Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಜನರ ಆಶೀರ್ವಾದದಿಂದಲ್ಲ ಕಳ್ಳತನ ಮಾಡಿದ ಸರ್ಕಾರ, ಕಾಂಗ್ರೆಸ್‍ಗೆ ಪೂರ್ಣ ಬಹುಮತ ಕೊಡಿ: ರಾಹುಲ್ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಬಿಜೆಪಿ ಜನರ ಆಶೀರ್ವಾದದಿಂದಲ್ಲ ಕಳ್ಳತನ ಮಾಡಿದ ಸರ್ಕಾರ, ಕಾಂಗ್ರೆಸ್‍ಗೆ ಪೂರ್ಣ ಬಹುಮತ ಕೊಡಿ: ರಾಹುಲ್ ಮನವಿ

Chikkamagaluru

ಬಿಜೆಪಿ ಜನರ ಆಶೀರ್ವಾದದಿಂದಲ್ಲ ಕಳ್ಳತನ ಮಾಡಿದ ಸರ್ಕಾರ, ಕಾಂಗ್ರೆಸ್‍ಗೆ ಪೂರ್ಣ ಬಹುಮತ ಕೊಡಿ: ರಾಹುಲ್ ಮನವಿ

Public TV
Last updated: May 2, 2023 8:17 pm
Public TV
Share
3 Min Read
RAHUL GANDHI 5
SHARE

ಚಿಕ್ಕಮಗಳೂರು: ಬಿಜೆಪಿ (BJP) ಯವರಿಗೆ 40 ಅಂದರೆ ತುಂಬಾ ಪ್ರೀತಿ. ಹಾಗಾಗಿ, ಅವರಿಗೆ ಈ ಬಾರಿ 40 ಸ್ಥಾನಗಳನ್ನಷ್ಟೆ ಕೊಡಿ, ಕಾಂಗ್ರೆಸ್ಸಿಗೆ 150 ಸ್ಥಾನ ಕೊಡಿ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಮತದಾರರಿಗೆ ಮನವಿ ಮಾಡಿದ್ದಾರೆ. ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ವೃತ್ತದವರೆಗೆ ರೋಡ್ ಶೋ ನಡೆಸಿ ಬಳಿಕ ತೆರದ ವಾಹನದಲ್ಲಿ ಬಹಿರಂಗವಾಗಿ ಭಾಷಣ ಮಾಡಿದ ರಾಹುಲ್ ಗಾಂಧಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

RAHUL GANDHI 4

ರಾಹುಲ್ ಭಾಷಣದ ಉದ್ದಕ್ಕೂ ಮೋದಿ (Narendra Modi) ಯವರನ್ನೇ ಟಾರ್ಗೆಟ್ ಮಾಡಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರೇ, ನೀವು ಹೋದಲ್ಲೆಲ್ಲಾ ಬರೀ ನಿಮ್ಮ ಬಗ್ಗೆಯೇ ಹೇಳುತ್ತೀರಾ, ನಿಮ್ಮ ಬಗ್ಗೆ ನೀವೇ ಹೇಳುವುದನ್ನ ಬಿಟ್ಟು ಜನರ ಬಗ್ಗೆ, ಸರ್ಕಾರ ಅಧಿಕಾರಕ್ಕೆ ಬಂದರೆ ಜನರಿಗೆ ಏನು ಕೊಡ್ತೀರಾ ಅದನ್ನ ಹೇಳಿ ಎಂದು ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಕೈ ಅಭ್ಯರ್ಥಿಗಳ ಪರ ಮತಪ್ರಚಾರ ಮಾಡಿದ ರಾಹುಲ್ ಗಾಂಧಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

