Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವನು ಯಾರೋ ಕೆಲಸಕ್ಕೆ ಬಾರದೇ ಇರೋ ಐಪಿಎಸ್ – ಅಣ್ಣಾಮಲೈ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅವನು ಯಾರೋ ಕೆಲಸಕ್ಕೆ ಬಾರದೇ ಇರೋ ಐಪಿಎಸ್ – ಅಣ್ಣಾಮಲೈ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

Districts

ಅವನು ಯಾರೋ ಕೆಲಸಕ್ಕೆ ಬಾರದೇ ಇರೋ ಐಪಿಎಸ್ – ಅಣ್ಣಾಮಲೈ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

Public TV
Last updated: May 7, 2023 12:59 pm
Public TV
Share
4 Min Read
Priyank Kharge
SHARE

ಕಲಬುರಗಿ: ಅವನು ಯಾರೋ ಕೆಲಸಕ್ಕೆ ಬಾರದೇ ಇರೋ ಐಪಿಎಸ್ (IPS) ಆಫೀಸರ್ ಅಣ್ಣಾಮಲೈ, ರಾಜಕೀಯ ಒತ್ತಡದಿಂದ ಮಣಿಕಂಠ ಮೇಲೆ ಕೇಸ್ ಹಾಕುತ್ತಾರೆ ಎಂದು ಹೇಳುತ್ತಾರೆ. ಅವರಿಗೆ ಬುದ್ದಿ ಇದೆಯಾ ಅಥವಾ ಇಲ್ವಾ ಎಂಬುದು ಗೊತ್ತಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಅಣ್ಣಾಮಲೈ (Annamalai) ವಿರುದ್ಧ ಕಿಡಿ ಕಾರಿದ್ದಾರೆ.

ಖರ್ಗೆ ಹತ್ಯೆ ಕುರಿತು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ (Manikanta Rathod) ಬೆದರಿಕೆ ಆಡಿಯೋ ಬಗ್ಗೆ ಅಣ್ಣಾಮಲೈ ಹೇಳಿಕೆ ಕುರಿತು ಕಲಬುರಗಿಯಲ್ಲಿ (Kalaburagi) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಐಪಿಎಸ್ ಓದಿದವರು ಹೇಗೆ ಮಾತನಾಡಬೇಕು ಎಂಬುದನ್ನು ತಿಳಿದುಕೊಳ್ಳಲಿ. ಅಣ್ಣಾಮಲೈ ಡಿಸಿಪಿ ಆಗಿದ್ದಾಗ ರಾಜಕೀಯ ಒತ್ತಡದಿಂದಲೇ ಎಲ್ಲಾ ಕೇಸ್ ಮಾಡಿದ್ದಾರೆ. ಬಿಜೆಪಿಯವರು (BJP) ಖರ್ಗೆ ಕುಟುಂಬದ ಬಗ್ಗೆ ತಮ್ಮ ಮನದಾಳದ ಮಾತು ಏನು ಎಂದು ಹೇಳಲಿ. ಆ ಆಡಿಯೋವನ್ನು ನಾನೇ ಮಾಡಿಸಿದ್ದೇನೆ ಎಂದು ಹೇಳುತ್ತಾರೆ. ಈಗ ಸರ್ಕಾರ ಅವರದ್ದೇ ಇದೆಯಲ್ವಾ? ತನಿಖೆ ಮಾಡಿಸಲಿ ಎಂದು ಹರಿಹಾಯ್ದರು. ಇದನ್ನೂ ಓದಿ: ವರುಣಾ, ಚಾಮರಾಜನಗರದಲ್ಲಿ ಸ್ಪರ್ಧೆ ವಿಧಿ ನಿಯಮ : ಸೋಮಣ್ಣ

