Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷಗಳು ನಾನಾರೀತಿಯ ನಾಟಕಗಳನ್ನು ಮಾಡುತ್ತಿದೆ: ಮುನಿರತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷಗಳು ನಾನಾರೀತಿಯ ನಾಟಕಗಳನ್ನು ಮಾಡುತ್ತಿದೆ: ಮುನಿರತ್ನ

Bengaluru City

ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷಗಳು ನಾನಾರೀತಿಯ ನಾಟಕಗಳನ್ನು ಮಾಡುತ್ತಿದೆ: ಮುನಿರತ್ನ

Public TV
Last updated: April 29, 2023 4:02 pm
Public TV
Share
3 Min Read
MUNIRATHNA 2
SHARE

ಬೆಂಗಳೂರು: ಚುನಾವಣೆಯ (Election) ಸಂದರ್ಭದಲ್ಲಿ ವಿರೋಧ ಪಕ್ಷಗಳು ನಾನಾರೀತಿಯ ನಾಟಕಗಳನ್ನು ಮಾಡುತ್ತಿದೆ. ಆದರೆ ಈ ರೀತಿಯ ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನು ಮಾಡುತ್ತಿರುವ ಬಗ್ಗೆ ಯಾರೂ ಮಾತನಾಡುವುದಿಲ್ಲ. ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡಿರುವಂತಹ ಕಾರ್ಯಕ್ರಮ ಬಹುಷಃ ಇನ್ನೂ ಐವತ್ತು ವರ್ಷವಾದರೂ ಯಾರೂ ಆ ಮಟ್ಟಕ್ಕೆ ತಲುಪಲು ಆಗುವುದಿಲ್ಲ. ಅಷ್ಟು ಕೆಲಸವನ್ನು ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಸಚಿವ ಮುನಿರತ್ನ (Munirathna) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ (Bengaluru) ಅಂಜನಾ ನಗರದಲ್ಲಿರುವ ಎಸ್‌ಟಿ ಸೋಮಶೇಖರ್ (S.T.Somashekar) ಅವರ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪ್ರಧಾನ ಮಂತ್ರಿಗಳು ಶನಿವಾರ 9 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ರೋಡ್ ಶೋ ನಡೆಸಲಿದ್ದಾರೆ. ಅದರಲ್ಲಿ ಬಹಳ ಪ್ರಮುಖವಾಗಿ ಯಶವಂತಪುರ, ರಾಜರಾಜೇಶ್ವರಿ, ಮಹಾಲಕ್ಷ್ಮಿಪುರಂ ಹಾಗೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಜನತೆಗೆ ನಮ್ಮ ಮೆಟ್ರೋ ಮೂಲಕ ಪ್ರಧಾನಿ ಮೋದಿಯವರು ಬಹಳ ದೊಡ್ಡ ಕೊಡುಗೆಯನ್ನು ಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಹೆಚ್.ವಿಶ್ವನಾಥ್

ST SOMASHEKAR MUNIRATHNA K GOPALAIAH

ಶನಿವಾರ ರೋಡ್ ಶೋ (Road Show) ಮಾಡುತ್ತಿರುವ ಭಾಗದಲ್ಲಿ ಮೆಟ್ರೋಗೆ ಅನುಮೋದನೆ ನೀಡುತ್ತಿದ್ದಾರೆ. ಸುಂಕದಕಟ್ಟೆಯಿಂದ ನೈಸ್ ರಿಂಗ್ ರಸ್ತೆವರೆಗೂ 11 ಕಿಲೋಮೀಟರ್ ಈಗಾಗಲೇ ಮೆಟ್ರೋ ಟಿಪಿಆರ್ ಅನುಮೋದನೆಯಾಗಿದೆ. ಇಂದು ಅದೇ ಭಾಗದಲ್ಲಿ ಮೋದಿ ರೋಡ್ ಶೋ ಮಾಡುತ್ತಿದ್ದಾರೆ. ಬಹಳ ಪ್ರಮುಖವಾಗಿ ಬಡವರು, ಮಧ್ಯಮ ವರ್ಗ ಹಾಗೂ ಕಾರ್ಖಾನೆಗಳಿರುವಂತಹ ಪಶ್ಚಿಮ ಭಾಗಕ್ಕೆ ಅನುಕೂಲವನ್ನು ಮಾಡಿಕೊಟ್ಟಿದ್ದಾರೆ. ಇಲ್ಲಿಯವರೆಗೂ ಪೂರ್ವ ಭಾಗಕ್ಕೆ ಅತಿಹೆಚ್ಚು ಮೆಟ್ರೋ ಸೇವೆಗಳಿದ್ದವು. ಈ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಅನುಕೂಲ ಮಾಡಿಕೊಟ್ಟಂತಹ ಮೋದಿಯವರು (Narendra Modi) ಆಗಮಿಸುತ್ತಿರುವುದು ಬಹಳ ಸಂತೋಷದ ವಿಚಾರ ಎಂದು ಹೇಳಿದರು. ಇದನ್ನೂ ಓದಿ: ಪ್ರಧಾನಿ ಮೋದಿ ಕಾಳಿಂಗ ಸರ್ಪ – ಸುಧಾಕರ್

ಪ್ರಧಾನ ಮಂತ್ರಿಗಳು ಇವತ್ತು ಬರುತ್ತಿರುವುದರಿಂದ 4 ವಿಧಾನಸಭಾ ಕ್ಷೇತ್ರದ ಎಲ್ಲಾ ಮತದಾರರಿಗೆ ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳನ್ನು ನೋಡುವ ಭಾಗ್ಯ ಎಲ್ಲರಿಗೂ ಸಿಕ್ಕಿದೆ. ಈ ರೋಡ್ ಶೋ ಅನ್ನು ಹತ್ತಿರದಿಂದ ಕಣ್ತುಂಬಿಕೊಳ್ಳಬಹುದು. ಸಾಮಾನ್ಯವಾಗಿ ಪ್ರಧಾನ ಮಂತ್ರಿಗಳನ್ನು ನೋಡುವುದು ಕಷ್ಟ. ಇವತ್ತು ಸಾಮಾನ್ಯ ವ್ಯಕ್ತಿ ಕೂಡಾ ಪ್ರಧಾನ ಮಂತ್ರಿಯವರನ್ನು ನೋಡಬಹುದು. ನಮ್ಮ ದೇಶ ಬಹಳ ಮುಂದುವರೆಯುತ್ತಿದೆ. ತಾವೆಲ್ಲರೂ ಬಿಜೆಪಿಗೆ (BJP) ಬೆಂಬಲ ಕೊಟ್ಟು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಪರಮೇಶ್ವರ್ ಮೇಲೆ ಕಲ್ಲು ತೂರಾಟ ಖಂಡನೀಯ: ಯಡಿಯೂರಪ್ಪ ಕಿಡಿ

ಬಳಿಕ ಮಾತನಾಡಿದ ಎಸ್‌ಟಿ ಸೋಮಶೇಖರ್, ಬೆಂಗಳೂರು ಜನತೆಯ ಪರವಾಗಿ ಪ್ರಧಾನಿ ಮೋದಿಯವರಿಗೆ ಸ್ವಾಗತವನ್ನು ಕೋರುತ್ತೇವೆ. ಶನಿವಾರ 6 ಗಂಟೆ 14 ನಿಮಿಷಕ್ಕೆ ಮೋದಿಯವರು ರೋಡ್ ಶೋ ನಡೆಸಲಿದ್ದಾರೆ. ಇದರಲ್ಲಿ 9 ಕ್ಷೇತ್ರದ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಅಲ್ಲದೇ ನಾಲ್ಕು ವಿಧಾನ ಸಭಾ ಕ್ಷೇತ್ರಗಳು ಈ ರೋಡ್ ಶೋಗೆ ಬರಲಿದೆ. ಮೋದಿ ಎರಡನೇ ಬಾರಿಗೆ ನಮ್ಮ ಕ್ಷೇತ್ರದ ಕಡೆಗೆ ಬರುತ್ತಿದ್ದಾರೆ. ಶನಿವಾರ ನಡೆಯಲಿರುವ ರೋಡ್ ಶೋದಲ್ಲಿ ಎಲ್ಲರೂ ಭಾಗವಹಿಸುವಂತೆ ಮನವಿ ಮಾಡಲಾಗಿದೆ. ವಿಶ್ವವಿಖ್ಯಾತ ಪ್ರಧಾನಿಯನ್ನು ಹತ್ತಿರದಿಂದ ನೋಡಿ ಕಣ್ತುಂಬಿಕೊಳ್ಳುವ ಅವಕಾಶ ಎಲ್ಲರಿಗೂ ದೊರತಿದೆ. ಪ್ರಧಾನಿ ಒಮ್ಮೆ ಬಂದು ಹೋದರೆ ನಾವು ಯಾರೂ ಕೂಡಾ ಪ್ರಚಾರ ಮಾಡದೇ ಹೋದರೂ ಗೆಲ್ಲುತ್ತೇವೆ ಎಂದರು. ಇದನ್ನೂ ಓದಿ: ಅರ್ಧಕ್ಕೆ ರೋಡ್ ಶೋ ಮುಗಿಸಿ ಹೊರಟ ಅಮಿತ್ ಶಾ

ನಂತರ ಮಾನಾಡಿದ ಸಚಿವ ಗೋಪಾಲಯ್ಯ (K.Gopalaiah), ವಿಶ್ವನಾಯಕ ಪ್ರಧಾನಿಯನ್ನು ನಾನು ಸಂತೋಷವಾಗಿ ಸ್ವಾಗತ ಮಾಡುತ್ತೇನೆ. ಪ್ರಧಾನಿ ಒಂದು ಸ್ಥಳಕ್ಕೆ ಬಂದು ಹೋದರೆ ಅಭಿವೃದ್ಧಿ ಮಾಡುತ್ತಾರೆ. ಥರ್ಡ್ ಪೇಸ್ ಮೆಟ್ರೋಗೆ ಮೋದಿ ಅನುಮೋದನೆ ಕೊಟ್ಟಿದ್ದಾರೆ. ಅಲ್ಲದೇ 142 ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿಕೊಡುವಂತೆ ಕೇಳಿಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸೋನಿಯಾ, ರಾಹುಲ್ ಗಾಂಧಿ ಹೇಳಿಕೊಟ್ಟಂತೆ ಖರ್ಗೆ ಮಾತಾಡಿದ್ದಾರೆ: ಜೆ.ಪಿ ನಡ್ಡಾ

TAGGED:bengaluruelectionK. GopalaiahMunirathnanarendra modiRoad Shows.t.somashekarಎಸ್‍ಟಿ ಸೋಮಶೇಖರ್ಗೋಪಾಲಯ್ಯಚುನಾವಣೆನರೇಂದ್ರ ಮೋದಿಬೆಂಗಳೂರುಮುನಿರತ್ನರೋಡ್ ಶೋ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Om Birla
Latest

ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ

Public TV
By Public TV
7 minutes ago
Supreme Court 1
Court

ಎಸ್‌ಐಆರ್‌ ಪ್ರಕ್ರಿಯೆಗೆ ಅಡ್ಡಿಪಡಿಸಲಾಗುವುದಿಲ್ಲ: ರಾಜ್ಯಗಳಿಗೆ ‘ಸುಪ್ರೀಂ’ ಸ್ಪಷ್ಟ ಸಂದೇಶ

Public TV
By Public TV
14 minutes ago
mekedatu 1
Bengaluru City

ಸಂಗಮ ಕೆಳಭಾಗದಲ್ಲಿ ಮೇಕೆದಾಟು ಡ್ಯಾಂಗೆ ಸ್ಥಳ ನಿಗದಿ – ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
30 minutes ago
Student Kills Girl Then Shoots Himself In 3 Second Classroom Horror
Crime

ಕ್ಲಾಸ್‌ ರೂಮ್‌ನಲ್ಲೇ ಯುವತಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

Public TV
By Public TV
38 minutes ago
KL Rahul
Cricket

ಆಪತ್ಬಾಂಧವ ಕೆ.ಎಲ್‌ ರಾಹುಲ್ ಅದ್ಭುತ ಶತಕ – ರಣಜಿ ಸೆಮಿಫೈನಲ್‌ಗೆ ಕರ್ನಾಟಕ

Public TV
By Public TV
60 minutes ago
rcb g.parameshwara
Bengaluru City

ಬೆಂಗಳೂರಿನಲ್ಲಿ RCB ಪಂದ್ಯ ನಡೆಸಲು ಮುಂದುವರಿದ ಕೆಎಸ್‌ಸಿಎ ಕಸರತ್ತು; ಪರಮೇಶ್ವರ್ ಭೇಟಿ ಮಾಡಿದ ಕೆಎಸ್‌ಸಿಎ, ಆರ್‌ಸಿಬಿ ನಿಯೋಗ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?