Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಶಿರಹಟ್ಟಿಯಲ್ಲಿ ಕಾರ್ಯಕರ್ತರಿಂದಲೇ ಶಾಸಕರ ಹಠಾವೋ ಬಿಜೆಪಿ ಬಚಾವೋ ಅಭಿಯಾನ

Public TV
Last updated: April 6, 2023 4:25 pm
Public TV
Share
3 Min Read
GADAG BJP REBEL 1
SHARE

ಗದಗ: ಜಿಲ್ಲೆಯ ಮೀಸಲು ಕ್ಷೇತ್ರ ಶಿರಹಟ್ಟಿಯ (Shirahatti) ಬಿಜೆಪಿಯಲ್ಲಿ (BJP) ಬಂಡಾಯ ಶುರುವಾಗಿದೆ. ಹಾಲಿ ಶಾಸಕ ರಾಮಣ್ಣ ಲಮಾಣಿ (Ramappa Lamani) ವಿರುದ್ಧ ಸ್ವಪಕ್ಷದ ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಕ್ಷೇತ್ರದ ಜನ ಶಕ್ತಿ ಪ್ರದರ್ಶನಕ್ಕೂ ಮುಂದಾಗಿದ್ದಾರೆ.

1983ರಲ್ಲಿಯೂ ಬಂಡಾಯ ಕಹಳೆ ಮೊಳಗಿ ಕ್ಷೇತ್ರದಲ್ಲಿ ಬಾರಿ ಅಚ್ಚರಿಯ ಬೆಳವಣಿಗೆ ಆಗಿತ್ತು. ಈಗ 2023ರಲ್ಲಿ ಅಂದರೆ, 40 ವರ್ಷದ ನಂತರ ಮತ್ತೆ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಕಹಳೆ ಮೊಳಗಿಸುವ ಲಕ್ಷಣಗಳಿವೆ. ಬಿಜೆಪಿಯಲ್ಲಿ ಇನ್ನೂ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿಲ್ಲ. ಆದರೆ ಈಗಲೇ ಭಿನ್ನಮತ ಸ್ಪೋಟವಾಗಿದೆ. ಇದನ್ನೂ ಓದಿ: ರಾಷ್ಟ್ರ ರಾಜಕಾರಣಕ್ಕೆ ಹೋಗಲು ಯತ್ನಿಸಿ ಸೋತರು; ರಾಜ್ಯ ರಾಜಕಾರಣದಲ್ಲೇ ಗೆಲುವು ಕಂಡರು!

GADAG BJP REBEL

ಹಾಲಿ ಶಾಸಕರಿಗೆ ಟಿಕೆಟ್ ಕೊಡಬೇಡಿ ಎಂದು ಅತೃಪ್ತ ಕಾರ್ಯಕರ್ತರಿಂದ ಶಕ್ತಿ ಪ್ರದರ್ಶನದ ಮೂಲಕ ರಾಜ್ಯ ಹಾಗೂ ಕೇಂದ್ರ ಹೈಕಮಾಂಡ್‍ಗೆ ಸಂದೇಶ ರವಾನಿಸಿದ್ದಾರೆ. ಇದೇ ಏ.3 ರಂದು ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಜಗದ್ಗುರು ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಕ್ಷೇತ್ರದ ಬಿಜೆಪಿ ಅತೃಪ್ತ ನಾಯಕರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನ ಶಕ್ತಿ ಪ್ರದರ್ಶನ ಮಾಡಿದ್ದರು.

ಶಿರಹಟ್ಟಿ, ಮುಂಡರಗಿ, ಲಕ್ಷ್ಮೇಶ್ವರ ತಾಲೂಕಿನ ಬಿಜೆಪಿ ಮಾಜಿ ಶಾಸಕರ ವಿರುದ್ಧ ಮಾಜಿ ಹಾಗೂ ಹಾಲಿ ಜಿ.ಪಂ, ತಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಈ ಮೂರು ತಾಲೂಕಿನ ಅನೇಕ ಗ್ರಾಮಗಳ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು ಹಾಗೂ ಪಕ್ಷದ ಪದಾಧಿಕಾರಿಗಳು ಒಟ್ಟಾಗಿ ಶಾಸಕರ ವಿರುದ್ಧ ಶಕ್ತಿ ಪ್ರದರ್ಶನ ನಡೆಸಿದ್ದರು. ಈ ಬಾರಿ ರಾಮಣ್ಣ ಲಮಾಣಿಗೆ ಟಿಕೆಟ್ ಕೊಡಬೇಡಿ ಎಂದು ರಾಜ್ಯ ಹಾಗೂ ಕೇಂದ್ರ ಹೈಕಮಾಂಡ್‍ಗೆ ನೇರವಾಗಿ ಸಂದೇಶ ರವಾನಿಸಿದ್ದಾರೆ.