BJP Congress

ಚಿತ್ತಾಪುರ ಅಭ್ಯರ್ಥಿ ಬಹಳ ಬುದ್ದಿವಂತ ಅಲ್ಲ. ಅವನು ಏನಿದ್ದರೂ ಅಕ್ಕಿಪಕ್ಕಿ ಲೆವೆಲ್ ಅಲ್ಲಿಯೇ ಇರುತ್ತಾನೆ. ಅದಕ್ಕೆ ಚಿತ್ತಾಪುರ ಉಸ್ತುವಾರಿಯ ಸುಪಾರಿಯನ್ನು ರವಿ ಕುಮಾರ್ ಅವರಿಗೆ ಕೊಟ್ಟಿರುವುದು. ಬಿಜೆಪಿಯವರು ಹತಾಶರಾಗಿದ್ದಾರೆ. ರವಿ ಕುಮಾರ್ ಅವರಿಗೆ ಈ ಹಿಂದೆಯೇ ಜೇವರ್ಗಿ ಮತ್ತು ಅಫಜಲಪುರದ ಟಿಕೆಟ್ ಮಾರಾಟ ಆಗಿದ್ಯಾ ಎಂದು ಕೇಳಿದ್ದೆ. ಮೋದಿಯವರು ಫೈಟರ್ ರವಿಗೆ ನಮಸ್ಕಾರ ಹಾಕಿದಾಗಲೇ ಗೊತ್ತಾಯಿತು. ಮಣಿಕಂಠನಿಗೆ ಸಾಷ್ಟಾಂಗ ನಮಸ್ಕಾರ ಹಾಕಿ ಬಿಡುತ್ತಾರೆ ಎಂದು ಕಾಣಿಸುತ್ತದೆ. ಮೋದಿ ಚಿತ್ತಾಪುರಕ್ಕೆ ಬರದೇ ಇರುವುದಕ್ಕೆ ನನಗೆ ಬಹಳ ನಿರಾಸೆಯಾಗಿದೆ ಎಂದರು. ಇದನ್ನೂ ಓದಿ: 2 ದಿನವೂ ಕಮಾಲ್ – ಕರ್ನಾಟಕದಲ್ಲಿ ದಾಖಲೆ ಬರೆದ ಮೋದಿ ರೋಡ್ ಶೋ

ಇದೇ ಮಣಿಕಂಠ ಈ ಹಿಂದೆ ನವೆಂಬರ್‌ನಲ್ಲಿ ನನಗೆ ಶೂಟ್ ಮಾಡುತ್ತೇನೆ ಎಂದು ಕ್ಯಾಮೆರಾ ಮುಂದೆ ಹೇಳಿದ್ದ. ಬಿಜೆಪಿಯವರು ಮಾತನಾಡಿದರೆ ರಾಮರಾಜ್ಯ ಕಟ್ಟುತ್ತೇವೆ ಎಂದು ಹೇಳುತ್ತಾರೆ. ರಾಮರಾಜ್ಯವನ್ನು ರೌಡಿಗಳ ಜೊತೆ ಕಟ್ಟುತ್ತೀರಾ ಹೇಗೆ? ಬಿಜೆಪಿಯವರು ಎಂತಹವರಿಗೆ ಟಿಕೆಟ್ ಕೊಟ್ಟಿದ್ದಾರೆ ಎಂಬುದನ್ನು ಯೋಚನೆ ಮಾಡಲಿ. ರವಿ ಕುಮಾರ್‌ಗೆ ವಿಶ್ವನಾಥ್ ಪಾಟೀಲ್ ಅವರ ಕಾಲು ಧೂಳಿನಷ್ಟೂ ಅನುಭವ ಇಲ್ಲ. ವಿಶ್ವನಾಥ್ ಪಾಟೀಲ್ ಅವರನ್ನು ಖರೀದಿ ಮಾಡುತ್ತೇವೆ ಎಂದು ಚಿತ್ತಾಪುರದಲ್ಲಿ ಬಂದು ಹೇಳಲಿ. ವಿಶ್ವನಾಥ್ ಪಾಟೀಲ್ ಅವರು ಖರೀದಿ ಆಗುತ್ತಾರೆ ಎಂದು ತಿಳಿದುಕೊಂಡರೆ ಅವರಷ್ಟು ಮೂರ್ಖರು ಯಾರೂ ಇಲ್ಲ. ರವಿಕುಮಾರ್ ಗ್ರಾಮ ಪಂಚಾಯತ್ ಅಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಬೆಂಬಲಿಗನ ಮನೆ ಮೇಲೆ ಐಟಿ ದಾಳಿ

