ಬೆಳಗಾವಿ: ಅಥಣಿ ಕ್ಷೇತ್ರದ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಪಕ್ಷ ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳಲಿದೆ. ಟಿಕೆಟ್ ಹಂಚಿಕೆಯಲ್ಲಿ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಮಹೇಶ್ ಕುಮಟಳ್ಳಿ (Mahesh Kumathalli) ಬೆಳಗಾವಿಯಲ್ಲಿ (Belagavi) ಹೇಳಿದರು.
- Advertisement 2-
ಅಥಣಿ (Athani) ಬಿಜೆಪಿ (BJP) ಟಿಕೆಟ್ಗಾಗಿ ಲಕ್ಷ್ಮಣ ಸವದಿ (Laxman Savadi) ಹಾಗೂ ಮಹೇಶ್ ಕುಮಟಳ್ಳಿ ನಡುವೆ ಪೈಪೋಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಲಕ್ಷ್ಮಣ ಸವದಿ ಅಥಣಿ ಟಿಕೆಟ್ ಕೇಳಿದ್ದಾರೆ ಎಂಬ ವರದಿಯನ್ನು ನಾನೂ ಗಮನಿಸಿದ್ದೇನೆ. ಆದರೆ ಅಥಣಿ ಟಿಕೆಟ್ ಬೇಕು ಎಂದು ಲಕ್ಷ್ಮಣ ಸವದಿ ಮಾಧ್ಯಮದ ಎದುರು ಹೇಳಿಲ್ಲ. ಲಕ್ಷ್ಮಣ ಸವದಿ ಟಿಕೆಟ್ ಕೇಳಿರುವ ವಿಚಾರವೂ ನನ್ನ ಗಮನಕ್ಕೆ ಬಂದಿಲ್ಲ ಎಂದರು. ಇದನ್ನೂ ಓದಿ: ಹಾಸನದ ವಿಷಯದಲ್ಲಿ ನನ್ನ ಸ್ಟ್ಯಾಂಡ್ ಬದಲಾಗಲ್ಲ: ಹೆಚ್ಡಿಕೆ
- Advertisement 3-
- Advertisement 4-
ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಜಾತಿವಾರು ಅಭಿಪ್ರಾಯ ಸಂಗ್ರಹ ವಿಚಾರವಾಗಿ, ಬಿಜೆಪಿ ಚಿಹ್ನೆ ಮೇಲೆಯೇ ಲಕ್ಷ್ಮಣ ಸವದಿ ಸಭೆ ಮಾಡುತ್ತಿದ್ದಾರೆ. ಅಥಣಿಯಲ್ಲಿ ಬಿಜೆಪಿ ಸಂಘಟನೆಗಾಗಿ ಲಕ್ಷ್ಮಣ ಸವದಿ ಶ್ರಮಿಸುತ್ತಿದ್ದಾರೆ. ನಾನೂ ಜನರನ್ನು ಕೂಡಿಸಿ ಪಕ್ಷ ಸಂಘಟನೆಗಾಗಿ ಸಭೆ ಮಾಡುತ್ತಿದ್ದೇನೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಮಹೇಶ್ ಕುಮಟಳ್ಳಿ ಮನವಿ ಮಾಡಿದರು. ಇದನ್ನೂ ಓದಿ: ನಾಲ್ಕನೇಯ ಬಾರಿ ಗೆಲ್ತಾರಾ ಖಾದರ್ ? ಮಂಗಳೂರಿನಲ್ಲಿ ಈ ಬಾರಿ ಬಿಜೆಪಿ ಕೊಡುತ್ತಾ ಠಕ್ಕರ್?