Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡಬೇಡಿ, ಮೋದಿ ರ‍್ಯಾಲಿ ರದ್ದು ಮಾಡಿ: ಹೆಚ್‌ಡಿಕೆ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡಬೇಡಿ, ಮೋದಿ ರ‍್ಯಾಲಿ ರದ್ದು ಮಾಡಿ: ಹೆಚ್‌ಡಿಕೆ ವಾಗ್ದಾಳಿ

Bengaluru City

ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡಬೇಡಿ, ಮೋದಿ ರ‍್ಯಾಲಿ ರದ್ದು ಮಾಡಿ: ಹೆಚ್‌ಡಿಕೆ ವಾಗ್ದಾಳಿ

Public TV
Last updated: May 5, 2023 1:04 pm
Public TV
Share
3 Min Read
HD KUMARASWAMY 2
SHARE

ಬೆಂಗಳೂರು: ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡಬಾರದು. ರ‍್ಯಾಲಿಯಿಂದ (Rally) ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರಬಹುದು. ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ಇದ್ದರೆ ಮೋದಿ (Narendra Modi) ರ‍್ಯಾಲಿ ರದ್ದು ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (H.D.Kumaraswamy) ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಭಾನುವಾರ ನೀಟ್ ಪರೀಕ್ಷೆ ಇದ್ದರೂ ಮೋದಿ ರ‍್ಯಾಲಿ ಮಾಡುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ಪಕ್ಷಕ್ಕೆ ನಾಡಿನ ಜನರ ಸಮಸ್ಯೆಗಳಿಗಿಂತ ಅಧಿಕಾರ ಮುಖ್ಯ. ಅವರು ಅಧಿಕಾರಕ್ಕೆ ಬರಲು ಏನು ಬೇಕಾದರೂ ಮಾಡುತ್ತಾರೆ. ಜನರ ಬದುಕಿನ ಬಗ್ಗೆ ಅವರಿಗೆ ಆಸಕ್ತಿ ಇಲ್ಲ. ಏನಾದರು ಮಾಡಿ ಅಧಿಕಾರಕ್ಕೆ ಬರಬೇಕು ಎನ್ನುವುದು ಅವರ ಅಜೆಂಡಾ. ಅವರಿಂದ ಸರಿ-ತಪ್ಪುಗಳನ್ನು ನಿರೀಕ್ಷೆ ಮಾಡಬೇಡಿ. ಈ ರ‍್ಯಾಲಿ ನಿಲ್ಲಿಸಬೇಕೆಂದು ನಾನು ಪ್ರಧಾನ ಮಂತ್ರಿಗಳಿಗೆ ಆಗ್ರಹ ಮಾಡುತ್ತೇನೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಎಲ್‍ಕೆಜಿ ಮಕ್ಕಳ ಶಾಲಾ ದಾಖಲಾತಿಗೆ ವಯೋಮಿತಿ ನಿಗದಿ – 4 ವರ್ಷ ಕಡ್ಡಾಯ

congress bjp jds

ಮಂಡ್ಯದಲ್ಲಿ (Mandya) ಸುಮಲತಾ (Sumalatha Ambareesh) ಗೆಲ್ಲಿಸಿ ತಪ್ಪು ಮಾಡಿದೆವು ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಮಾತಿನಿಂದ ಸತ್ಯ ಹೊರಬಂದಿದೆ. ಮಂಡ್ಯ ಮತ್ತು ತುಮಕೂರಿನಲ್ಲಿ ಏನು ಮಾಡಿದ್ದಾರೆ ಎಂದು ಈಗ ಗೊತ್ತಾಯಿತು ತಾನೇ? ಈಗ ಅದು ಮುಗಿದು ಹೋದ ಅಧ್ಯಾಯ. ಸಮ್ಮಿಶ್ರ ಸರ್ಕಾರವನ್ನು ತೆಗೆದವರೇ ಸಿದ್ದರಾಮಯ್ಯ ಎಂದು ಹರಿಹಾಯ್ದರು. ಇದನ್ನೂ ಓದಿ: ರಾಜಕೀಯ ಅಖಾಡಕ್ಕೆ ಅಪ್ಪು ಎಳೆತಂದ ಪ್ರತಾಪ್ ಸಿಂಹ : ನಟ ಶಿವಣ್ಣ ಪ್ರತಿಕ್ರಿಯೆ