RAHUL GANDHI 3

ಇದೊಂದು ಕಳ್ಳ ಸರ್ಕಾರ. ಈ ಸರ್ಕಾರ ಜನರ ಆಶೀರ್ವಾದದಿಂದ ಆದ ಸರ್ಕಾರವಲ್ಲ. ಕಳ್ಳತನ ಮಾಡಿದ ಸರ್ಕಾರ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದಿಂದ ಮಾಡಿದ ಹಣದಿಂದ ಸರ್ಕಾರ ರಚನೆ ಮಾಡಿದ್ದಾರೆ. ಈಗ ರಾಜ್ಯದಲ್ಲಿ ಯಾರನ್ನೇ ಕೇಳಿ 40 ಅಂದ್ರೆ ಏನೆಂದು, ಎಲ್ಲರೂ ಭ್ರಷ್ಟಾಚಾರ ಅಂತಾರೆ ಎಂದು ವ್ಯಂಗ್ಯವಾಡಿದ್ದಾರೆ. ಈ ಬಾರಿಯೂ ಬಿಜೆಪಿಯವರು ಮತ್ತದೇ ಕಳ್ಳತನ ಸರ್ಕಾರ ಮಾಡಲು ಪ್ರಯತ್ನ ಮಾಡುತ್ತಾರೆ. ಅವರಿಗೆ 40 ಅಂದ್ರೆ ತುಂಬಾ ಪ್ರೀತಿ. ಹಾಗಾಗಿ, ಅವರಿಗೆ 40 ಸ್ಥಾನ ನೀಡಿ ಕಾಂಗ್ರೆಸ್ 150 ಸ್ಥಾನ ನೀಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸುತ್ತಿಟ್ಟ ಉಡುಪಿ ಸೀರೆಯ ಸೆರಗಿನೊಳಗಿಂದ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ನಟಿ ತಾರಾ

RAHUL GANDHI 2

ನರೇಂದ್ರ ಮೋದಿಯವರು ಚುನಾವಣೆ ಸಮಯದಲ್ಲಿ ಮಾತ್ರ ರಾಜ್ಯಕ್ಕೆ ಭೇಟಿ ಕೊಡ್ತಾರೆ. ಆದರೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲ್ಲ. ಮೋದಿಯವರು ಕಂಟ್ರಾಕ್ಟರ್ ಸಂಘದ ಅಧ್ಯಕ್ಷ ಕೆಂಪಣ್ಣನವರ ಪತ್ರಕ್ಕೆ ಉತ್ತರ ಕೊಡಲಿಲ್ಲ ಎಂದು ಲೇವಡಿ ಮಾಡಿದ್ದಾರೆ. ಭಾಷಣದ ವೇಳೆಯೂ ನಾವು ನಮ್ಮ ನಾಯಕರ ಎಲ್ಲರ ಹೆಸರು ಹೇಳುತ್ತೇವೆ. ಆದರೆ ಮೋದಿಯವರು ಯಾರ ಹೆಸರನ್ನೂ ಹೇಳಲ್ಲ. ಬೊಮ್ಮಾಯಿ, ಬಿ.ಎಸ್.ವೈ ಸೇರಿದಂತೆ ಯಾರ ಹೆಸರನ್ನೂ ಹೇಳಲ್ಲ ಎಂದರು. ಬರೀ ಅವರ ಬಗ್ಗೆ ಅವರೇ ಹೇಳಿಕೊಳ್ಳುತ್ತಾರೆ ಇದನ್ನ ನಿಲ್ಲಿಸಬೇಕು ಎಂದ ಅವರು, ಸುಡು ಬಿಸಿಲಿನ ಮಧ್ಯೆಯೂ ರೋಡ್ ಶೋನಲ್ಲಿ ಭಾಗಿಯಾಗಿದ್ದ ಸಾವಿರಾರು ಜನರಿಗೆ ಅಭಿನಂದನೆ ಸಲ್ಲಿಸಿದರು.

RAHUL GANDHI 1

1978ರಲ್ಲಿ ನನ್ನ ಅಜ್ಜಿ ಇಲ್ಲಿ ಸ್ಪರ್ಧೆ ಮಾಡಿದ್ದರು. ನನಗೆ ಚಿಕ್ಕಮಗಳೂರಿಗೆ ಬರಲು ಹೆಮ್ಮೆಯಾಗುತ್ತದೆ. ನನ್ನ ಅಜ್ಜಿ ಚಿಕ್ಕಮಗಳೂರು ತುಂಬಾ ಚೆನ್ನಾಗಿದೆ ಎಂದು ಹೇಳಿದ್ದರು. ಇಲ್ಲಿನ ಜನ ತುಂಬಾ ಸುಂದರ ಹಾಗೂ ಒಳ್ಳೆಯವರು ಎಂದು ಗೊತ್ತಾಯ್ತು ಎಂದರು. ಇದು ಪ್ರಧಾನಿ ಚುನಾವಣೆಯಲ್ಲ. ಕರ್ನಾಟಕದ ಮಾತೆಯರು, ಅಕ್ಕತಂಗಿಯರು, ಅಣ್ಣ-ತಮ್ಮಂದಿರು, ರೈತರು, ಶ್ರಮಿಕ ವರ್ಗದ ಚುನಾವಣೆ. ಆದರೆ ಬಿಜೆಪಿ ಹಾಗೂ ಪ್ರಧಾನಿ ಸರ್ಕಾರ ಬಂದರೆ ಇವರಿಗೆಲ್ಲಾ ಏನು ಮಾಡುತ್ತೇವೆ ಎಂದು ಒಂದು ಸಣ್ಣ ಮಾತು ಕೂಡ ಹೇಳಲ್ಲ ಎಂದರು.

