲಿ ಕುಡಿಯಲು ನೀರು ಇರುತ್ತಿರಲಿಲ್ಲ. 450 ಕೋಟಿ ರೂ. ವೆಚ್ಚದ ಜಲಜೀವನ್ ಮಿಷನ್ ಮೂಲಕ ನೀರು ನೀಡಿದ್ದು ನಮ್ಮ ಸರ್ಕಾರ. 1800 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ತಂದಿದ್ದೇವೆ ಎಂದರು.

ಈ ಹೇಳಿಕೆ ಬರುತ್ತಿದ್ದಂತೆ ವೇದಿಕೆಯಲ್ಲೇ ಶಾಸಕಿ ಅನಿತಾ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. ನಮ್ಮ ಕಾಲದಲ್ಲೇ ಘೋಷಣೆ ಆಗಿತ್ತು ಎಂದು ಅನಿತಾ ಕುಮಾರಸ್ವಾಮಿ ಹೇಳಿದರು. ಮಾತು ಮುಂದುವರಿಸಿದ ಸಚಿವ ಅಶ್ವಥ್ ನಾರಾಯಣ್, ಆಗಲಿ‌ ಮೇಡಂ ನಿಮ್ಮ ಸರದಿ ಬಂದಾಗ ಬಂದು ಹೇಳಿ. ಘೋಷಣೆ ಎಲ್ಲರೂ ಮಾಡುತ್ತಾರೆ. ಆದರೆ ಕೆಲಸ ಮಾಡಬೇಕು ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಇಬ್ಬರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ- ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆ

ನಂತರ ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿದ ಶಾಸಕಿ ಅನಿತಾ ಕುಮಾರಸ್ವಾಮಿ, ಅಧ್ಯಕ್ಷತೆಗೆ ನನ್ನ ಹೆಸರು ಹಾಕಿ ನಾನು ಬರುವುದಕ್ಕೂ ಮುನ್ನವೇ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಾರೆ. ಕಾಟಾಚಾರಕ್ಕೆ ನನ್ನನ್ನ ಕರೆದಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಈ ಹಾರೋಹಳ್ಳಿ ತಾಲೂಕು ರಚನೆಗೆ ನನ್ನ ಶ್ರಮ ಇದೆ. ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನೂತನ ತಾಲೂಕುಗೆ ಅನುಮೋದನೆ ಪಡೆದಿದ್ದೇನೆ. ಈಗ ಪೋಸ್ಟ್‌ಗಳ  ಅನುಮೋದನೆ ಮಾಡುವ ಬಗ್ಗೆಯೂ ಸರ್ಕಾರಕ್ಕೆ ಪತ್ರ ಬರೆದು ಕೆಲಸ ಮಾಡಿಸಿದ್ದೇನೆ. ಉಸ್ತುವಾರಿ ಸಚಿವರು ಈಗ ಹೇಳಿದ ನೀರಾವರಿ ಯೋಜನೆ ಆಗಿದ್ದೂ ಕುಮಾರಸ್ವಾಮಿ ಕಾಲದಲ್ಲಿ. ಈ ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಅವರನ್ನು ನಾನು ಕರೆದಿದ್ದೆ. ಆದರೆ ಅವರು ಪಂಚರತ್ನ ಕಾರ್ಯಕ್ರಮದಲ್ಲಿ ಬ್ಯುಸಿ ಇದ್ದಾರೆ‌ ಎಂದರು.

ಕುಮಾರಸ್ವಾಮಿ ಬಂದಿದ್ದರೆ ಬೇರೆ ಯಾರೂ ಮಾತನಾಡ್ತಿರಲಿಲ್ಲ ಎಂದು ಉಸ್ತುವಾರಿ ಸಚಿವರಿಗೆ ಅನಿತಾ ಕುಮಾರಸ್ವಾಮಿ ಟಾಂಗ್ ನೀಡಿದ್ರು. ಅಲ್ಲದೇ ಉಸ್ತವಾರಿ ಸಚಿವರಿಗೆ ಬರೀ ಬುರುಡೆ ಬಿಡೋದಷ್ಟೇ ಮಾತ್ರ ಇವರಿಗೆ ಗೊತ್ತು. ಸಚಿವರು ಮೊದಲು ಮಲ್ಲೇಶ್ವರಂಗೆ ಹೋಗಿ ಅಭಿವೃದ್ಧಿ ಮಾಡಲಿ. ನಾನು‌ ಶಿವನ ಭಕ್ತೆ, ಮಲ್ಲೇಶ್ವರಂನ ಕಾಡುಮಲ್ಲೇಶ್ಚರ ದೇವಸ್ಥಾನಕ್ಕೆ ಹೋಗುತ್ತಿರುತ್ತೇನೆ. ಅಲ್ಲಿಯ ಅಭಿವೃದ್ಧಿಯನ್ನೂ ನೋಡಿದ್ದೇನೆ. ಕಾರ್ಯಕ್ರಮ ಮಗಿಯೋವರೆಗೂ ಸಚಿವರು ಇರಬೇಕಿತ್ತು. ಅವರ ಸಾಧನೆ ಬಗ್ಗೆ ಹೇಳುತ್ತಿದ್ದೆ ಎಂದು ಕಾರ್ಯಕ್ರಮದಿಂದ ಅರ್ಧಕ್ಕೆ ಹೋದ ಸಚಿವ ಅಶ್ವಥ್ ನಾರಾಯಣ್‌ಗೆ  ತಿರುಗೇಟು ನೀಡಿದರು.

