Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕೀಯ ಅನುಭವವಿಲ್ಲದೆ ಸತತ ಎರಡು ಬಾರಿ MLA- ಪಕ್ಷ ಬದಲಿಸಿಯೂ ಗೆದ್ದಿದ್ದ ಡಾ.ಶಿವರಾಜ್ ಪಾಟೀಲ್‍ಗೆ ಈ ಬಾರಿ ಟಫ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜಕೀಯ ಅನುಭವವಿಲ್ಲದೆ ಸತತ ಎರಡು ಬಾರಿ MLA- ಪಕ್ಷ ಬದಲಿಸಿಯೂ ಗೆದ್ದಿದ್ದ ಡಾ.ಶಿವರಾಜ್ ಪಾಟೀಲ್‍ಗೆ ಈ ಬಾರಿ ಟಫ್

Districts

ರಾಜಕೀಯ ಅನುಭವವಿಲ್ಲದೆ ಸತತ ಎರಡು ಬಾರಿ MLA- ಪಕ್ಷ ಬದಲಿಸಿಯೂ ಗೆದ್ದಿದ್ದ ಡಾ.ಶಿವರಾಜ್ ಪಾಟೀಲ್‍ಗೆ ಈ ಬಾರಿ ಟಫ್

Public TV
Last updated: March 31, 2023 3:01 pm
Public TV
Share
3 Min Read
RAICHUR ELECTION
SHARE

ರಾಯಚೂರು: ಮುಸ್ಲಿಂ ಅಲ್ಪಸಂಖ್ಯಾತರ ಪ್ರಾಬಲ್ಯ ಹೊಂದಿರುವ, ಇದುವರೆಗೂ 7 ಬಾರಿ ಮುಸ್ಲಿಂ ಅಭ್ಯರ್ಥಿಯನ್ನೇ ಶಾಸಕರಾಗಿ ಆಯ್ಕೆ ಮಾಡಿ ವಿಧಾನಸೌಧ (Vidhanasoudha) ಕ್ಕೆ ಕಳುಹಿಸಿರುವ ರಾಯಚೂರು ನಗರ ಕ್ಷೇತ್ರ (Raichur City Constituency) ದಲ್ಲಿ ಹೃದಯರೋಗ ತಜ್ಞ ಡಾ.ಶಿವರಾಜ್ ಪಾಟೀಲ್ (Dr. Shivaraj Patil) ಸತತ ಎರಡು ಬಾರಿ ಶಾಸಕರಾಗುವ ಮೂಲಕ ಹೊಸ ದಾಖಲೆಯನ್ನು ಬರೆದಿದ್ದಾರೆ.

ಯಾವುದೇ ರಾಜಕೀಯ ಅನುಭವವಿಲ್ಲದೆ ಮೊದಲ ಬಾರಿಗೆ ಜೆಡಿಎಸ್ ನಿಂದ ಚುನಾವಣೆ ಎದುರಿಸಿದ್ದ ಡಾ.ಶಿವರಾಜ್ ಪಾಟೀಲ್ 2013 ರಲ್ಲಿ ಮೊದಲ ಯತ್ನದಲ್ಲೇ ಗೆದ್ದಿದ್ದರು. ಬಳಿಕ 2018 ರಲ್ಲಿ ಜೆಡಿಎಸ್ (JDS) ತೊರೆದು ಬಿಜೆಪಿ (BJP) ಯಿಂದ ಸ್ಪರ್ಧಿಸಿ ಎರಡನೇ ಬಾರಿಗೆ ಶಾಸಕನಾಗಿ ಆಯ್ಕೆಯಾದರು. ಬಿಜೆಪಿ ತುಂಬಾ ವೀಕ್ ಅನ್ನೋ ಕ್ಷೇತ್ರದಲ್ಲೇ ಭರ್ಜರಿ ವಿಜಯ ಸಾಧಿಸಿದ್ದರು.

Dr. Shivaraj Patil

ವೈದ್ಯ ವೃತ್ತಿಯಲ್ಲಿದ್ದ ಡಾ.ಶಿವರಾಜ್ ಪಾಟೀಲ್ ಒಂದೇ ಅವಧಿಗೆ ಮಾಗಿದ ಚುನಾವಣಾ ರಾಜಕಾರಣಿಯಾಗಿ ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ (Congress) ವಿರುದ್ಧ ಗೆಲ್ಲುವ ಮೂಲಕ ಮುಸ್ಲಿಂಯೇತರ ಅಭ್ಯರ್ಥಿ ಸತತ ಎರಡು ಬಾರಿ ಎರಡು ಬೇರೆ ಬೇರೆ ಪಕ್ಷದಿಂದ ಗೆದ್ದ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: ಪ್ರತಿ ಬಾರಿಯೂ ಗೆದ್ದವರನ್ನು ಸೋಲಿಸುವ ಸಿಂಧನೂರು ಮತದಾರ

