ಬೆಳಗಾವಿ: ಗ್ರಾಮೀಣ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಧನಂಜಯ್ ಜಾಧವ್ಗೆ (Dhananjay Jadhav) ಕೈ ತಪ್ಪಿದ್ದಕ್ಕೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ (Iranna Kadadi) ಕಣ್ಣೀರು ಹಾಕಿದ್ದಾರೆ.
ಬೆಳಗಾವಿ ಗ್ರಾಮೀಣ ಮಂಡಳ ಬಿಜೆಪಿ ಕಚೇರಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಧನಂಜಯ ಜಾಧವ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಕಣ್ಣೀರು ಹಾಕಿದ್ದಾರೆ. ಧನಂಜಯ ಜಾಧವ್ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಕ್ಷಕ್ಕೆ ದ್ರೋಹ ಮಾಡಿದ ಶೆಟ್ಟರ್ನ್ನು ಯಾರು ಕ್ಷಮಿಸಲ್ಲ : ಬಿಎಸ್ವೈ ವಾಗ್ದಾಳಿ
ರಮೇಶ್ ಜಾರಕಿಹೊಳಿ (Ramesh Jarkiholi) ಆಪ್ತ ನಾಗೇಶ್ ಮನ್ನೋಳಕರ್ಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ನಾವು ದುಡ್ಡು ಸಂಗ್ರಹಿಸಿ ಧನಂಜಯ್ ಜಾಧವ್ ಪರ ಪ್ರಚಾರ ಮಾಡಿದ್ದೇವೆ. ಆದರೆ ಈಗಷ್ಟೇ ಪಕ್ಷಕ್ಕೆ ಬಂದ ನಾಗೇಶ್ ಮನ್ನೋಳಕರ್ಗೆ ಟಿಕೆಟ್ ನೀಡಿದ್ದೀರಿ ಎಂದು ಕಾರ್ಯಕರ್ತರು ಕಣ್ಣೀರು ಹಾಕಿದ್ದಾರೆ. ಕಾರ್ಯಕರ್ತರು ಕಣ್ಣೀರಿಡುತ್ತಿದ್ದಂತೆ ಈರಣ್ಣಾ ಕಡಾಡಿ ಸಹ ಕಣ್ಣೀರು ಹಾಕಿದ್ದಾರೆ.