ಬಿಜೆಪಿಯವರು ಇಡೀ ರಾಜ್ಯದಲ್ಲಿ ಚುನಾವಣೆಯಲ್ಲಿ ಸೋಲುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಜಾತಿ, ಧರ್ಮ ತಂದು ವೈಯಕ್ತಿಕವಾಗಿ ಜಗಳ ತಂದಿಡಲು ಮುಂದಾಗಿದ್ದಾರೆ. ಬಿಜೆಪಿಯವರಿಗೆ ಕರ್ನಾಟಕ ಕೈತಪ್ಪಿದರೆ ಮುಜುಗರ ಆಗುತ್ತದೆ ಎಂದು ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲು ಮುಂದಾಗಿದ್ದಾರೆ. ಕಲಬುರಗಿಯಲ್ಲಿ ಶನಿವಾರ ಐಟಿ ಅಸ್ತ್ರವನ್ನು ಬಳಸಿಕೊಂಡಿದ್ದಾರೆ. ಕಾಂಗ್ರೆಸ್ (Congress) ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೆ ಕಡಿವಾಣ ಹಾಕಲು ಪ್ರಯತ್ನ ಮಾಡುತ್ತಿದ್ದಾರೆ. ವಾಹೆದ್ ಅಲಿ, ಮೊಹ್ಮದ್ ಜಹಾಗೀರ್‌ದಾರ್, ಅರವಿಂದ್ ಚೌಹಾಣ್ ಮನೆ, ಹೋಟೆಲ್ ಹಾಗೂ ಸ್ಟೋನ್ ಕ್ರಷರ್ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೇ ಅರವಿಂದ್ ಅವರ ಮನೆಯಲ್ಲಿ ಅವರ ತಾಯಿ ಒಬ್ಬರೇ ಇದ್ದಾಗ ದಾಳಿ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೈ ಅಭ್ಯರ್ಥಿಗೆ ಚುನಾವಣಾ ಅಧಿಕಾರಿಗಳಿಂದ ಶಾಕ್ – ಕೆಎಂ ಉದಯ್ ಬೆಂಬಲಿಗರ ಮನೆಯಲ್ಲಿ 2 ಕೋಟಿ ಹಣ ಪತ್ತೆ

ವಿರೋಧ ಪಕ್ಷದಲ್ಲಿದ್ದಾಗ ಬಿಜೆಪಿಯ ಪಾಲಿಗೆ ಕಳ್ಳರು ಸುಳ್ಳರಾಗಿದ್ದವರು ಬಿಜೆಪಿಗೆ ಸೇರಿದ ಮೇಲೆ ದೇಶಪ್ರೇಮಿಗಳು ಹಾಗೂ ರಾಷ್ಟ್ರಭಕ್ತರಾಗಿದ್ದಾರೆ. ಅರವಿಂದ್ ಚೌಹಾಣ್ ಬಿಜೆಪಿಯಿಂದ ಬಂದು ಎರಡು ವಾರ ಆಯಿತು. ಎರಡೇ ವಾರದಲ್ಲಿ ಅವರು ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರಾ? ಅವರು ಎರಡೇ ವಾರದಲ್ಲಿ ಕೆಟ್ಟವರಾಗಿ ಬಿಟ್ಟರಾ ಹೇಗೆ? ಸದ್ಯ ಕಾಂಗ್ರೆಸ್‌ನಲ್ಲಿ ಅವರು ಸಕ್ರಿಯವಾಗಿರುವುದಕ್ಕೆ ಐಟಿ ರೇಡ್ ಮೂಲಕ ತೊಂದರೆ ಕೊಡುವ ಸಂದೇಶ ಸಾರಿದ್ದಾರೆ. ಇದರಿಂದ ನಾವು ಯಾರೂ ಹೆದರುವುದಿಲ್ಲ ಎಂದು ಹೆಳಿದರು. ಇದನ್ನೂ ಓದಿ: ಅಜ್ಜಿ ಗೆದ್ದಿದ್ದ ತೆಲಂಗಾಣದ ಮೇದಕ್ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಲೋಕಸಭೆಗೆ ಸ್ಪರ್ಧೆ?

