ಹುಬ್ಬಳ್ಳಿ: ಟಿಕೆಟ್ ನೀಡದಿದ್ರೂ ನಾನು ಚುನಾವಣೆಯಲ್ಲಿ (Election) ಸ್ಪರ್ಧೆ ಮಾಡುತ್ತೇನೆ. ನಾನು ಸ್ಪರ್ಧೆ ಮಾಡಿ ಅತಿ ಹೆಚ್ಚು ಮತಗಳಿಂದ ಗೆದ್ದು ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಹೈಕಮಾಂಡ್ ನಾಯಕರಿಗೆ ನೇರವಾದ ಸಂದೇಶ ಕಳುಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಪಕ್ಷದ ವರಿಷ್ಠರಿಂದ ಫೋನ್ ಬಂದಿರುವುದು ನಿಜ. ನೀವು ಸೀನಿಯರ್ ಇದ್ದೀರಿ. ಆದ್ದರಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದು ನನಗೆ ಹೈಕಮಾಂಡ್ (High Command) ಹೇಳಿದ್ದರು. ಆದರೆ ನನಗೆ ಪಕ್ಷದ ವರಿಷ್ಠರ ಮೇಲೆ ನಂಬಿಕೆಯಿದೆ. ಸರಿಯಾದ ಸ್ಥಾನಮಾನವನ್ನು ಕೊಡುತ್ತೇವೆ ಬಂದು ಭೇಟಿಯಾಗಿ ಎಂದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: KMF ನಷ್ಟದಲ್ಲಿಲ್ಲ, 200 ಕೋಟಿ ಲಾಭದಲ್ಲಿದೆ – ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಕಳೆದ 30 ವರ್ಷಗಳಿಂದ ನಾನು ಉತ್ತರ ಕರ್ನಾಟಕದಲ್ಲಿ ನಾನು ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ಹೈಕಮಾಂಡ್ ಬಳಿ ಹೇಳಿದ್ದೇನೆ. ಅಲ್ಲದೇ ನೂರಾರು ಜನರಿಗೆ ಟಿಕೆಟ್ ಕೊಡುವ ಕೆಲಸವನ್ನೂ ಮಾಡಿದ್ದೇನೆ. ನನಗೆ ಟಿಕೆಟ್ ನೀಡಬಾರದು ಎನ್ನಲು ಕಾರಣವೇನು? ಸರ್ವೆಯಲ್ಲಿ ಪಾಸಿಟಿವ್ ಇದೆ. ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲ. ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ನಿಯತ್ತಾಗಿ ಕೆಲಸ ಮಾಡಿದ್ದಕ್ಕಾಗಿ ನನಗೆ ಈ ಶಿಕ್ಷೆ ನೀಡುತ್ತಿದ್ದೀರಾ. ಹೈಕಮಾಂಡ್ ಈ ರೀತಿ ಹೇಳಿದ್ದಕ್ಕೆ ನನ್ನ ಮನಸ್ಸಿಗೆ ಬೇಜಾರಾಗಿದೆ ಎಂದರು. ಇದನ್ನೂ ಓದಿ: ಶೀಘ್ರದಲ್ಲೇ ಎರಡು ಹಂತದಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ: ಸಿಎಂ
ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ನನಗೆ ಟಿಕೆಟ್ ತಪ್ಪಿಸಲು ಮೈನಸ್ ಪಾಯಿಂಟ್ ಏನಾದರು ಇದ್ದರೆ ಹೇಳಿ. ಇನ್ನೂ ಅಭ್ಯರ್ಥಿಗಳ ಘೋಷಣೆಯಾಗಿಲ್ಲ. ನಾನು ಹುಬ್ಬಳ್ಳಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದೇನೆ. ಕ್ಷೇತ್ರದ ಜನರು ನನ್ನ ಮೇಲೆ ಪ್ರೀತಿ ವಿಶ್ವಾಸ ಇಟ್ಟಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ದೇವೇಗೌಡರ ತೀರ್ಮಾನವೇ ಅಂತಿಮ, ಅವರು ಹಾಕಿದ ಗೆರೆ ದಾಟಲ್ಲ : ಹೆಚ್.ಡಿ ರೇವಣ್ಣ
ಈಶ್ವರಪ್ಪನವರ (K.S.Eshwarappa) ಸ್ಟ್ಯಾಂಡ್ ಬೇರೆ, ನನ್ನ ಸ್ಟ್ಯಾಂಡ್ ಬೇರೆ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಅತಿಹೆಚ್ಚು ಮತಗಳ ಅಂತರದಿಂದ ಗೆದ್ದು ಬರುತ್ತೇನೆ. ಶೆಟ್ಟರ್ ರಾಜಕಾರಣದಿಂದ ಹಿಂದೆ ಸರಿಯುವ ಮಾತೇ ಇಲ್ಲ. ನಾನು ಇನ್ನೂ ಹತ್ತು ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ (Politics) ಇರುತ್ತೇನೆ. ನೂರಾರು ಜನರಿಗೆ ಟಿಕೆಟ್ ಕೊಟ್ಟು ಪಕ್ಷ ಸಂಘಟನೆ ಮಾಡಿದವನಿಗೆ ಈ ರೀತಿ ಆಗಿದ್ದು ಮನಸ್ಸಿಗೆ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಯಾರ ಒತ್ತಡಕ್ಕೆ ಮಣಿಯದೇ ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ: ಈಶ್ವರಪ್ಪ