ಕ್ಷೇತ್ರದಲ್ಲಿ ಬಿಜೆಪಿಯಿಂದ ಒಟ್ಟು 10 ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಆದರೆ ಶಾಸಕ ರಾಮಣ್ಣ ಹೊರತಾಗಿ ಬೇರೆ ಯಾರಿಗೆ ಟಿಕೆಟ್ ಕೊಟ್ಟರೂ ಅಂತಹ ಅಭ್ಯರ್ಥಿ ಪರ ಕೆಲಸ ಮಾಡಿ ಗೆಲ್ಲಿಸುತ್ತೇವೆ. ಹಾಲಿ ಶಾಸಕರಿಗೆ ಟಿಕೆಟ್ ನೀಡಿದರೆ ಇನ್ನುಳಿದ 9 ಜನ ಬಿಜೆಪಿ ಆಕಾಂಕ್ಷಿಗಳನ್ನು ಒಟ್ಟುಗೂಡಿಸಿ ಒಬ್ಬರನ್ನು ಪಕ್ಷೇತರವಾಗಿ ಕಣಕ್ಕಿಳಿಸಿ ಗೆಲ್ಲಿಸುತ್ತೆವೆ. ಶಾಸಕ ರಾಮಣ್ಣನನ್ನು ಸೋಲಿಸುತ್ತೇವೆ ಎಂಬ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಳೆದ ಚುನಾವಣೆಯಲ್ಲಿ (Election) 30 ಸಾವಿರ ಮತಗಳ ಲೀಡ್‍ನಲ್ಲಿ ಗೆದ್ದಿದ್ದ ಶಾಸಕರಿಗೆ ಸಚ್ಚಾರಿತ್ರ್ಯ ಇಲ್ಲ. ಅವರ ದುರ್ನಡತೆಯ ಕಾರಣದಿಂದ ಕಾರ್ಯಕರ್ತರು ಬೇಸತ್ತಿದ್ದಾರೆ. ಎಲ್ಲಾ ಕೆಲಸಕ್ಕೂ ಕುಟುಂಬಸ್ಥರ ಹಸ್ತಕ್ಷೇಪ ಹಾಗೂ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಪಕ್ಷದ ನಾಯಕರು, ಕಾರ್ಯಕರ್ತರ ಕಡೆಗಣನೆ, ಗುತ್ತಿಗೆದಾರರಿಗೆ ಮಣೆ ಹಾಕುವುದರಿಂದ ಜನ ಶಾಸಕರ ವಿರುದ್ಧ ತಿರುಗಿದ್ದಾರೆ.

ಶಾಸಕರಿಗೆ 73 ವರ್ಷ ವಯಸ್ಸಾಗಿದೆ. ಹೊಸ ಅಭ್ಯರ್ಥಿಗೆ ಅವಕಾಶ ಸಿಗಬೇಕು. ಶಾಸಕರ ಸಂಬಂಧಿಗಳ ಲಂಚದ ದಾಹದಿಂದ ಕ್ಷೇತ್ರದ ಜನಕ್ಕೆ ಸಮಸ್ಯೆಯಾಗಿದೆ. ಇಂತಹ ಅನಕ್ಷರಸ್ಥ ಶಾಸಕ ನಮಗೆ ಬೇಡ ಎಂದು ಬಹಿರಂಗವಾಗಿ ಕಾರ್ಯಕರ್ತರು ಬಂಡಾಯ ಎದ್ದಿದ್ದಾರೆ.