2013 ರಲ್ಲಿ ಕಾಂಗ್ರೆಸ್‍ನ ಪ್ರಬಲ ಎದುರಾಳಿ ಸೈಯದ್ ಯಾಸಿನ್ (Syed Yasin) 37392 ಮತ ಪಡೆದರೆ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಡಾ.ಶಿವರಾಜ್ ಪಾಟೀಲ್ 45,263 ಮತ ಪಡೆದು 7871 ಮತಗಳ ಅಂತರದಲ್ಲಿ ಗೆದ್ದಿದ್ದರು. 2018 ರಲ್ಲಿ ಸೈಯದ್ ಯಾಸಿನ್ 45,520 ಮತ ಪಡೆದರೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಡಾ.ಶಿವರಾಜ್ ಪಾಟೀಲ್ 56511 ಮತ ಪಡೆದು 10,991 ಮತಗಳಿಂದ ಎರಡನೇ ಬಾರಿಗೆ ಜಯಭೇರಿ ಬಾರಿಸಿದರು.

CongressFlags1 e1613454851608

2023ರ ಚುನಾವಣೆಗೆ ರಾಯಚೂರು ನಗರ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 2,21,093 ಇದ್ದು, ಇದರಲ್ಲಿ ಮುಸ್ಲಿಂ ಅಲ್ಪಸಂಖ್ಯಾತರು, ಲಿಂಗಾಯತರು, ಪರಿಶಿಷ್ಟ ಜಾತಿ ಮತದಾರರು ನಿರ್ಣಾಯಕರಾಗಿದ್ದಾರೆ. ಇದನ್ನೂ ಓದಿ: ಜೆಡಿಎಸ್‌ಗೆ ಸರಣಿ ಆಘಾತ – ಐವರು ನಾಯಕರು ಗುಡ್‌ಬೈ

ಕ್ಷೇತ್ರದಲ್ಲಿನ ಜಾತಿವಾರು ಅಂದಾಜು ಲೆಕ್ಕಾಚಾರ ಈ ರೀತಿಯಿದೆ:
* ಮುಸ್ಲಿಂ – 60,000
* ಪರಿಶಿಷ್ಟ ಜಾತಿ- 34,000
* ಲಿಂಗಾಯತ- 35,000
* ಪರಿಶಿಷ್ಟ ಪಂಗಡ- 24,000
* ಬಲಿಜ (ಮುನ್ನೂರುಕಾಪು)- 19,000
* ಬ್ರಾಹ್ಮಣರು- 10,000
* ಆರ್ಯವೈಶ್ಯ- 9,000 ಹಾಗೂ ಉಳಿದ ಇತರೆ ಸಮುದಾಯದ ಮತದಾರು ಇದ್ದಾರೆ.

BJP CONGRESS FLAG

ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಕ್ಷೇತ್ರದಲ್ಲಿ ಮುಸ್ಲಿಂ ಹಾಗೂ ಲಿಂಗಾಯತ ಮತದಾರರು ಹೆಚ್ಚು ನಿರ್ಣಾಯಕರಾಗಿದ್ದಾರೆ. ಬಿಜೆಪಿ ಹಾಲಿ ಶಾಸಕ ಡಾ.ಶಿವರಾಜ್ ಪಾಟೀಲ್ ಮೇಲೆ ಲಿಂಗಾಯತರ ಒಲವು ಈ ಬಾರಿ ಸ್ವಲ್ಪ ಕಡಿಮೆಯಾಗಿದೆ. ಸತತ ಎರಡು ಬಾರಿ ಒಮ್ಮೆ ಜೆಡಿಎಸ್, ಇನ್ನೊಮ್ಮೆ ಬಿಜೆಪಿಯಿಂದ ಗೆದ್ದಿರುವ ಶಿವರಾಜ್ ಪಾಟೀಲ್‍ಗೆ ಮೂರನೇ ಚುನಾವಣೆ ಟಫ್ ಆಗಿದೆ. ಕಾಂಗ್ರೆಸ್ ನಿಂದ ಮಾಜಿ ಶಾಸಕ ಎನ್.ಎಸ್ . ಬೋಸರಾಜು ಹಾಗೂ ಮಾಜಿ ಶಾಸಕ ಸೈಯದ್ ಯಾಸಿನ್ ಟಿಕೆಟ್ ಸ್ಪರ್ಧೆಯಲ್ಲಿದ್ದಾರೆ. ಸತತ ಸೋಲು ಹಾಗೂ ಆರೋಗ್ಯ ಸಮಸ್ಯೆ ಕಾರಣಕ್ಕೆ ಸೈಯದ್ ಯಾಸಿನ್ ಗೆ ಈ ಬಾರಿ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ. ಎನ್ ಎಸ್ ಬೋಸರಾಜು ಸ್ಪರ್ಧಿಸಿದರೆ ತುರಿಸಿನ ಸ್ಪರ್ಧೆ ಏರ್ಪಡಲಿದೆ, ಲಿಂಗಾಯತ, ಮುಸ್ಲಿಂ ಮತಗಳನ್ನು ಹೆಚ್ಚು ಸೆಳೆಯಲಿದ್ದಾರೆ. ಈ ಕ್ಷೇತ್ರದಲ್ಲಿ ಪಕ್ಷದ ಜೊತೆ ಅಭ್ಯರ್ಥಿಗಳೇ ಮುಖ್ಯವಾಗುತ್ತಾರೆ.

