ಬಳ್ಳಾರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಈ ಬಾರಿ ಹೊಸಪೇಟೆ ಕ್ಷೇತ್ರ (Hosapete Constituency) ದಿಂದ ಸ್ಪರ್ಧೆ ಮಾಡಿದರೆ ಹೊಲ ಮಾರಿ ಕೋಟಿ ರೂ. ದೇಣಿಗೆ ನೀಡುವುದಾಗಿ ಅಭಿಮಾನಿಯೊಬ್ಬರು ಘೋಷಣೆ ಮಾಡಿದ್ದಾರೆ.
ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದ ಅಭಿಮಾನಿ ಕೆ.ಎಸ್. ಮಲಿಯಪ್ಪ ಈ ರೀತಿ ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಸ್ಪರ್ಧಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಬೇಡಿಕೆಗೆ ಸ್ಪಂದಿಸಿ ಸ್ಪರ್ಧಿಸಿದರೆ ಒಂದು ಕೋಟಿ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಬ್ರಾಹ್ಮಣರನ್ನು ಉದ್ದೇಶ ಪೂರ್ವಕವಾಗಿ ತುಳಿಯುತ್ತಿದ್ದಾರೆ: ಸುಬ್ಬರಾಯ ಹೆಗ್ಗಡೆ
ನನಗೆ ಆರು ಎಕರೆ ಹೊಲ ಇದೆ. ಅದರಲ್ಲಿ ಎರಡು ಎಕರೆ ಮಾರಾಟ ಮಾಡಿ ದೇಣಿಗೆ ನೀಡುತ್ತೇನೆ ಎಂದು ಮಾಜಿ ಸಿಎಂಗೆ ವಿಶೇಷ ಆಫರ್ (Special offer to Siddaramaiah) ನೀಡಿದ್ದಾರೆ. ವಿಜಯನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಖಂಡಿತ ಗೆಲ್ಲುತ್ತಾರೆ ಎಂಬ ಭರವಸೆ ಇದೆ. ಆ ಕಾರಣದಿಂದ ನಾನು ಹಣ ಹೊಂದಿಸಿಕೊಡುತ್ತೇನೆ. ಒಂದು ಎಕರೆಗೆ 50 ಲಕ್ಷ ರೂ. ದೊರೆಯುತ್ತದೆ. ಹಾಗಾಗಿ ಎರಡು ಎಕರೆ ಮಾರಾಟ ಮಾಡಲು ತಯಾರಾಗಿದ್ದೇನೆ ಎಂದಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k