ವಿಜಯಪುರ: ಯಡಿಯೂರಪ್ಪಗೆ (BS Yediyurappa) ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ ಮೇಲೆ ಸ್ವಲ್ಪ ಡಿಸ್ಟರ್ಬ್ ಆಗಿದ್ದಾರೆ. ದೇವರು ಅವರಿಗೆ ಆಯುಷ್ಯ, ಆರೋಗ್ಯ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದರು.
ವಿಜಯಪುರದಲ್ಲಿ ಮಾತನಾಡಿದ ಅವರು, ಅಸೆಂಬ್ಲಿಯಲ್ಲಿ ಬಿ.ಎಸ್ ಯಡಿಯೂರಪ್ಪ ಮಾತನಾಡಿದ್ದಾರೆ. ಪಾಪ ನನ್ನ ಮೇಲೆ ಬಹಳ ಪ್ರೀತಿಯಿಂದ ಬಾದಾಮಿಯಲ್ಲಿ ಸ್ಪರ್ಧೆ ಮಾಡು ಅಂತ ಹೇಳಿದ್ದಾರೆ, ಅವರಿಗೆ ಧನ್ಯವಾದ. ನಾನು ಬಾದಾಮಿಯಲ್ಲಿ ಗೆಲ್ಲಲ್ಲ ಅಂತಲ್ಲ. ಬಾದಾಮಿಯಲ್ಲಿ 100 ಕ್ಕೆ 100ರಷ್ಟು ಗೆದ್ದೇ ಗೆಲ್ಲುತ್ತೇನೆ, ಐದು ವರ್ಷ ಶಾಸಕನಾಗಿ ಆ ಜನರಿಗೆ ಕೆಲಸ ಮಾಡಿದ್ದೇನೆ, ಅವರ ಕಷ್ಟ ಸುಖಕ್ಕೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಆದ್ದರಿಂದ ಜನರಿಗೆ ದ್ರೋಹ ಮಾಡುವ ಪ್ರಶ್ನೆನೆ ಬರೋದಿಲ್ಲಾ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ರಚಿತಾ ರಾಮ್ ಟೆಂಪಲ್ ರನ್ : ಇಂದು ಮಂತ್ರಾಲಯಕ್ಕೆ ಭೇಟಿ
ನಾನು ಎಲ್ಲಿ ಸ್ಪರ್ಧಿಸುತ್ತೇನೆ ಎನ್ನುವುದನ್ನು ನಾನು ತೀರ್ಮಾನ ಮಾಡಬೇಕು, ನನ್ನ ಕ್ಷೇತ್ರದ ತೀರ್ಮಾನವನ್ನು ಕಾಂಗ್ರೆಸ್ ಮಾಡುತ್ತದೆ. ಆದರೆ ಯಡಿಯೂರಪ್ಪ ಅವರು ತೀರ್ಮಾನ ಮಾಡಲು ಯಾರು? ಎಂದು ಕಿಡಿಕಾರಿದ ಅವರು, ನಾಯಿಗೆ ಟಿಪ್ಪು ಸುಲ್ತಾನ್ ಹೆಸರಿಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಇವೆಲ್ಲ ಮಾತಾಡಲ್ಲ ನಡೀರಿ ಎಂದು ಗರಂ ಆದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಮೋದಿ ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದ್ದೇವೆ: ಶೋಭಾ ಕರಂದಾಜ್ಲೆ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k