Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕೀಯ ಅನುಭವ ಇಲ್ಲದೇ ಇದ್ರೂ ಶಿರಾದಲ್ಲಿ ತಾವರೆ ಅರಳಿಸಿದ ರಾಜೇಶ್‌ ಗೌಡ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜಕೀಯ ಅನುಭವ ಇಲ್ಲದೇ ಇದ್ರೂ ಶಿರಾದಲ್ಲಿ ತಾವರೆ ಅರಳಿಸಿದ ರಾಜೇಶ್‌ ಗೌಡ!

Districts

ರಾಜಕೀಯ ಅನುಭವ ಇಲ್ಲದೇ ಇದ್ರೂ ಶಿರಾದಲ್ಲಿ ತಾವರೆ ಅರಳಿಸಿದ ರಾಜೇಶ್‌ ಗೌಡ!

Public TV
Last updated: March 17, 2023 12:34 pm
Public TV
Share
2 Min Read
rajesh gowda bjp sira
SHARE

ತುಮಕೂರು: ಕರ್ನಾಟಕದ ಚುನಾವಣಾ ಇತಿಹಾಸದಲ್ಲಿಯೇ 2018ರವರೆಗೆ ಶಿರಾ (Sira) ಕ್ಷೇತ್ರದಲ್ಲಿ ಕಮಲ ಪಕ್ಷದ ಖಾತೆಯೇ ತೆರೆದಿರಲಿಲ್ಲ. ಆದರೆ 2020 ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ (BJP) ಅಭ್ಯರ್ಥಿ ಸಿ.ಎಂ.ರಾಜೇಶ್ ಗೌಡ ಗೆದ್ದು ಶಿರಾ ಕೋಟೆಯ ಮೇಲೆ ಬಿಜೆಪಿ ಬಾವುಟ ಹಾರಿಸಿ ಇತಿಹಾಸ ಸೃಷ್ಟಿಸಿದ್ದರು.

ಮಾಜಿ ಸಚಿವ ಟಿ.ಬಿ.ಜಯಚಂದ್ರರ (TB Jayachandra) ವಿರುದ್ದ ಬರೋಬ್ಬರಿ 13,800 ಮತಗಳ ಅಂತರದಿಂದ ಗೆದ್ದು ಬೀಗಿದ ಸಿ.ಎಂ.ರಾಜೇಶ್ ಗೌಡ (Dr. Rajesh Gowda) ವೃತ್ತಿಯಲ್ಲಿ ವೈದ್ಯರು. ಬೆಂಗಳೂರಿನಲ್ಲಿ ವೈದ್ಯ ವೃತ್ತಿ ಮಾಡಿಕೊಂಡಿದ್ದ ಇವರ ತಂದೆ ಮೂಡಲಗಿರಿಯಪ್ಪ ಮೂರುಬಾರಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ಒಂದು ಬಾರಿ ಶಿರಾ ಕ್ಷೇತ್ರದಿಂದ ಶಾಸಕರಾಗಿದ್ದರು. ಆದರೂ ಪುತ್ರ ರಾಜೇಶ್ ಗೌಡ ಮಾತ್ರ ರಾಜಕೀಯದತ್ತ ಸುಳಿಯದೇ ವೈದ್ಯ ವೃತ್ತಿಯಲ್ಲಿ ತೊಡಗಿದ್ದರು. ತಂದೆಯ ಯಾವುದೇ ರಾಜಕೀಯ ಸಭೆ ಸಮಾರಂಭಗಳಲ್ಲಿ ಇವರು ಭಾಗಿಯಾಗುತ್ತಿರಲಿಲ್ಲ. ಇದನ್ನೂ ಓದಿ: ಚುನಾವಣೆ ಬಂದ್ರೆ ಕುರುಡುಮಲೆ ವಿನಾಯಕನಿಗೆ ಎಲ್ಲಿಲ್ಲದ ಬೇಡಿಕೆ 

web rajesh gowda

ತಂದೆ ಮೂಡಲ ಗಿರಿಯಪ್ಪ ರಾಜಕೀಯದಿಂದ ನೇಪಥ್ಯಕ್ಕೆ ಸರಿದು ದಶಕಗಳೇ ಕಳೆದಿತ್ತು. ಆದರೆ ಇದ್ದಕಿದ್ದ ಹಾಗೇ ರಾಜೇಶ್ ಗೌಡರಲ್ಲಿ ತಾನೂ ಜನಪ್ರತಿನಿಧಿ ಆಗಬೇಕು ಎಂಬ ಹಂಬಲ ಮೂಡಿತ್ತು. 2018 ರಲ್ಲಿ ಶಿರಾ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿದ್ದ ಜೆಡಿಎಸ್‌ನ ಸತ್ಯನಾರಾಯಣ ಅವರು 2020 ರಲ್ಲಿ ಅಕಾಲಿಕ ಮರಣ ಹೊಂದಿದ್ದರು. ಹಾಗಾಗಿ ಶಿರಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಿತು. ಈ ಸಂದರ್ಭದಲ್ಲಿ ಡಾ.ಸಿ.ಎಂ ರಾಜೇಶ್ ಗೌಡರು ಬಿಜೆಪಿಯ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಕಾಂಗ್ರೆಸ್‌ನಿಂದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಎದುರಾಳಿಯಾಗಿದ್ದರು. ಆದರೂ ರಾಜೇಶ್ ಗೌಡರು ಜಯಚಂದ್ರರ ವಿರುದ್ದ ಗೆದ್ದು ಜಯಭೇರಿ ಬಾರಿಸಿ ಇತಿಹಾಸ ಸೃಷ್ಟಿಸಿದರು.