ಅವರು ಮಾಡಿರುವ 60% ಕೆಲಸಗಳು ಅರ್ಧಕ್ಕೆ ನಿಂತಿವೆ. ಕಳೆದ ಮೂರು ವರ್ಷದಲ್ಲಿ ಅವರು ಮಾಡಿದ್ದು ಒಂದೇ ಒಂದು. ನಿಮ್ಮ ಸರ್ಕಾರವನ್ನ ಕಳ್ಳತನ ಮಾಡಿದ್ದು ಎಂದು ವ್ಯಂಗ್ಯವಾಡಿದ್ದಾರೆ. ರಾಹುಲ್ ಗಾಂಧಿ ರೋಡ್ ಶೋಗೆ ಬಂದಿದ್ದ ರಾಣಿ ಎಂಬ ಮಹಳೆಯನ್ನ ಮಾತನಾಡಿಸಿ, ದೇಶದಲ್ಲಿ ನಿಮ್ಮಂತಹ ಕೋಟ್ಯಂತರ ರಾಣಿಯರು ಇದ್ದಾರೆ. ತುಂಬಾ ಕಷ್ಟದಲ್ಲಿದ್ದಾರೆ. ಸರ್ಕಾರ ನಿಮಗೆಲ್ಲಾ ಏನೂ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರ ಬಡವರ ಏಳಿಗೆಗೆ ಶ್ರಮಿಸಲಿದೆ ಎಂದರು.

 

TAGGED:bjpChikkamagalurucongressRahul Gandhiಕಾಂಗ್ರೆಸ್ಚಿಕ್ಕಮಗಳೂರುಬಿಜೆಪಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

Bhuvaneshwar blast
Crime

ಸೇಡು ತೀರಿಸಿಕೊಳ್ಳಲು ಕಚ್ಚಾ ಬಾಂಬ್ ತಯಾರಿಸ್ತಿದ್ದಾಗಲೇ ಬ್ಲಾಸ್ಟ್ – ಇಬ್ಬರು ಸಾವು

Public TV
By Public TV
26 minutes ago
Jaish e Mohammed commander Saifullah
Crime

ಸೇನೆಯಿಂದ ತಪ್ಪಿಸಿಕೊಳ್ಳಲು ಜೈಶ್ ಉಗ್ರನ ಊಸರವಳ್ಳಿ ಪ್ಲ್ಯಾನ್‌ – ಗಡ್ಡ ಬೋಳಿಸಿಕೊಂಡು ಬುರ್ಖಾ ತೊಟ್ಟನಾ ರಣಹೇಡಿ?

Public TV
By Public TV
56 minutes ago
Three guilty in murder case and Israeli Tourist Rape case
Court

ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ರೇಪ್, ಓರ್ವನ ಹತ್ಯೆ ಕೇಸ್ – ಮೂವರಿಗೆ ಗಲ್ಲು ಶಿಕ್ಷೆ

Public TV
By Public TV
58 minutes ago
Anthropic
Bengaluru City

ಮಡುರೋ ಕಿಡ್ನಾಪ್‌ ಕೇಸ್‌ನಲ್ಲಿ ಸುದ್ದಿಯಾದ AI Anthropic ಕಂಪನಿಯ ಬೆಂಗಳೂರು ಕಚೇರಿ ಓಪನ್‌

Public TV
By Public TV
1 hour ago
Krishna Byre Gowda
Districts

ಹೊಳೆನರಸೀಪುರ | ಶಾಲೆಗೆ ತೆರಳಿ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Public TV
By Public TV
2 hours ago
Rajasthan Bhiwadi Blast
Crime

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?