ತುಮಕೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Devegowda) ಮೊದಲು 50 ರೂಪಾಯಿಗೆ ಹೊಳೆನರಸೀಪುರದಲ್ಲಿ ಕಂಟ್ರಾಕ್ಟರ್ ಶುರು ಮಾಡಿದ್ದರು. ಇದೀಗ ಅಪ್ಪ- ಮಕ್ಕಳ ಜೊತೆಗೆ ಮೊಮ್ಮಕ್ಕಳೂ ಕೂಡ ರಾಜ್ಯ ದೋಚಲು ನಿಂತಿದ್ದಾರೆ ಎಂದು ಸಚಿವ ಮಾಧುಸ್ವಾಮಿ (Madhuswamy) ದೇವೇಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು.
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತಿಘಟ್ಟದಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ, ಪಂಚರತ್ನ ಯಾತ್ರೆಯಲ್ಲಿ ತಾಲ್ಲೂಕು ಅಭಿವೃದ್ಧಿಯಾಗಿಲ್ಲ. ನಾನು ಅಭಿವೃದ್ಧಿ ಆಗಿದ್ದೇನೆ ಎಂದು ಕುಮಾರಸ್ವಾಮಿ (Kumaraswamy) ಹೇಳಿದ್ದಾರೆ. ಆದರೆ ನನಗೇನೂ ಆಸ್ತಿ ಕೊರತೆ ಇರಲಿಲ್ಲ. ನಮ್ಮಪ್ಪ ಚೆನ್ನಾಗಿ ಇಟ್ಟಿದ್ದ. ನಮ್ಮಪ್ಪ, ನಮ್ಮಜ್ಜ ಚೆನ್ನಾಗಿಯೇ ಬಾಳಿದವರು. ಇವರಂತೆ ದೋಚಿದ್ದು, ಬಾಚಿದ್ದ ಪ್ರಕರಣಗಳು ಇಲ್ಲ ಎಂದು ದೂರಿದರು. ಇದನ್ನೂ ಓದಿ: ನಾವೆಲ್ಲಾ ಮೂಕ ಪ್ರೇಕ್ಷಕರಾಗಿರೋದು ನಮ್ಮ ದೌರ್ಭಾಗ್ಯ – ಬಿಜೆಪಿಯ ದೌರ್ಬಲ್ಯ ಹೇಳಿಕೊಂಡ ಮಾಧುಸ್ವಾಮಿ
ಹಿಂದೆ 50 ರೂಪಾಯಿಗೆ ದೇವೇಗೌಡರು ಕಂಟ್ರಾಕ್ಟರ್ ಶುರು ಮಾಡಿದ್ದರು. ಇದೀಗ ಅಪ್ಪ-ಮಕ್ಕಳು ಅಲ್ಲದೇ ಮೊಮ್ಮಕ್ಕಳೂ ಕೂಡ ದೋಚೋದಕ್ಕೆ ಹೊರಟಿದ್ದಾರೆ ಎಂದು ತಿರುಗೇಟು ನೀಡಿದರು.
ದೇವೇಗೌಡರು ತುಮಕೂರಿಗೆ ಹೇಮಾವತಿ ನೀರನ್ನು (Hemavathi Water) ಕೊಡದೇ ಮೋಸ ಮಾಡಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರ ಹೇಳಿಕೆಯ ಹಳೆಯ ಪೇಪರ್ ಕಟಿಂಗ್ಸ್ ತೋರಿಸಿದೆ. ಹಾಗಾಗಿಯೇ ಜಿಲ್ಲೆಯ ಜನರು ದೇವೇಗೌಡರನ್ನು ಸೋಲಿಸಿದರು. ಇಷ್ಟೆಲ್ಲಾ ಮಾಡಿಯೂ ಕುಮಾರಸ್ವಾಮಿ ಅವರು ಚಿಕ್ಕನಾಯಕನಹಳ್ಳಿಗೆ ಪ್ರವಾಸ ಹಾಕ್ತಾರೆ. ಮಾನ-ಮರ್ಯಾದೆ ಇದ್ದವರು ಯಾರಾದರೂ ಚಿಕ್ಕನಾಯಕನಹಳ್ಳಿಗೆ ಬರುತ್ತಾರಾ ಎಂದು ಪ್ರಶ್ನಿಸಿದರು.
ನನಗೆ ಮಾಜಿ ಶಾಸಕ ಸುರೇಶ್ ಬಾಬು ಸರಿ-ಸಮಾನನಲ್ಲ. ನನಗೆ ಸಮಬಲನಾಗಿ ಇರುವ ವ್ಯಕ್ತಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ಅವರನ್ನೇ ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಬಂದು ಸ್ವರ್ಧೆ ಮಾಡಿ ಅಂತಾ ಕೇಳಿದ್ದೇನೆ. ಆಗ ಸಮಬಲದ ಹೋರಾಟ ನಡೆಯುತ್ತದೆ. ಇಬ್ಬರ ಹೋರಾಟಕ್ಕೆ ಗೌರವ ಇರುತ್ತದೆ ಎಂದು ಅಭಿಪ್ರಾಯಪಟ್ಟರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k