Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪ್ರತಿ ಬಾರಿಯೂ ಗೆದ್ದವರನ್ನು ಸೋಲಿಸುವ ಸಿಂಧನೂರು ಮತದಾರ

Public TV
Last updated: March 26, 2023 10:53 am
Public TV
Share
2 Min Read
EVM
SHARE

ರಾಯಚೂರು: ಜಿಲ್ಲೆಯ ಸಿಂಧನೂರು ವಿಧಾನಸಭಾ (Sindhanur Constituency) ಕ್ಷೇತ್ರ ಪ್ರತೀ ಚುನಾವಣೆಯಲ್ಲೂ ಕುತೂಹಲಗಳ ಜೊತೆ ಭರ್ಜರಿ ಫೈಟ್‌ಗೆ ಸಾಕ್ಷಿಯಾಗುತ್ತಲೇ ಬಂದಿದೆ. ಈ ಕಾರಣಕ್ಕೆ 1957 ರಿಂದ ನಡೆದ ಚುನಾವಣೆಗಳಲ್ಲಿ ಒಮ್ಮೆ ಗೆದ್ದ ಪಕ್ಷ ಎರಡನೇ ಬಾರಿಗೆ ಸೋತಿದೆ. ಸತತವಾಗಿ ಎರಡು ಬಾರಿ ಯಾವುದೇ ಪಕ್ಷದ ಅಭ್ಯರ್ಥಿ ಗೆದ್ದಿಲ್ಲ. 2023 ರ ಸಾರ್ವತ್ರಿಕ ಚುನಾವಣೆ ಕೂಡ ಸಿಂಧನೂರು ಕ್ಷೇತ್ರದಲ್ಲಿ ಜಿದ್ದಾಜಿದ್ದಿಗೆ ಸಾಕ್ಷಿಯಾಗಲಿದೆ.

ಸಿಂಧನೂರು ಕ್ಷೇತ್ರದಲ್ಲಿ ಇದುವರೆಗೂ ಕಾಂಗ್ರೆಸ್ (Congress) 8 ಬಾರಿ, ಜೆಡಿಎಸ್ (JDS) 2 ಬಾರಿ, ಜೆಡಿಯು 1 ಬಾರಿ, ಜನತಾದಳ 1 ಬಾರಿ ಗೆದ್ದಿದೆ ಹಾಗೂ ಪಕ್ಷೇತರ ಅಭ್ಯರ್ಥಿಗಳು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ (BJP) ಇದುವರೆಗೆ ಖಾತೆಯನ್ನ ತೆರೆದಿಲ್ಲ. ಬಾದರ್ಲಿ ಹಂಪನಗೌಡ ಕಾಂಗ್ರೆಸ್ ನಿಂದ 2 ಬಾರಿ, ಜೆಡಿಯು ನಿಂದ ಒಂದು ಬಾರಿ, ಜನತಾದಳದಿಂದ ಒಂದು ಬಾರಿ ಒಟ್ಟು ನಾಲ್ಕು ಬಾರಿ ಗೆದ್ದಿದ್ದರೂ ಒಂದೇ ಪಕ್ಷದಿಂದ ಸತತವಾಗಿ ಎರಡು ಬಾರಿ ಗೆದ್ದಿಲ್ಲ. ಹಾಲಿ ಶಾಸಕ ಜೆಡಿಎಸ್‌ನ ವೆಂಕಟರಾವ್ ನಾಡಗೌಡ ಎರಡು ಬಾರಿ ಗೆದ್ದರೂ ಸತತವಾಗಿ ಗೆದ್ದಿಲ್ಲ. ಹೀಗಾಗಿ ಈ ಬಾರಿ ಕ್ಷೇತ್ರದ ಮತದಾರರ ನಿರ್ಧಾರ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ದೇಶದಲ್ಲೇ ಮೊದಲ ಉಪಚುನಾವಣೆ ನಡೆದಿದ್ದು ಚಿಕ್ಕಮಗಳೂರಿನ ತರೀಕೆರೆಯಲ್ಲಿ

