ಮಡಿಕೇರಿ: ಪ್ರತಾಪ್ ಸಿಂಹ (Prathap Simha) ಮುಂದೆ ಯಾವ ಸ್ಟಾರ್ ಪ್ರಚಾರಕರೂ ಇಲ್ಲ. ವರುಣಾ (Varuna) ಕ್ಷೇತ್ರಕ್ಕೆ ರಮ್ಯಾ ಮತ್ತು ದುನಿಯಾ ವಿಜಿ ಬರಲಿ. ನಾನು ಬರುತ್ತೇನೆ. ಯಾರಿಗೆ ಜೈಕಾರ ಹಾಕುತ್ತಾರೆ ಎನ್ನುವುದನ್ನು ನೋಡಲಿ ಎಂದು ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯಗೆ (Siddaramaiah) ಟಾಂಗ್ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ (D.K.Shivakumar) ಹಾಗೂ ಸಿದ್ದರಾಮಯ್ಯ ಪರ ದುನಿಯಾ ವಿಜಯ್ ಮತ್ತು ರಮ್ಯಾ ಪ್ರಚಾರದ ವಿಚಾರವಾಗಿ ಕೊಡಗಿನ (Kodagu) ಸೋಮವಾರಪೇಟೆಯಲ್ಲಿ (Somwarpet) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ (MallikarjunKharge) ಬಂದಿದ್ದಾರಾ? ಅವರು ಮೈಸೂರಿಗೆ (Mysuru) ಬಂದು ಕ್ಯಾಂಪೇನ್ ಮಾಡಿ ಅಲ್ಲಿಂದ ಹಾಗೆ ಹೋಗುತ್ತಾರೆ. ಖರ್ಗೆಯವರನ್ನು ರಾಜಕೀಯವಾಗಿ ಮುಗಿಸಲು ಸಿದ್ದರಾಮಯ್ಯ ಮುಂದಾಗಿದ್ದರು. ಹಾಗೆಯೇ ಕೊರಟಗೆರೆಯಲ್ಲಿ 2013ರಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿ ಒಬ್ಬ ದಲಿತ ನಾಯಕನ್ನು ಮುಗಿಸುತ್ತಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮೇ 13ಕ್ಕೆ ಸಿದ್ದರಾಮಯ್ಯ ಸೋಲಿನ ಜೊತೆಗೆ ಮುಸ್ಲಿಮ್ ಓಲೈಕೆ ಅಂತ್ಯ : ಪ್ರತಾಪ್ ಸಿಂಹ
ಡಿ.ಕೆ.ಶಿವಕುಮಾರ್ ಅವರು ಸಹಾ ಮೈಸೂರಿಗೆ ಬರುತ್ತಾರೆ ಆದರೆ ವರುಣಾ ಕ್ಷೇತ್ರಕ್ಕೆ ಹೋಗುವುದಿಲ್ಲ. ಯಾಕೆಂದರೆ ಸಿದ್ದರಾಮಯ್ಯ ಒಬ್ಬ ಜಾತಿವಾದಿ. ಅದಕ್ಕೆ ಕೆ.ಹೆಚ್.ಮುನಿಯಪ್ಪ, ಆಂಜನೇಯ ಸೇರಿದಂತೆ ಯಾರೂ ವರುಣಾದತ್ತ ಬರೋದಿಲ್ಲ. ಸಿದ್ದರಾಮಯ್ಯ ಮುಸ್ಲಿಂ ಅವರ ಓಲೈಕೆ ಮಾಡುವುದು ಬಿಟ್ಟರೆ ಬೇರೆ ಯಾವುದೇ ಕಾಳಜಿ ಇಲ್ಲ. ಅದು ಅವರ ಪಕ್ಷದವರಿಗೂ ಗೊತ್ತು. ಹಾಗಾಗಿ ದುನಿಯಾ ವಿಜಿ ಮತ್ತು ರಮ್ಯಾ ಬರೋದಕ್ಕೂ ಖರ್ಗೆ, ಪರಮೇಶ್ವರ್ ಅವರು ಬರೋದಕ್ಕೂ ಇರುವ ವ್ಯತ್ಯಾಸ ಎಲ್ಲರಿಗೂ ಗೊತ್ತಾಗುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ವಿನಾಶದ ಅಂಚಿನಲ್ಲಿ ಕಾಂಗ್ರೆಸ್ – ಪ್ರಿಯಾಂಕಾ, ರಾಹುಲ್ ಗಾಂಧಿ ಹೋದಲ್ಲೆಲ್ಲಾ ಅವರಿಗೆ ಸೋಲೇ: ಅರುಣ್ ಸಿಂಗ್
ವರುಣಾ ಕ್ಷೇತ್ರದಲ್ಲಿ ಸೋಮಣ್ಣಗೆ ಜೈಕಾರ ಹಾಕುತ್ತಾರಾ ಅಥವಾ ಸಿದ್ದರಾಮಯ್ಯಗೆ ಜೈಕಾರ ಹಾಕುತ್ತಾರಾ ಎಂಬುದು ನಿಮಗೆ ಗೊತ್ತಾಗುತ್ತದೆ. ವರುಣಾಕ್ಷೇತ್ರದಲ್ಲಿ ಈಗಾಗಲೇ ಒಂದು ಘೋಷವಾಕ್ಯವನ್ನು ಎಲ್ಲರೂ ಹೇಳುತ್ತಿದ್ದಾರೆ. ಸೋಮಣ್ಣಗೆ ವೋಟು, ಸಿದ್ದರಾಮಯ್ಯಗೆ ಏಟು ಎಂದು ಜನಗಳೇ ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಅಭಿಮಾನಿ ಬಳಗವೇ ನಮ್ಮ ಆನೆ ಬಲ – ಬಿಜೆಪಿ ಅಭ್ಯರ್ಥಿ ಗೆಲ್ಲಿಸುವಂತೆ ಕಿಚ್ಚ ಸುದೀಪ್ ಮನವಿ