2023 ರ ಚುನಾವಣೆಯಲ್ಲಿ ಗೆದ್ದು ಹ್ಯಾಟ್ರಿಕ್ ಕನಸು ಕಾಣುತ್ತಿರುವ ಶಿವರಾಜ್ ಪಾಟೀಲ್‍ಗೆ ಈ ಚುನಾವಣೆ ಅಷ್ಟು ಸುಲಭವಾಗಿಲ್ಲ. ರಾಯಚೂರನ್ನ ತೆಲಂಗಾಣಕ್ಕೆ ಸೇರಿಸಿಬಿಡಿ ಅನ್ನೋ ಹೇಳಿಕೆಯಿಂದ ಸಾಕಷ್ಟು ವಿವಾದ ಸೃಷ್ಟಿಸಿದ್ದ ಶಿವರಾಜ್ ಪಾಟೀಲ್, ಸಣ್ಣಪುಟ್ಟ ವಿವಾದಗಳನ್ನ ಮೈಮೇಲೆ ಆಗಾಗ ಎಳೆದುಕೊಂಡಿದ್ದಾರೆ. ಏಮ್ಸ್ ಹೋರಾಟದ ಬಿಸಿ ಸಹ ಡಾ.ಶಿವರಾಜ್ ಪಾಟೀಲ್‍ಗೆ ತಟ್ಟುವ ಸಾಧ್ಯತೆಯಿದೆ.

TAGGED:Dr. Shivaraj PatilelectionKarnataka Election 2023raichurಕರ್ನಾಟಕ ಚುನಾವಣೆ 2023ಚುನಾವಣೆಡಾ.ಶಿವರಾಜ್ ಪಾಟೀಲ್ರಾಯಚೂರು
Share This Article
Facebook Whatsapp Whatsapp Telegram

Cinema news

Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories
CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories

You Might Also Like

Rajeshwari Gayakwad
Cricket

ಕನ್ನಡತಿ ರಾಜೇಶ್ವರಿ ಮ್ಯಾಜಿಕ್‌, 45 ರನ್‌ಗಳ ಜಯ – ಕೊನೆಯಲ್ಲಿದ್ದ ಗುಜರಾತ್‌ 2ನೇ ಸ್ಥಾನಕ್ಕೆ ಜಂಪ್‌

Public TV
By Public TV
8 hours ago
Leopard
Chamarajanagar

ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಕೊಂದಿದ್ದ ಚಿರತೆ ಸೆರೆ – ಮೃತನ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ

Public TV
By Public TV
8 hours ago
let recruitment case nia court sentences key accused to 10 years ri
Crime

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಪ್ರಕರಣ – ಶಿರಸಿಯ ವ್ಯಕ್ತಿಗೆ 10 ವರ್ಷ ಕಠಿಣ ಶಿಕ್ಷೆ

Public TV
By Public TV
8 hours ago
trump putin zelensky
Latest

ಯುಎಇಯಲ್ಲಿ ಉಕ್ರೇನ್‌, ರಷ್ಯಾ, ಅಮೆರಿಕದ ಮಧ್ಯೆ ಮೊದಲ ತ್ರಿಪಕ್ಷಿಯ ಸಭೆ – ಯುದ್ಧ ಅಂತ್ಯವಾಗುತ್ತಾ?

Public TV
By Public TV
9 hours ago
Nyamathi Moral Policing
Crime

ದಾವಣಗೆರೆ | ಸ್ನೇಹಿತೆಯೊಂದಿಗಿದ್ದ ಯುವಕನ ವಿಡಿಯೋ ಮಾಡಿ ಸುಲಿಗೆ – ಇಬ್ಬರು ಅರೆಸ್ಟ್‌

Public TV
By Public TV
9 hours ago
The Panchayat gave the site to the Ritti family who handed over the Treasure to the government
Districts

ಪಬ್ಲಿಕ್‌ ಟಿವಿ ಇಂಪ್ಯಾಕ್ಟ್‌ – ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ರಿತ್ತಿ ಕುಟುಂಬಕ್ಕೆ ಪಂಚಾಯತ್‌ನಿಂದ ಸೈಟ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?