1983ರಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಹೀಗೆ ಬಂಡಾಯದ ಬಾವುಟ ಹಾರಿಸಲಾಗಿತ್ತು. ಕಾಂಗ್ರೆಸ್ (Congress) ಪಕ್ಷದಿಂದ ಗೋಳಪ್ಪ ಉಪನಾಳ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡಿದ್ದರು. ಆಗ ಆರ್.ಗುಂಡೂರಾವ್ ಮುಖ್ಯಮಂತ್ರಿ ಆಗಿದ್ದರು. ಆದರೂ ಕ್ಷೇತ್ರದ ಜನಾಭಿಪ್ರಾಯ ತಳ್ಳಿಹಾಕಿ ಕುಂದಗೋಳದ ನಾನಾಸಾಹೇಬ್ ಕುಲಕರ್ಣಿ ಅವರಿಗೆ ಕಾಂಗ್ರೆಸ್ ಪಕ್ಷ ಮಣೆ ಹಾಕಿತ್ತು. ಅದರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು ಒಟ್ಟಾಗಿ ಗೋಳಪ್ಪ ಉಪನಾಳ ಅವರನ್ನು ಪಕ್ಷೇತರರಾಗಿ ನಿಲ್ಲಿಸಿ ಬಹುಮತಗಳಿಂದ ಆರಿಸಿ ತಂದಿದ್ದರು. ಅಕಸ್ಮಾತ್ ಬಿಜೆಪಿ ಹಾಲಿ ಶಾಸಕನಿಗೆ ಟಿಕೆಟ್ ನೀಡಿದರೆ 1983 ರಲ್ಲಿ ಆದ ಬಂಡಾಯ ಕಹಳೆ 2023ರಲ್ಲೂ ಮರುಕಳಿಸುವ ಲಕ್ಷಣಗಳಿವೆ.

ಕ್ಷೇತ್ರದಲ್ಲಿ ಅನ್ಯ ಪಕ್ಷಕ್ಕಿಂತ ಸ್ವಪಕ್ಷದಿಂದಲೇ ಪ್ರಬಲವಾದ ವಿರೋಧಿ ಅಲೆಯನ್ನು ಶಾಸಕ ರಾಮಪ್ಪ ಲಮಾಣಿ ಎದುರಿಸುತ್ತಿದ್ದಾರೆ. ಒಟ್ಟಿನಲ್ಲಿ ಶಿರಹಟ್ಟಿ ಕ್ಷೇತ್ರದಲ್ಲಿ ಮುಂಖಡರ ಹಠಾವೋ ಬಿಜೆಪಿ ಬಚಾವೋ ಅಭಿಯಾನ ಶುರುವಾಗಿದೆ. ಇದನ್ನೂ ಓದಿ: ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರಿದ ಕೇದಾರಲಿಂಗಯ್ಯ

TAGGED:bjpcongressgadagKarnataka Election 2023Ramappa LamaniShirahattiಕರ್ನಾಟಕ ಚುನಾವಣೆಕಾಂಗ್ರೆಸ್ಗದಗಬಿಜೆಪಿಶಿರಹಟ್ಟಿ
Share This Article
Facebook Whatsapp Whatsapp Telegram

You Might Also Like

GOLD SURESH
Bengaluru City

6 ಲಕ್ಷ ಹಣ ನೀಡುವಂತೆ ಬಿಗ್‌ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್‌ಗೆ ಬೆದರಿಕೆ – ಎನ್‌ಸಿಆರ್ ದಾಖಲು

Public TV
By Public TV
1 hour ago
mid day meals
Bengaluru City

ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ

Public TV
By Public TV
2 hours ago
Gopi Chandh Padalkar
Latest

ಮತಾಂತರ ಮಾಡುವವರನ್ನು ಕೊಲ್ಲುವವರಿಗೆ 11 ಲಕ್ಷ ಬಹುಮಾನ – ಮಹಾರಾಷ್ಟ್ರ ಬಿಜೆಪಿ ಶಾಸಕನ ಪ್ರಚೋದನಕಾರಿ ಹೇಳಿಕೆ

Public TV
By Public TV
2 hours ago
Ballary Suicide
Bellary

ಕೌಟುಂಬಿಕ ಕಲಹ ಶಂಕೆ – ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Public TV
By Public TV
3 hours ago
safari EV bus
Bengaluru City

ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ

Public TV
By Public TV
3 hours ago
Turkey Air Ballon
Crime

ಟರ್ಕಿಯಲ್ಲಿ 2 ಏರ್ ಬಲೂನ್ ಅವಘಡ- ಪೈಲಟ್ ಸಾವು, 31 ಪ್ರವಾಸಿಗರಿಗೆ ಗಾಯ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?