ನಾನು ತಾಜ್‌ನಲ್ಲಿ ಕೂತಿದ್ದೆ, ಶಾಸಕರನ್ನು ನೋಡಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ನಾನು ನೋಡದೇ ಹೋಗಿದ್ದರೆ ಕಾಂಗ್ರೆಸ್ ಶಾಸಕರಿಗೆ 19 ಸಾವಿರ ಕೋಟಿ ರೂ. ಅನುದಾನ ಕೊಡಲು ಆಗುತ್ತಿತ್ತಾ? ನಾನು ಸಿಎಂ ಆಗಿ ನಿದ್ದೆ ಮಾಡಿಲ್ಲ. ಅವ್ಯವಹಾರ ಮಾಡಲು ಹೋಗಿರಲಿಲ್ಲ. ಅಧಿಕಾರ ಹೋದಮೇಲೂ ಸಿದ್ದರಾಮಯ್ಯ ಯಾಕೆ ಸರ್ಕಾರಿ ಬಂಗಲೆಯಲ್ಲಿ ಕುಳಿತಿದ್ದರು? ಬಿಟ್ಟು ಕೊಡಬೇಕಿತ್ತು ಅಲ್ಲವಾ? ತಪ್ಪು ಮಾಡಿರೋರು ಸಿದ್ದರಾಮಯ್ಯ. ಈಗ ನನ್ನ ಮೇಲೆ ಆರೋಪ ಮಾಡಿದ್ದಾರೆ. ಅದರಿಂದ ಏನು ಉಪಯೋಗ? ನಾನು ಸಿಎಂ ಆಗಿದ್ದಾಗ ಸಿಎಂ ಫಂಡ್‌ನಿಂದ ಜನರಿಗೆ 109 ಕೋಟಿ ರೂ. ಪರಿಹಾರ ನೀಡಿದ್ದೇನೆ. ಜನರನ್ನು ನೋಡದೇ ಹೋಗಿದ್ದರೆ ಇದೆಲ್ಲಾ ಮಾಡಲು ಸಾಧ್ಯವಿತ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಇವಿಎಂ ಖರೀದಿಯಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಸುಪ್ರೀಂ

ಬಿಜೆಪಿಯಿಂದ ಬಜರಂಗದಳ (Bajarang Dal) ವಿಷಯ ಪ್ರಚಾರದ ಬಗ್ಗೆ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳಿಗೆ ನಾಡಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ಅಂಶವೇ ಇಲ್ಲ. ಇಂತಹ ವಿಷಯಗಳನ್ನು ಕೆದಕೋದೇ ಎರಡೂ ಪಕ್ಷಗಳ ಕೆಲಸ. ಸ್ವಲ್ಪ ದಿನ ವಿಷಸರ್ಪ, ಈಗ ಬಜರಂಗದಳ ಎಂದು ಹೋಗುತ್ತಿದ್ದಾರೆ. ಚುನಾವಣೆ (Election) ಮುಗಿದ ಮೇಲೆ ಈ ವಿಷಯಗಳು ಮುಗಿಯುತ್ತವೆ ಎಂದರು. ಇದನ್ನೂ ಓದಿ: ಮಣಿಪುರದಲ್ಲಿ ಹಿಂಸಾಚಾರ ಹಿನ್ನೆಲೆ – ಕರ್ನಾಟಕದಲ್ಲಿ ಅಮಿತ್ ಶಾ ಕಾರ್ಯಕ್ರಮಗಳು ರದ್ದು

ಕಾಂಗ್ರೆಸ್ (Congress) ಮತ್ತು ಬಿಜೆಪಿ ಎರಡೂ ಪಕ್ಷಗಳೂ 100 ಸ್ಥಾನ ದಾಟುವುದಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗೆ ಭಯ ಶುರುವಾಗಿದೆ. ಈಗ ಬರುತ್ತಿರುವ ಸಮೀಕ್ಷೆಗಳು ಕೃತಕವಾದ ಸಮೀಕ್ಷೆಗಳು. ಈ ಸಮೀಕ್ಷೆಗಳಲ್ಲಿ ಸತ್ಯಾಂಶವಿಲ್ಲ. ಯಾವುದೇ ಕಾರಣಕ್ಕೂ ಎರಡು ಪಕ್ಷಗಳು 100 ಸ್ಥಾನ ದಾಟಲು ಸಾಧ್ಯವೇ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಆನೆ ಗಾತ್ರದ ಮೋದಿ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ್‌ ಖರ್ಗೆ ಮಾತಾಡಿದ್ದಾರೆ – ಈಶ್ವರಪ್ಪ ಲೇವಡಿ

