Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಉಡುಪಿ ಬೈಂದೂರಿನಲ್ಲಿ ಗೆದ್ದ ಬರಿಗಾಲ ಸಂತ – ಜಿದ್ದಾಜಿದ್ದಿ ಹೇಗಿತ್ತು?

Public TV
Last updated: May 14, 2023 5:25 pm
Public TV
Share
3 Min Read
GURURAJA SHETTY GANTIHOLE
SHARE

ಉಡುಪಿ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ (Election) ಕಾಂಗ್ರೆಸ್ (Congress) ಕಳೆದ ಮೂರು ದಶಕದಲ್ಲೇ ದಾಖಲೆಯ ಸಾಧನೆ ಮಾಡಿದೆ. ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದಿದ್ದು, 65 ಸೀಟು ಗೆದ್ದ ಬಿಜೆಪಿ (BJP) ಅಧಿಕಾರದಿಂದ ಹೊರಬಿದ್ದಿದೆ. ಜೆಡಿಎಸ್ (JDS) 19 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ರಾಜ್ಯದ ಚಿತ್ರಣ ಅದಲು ಬದಲಾದರೂ ಕೂಡ ಉಡುಪಿಯಲ್ಲಿ (Udupi) ಬಿಜೆಪಿಯ ಹಿಂದಿನ ದಾಖಲೆ ಹಾಗೆಯೇ ಉಳಿದಿದೆ. ಉಡುಪಿಯಲ್ಲಿ ಐದಕ್ಕೆ ಐದು ಕ್ಷೇತ್ರವನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ.

ಕಾಂಗ್ರೆಸ್ ಉಡುಪಿಯ ಕೇಸರಿ ಕೋಟೆಗೆ ದಾಳಿ ಮಾಡುವಲ್ಲಿ ವಿಫಲಯತ್ನ ಮಾಡಿದ್ದು, ಬಿಜೆಪಿ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದಲ್ಲಿಯೂ ಬಿಜೆಪಿ ವಿಜಯ ಪತಾಕೆಯನ್ನು ಹಾರಿಸಿದೆ. ಐದರಲ್ಲಿ ನಾಲ್ಕು ಹೊಸ ಮುಖಗಳಿಗೆ ಅವಕಾಶ ನೀಡಿದ್ದ ಬಿಜೆಪಿಯ ಹೊಸ ಪ್ರಯೋಗವು ಉಡುಪಿಯಲ್ಲಿ ಗೆಲುವನ್ನು ಸಾಧಿಸಿದೆ. ಇದನ್ನೂ ಓದಿ: ನನ್ನ ಜೊತೆಗೇ ಇದ್ದು ಬೆನ್ನಿಗೆ ಚೂರಿ ಹಾಕಿದ್ರು: ಪರಾಜಿತ ಬಿಜೆಪಿ ಅಭ್ಯರ್ಥಿ ಈಶ್ವರ್ ಸಿಂಗ್ ಸ್ವ ಪಕ್ಷದ ವಿರುದ್ಧ ಕಿಡಿ

ಇದು ಕಾರ್ಯಕರ್ತರ ಗೆಲುವು. ಬಿಜೆಪಿ ಪಕ್ಷದ ಗೆಲುವು. ಕೇವಲ ಒಂದು ತಿಂಗಳೊಳಗೆ ಇಡೀ ವಿಧಾನಸಭಾ ಕ್ಷೇತ್ರದ ಮನೆಗಳಿಗೆ ಜನರ ಮನಗಳಿಗೆ ನನ್ನನ್ನು ಮುಟ್ಟಿಸುವಲ್ಲಿ ಯಶಸ್ವಿ ಆಗಿದ್ದಾರೆ. ಶಾಸಕ ಸುಕುಮಾರ ಶೆಟ್ಟಿ ಬಹಿರಂಗ ಪ್ರಚಾರ ನಡೆಸದಿದ್ದರೂ ಅಂತರಂಗದಿಂದ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಜನರ ಅಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತೇನೆ. ಸರ್ಕಾರದ ಕೆಲಸದ ಜೊತೆಗೆ ಸಂಘಟನೆಯ ಕೆಲಸಗಳೂ ಬಹಳ ಮುಖ್ಯವಾಗಿದೆ ಎಂದು ಗುರುರಾಜ ಶೆಟ್ಟಿ ಗಂಟಿಹೊಳೆ (Gururaj Shetty Gantihole) ಹೇಳಿದ್ದಾರೆ. ಇದನ್ನೂ ಓದಿ: ಈ ಬಾರಿ ಸಿಎಂ ಸ್ಥಾನವನ್ನು ಒಕ್ಕಲಿಗರಿಗೆ ನೀಡಬೇಕು: ಉಮಾಪತಿ ಶ್ರೀನಿವಾಸ ಗೌಡ

ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ, ಇದೊಂದು ಅಚ್ಚರಿಯ ಫಲಿತಾಂಶವಾಗಿದ್ದು, ನಾವು ಇದನ್ನು ನಿರೀಕ್ಷೆಯೇ ಮಾಡಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. 2018ರಲ್ಲಿ ಸೋತ ನಂತರ ಐದು ವರ್ಷ ಕ್ಷೇತ್ರದಲ್ಲೇ ಓಡಾಡಿ ಜನರ ಜೊತೆಗಿದ್ದೆ. ಚುನಾವಣೆಯಲ್ಲಿ ಸೋತು ನನ್ನ ರಾಜಕೀಯ ಜೀವನ ಮುಗಿಸುವ ಬದಲು, ಜನಸೇವೆ ಮಾಡುವ ಅವಕಾಶವನ್ನು ಕೇಳಿದ್ದೆ. ಈ ಫಲಿತಾಂಶದಿಂದ ನನಗೆ ನೋವಾಗಿದೆ. ಬೈಂದೂರು ಜನತೆಯ ಪ್ರೀತಿಗೆ, ಈಗ ನೀಡಿರುವ ಅಭಿಪ್ರಾಯಕ್ಕೆ ನನ್ನ ಎರಡು ಮಾತುಗಳು ಇಲ್ಲ. ನಾನು ಜನರ ಜೊತೆ ಇರುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಸರ್‌.. ಭಯ ಪಡಬೇಡಿ, ನಿಮ್ಮ ಜೊತೆ ನಾವಿದ್ದೇವೆ: ಸೋತು ಮಂಕಾಗಿದ್ದ ಸಿ.ಟಿ.ರವಿ ಸಂತೈಸಿದ ಬಾಲಕ

ಬೈಂದೂರಿನ ಜಿದ್ದಾಜಿದ್ದಿ ಹೇಗಿತ್ತು? ಯಾರಿಗೆಷ್ಟು ಮತ?
ಬೈಂದೂರು (Byndoor) ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು 98,628 ಮತಗಳನ್ನು ಪಡೆದು 16,153 ಮತಗಳ ಅಂತರದಿಂದ ಜಯಗಳಿಸಿರುತ್ತಾರೆ. ಕಾಂಗ್ರೆಸ್‌ನ ಗೋಪಾಲ ಪೂಜಾರಿ ಅವರು 82,475 ಮತಗಳನ್ನು ಪಡೆದು ಸೋಲನ್ನು ಅನುಭವಿಸಿದ್ದಾರೆ. ಉಳಿದಂತೆ ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ 841 ಮತಗಳನ್ನು ಪಡೆದಿದ್ದರೆ, ಆಮ್ ಆದ್ಮಿ ಪಕ್ಷದ ಸಿ.ಎ ರಮಾನಂದ ಪ್ರಭು 187 ಮತಗಳನ್ನು ಪಡೆದಿದ್ದಾರೆ. ಅಲ್ಲದೇ ಉತ್ತಮ ಪ್ರಜಾಕೀಯ ಪಕ್ಷದ ಪ್ರಸಾದ್.ಎಸ್ 626 ಮತಗಳು, ರಾಷ್ಟ್ರೀಯ ಸಮಾಜದಳ (ಆರ್) ಪಕ್ಷದ ಕೊಲ್ಲೂರು ಮಂಜುನಾಥ ನಾಯಕ್ 171, ಪಕ್ಷೇತರ ಅಭ್ಯರ್ಥಿಗಳಾದ ಜಿ. ಚಂದ್ರಶೇಖರ 613, ಬಿ.ಶ್ಯಾಮ 296 ಹಾಗೂ ಬಿ.ಹೆಚ್ ಸುರೇಶ್ ಪೂಜಾರಿ ಅವರು 638 ಮತಗಳನ್ನು ಪಡೆದಿರುತ್ತಾರೆ. ಇಷ್ಟು ಮಾತ್ರವಲ್ಲದೇ 1,208 ನೋಟಾ ಮತದಾನವಾಗಿರುತ್ತದೆ. ಇದನ್ನೂ ಓದಿ: ಗುರುವನ್ನು ಸೋಲಿಸಿದ ಶಿಷ್ಯ: ಸಿಟಿ ರವಿ ಸೋತಿದ್ದು ಎಲ್ಲಿ?

ಕಾಂಗ್ರೆಸ್ ಗೆಲ್ಲುತ್ತದೆ ಎಂಬ ನಂಬಿಕೆ ಇದ್ದ ಕ್ಷೇತ್ರದಲ್ಲಿ ಬೈಂದೂರು ಕೂಡ ಒಂದು ಆದರೆ ಬರಿಗಾಲ ಸಂತ 20 ದಿನದಲ್ಲಿ ಮ್ಯಾಜಿಕ್ ಮಾಡಿ ಕ್ಷೇತ್ರದ ಜನರ ಮನ ಗೆದ್ದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಬೇಡಿಕೆಗಳು ಇರುವ ಕ್ಷೇತ್ರವೆಂದರೆ ಅದು ಬೈಂದೂರು. ವಿಪಕ್ಷದಲ್ಲಿ ಕೂತು ಜನಸೇವೆ ಮಾಡುವುದು ಗುರುರಾಜ ಶೆಟ್ಟಿ ಗಂಟಿ ಹೊಳೆ ಅವರ ಮುಂದೆ ಇರುವ ದೊಡ್ಡ ಸವಾಲು. ಇದನ್ನೂ ಓದಿ: ಸಿ.ಟಿ ರವಿ ಸೋಲಿಸಿದ್ದಕ್ಕೆ ಭೋಜೇಗೌಡರಿಗೆ ಹಾಲಿನ ಅಭಿಷೇಕ

TAGGED:bjpbyndoorcongresselectionGururaj Shetty Gantiholeudupiಉಡುಪಿಕಾಂಗ್ರೆಸ್ಗುರುರಾಜ ಶೆಟ್ಟಿ ಗಂಟಿಹೊಳೆಚುನಾವಣೆಬಿಜೆಪಿಬೈಂದೂರು
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
14 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
15 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
16 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
17 hours ago

You Might Also Like

pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
4 hours ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
4 hours ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
4 hours ago
PAYAL
Latest

ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

Public TV
By Public TV
5 hours ago
Nganthoi Sharma
Latest

ವಿಮಾನ ಪತನ – ಗಗನಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
5 hours ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?