RAICHUR VENKAT RAO

ಸಿಂಧನೂರು ಕ್ಷೇತ್ರದಲ್ಲಿ ಗೆದ್ದ ಪಕ್ಷ ರಾಜ್ಯದಲ್ಲಿ ಆಡಳಿತಕ್ಕೆ ಬರುವುದಿಲ್ಲ, ಬಂದರೂ ಕ್ಷೇತ್ರದಲ್ಲಿ ಗೆದ್ದವರು ಮಂತ್ರಿಯಾಗಲ್ಲ ಅನ್ನೋ ಶಾಪದ ರೀತಿಯ ಪರಸ್ಥಿತಿಯಿತ್ತು. 2018 ರವರೆಗೂ ಸಿಂಧನೂರು ಕ್ಷೇತ್ರದಿಂದ ಗೆದ್ದವರಿಗೆ ಮಂತ್ರಿಸ್ಥಾನವೇ ಸಿಕ್ಕಿರಲಿಲ್ಲ. 2018 ರಲ್ಲಿ ಗೆದ್ದ ಜೆಡಿಎಸ್‌‌ನ ವೆಂಕಟರಾವ್ ನಾಡಗೌಡ ಆಗಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕ್ಯಾಬಿನೆಟ್‌ನಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವರಾಗುವ ಮೂಲಕ ಕ್ಷೇತ್ರ ಒಂದು ರೀತಿಯಲ್ಲಿ ಶಾಪಮುಕ್ತವಾಯಿತು.

ಮತದಾರರ ಸಂಖ್ಯೆ ಎಷ್ಟು?
ಲಿಂಗಾಯತ– 45,000
ಕುರುಬರು- 35,000
ಪರಿಶಿಷ್ಟ ಜಾತಿ- 25,000
ಪರಿಶಿಷ್ಟ ಪಂಗಡ– 22,000
ಮುಸ್ಲಿಂ– 33,000
ಬಂಗ್ಲಾ ವಲಸಿಗರು– 16,000 ಹಾಗೂ ಇತರೆ ಜಾತಿಯ ಮತದಾರರಿದ್ದಾರೆ
ಒಟ್ಟು ಮತದಾರರ ಸಂಖ್ಯೆ – 2,36,943

ಈ ಬಾರಿಯೂ ಕಣದಲ್ಲಿ ಜಿದ್ದಾಜಿದ್ದಿಯಿದ್ದೂ ಯಾವುದೇ ಪಕ್ಷಕ್ಕೂ ಸುಲಭ ಜಯ ಸಿಗುವುದಿಲ್ಲ. ಜೆಡಿಎಸ್‌ನಿಂದ ಹಾಲಿ ಶಾಸಕ ವೆಂಕಟರಾವ್ ನಾಡಗೌಡ ಕಣಕ್ಕೆ ಇಳಿಯುತ್ತಿದ್ದರೆ, ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್ ಇದೆ. ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ, ಕೆ.ಕರಿಯಪ್ಪ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಬಿಜೆಪಿಯಿಂದ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ರಾಜೇಶ್ ಹಿರೇಮಠ್, ಅಮರೆಗೌಡ ವಿರುಪಾಪೂರ ಸೇರಿ ಹಲವು ಹೆಸರುಗಳು ಕೇಳಿಬರುತ್ತಿವೆ. ಗಾಲಿ ಜನಾರ್ಧನರೆಡ್ಡಿಯ ಕೆಆರ್‌ಪಿ ಪಕ್ಷದಿಂದ ನೆಕ್ಕುಂಟಿ ಮಲ್ಲಿಕಾರ್ಜುನ ಕಣಕ್ಕಿಳಿಯಲಿದ್ದಾರೆ.

