– 50 ಸಾವಿರ ಮತಗಳ ಅಂತರದಿಂದ ಗೆಲ್ತೀನಿ
ಶಿವಮೊಗ್ಗ: ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳುವ ದಾರುಣ ಪರಿಸ್ಥಿತಿ ನನಗಾಗಲಿ, ನಮ್ಮ ತಂದೆ ಬಿಎಸ್ ಯಡಿಯೂರಪ್ಪ (BS Yediyurappa) ಅವರಿಗಾಗಲಿ ಹಾಗೂ ಅವರ ಕುಟುಂಬದವರಿಗಾಗಲಿ ಬಂದಿಲ್ಲ ಎಂದು ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.
ಶಿವಮೊಗ್ಗದ (Shivamogga) ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಅವರು, 2004ರ ಚುನಾವಣೆ ಸಂದರ್ಭದಲ್ಲಿ ಯಾರು ಅಭ್ಯರ್ಥಿಯೆಂಬುದೇ ಗೊತ್ತಿರಲಿಲ್ಲ. ಅಂತಹ ಸಂದರ್ಭದಲ್ಲಿ ನಮ್ಮ ಶಿಕಾರಿಪುರದ (Shikaripura) ಸ್ವಾಭಿಮಾನಿ ಮತದಾರರು ಸುಮಾರು 46,000ಕ್ಕೂ ಅಧಿಕ ಮತಗಳ ಅಂತರದಿಂದ ಬಿಎಸ್ ಯಡಿಯೂರಪ್ಪ ಅವರನ್ನು ವಿಜಯಿಶಾಲಿಯನ್ನಾಗಿ ಮಾಡಿದ್ದರು. ನಾನು ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ.
- Advertisement
- Advertisement
ಉಪಚುನಾವಣೆ ನಡೆದ ಸಂದರ್ಭದಲ್ಲಿ ಬಿವೈ ರಾಘವೇಂದ್ರ ಸ್ಪರ್ಧೆ ಮಾಡಿದ್ದರು. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಸರ್ಕಾರದ ಇಡೀ ಕ್ಯಾಬಿನೆಟ್ ಶಿಕಾರಿಪುರಕ್ಕೆ ಬಂದು ತಾಲೂಕಿನಾದ್ಯಂತ ಪ್ರಚಾರ ಮಾಡಿತ್ತು. ಶಿಕಾರಿಪುರದಲ್ಲಿ ಹಣ, ಹೆಂಡದ ಹೊಳೆ ಹರಿಸಿದ್ದರೂ ಅದ್ಯಾವುದಕ್ಕೂ ಬೆಲೆ ಕೊಡದೆ ಕ್ಷೇತ್ರದ ಮತದಾರರು ರಾಘವೇಂದ್ರ ಅವರಿಗೆ ಆಶೀರ್ವಾದ ಮಾಡಿದ್ದರು. ಹೀಗಾಗಿ ಹೊಂದಾಣಿಕೆ ರಾಜಕೀಯದ ಪ್ರಶ್ನೆಯೇ ಉದ್ಭವಿಸಲ್ಲ. ಪಕ್ಷದ ಸಂಘಟನೆ, ಕಾರ್ಯಕರ್ತರ ಪರಿಶ್ರಮ, ಅಭಿವೃದ್ಧಿ ಕೆಲಸವೇ ನಮಗೆ ಶ್ರೀರಕ್ಷೆಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಳಗಾವಿ ರಣಕಣದಲ್ಲಿ ಮಹಾರಾಷ್ಟ್ರ ನಾಯಕರಿಂದ ಮತಯಾಚನೆ!
ಇಲ್ಲಿಯವರೆಗೆ ಶಿಕಾರಿಪುರ ಬಿಎಸ್ ಯಡಿಯೂರಪ್ಪ ಅವರ ಕರ್ಮಭೂಮಿಯಾಗಿತ್ತು. ಇದು ನನ್ನ ಜನ್ಮಭೂಮಿ ಕೂಡ. ಇನ್ನು ನಾನು ಸಹ ಕರ್ಮಭೂಮಿಯನ್ನಾಗಿ ಮಾಡಿಕೊಳ್ಳುತ್ತಿದ್ದೇನೆ. ಶಿಕಾರಿಪುರದಲ್ಲಿ ಎಲ್ಲಾ ಬೂತ್ಗಳಿಗೆ ಈಗಾಗಲೇ 3 ಬಾರಿ ಭೇಟಿ ಕೊಟ್ಟು ಮತಯಾಚಿಸಲಾಗಿದೆ. ಕಾರ್ಯಕರ್ತರು ರಣೋತ್ಸಾಹದಲ್ಲಿ ಕೆಲಸ ಮಾಡುತ್ತಿದ್ದಾರೆ. ಉತ್ತಮ ಸಂಘಟನೆ ಇದೆ. ನಿರಂತರ ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ತನ್ನ ಗೆಲುವು ಸುಲಭವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಂಜಾರರ ಮೀಸಲಾತಿ ವಿಷಯವನ್ನು ಇಟ್ಟುಕೊಂಡು ಕೆಲವರು ಅವರಲ್ಲೇ ಒಡಕು ಸೃಷ್ಟಿಸಲು ಯತ್ನಿಸಿದರು. ಯಡಿಯೂರಪ್ಪ ಅವರಿಗೆ ತೊಂದರೆ ಕೊಡಬೇಕೆಂಬ ಉದ್ದೇಶದಿಂದ ಅವರ ಮನೆಗೆ ಕಲ್ಲು ಹೊಡೆಸಿದರು. ಆದರೆ ಇದರಿಂದ ಅವರ ಉದ್ದೇಶ ಈಡೇರಲಿಲ್ಲ. ವಿಷ ಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ ನಡೆಯಲ್ಲಿಲ್ಲ. ಬಂಜಾರರು ಬಿಜೆಪಿ ಪರವಿದ್ದಾರೆ ಎಂದರು. ಇದನ್ನೂ ಓದಿ: ಮೋದಿ ಬೆಂಗಳೂರು ರೋಡ್ ಶೋನಲ್ಲಿ ಬದಲಾವಣೆ – ಶನಿವಾರ, ಭಾನುವಾರ ಎರಡು ದಿನ ಮತ ಬೇಟೆ