ಶಾಸಕ ಡಾ.ಸಿ.ಎಂ. ರಾಜೇಶ್ ಗೌಡರದ್ದು ಸೌಮ್ಯ ಸ್ವಭಾವ. ಶಿರಾ ತಾಲೂಕಿನ ಚಿರತೆಹಳ್ಳಿಯವರು. ತಾವು ಬೆಂಗಳೂರಲ್ಲಿ ವೈದ್ಯ ವೃತ್ತಿಯಲ್ಲಿ ತೊಡಗಿದ್ದರೂ ತಮ್ಮ ತಾಲೂಕಿನ ಜನರನ್ನು ಮರೆತಿರಲಿಲ್ಲ. ಆಗಾಗ ಬಂದು ಯಾವುದೇ ಪ್ರತಿಫಲಾಕ್ಷೆ ಇಲ್ಲದೇ ಊರ ಜನರ ವೈದ್ಯಕೀಯ ಸೇವೆ ಮಾಡುತಿದ್ದರು. ಜನರ ಕಷ್ಟಕ್ಕೆ ಸ್ಪಂದಿಸುತಿದ್ದರು. ಆ ಮೂಲಕ ಜನ ಮಾನಸದಲ್ಲಿ ಒಳ್ಳೆ ಡಾಕ್ಟ್ರು ಎಂದೇ ಜನಜನಿತರಾಗಿದ್ದರು. ಹಾಗಾಗಿ ಶಿರಾ ಕ್ಷೇತ್ರದ ಜನತೆ 2020 ರಲ್ಲಿ ನಡೆದ ಉಪ ಚುನಾವಣೆಯಲ್ಲಿ ರಾಜೇಶ್ ಗೌಡರ ಕೈ ಹಿಡಿದರು. ಇದನ್ನೂ ಓದಿ: 2 ದಶಕಗಳಿಂದ ಹಾಲಿ ಶಾಸಕರಿಗೆ ಸೋಲು – ಇದು ಆಳಂದ ವಿಶೇಷತೆ 

sira final

ಕೋವಿಡ್ ಕಾಲದಲ್ಲಿ ಕಣ್ಣೀರು ಒರೆಸಿದ ರಾಜೇಶ್ ಗೌಡರು- ಕೋವಿಡ್ ಎರಡನೇ ಅಲೆಯಲ್ಲಿ ಶಿರಾ ಕ್ಷೇತ್ರದ ಜನ ಅಕ್ಷರಶಃ ತತ್ತರಿಸಿದ್ದರು. ತುಮಕೂರು ಜಿಲ್ಲೆಯಲ್ಲಿ ಕೋವಿಡ್ ಮೊದಲ ಕೇಸ್ ಪತ್ತೆಯಾಗಿದ್ದೇ ಶಿರಾದಲ್ಲಿ. ಈ ವೇಳೆ ಕಾಲಿಗೆ ಚಕ್ರಕಟ್ಟಿಕೊಂಡು ಕೋವಿಡ್ ಪೀಡಿತರ ಸೇವೆ ಮಾಡಿದ ರಾಜೇಶ್ ಗೌಡರು ಜನ ಸಾಮಾನ್ಯರ ನೆರವಿಗೆ ಬಂದರು. ಫುಡ್ ಕಿಟ್, ವ್ಯಾಕ್ಸಿನೇಷನ್‌, ಮೆಡಿಷಿನ್ ಹೀಗೆ ಎಲ್ಲಾ ರೀತಿಯಲ್ಲಿ ಸಹಾಯ ಮಾಡಿದ್ದರು.

ಮದಲೂರು ಕೆರೆಗೆ ನೀರು ಹರಿಸಿದ್ದು, ಭದ್ರಾ ಮೇಲ್ದಂಡೆ ಕಾಮಗಾರಿ ಅನುಷ್ಠಾನ, ಶಿರಾ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಿದ್ದು, ಆಕ್ಸಿಜನ್ ತಯಾರಿಕಾ ಘಟಕ, ಆರ್‌ಟಿಪಿಸಿಆರ್‌ ಘಟಕ ‌ಶಿರಾಗೆ ತಂದಿದ್ದು, ಸ್ವಾತಂತ್ರ್ಯ ಬಂದು 75 ವರ್ಷ ಆದರೂ ರಸ್ತೆ ಕಾಣದ ಊರಿಗೆ ರಸ್ತೆ ಮಾಡಿಕೊಟ್ಟಿದ್ದಾರೆ. ಇದೇ ರೀತಿಯ ಹಲವು ಅಭಿವೃದ್ಧಿಯ ಕಾರ್ಡ್ ಇಟ್ಟುಕೊಂಡು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

TAGGED:bjpKarnataka ElectionpoliticsRajesh Gowdaಕರ್ನಾಟಕ ಚುನಾವಣೆತುಮಕೂರುರಾಜೇಶ್ ಗೌಡಶಿರಾ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
4 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
5 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
5 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
6 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
7 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?