ಈ ಬಾರಿ ಜನ ಜೆಡಿಎಸ್ (JDS) ಕೈಹಿಡಿಯುತ್ತಾರೆ. ಜನರ ಮುಂದೆ ನಾವು ವಿಷಯಾಧಾರಿತವಾಗಿ ಹೋಗಿದ್ದೇವೆ. ಆರ್ಥಿಕ ಶಕ್ತಿ ಇದ್ದಿದ್ದರೆ ನಾನೇ 130-140 ಸ್ಥಾನ ದಾಟುತ್ತಿದ್ದೆ. ನಮ್ಮಲ್ಲಿ ಆರ್ಥಿಕ ಶಕ್ತಿ ಕೊರತೆಯಿದೆ. ಆದ್ದರಿಂದ ನನ್ನ ನಿರೀಕ್ಷೆಗೆ ಹಿನ್ನಡೆ ಆಗಬಹುದು. ಜನ ನಮ್ಮ ಪರ ಇದ್ದಾರೆ. ಅವರು ದುಡ್ಡಿಗೆ ಮರಳಾಗದೆ ಬಹುಮತದ ಸರ್ಕಾರ ತರಲು ತೀರ್ಮಾನ ಮಾಡಿದ್ದಾರೆ. ಸಿಎಂ ಕ್ಷೇತ್ರದಲ್ಲಿ ನಮಗೆ ಒಳ್ಳೆಯ ಅಭಿಪ್ರಾಯವಿದೆ. ಜನ ದುಡ್ಡನ್ನು ತಿರಸ್ಕಾರ ಮಾಡಿ ಅವರ ಭವಿಷ್ಯಕ್ಕಾಗಿ ಜೆಡಿಎಸ್ ಬೆಂಬಲಿಸುವ ನಿರ್ಧಾರ ಮಾಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಜರಂಗದಳ ನಿಷೇಧ ವಿಚಾರಕ್ಕೆ ಕೈ ಹಾಕಿದ್ರೆ ಹುಷಾರ್: ಸಿದ್ದಲಿಂಗ ಶ್ರೀಗಳಿಂದ ಡಿಕೆಶಿಗೆ ಎಚ್ಚರಿಕೆ

TAGGED:bengalurubjpcongresselectionh d kumaraswamyjdsnarendra modisiddaramaiahಕಾಂಗ್ರೆಸ್ಚುನಾವಣೆಜೆಡಿಎಸ್ನರೇಂದ್ರ ಮೋದಿಬಿಜೆಪಿಬೆಂಗಳೂರುಸಿದ್ದರಾಮಯ್ಯಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Darshan 8
ಅಲೋಕ್‌ ಕುಮಾರ್‌ ಖಡಕ್‌ ನಡೆ – ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗೋದು ಅನುಮಾನ
Bengaluru City Cinema Karnataka Latest Main Post
gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows
Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows

You Might Also Like

BJP Worker
Crime

ಹುಬ್ಬಳ್ಳಿಯಲ್ಲಿ ಅಮಾನುಷ ಕೃತ್ಯ – ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಗೆ ಬಟ್ಟೆಬಿಚ್ಚಿ ಥಳಿಸಿದ ಆರೋಪ!

Public TV
By Public TV
9 minutes ago
Shivamogga
Crime

ಕೈದಿ ಭೇಟಿಯಾಗಲು ಗಾಂಜಾ ತಂದಿದ್ದ ಇಬ್ಬರು ಜೈಲಿನಲ್ಲೇ ಲಾಕ್‌!

Public TV
By Public TV
1 hour ago
Karwar Pavan Bhat
Crime

ಮದುವೆಗೆ ಒಪ್ಪದ ಯುವತಿ – ಪುರೋಹಿತ ಆತ್ಮಹತ್ಯೆ

Public TV
By Public TV
1 hour ago
Mandya HDK
Districts

ಮಂಡ್ಯದಲ್ಲಿ ಹೆಚ್‌ಡಿಕೆ Vs ಕಾಂಗ್ರೆಸ್ ಫೈಟ್ – ಕೈಗಾರಿಕೆ ಸ್ಥಾಪನೆಗೆ ಭೂಮಿಯಿಲ್ಲ ಎಂದ ಕುಮಾರಸ್ವಾಮಿ ವಿರುದ್ಧ ಕಿಡಿ!

Public TV
By Public TV
1 hour ago
Delhi Demolition
Crime

ಮಸೀದಿ ಬಳಿಯ ಅಕ್ರಮ ಕಟ್ಟಡಗಳು ಧ್ವಂಸ – ದೆಹಲಿಯಲ್ಲಿ ಕಲ್ಲುತೂರಾಟ, ಐವರು ಪೊಲೀಸರಿಗೆ ಗಾಯ

Public TV
By Public TV
2 hours ago
Ballari Clash 1 1
Bellary

ರೆಡ್ಡಿ ಸಂಪ್ರದಾಯದ ಪ್ರಕಾರ ಹೂಳಬೇಕು, ರಾಜಶೇಖರ್‌ ದೇಹವನ್ನು ಸುಟ್ಟಿದ್ದು ಯಾಕೆ: ಶ್ರೀರಾಮುಲು ಪ್ರಶ್ನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?