ನೀವು ಪ್ರಾಮಾಣಿಕರಾಗಿದ್ದರೆ ಕೆಕೆಆರ್‌ಡಿಬಿ ಅಕ್ರಮ ಆಗಿರುವುದರ ಬಗ್ಗೆ ಸಿಎಜಿ ವರದಿ ಕೊಟ್ಟಿದೆ. ಅಕ್ರಮವಾಗಿರುವ ಬಗ್ಗೆ ವರದಿ ಕೊಟ್ಟರೂ ಅವರ ಮನೆ ಮೇಲೆ ಯಾಕೆ ದಾಳಿ ನಡೆಸಿಲ್ಲ? ಚಿಂಚೊಳಿಯ ಒಂದೇ ರೋಡ್ ಐವತ್ತು ಬಾರಿ ಟೆಂಡರ್ ಆಗಿದೆ. ಅವರ ಮನೆ ಮೇಲೆ ಯಾಕೆ ದಾಳಿ ಮಾಡಿಲ್ಲ? ಡಿಸಿಸಿ ಬ್ಯಾಂಕ್‌ನಲ್ಲಿ ರೈತರು ಡಿಸಿ ಕಚೇರಿಯ ಮುಂದೆ ಪ್ರತಿಭಟನೆ ಮಾಡಿದರು. ಅದು ಸರ್ಕಾರಕ್ಕೆ ಕೇಳಿಸಿಲ್ವಾ? ಜನ ಬಿಜೆಪಿ ಅಭ್ಯರ್ಥಿ ವಿರುದ್ಧ ಆಕ್ರೋಶ ಹೊರಹಾಕಿದರೆ ದಾಳಿ ಮಾತ್ರ ಕಾಂಗ್ರೆಸ್ ಅವರ ಮೇಲೆ ಆಗುತ್ತದೆ. ಬಿಜೆಪಿಯವರು ಸೋಲಿನ ಹತಾಶೆಯಿಂದ ಅವರ ನಾಯಕರಾದ ಮೋದಿ ಮತ್ತು ಅಮಿತ್ ಶಾ ಕಾಲಿಗೆ ಬಿದ್ದು ಹೇಗಾದರು ಮಾಡಿ ಗೆಲ್ಲಿಸಿ ಎಂದು ಕೇಳಿದ್ದಾರೆ. ಹಾಗಾಗಿ ಅವರು ಕೇಂದ್ರದ ಸಂಸ್ಥೆಗಳನ್ನು ಬಳಕೆ ಮಾಡಿಕೊಂಡಿದ್ದಾರೆ. ಈ ಬಾರಿ ಕಲಬುರಗಿಯಲ್ಲಿ ನಮ್ಮ ಕಾಂಗ್ರೆಸ್ ಬಾವುಟ ಹಾರಿಸೋದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋದಿ ಮೆಗಾ ರೋಡ್‌ ಶೋ – ಬಿಜೆಪಿ ಲೆಕ್ಕಾಚಾರ ಏನು?

TAGGED:annamalaibjpcongresselectionKalaburagiManikanta RathodPriyank Khargeಅಣ್ಣಾಮಲೈಕಲಬುರಗಿಕಾಂಗ್ರೆಸ್ಚುನಾವಣೆಪ್ರಿಯಾಂಕ್ ಖರ್ಗೆಬಿಜೆಪಿಮಣಿಕಂಠ ರಾಥೋಡ್‌
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Sadik Pailwan Davanagere South
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
By Public TV
7 hours ago
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
8 hours ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
8 hours ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
9 hours ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
9 hours ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?