ಒಮ್ಮೆ ಗೆದ್ದ ಪಕ್ಷ ಮತ್ತೊಮ್ಮೆ ಇಲ್ಲಿ ಗೆಲ್ಲುವುದಿಲ್ಲ ಎಂಬ ನಂಬಿಕೆ ಈ ಬಾರಿಯೂ ನಿಜವಾಗುತ್ತಾ ಅಥವಾ ಹಾಲಿ ಶಾಸಕ ವೆಂಕಟರಾವ್ ನಾಡಗೌಡ ಗೆದ್ದು ಅದನ್ನ ಸುಳ್ಳು ಮಾಡುತ್ತಾರಾ ಅನ್ನೋದು ಕ್ಷೇತ್ರದ ಕುತೂಹಲ. ಲಿಂಗಾಯತ, ಕುರುಬ ಸಮಾಜ ಹಾಗೂ ಮುಸ್ಲಿಂ ಅಲ್ಪಸಂಖ್ಯಾತ ಮತಗಳೇ ಇಲ್ಲಿ ನಿರ್ಣಾಯಕ.‌ ಸಿಂಧನೂರು ತಾಲೂಕಿನಲ್ಲಿ ಕುರುಬ ಸಮಾಜದ ಪ್ರಮುಖ ಮುಖಂಡ ಕೆ. ಕರಿಯಪ್ಪ ಕಾಂಗ್ರೆಸ್‌ನಿಂದ ಟಿಕೆಟ್ ಸಿಗದಿದ್ದೆ ಅನ್ಯ ಪಕ್ಷ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳು ಇರುವುದರಿಂದ ಮತದಾರರ ಒಲವು ಯಾವ ಕಡೆಯಿದೆ ಎನ್ನುವುದೇ ನಿಗೂಢ. ಇದುವರೆಗೆ 8 ಬಾರಿ ಗೆದ್ದಿರುವ ಕಾಂಗ್ರೆಸ್‌ ಮತ್ತೊಮ್ಮೆ ಗೆಲುವಿನ ನಗೆ ಬೀರುತ್ತಾ? ಬಿಜೆಪಿ ಅಚ್ಚರಿಯ ರೀತಿಯಲ್ಲಿ ತನ್ನ ಖಾತೆಯನ್ನ ತೆರೆಯುತ್ತಾ ಎಂಬ ಪ್ರಶ್ನೆಗೆ ಮೇ ತಿಂಗಳಿನಲ್ಲಿ ಉತ್ತರ ಸಿಗಲಿದೆ.

TAGGED:electionjdspoliticsraichuruಕರ್ನಾಟಕಚುನಾವಣೆಜೆಡಿಎಸ್ರಾಯಚೂರುಸಿಂಧನೂರು
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
17 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
18 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
21 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Nikhil Kumaraswamy
Bengaluru City

ರಾಜ್ಯಕ್ಕೆ ಅನುದಾನದ ಕೊರತೆ ಆಗಿದ್ದರೆ ಪ್ರಧಾನಿಗಳ ಜೊತೆ ಸಿಎಂ ಮಾತಾಡಲಿ: ನಿಖಿಲ್ ಕುಮಾರಸ್ವಾಮಿ

Public TV
By Public TV
2 minutes ago
Ram Mohan Naidu
Latest

ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

Public TV
By Public TV
1 minute ago
Payal Khatik 2
Latest

Plane Crash | ಇಂಜಿನಿಯರ್‌ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ

Public TV
By Public TV
12 minutes ago
Harangi Dam
Districts

ಕೊಡಗಿನಲ್ಲಿ ಮಳೆ – ಹಾರಂಗಿ ಜಲಾಶಯದಿಂದ ಕಾವೇರಿ ನದಿಗೆ 4,000 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
16 minutes ago
BY Vijayendra
Bengaluru City

ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಪ್ರಯತ್ನ, ಕುತಂತ್ರ, ಷಡ್ಯಂತ್ರ: ಬಿವೈವಿ

Public TV
By Public TV
19 minutes ago
BMTC bus
Bengaluru City

ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ- ದೂರು ದಾಖಲು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?