ತಾಲೂಕು ಕೇಂದ್ರದ ಶಿಲಾನ್ಯಾಸ ಫಲಕದಲ್ಲಿ ಕುಮಾರಸ್ವಾಮಿ ಹೆಸರನ್ನು ಸಣ್ಣದಾಗಿ ಹಾಕಿದ್ದಾರೆ. ರೇಷ್ಮೆ ನಿಗಮ ಮಂಡಳಿ ಅಧ್ಯಕ್ಷ ಗೌತಮ್ ಗೌಡ ಹೆಸರನ್ನು ದಪ್ಪಕ್ಷರಗಳಿಂದ ಹಾಕಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಬಳಿಕ ಕಾರ್ಯಕರ್ತರನ್ನ ಪೊಲೀಸರು ಸಮಾಧಾನ ಪಡಿಸಿದರು.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:anitha kumaraswamyAshwath Naryanpoliticsramanagaraಅನಿತಾ ಕುಮಾರಸ್ವಾಮಿಅಶ್ವಥ್ ನಾರಾಯಣರಾಮನಗರಹಾರೋಹಳ್ಳಿ
Share This Article
Facebook Whatsapp Whatsapp Telegram

Cinema news

Raj B Shetty Rishab Rakshit
ರಿಷಬ್, ನಾನು, ರಕ್ಷಿತ್ ಒಟ್ಟಿಗೆ ಸಿನಿಮಾ ಮಾಡ್ತೀವಿ : ರಾಜ್ ಬಿ ಶೆಟ್ಟಿ
Cinema Latest Sandalwood Top Stories
Bigg Boss Telugu
ತೆಲುಗು ಬಿಗ್‌ಬಾಸ್ ಫಿನಾಲೆಗೆ ಕ್ಷಣಗಣನೆ – ರೇಸ್‌ನಲ್ಲಿ ಇಬ್ಬರು ಕನ್ನಡತಿಯರು
Cinema Latest Top Stories TV Shows
Raj B Shetty
ನನ್ನ, ರಿಷಬ್‌ ಮಧ್ಯೆ ಯಾವುದೇ ಮನಸ್ತಾಪವಿಲ್ಲ: ರಾಜ್‌ ಬಿ ಶೆಟ್ಟಿ ಸ್ಪಷ್ಟನೆ
Cinema Latest Main Post Sandalwood
Dy CM Pawan Kalyan Gifted a Costly Car to OG Director Sujeeth
ಓಜಿ ನಿರ್ದೇಶಕನಿಗೆ 3 ಕೋಟಿಯ ಕಾರ್ ಗಿಫ್ಟ್ ಕೊಟ್ಟ ಪವನ್‌ ಕಲ್ಯಾಣ್‌
Cinema Latest South cinema

You Might Also Like

Mangesh Yadav
Cricket

ಅನ್‌ಕ್ಯಾಪ್‌ ಪ್ಲೇಯರ್‌ ಮಂಗೇಶ್‌ ಯಾದವ್‌ಗೆ 5.20 ಕೋಟಿ – ಆರ್‌ಸಿಬಿ ಖರೀದಿಸಿದ ಆಟಗಾರರು ಯಾರು?

Public TV
By Public TV
20 minutes ago
Mandya Suttur Mutt
Districts

ಶ್ರೀ ಸುತ್ತೂರು ಮಠವು ಧರ್ಮನಿಷ್ಠೆ, ಸಕಾರಾತ್ಮಕ ಶಕ್ತಿಯ ಕೇಂದ್ರ – ಥಾವರ್‌ಚಂದ್ ಗೆಹ್ಲೋಟ್

Public TV
By Public TV
52 minutes ago
Police Seize A House and Cow Shed For Selling Cattle Illegally Punjalkatte Dakshina Kannada 1
Dakshina Kannada

ಮಾಂಸಕ್ಕಾಗಿ ಗೋವು ಸಾಗಾಟ – ಪುಂಜಾಲಕಟ್ಟೆಯಲ್ಲಿ ಮನೆಯೇ ಜಪ್ತಿ

Public TV
By Public TV
54 minutes ago
Droupadi Murmu Suttur 2
Districts

ಸದೃಢ ಭಾರತ ನಿರ್ಮಾಣಕ್ಕಾಗಿ ಮಠಗಳು ಯುವಜನತೆಗೆ ಸ್ಫೂರ್ತಿ ತುಂಬಬೇಕು – ದ್ರೌಪದಿ ಮುರ್ಮು

Public TV
By Public TV
2 hours ago
Delhi Pollution 1
Latest

Delhi | ಪಿಯುಸಿ ಪ್ರಮಾಣಪತ್ರ ಹೊಂದಿರದ ವಾಹನಗಳಿಗೆ ಇಂಧನ ಇಲ್ಲ – ಮಾಲಿನ್ಯ ನಿಯಂತ್ರಣಕ್ಕೆ ಹೊಸ ನಿಯಮ

Public TV
By Public TV
3 hours ago
Manjunath Bhandary
Dakshina Kannada

ಸೋನಿಯಾ, ರಾಹುಲ್ ವಿರುದ್ಧ ದೆಹಲಿ ನ್ಯಾಯಾಲಯ ತೀರ್ಪು ಸ್ವಾಗತಾರ್ಹ: ಮಂಜುನಾಥ ಭಂಡಾರಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?