ಯಡ್ಡಿಯೂರಪ್ಪಗೆ ಕಲ್ಲು ಹೊಡೆದ್ರೆ BJP ಪಕ್ಷಕ್ಕೇ ಪೆಟ್ಟು – ವಿಜಯೇಂದ್ರ ಎಚ್ಚರಿಕೆ

Public TV
1 Min Read
Vijayendra

ವಿಜಯಪುರ: ಯಡಿಯೂರಪ್ಪ (BS Yediyurappa) ಅವರಿಗೆ ಕಲ್ಲು ಹೊಡೆದರೆ ಪೆಟ್ಟು ಬೀಳೋದು ಬಿಜೆಪಿ (BJP) ಮೇಲೆಯೇ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಬಿಎಸ್‌ವೈ ಪುತ್ರ ಬಿ.ವೈ ವಿಜಯೇಂದ್ರ (BY Vijayendra) ಎಚ್ಚರಿಕೆ ನೀಡಿದ್ದಾರೆ.

`ಯಡ್ಡಿಯೂರಪ್ಪ ಹಿರಿಯರು ಅವರ ಬಗ್ಗೆ ಮಾತನಾಡಲ್ಲ’ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿಕೆಗೆ ವಿಜಯಪುರದಲ್ಲಿ, `ಪಬ್ಲಿಕ್ ಟಿವಿ’ಯೊಂದಿಗೆ (Public TV) ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕೆಲ ಬಿಜೆಪಿ ಹಾಲಿ ಶಾಸಕರಿಗೆ ಬಿಗ್ ಶಾಕ್- ಆಪರೇಷನ್ ‘ಯು-ಜಿ’ ಮಾಡೆಲ್ ಜಾರಿ?

BASAVARAJ BOMMAI AND BSYediyurappa

ಹಿರಿಯರಾದಂತಹ ಯತ್ನಾಳ್ ಅವರ ಹೇಳಿಕೆಯನ್ನ ನಾನು ಗಮನಿಸಿದ್ದೇನೆ. ಇದು ಉತ್ತಮ ಬೆಳವಣಿಗೆ ಎಂದು ಭಾವಿಸಬಹುದು. ಪಕ್ಷದ ಹಿತದೃಷ್ಟಿಯಿಂದ ಯಡ್ಡಿಯೂರಪ್ಪ ಅವರಿಗೆ ಕಲ್ಲು ಹೊಡೆದ್ರೆ ಅದರ ಪೆಟ್ಟು ಬೀಳೋದು ಬಿಜೆಪಿ ಮೇಲೆಯೇ ಎಂದಿದ್ದಾರೆ. ಇದನ್ನೂ ಓದಿ: Special- ನಟಿ ಶ್ರುತಿ ಕುಟುಂಬದ ಮೂರನೇ ತಲೆಮಾರು ಸಿನಿ ರಂಗಕ್ಕೆ ಎಂಟ್ರಿ

BASANAGAUDA PATIL YATNAL

ಈಗಲಾದರೂ ಅರ್ಥ ಮಾಡಿಕೊಂಡು ಯತ್ನಾಳ್ ಅವರು ಹೇಳಿಕೆ ಕೊಟ್ಟಿರುವುದನ್ನ ಸ್ವಾಗತ ಮಾಡುತ್ತೇನೆ. ಏನೇ ಸಮಸ್ಯೆ ಇದ್ದರೂ, ಏನೇ ಗೊಂದಲಗಳು ಇದ್ದರೂ ಅವುಗಳನ್ನ ಕುಳಿತು ಚರ್ಚೆ ಮಾಡಿ ಪರಿಹಾರ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಅಂದರೆ ಇತರಹದ ಸಮಸ್ಯೆಗಳನ್ನ ಸರಿಮಾಡಿಕೊಂಡು ಮುಂದೆ ಹೋಗಬೇಕಾಗುತ್ತದೆ. ಬರುವ ದಿನದಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *