Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಬಿಜೆಪಿ ಪ್ರಣಾಳಿಕೆಯಲ್ಲಿ ಪಂಚರತ್ನ ಯೋಜನೆ ನಕಲು ಮಾಡಿದ್ದಾರೆ: ಕುಮಾರಸ್ವಾಮಿ

Public TV
Last updated: May 2, 2023 4:40 pm
Public TV
Share
3 Min Read
HD KUMARASWAMY 1
SHARE

ರಾಯಚೂರು: ಬಿಜೆಪಿಯವರು (BJP) ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ (Manifesto) ಪಂಚರತ್ನ ವಿಷಯಗಳನ್ನು ನಕಲು ಮಾಡಿದ್ದಾರೆ. ನಮ್ಮ ಹಲವು ಯೋಜನೆಗಳನ್ನು ಬಿಜೆಪಿಯವರು ಕಾಪಿ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಆರೋಪಿಸಿದ್ದಾರೆ.

ರಾಯಚೂರಿನಲ್ಲಿ (Raichur) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್ ಮಾದರಿಯ ನೀರಾವರಿ ಯೋಜನೆ ಸಮ್ಮಿಶ್ರ ಸರ್ಕಾರದ ಯೋಜನೆ. ಈಗ ಅದನ್ನು ಬಿಜೆಪಿಯವರು ನಕಲು ಮಾಡಿದ್ದಾರೆ. ಮೂರು ಸಿಲಿಂಡರ್ ಕೊಡುತ್ತೇವೆ ಎನ್ನುತ್ತಾರೆ. ಅದರಿಂದ ಏನು ಉಪಯೋಗ? ಬಿಜೆಪಿಯವರು ಸಿಲಿಂಡರ್ ರೇಟ್ ನೆನಪಿಸಲು ಕೊಡುತ್ತಾರಾ? ಸರ್ಕಾರ ಇದ್ದಾಗಲೇ ಸಿಲಿಂಡರ್ ಕೊಡಬಹುದಿತ್ತು. ದಸರಾ ದೀಪಾವಳಿ ಗಣೇಶ ಹಬ್ಬಕ್ಕೊಂದು ಸಿಲಿಂಡರ್ ಕೊಡುತ್ತಾರ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ತಂದೆ-ಮಗ ಆಯ್ತು, ಇದೀಗ ಅವರ ಮಗ: ರಾಮನಗರದಲ್ಲಿ ಸುಮಲತಾ ವಾಗ್ದಾಳಿ

Congress BJP JDS

ಕುಮಾರಸ್ವಾಮಿ ಸಾಲಮನ್ನಾ ಮಾಡಲಿಲ್ಲ ಎಂದು ಕಾಂಗ್ರೆಸ್ (Congress) ನಾಯಕರು ಹೇಳುತ್ತಾರೆ. ಸಿದ್ದರಾಮಯ್ಯ (Siddaramaiah) ಅವರಿಗೆ ಬಿಡುವಿಲ್ಲದ ಕಾರ್ಯಕ್ರಮದಲ್ಲಿ ನೆನೆಪಿನ ಶಕ್ತಿ ಕಡಿಮೆಯಾಗಿದ್ದರೆ ನಾನೇ ನೆನಪು ಮಾಡುತ್ತೇನೆ. ಎರಡು ಸಾರಿ ಸಾಲಮನ್ನಾ ಮಾಡಿದ್ದು ಜೆಡಿಎಸ್ (JDS) ಸರ್ಕಾರ. 75 ವರ್ಷ ಆಡಳಿತ ಮಾಡಿದವರು ಈಗ ನಿರುದ್ಯೋಗ ಭತ್ಯೆ ಕೊಡುತ್ತೇನೆ ಎನ್ನುತ್ತಿದ್ದಾರೆ. ಎಷ್ಟು ಜನರಿಗೆ ನಿರುದ್ಯೋಗ ಭತ್ಯೆ ಕೊಡುತ್ತೀರಿ? ಅದನ್ನು ನಿಮ್ಮ ಅವಧಿಯಲ್ಲಿ ಯಾಕೆ ಕೊಡಲಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗರು ವೋಟ್‌ ಕೇಳೋಕೆ ಬಂದ್ರೆ ʻನಾಯಿ ಬಿಡ್ತೀವಿʼ ಭಜರಂಗದಳ ಎಚ್ಚರಿಕೆ

ಹಲವಾರು ವರ್ಗದ ಜನರಿಗೆ ನೀವು ಇನ್ನೂ ಕೈಒಡ್ಡುವ ಸ್ಥಿತಿಯಲ್ಲಿದ್ದೀರಿ ಎಂದು ಎರಡು ರಾಷ್ಟ್ರೀಯ ಪಕ್ಷಗಳು ಹೇಳುತ್ತಿವೆ. ಜಿಎಸ್‌ಟಿ (GST) ಸಂಗ್ರಹದ ದುಡ್ಡು ಎಲ್ಲಿ? ಯಾವ ಕಂಪನಿಗೆ ಹೋಗುತ್ತಿದೆ? ಬಡವರ ಪರಸ್ಥಿತಿ ಸುಧಾರಣೆಗೆ ಬಂಡವಾಳ ಹಾಕುತ್ತಿದ್ದಿರೋ ಅಥವಾ ನಾಲ್ಕೈದು ಕಂಪನಿಯ ಅಭಿವೃದ್ಧಿಗೆ ಹಾಕ್ತಿರಾ? ಮೂರುವರೆ ವರ್ಷದಲ್ಲಿ ಬಿಜೆಪಿ ಸರ್ಕಾರ ಏನು ಮಾಡಿದೆ? ನಮ್ಮ ಆಡಳಿತ ಅವಧಿ ಬಗ್ಗೆ ಚರ್ಚೆ ಮಾಡುವ ನೈತಿಕತೆ ಯಾರೂ ಉಳಿಸಿಕೊಂಡಿಲ್ಲ. ಎರಡೂ ಪಕ್ಷ ಹಣದಲ್ಲಿ ಏನಾದರೂ ಕೊಂಡುಕೊಳ್ಳುತ್ತೇವೆ ಎಂದು ತಿಳಿದಿದ್ದಾರೆ. ನಮ್ಮ ಪಂಚರತ್ನ ಕಾರ್ಯಕ್ರಮಕ್ಕೂ ಇವರ ಕಾರ್ಯಕ್ರಮಕ್ಕೂ ಬಹಳ ವ್ಯತ್ಯಾಸವಿದೆ ಎಂದರು. ಇದನ್ನೂ ಓದಿ: ಅಂಬರೀಶ್ ಅಂತಿಮ ದರ್ಶನ ಪಡೆಯಲು ಬರದಿದ್ದಕ್ಕೆ ರಮ್ಯಾ ಮೊದಲ ಪ್ರತಿಕ್ರಿಯೆ

HD Kumaraswamy

ಜೆ.ಪಿ.ನಡ್ಡಾ (J.P.Nadda) ಜೆಡಿಎಸ್‌ಗೆ ವೋಟು ಹಾಕಬೇಡಿ 10ರಿಂದ 15 ಸೀಟು ಬರುತ್ತೆ ಅಷ್ಟೇ ಎಂದಿದ್ದಾರೆ. ಬಿಜೆಪಿ ಆ ಸ್ಥಿತಿಗೆ ಬಂದರೂ ಅಚ್ಚರಿಯಿಲ್ಲ. ರಾಜ್ಯದಲ್ಲಿ 50ರಿಂದ 60 ಸಿಟಿಗಾಗಿ ಬಿಜೆಪಿ ಬೆವರಳಿಸುತ್ತೆ ನೋಡುತ್ತಿರಿ. ಉತ್ತರ ಕರ್ನಾಟಕದಲ್ಲಿ ಕನಿಷ್ಠ 30ರಿಂದ 35 ಸ್ಥಾನ ಜೆಡಿಎಸ್ ಪಡೆಯುತ್ತದೆ. ನಾವು ಕಾಂಗ್ರೆಸ್ ಅಥವಾ ಬಿಜೆಪಿ ಬಿ ಟೀಮ್ ಅಲ್ಲ. ನಾವು ಯಾರ ಬಿ ಟೀಮ್ ಅಲ್ಲ. ನಾವು ರಾಜ್ಯದ ಜನರ ಅಭಿವೃದ್ಧಿಯ ಬಿ ಟೀಮ್. ಸಿದ್ದರಾಮಯ್ಯ ಜೆಡಿಎಸ್‌ಗೆ ಸಿದ್ದಾಂತವಿಲ್ಲ ಎನ್ನುತ್ತಾರೆ. ನಮಗೆ ಸಿದ್ಧಾಂತವಿಲ್ಲ ಎನ್ನೋದಾದರೆ 2018ರ ಚುನಾವಣೆ ಬಳಿಕ ಜೆಡಿಎಸ್ ಮನೆಬಾಗಿಲಿಗೆ ಯಾಕೆ ಬಂದಿರೀ? ಸಿದ್ದರಾಮಯ್ಯನವರಿಗೆ ಕೇಳುತ್ತೆವೆ ನಿಮ್ಮದು ಯಾವ ಸಿದ್ದಾಂತವಿದೆ ಹೇಳಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪಂಚಮಸಾಲಿ ಮಠಕ್ಕೆ ರಾಹುಲ್ ಗಾಂಧಿ ಭೇಟಿ

ಚುನಾವಣೆ ಹತ್ತಿರವಾಗುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸಿ ಈಗ ಜನರ ಬಗ್ಗೆ ಕಾಳಜಿ ತೋರಿಸುತ್ತಿವೆ. ಪ್ರಧಾನಿ, ಗೃಹ ಸಚಿವರು ಇಲ್ಲೇ ಠಿಕಾಣಿ ಹೂಡಿದ್ದಾರೆ. ರಾಜ್ಯ ಬಿಟ್ಟು ಹೋಗಿಲ್ಲ. ಅಧಿಕಾರದಲ್ಲಿದ್ದವರು ದೇಶ, ರಾಜ್ಯದ ವಿಷಯ ಬೇಡ ರಾಯಚೂರು ಜಿಲ್ಲೆ ಜನ ಏನು ಬಯಸಿದ್ದರು ಅದರ ಒಂದು ಕಾರ್ಯಕ್ರಮವನ್ನಾದರೂ ಈಡೇರಿಸಿದ್ದಾರಾ ಎಂದು ಕೇಳಿದರು. ಇದನ್ನೂ ಓದಿ: ಹಿಂದೆ ರಾಮನನ್ನು ಬಂಧಿಸಿಟ್ಟಿತ್ತು, ಈಗ ಹನುಮಾನ್ ಜನ್ಮಸ್ಥಳದಲ್ಲೇ ಭಜರಂಗಬಲಿಯನ್ನು ಬಂಧಿಸಿಡಲು ಮುಂದಾಗಿದೆ: ಮೋದಿ ಕಿಡಿ

ಸಿಂಧನೂರಿಗೆ ಪ್ರಧಾನಿ ಮೋದಿ (Narendra Modi) ಬರುತ್ತಿದ್ದಾರೆ. ನೀವು ಜನತೆಯ ಕಷ್ಟವನ್ನು ಕೇಳಿದ್ದೀರಾ? ಬರ ಹಾಗೂ ಪ್ರವಾಹ ಬಂದಾಗ ಎಲ್ಲಿದ್ದಿರಿ? ಜನರ ಕಷ್ಟ ಭಾವನೆಗಳಿಗೆ ಕಿಂಚಿತ್ತು ಗೌರವ ಕೊಡದವರು ನೀವು. ಪರಿವಾರ , ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತೀರಿ. ಯಾವ ಪರಿವಾರದ ಬಗ್ಗೆ ನೀವು ಮಾತನಾಡುತ್ತೀರಿ. ಕೊಪ್ಪಳ (Koppal) ವಿಧಾನಸಭಾ ಕ್ಷೇತ್ರದಲ್ಲಿ ಪರಿವಾರಕ್ಕೆ ಟಿಕೆಟ್ ಕೊಟ್ಟಿದ್ದೀರಲ್ಲಾ. ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತೀರಿ. ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗುತ್ತಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: Sharad Pawar: ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ಶರದ್‌ ಪವಾರ್‌ ರಾಜೀನಾಮೆ

ರಾಜ್ಯದಲ್ಲಿ ಯಾವ ನೈತಿಕೆಯಿದೆ ನಿಮಗೆ? ಮೂರುವರೆ ವರ್ಷ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ಮಾತಾಡಲಿ ಅವರು. ರೈತರು ನೆಮ್ಮದಿಯಿಂದ ಬದುಕಿಲ್ಲ. ವಾಸಿಸಲು ಮನೆಯಿಲ್ಲ. ರಾಜ್ಯದಲ್ಲಿ ಈಗಲೂ ಜನ ಬಡತನ ರೇಖೆಗಿಂತ ಕೆಳಗಿದ್ದಾರೆ ಎಂದು ಕೇಂದ್ರದ ವರದಿಯೇ ಹೇಳುತ್ತದೆ. ಅಪೌಷ್ಟಿಕತೆಗೆ ಪರಿಹಾರ ಏನು ಕೊಟ್ಟಿದೀರಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪಿಎಫ್‌ಐ ಪ್ರಚೋದಿತ, ಮುಸ್ಲಿಂ ಮೂಲಭೂತವಾದಿಗಳು ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದಾರೆ: ಭಜರಂಗ ದಳ ನಿಷೇಧಕ್ಕೆ ಬಿಸ್ವಾ ಕಿಡಿ

TAGGED:bjpcongresselectionh d kumaraswamyjdsManifestoraichurಚುನಾವಣೆಜೆಡಿಎಸ್ನರೇಂದ್ರ ಮೋದಿಪ್ರಣಾಳಿಕೆಬಿಜೆಪಿರಾಯಚೂರುಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema News

Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood

You Might Also Like

Priyank Kharge 1
Latest

ಪ್ರಿಯಾಂಕ್ ಖರ್ಗೆ V/s ಆರ್‌.ಅಶೋಕ್‌ ಮಧ್ಯೆ ಟ್ವೀಟ್ ವಾರ್‌ – ವೈಯಕ್ತಿಕ ಮಟ್ಟಕ್ಕೆ ತಿರುಗಿದ ಫೈಟ್‌

Public TV
By Public TV
8 hours ago
Basanagouda Patil Yatnal
Districts

ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ: ಯತ್ನಾಳ್‌ ಘೋಷಣೆ

Public TV
By Public TV
9 hours ago
lemon butter cookies
Food

ಮನೆಯಲ್ಲೇ ಮಾಡಿ ರುಚಿಕರ ಲೆಮನ್ ಬಟರ್ ಕುಕ್ಕೀಸ್!

Public TV
By Public TV
9 hours ago
Public TV VidyaMandira
Bengaluru City

ವ್ಹೀಲ್‌ಚೇರ್‌ನಲ್ಲಿ ಪಬ್ಲಿಕ್‌ ಟಿವಿ ʻವಿದ್ಯಾಮಂದಿರʼಕ್ಕೆ ಬಂದು ಮಾಹಿತಿ ಪಡೆದ ವಿದ್ಯಾರ್ಥಿ

Public TV
By Public TV
10 hours ago
Kalaburagi 1
Bagalkot

ಕಾರು-ಬಸ್ ನಡ್ವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

Public TV
By Public TV
11 hours ago
Shivamogga Fire Accident
Crime

ಶಿವಮೊಗ್ಗ | ಆಟೋ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ – 2 ಕಾರು ಭಸ್ಮ

Public TV
By Public TV
11 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?