ಶಿವಮೊಗ್ಗ: ಮಗಳು ಬಿಜೆಪಿ (BJP) ಸೇರಿದ್ದು ನನ್ನ ಎದೆಗೆ ಚೂರಿ ಇರಿದಂತಾಗಿದೆ. ಆಕೆ ಈ ರೀತಿ ಮಾಡುತ್ತಾಳೆ ಎಂದು ನಾನು ಕನಸಿನಲ್ಲಿಯೂ ಆಲೋಚನೆ ಮಾಡಿರಲಿಲ್ಲ. ಮಗಳು ಈ ರೀತಿ ಇದ್ದಾಳೆ ಎನ್ನುವುದು ನನ್ನ ದೌರ್ಭಾಗ್ಯ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ (Kagodu Thimmappa) ಹೇಳಿದ್ದಾರೆ.
ಸಾಗರದಲ್ಲಿ (Sagara) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪುತ್ರಿ ಡಾ.ರಾಜನಂದಿನಿ (Dr.Rajanandini) ಬಿಜೆಪಿ ಸೇರ್ಪಡೆ ವಿಚಾರವಾಗಿ ಬೇಸರ ವ್ಯಕ್ತಪಡಿಸಿದರು. ಈ ಸುದ್ದಿ ನನಗೆ ಈಗಷ್ಟೇ ಗೊತ್ತಾಗಿದೆ. ಈ ರೀತಿ ಮಾಡುತ್ತಾರೆ ಎಂದು ನಾನು ಕನಸಿನಲ್ಲಿಯೂ ಆಲೋಚಿಸಿರಲಿಲ್ಲ. ನಾನು ರಾಜಕಾರಣದಲ್ಲಿ (Politics) ಸ್ಥಿರತೆ ಮತ್ತು ಬದ್ಧತೆ ಉಳಿಸಿಕೊಂಡು ಬಂದವನು. ನಾವು ಅದನ್ನೇ ಅನುಸರಿಸಿಕೊಂಡು ಕಾರ್ಯರೂಪಕ್ಕೆ ತರುತ್ತಿದ್ದೇವೆ. ಆ ಸಂತೋಷ ಮತ್ತು ನೆಮ್ಮದಿ ನಮಗಿದೆ ಎಂದರು. ಇದನ್ನೂ ಓದಿ: ವರುಣಾದಲ್ಲಿ ಬಿಗ್ ಫೈಟ್: ಸಿದ್ದು v/s ಸೋಮಣ್ಣ – ಯಾರ ಕೈ ಹಿಡೀತಾರೆ ವರುಣಾ ಮತದಾರ?
ಏನೇ ಆದರೂ ನಾನು ಕಾಂಗ್ರೆಸ್ (Congress) ಬಿಟ್ಟು ಹೋಗುವುದಿಲ್ಲ. ಕಾಂಗ್ರೆಸ್ ಪರವಾಗಿ ನಿಲ್ಲುತ್ತೇನೆ ಹಾಗೂ ಅದರ ಪರವಾಗಿ ಕೆಲಸ ಮಾಡುತ್ತೇನೆ. ಮಗಳಿಗೆ ಯಾರೋ ಹಿಂದಿನಿಂದ ಈ ರೀತಿ ಮಾಡಿಸಿದ್ದಾರೆ. ಅದು ಹಾಲಪ್ಪ ಇರಬಹುದು. ಅವಳನ್ನು ಸಂಪರ್ಕಿಸಿ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಅವಳು ತನ್ನ ಬಳಿ ಯಾವುದೇ ಬೇಸರ ಹೇಳಿಕೊಂಡಿಲ್ಲ. ನಾನು ಅವಳನ್ನು ಖರ್ಗೆ (Mallikarjun Kharge) ಹತ್ತಿರ ಕರೆದುಕೊಂಡು ಹೋಗಿದ್ದೆ. ಅವಕಾಶ ಇದ್ದರೆ ನೋಡೋಣ ಎಂದಿದ್ದರು. ಕಾಂಗ್ರೆಸ್ನಲ್ಲಿಯೇ ಇದ್ದು ರಾಜಕೀಯವಾಗಿ ಬೆಳೆಯಬಹುದಾಗಿತ್ತು. ನನ್ನ ಹತ್ತಿರ ಯಾವುದನ್ನೂ ಹೇಳಿಕೊಂಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: ನನಗೆ ಟಿಕೆಟ್ ಮಿಸ್ ಆಗಿದ್ರಿಂದ ಇಲ್ಲಿವರೆಗೆ ಬೆಂಬಲಿಗರು ಊಟನೂ ಮಾಡಿಲ್ಲ: ದೊಡ್ಡಪ್ಪಗೌಡ ನರಿಬೋಳ್