Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವರದ್ದು ಬರೀ ಕುಟುಂಬ ರಾಜಕಾರಣ, ಯಾರೂ ಪ್ರಶ್ನೆ ಮಾಡಬಾರದು ಅಂದರೆ ಹೇಗೆ: ಎಚ್‌ಡಿಕೆ ವಿರುದ್ಧ ಸುಮಲತಾ ಕಿಡಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಅವರದ್ದು ಬರೀ ಕುಟುಂಬ ರಾಜಕಾರಣ, ಯಾರೂ ಪ್ರಶ್ನೆ ಮಾಡಬಾರದು ಅಂದರೆ ಹೇಗೆ: ಎಚ್‌ಡಿಕೆ ವಿರುದ್ಧ ಸುಮಲತಾ ಕಿಡಿ

Public TV
Last updated: April 20, 2023 4:53 pm
Public TV
Share
3 Min Read
SUMALATHA AMBAREESH
SHARE

ಮಂಡ್ಯ: ಇವರ ಕುಟುಂಬದವರು ಎಲ್ಲಾ ಕಡೆ ಸ್ಪರ್ಧೆ ಮಾಡುತ್ತಿದ್ದಾರೆ. ಅವರೆಲ್ಲಾ ದ್ವೇಷದಿಂದ ಸ್ಪರ್ಧೆ ಮಾಡುತ್ತಿದ್ದಾರಾ? ಅಥವಾ ವಿರೋಧ ಪಕ್ಷದವರ ಮೇಲೆ ಪ್ರೀತಿಯಿದ್ದು ಅವರು ಗೆಲ್ಲಲಿ ಎಂದು ನಿಂತುಕೊಂಡಿದ್ದಾರಾ ಎಂದು ಪ್ರಶ್ನಿಸುವ ಮೂಲಕ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ (Sumalatha Ambareesh) ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿದ್ದಾರೆ.

ನಮ್ಮ ಕುಟುಂಬ ಸುಮಲತಾ ಅವರಿಗೆ ಏನು ಅನ್ಯಾಯ ಮಾಡಿದೆ ಎಂಬ ಕುಮಾರಸ್ವಾಮಿ (H.D.Kumaraswamy) ಹೇಳಿಕೆ ಕುರಿತು ಮಂಡ್ಯದಲ್ಲಿ (Mandya) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಚುನಾವಣೆಯಲ್ಲಿ (Election) ಒಬ್ಬರ ವಿರುದ್ಧವಾಗಿ ಸ್ಫರ್ಧೆ ಮಾಡಿದರೆ ಅದು ದ್ವೇಷ ಎಂದು ಅರ್ಥನಾ? ಚುನಾವಣೆ ಎಂದಮೇಲೆ ಅದು ಸ್ಪರ್ಧೆ. ಅದರಲ್ಲಿ ನಿಮಗೂ ಹಕ್ಕಿದೆ, ನನಗೂ ಹಕ್ಕಿದೆ ಎಂದರು. ಇದನ್ನೂ ಓದಿ: ದಿಢೀರ್‌ ಬೆಳವಣಿಗೆ – ಕನಕಪುರದಿಂದ ಡಿಕೆ ಸುರೇಶ್‌ ನಾಮಪತ್ರ ಸಲ್ಲಿಕೆ 

BJP JDS CON

ಚುನಾವಣೆ ಎಂದರೆ ಭಾರತ-ಪಾಕಿಸ್ತಾನದ ರೀತಿ ನಾವು ಶತ್ರುಗಳು ಎಂದು ಅರ್ಥ ಅಲ್ಲ. ನಾವು ಒಂದೇ ಸ್ಪರ್ಧೆಯಲ್ಲಿ ವಿರೋಧಿಗಳು ಅಷ್ಟೇ. ಅದನ್ನು ಅವರು ನನ್ನ ಮೇಲೆ ದ್ವೇಷವಿದೆ, ನನ್ನ ಪಕ್ಷದ ಮೇಲೆ ದ್ವೇಷವಿದೆ ಎಂದು ಹೇಳುವುದು ವಿಚಿತ್ರ. ಯಾಕೆಂದರೆ ಅವರದ್ದು ಬರೀ ಕುಟುಂಬ ರಾಜಕಾರಣ. ನಮ್ಮನ್ನು ಯಾರೂ ಎಲ್ಲಿಯೂ ವಿರೋಧಿಸಬಾರದು ಎನ್ನುವ ಮನೋಭಾವನೆ ಅವರದ್ದು. ಚುನಾವಣೆ ಅಂದಮೇಲೆ ಅವರ ಮಗನೇ ಆಗಲಿ, ಅವರೇ ಆಗಲಿ ಅಥವಾ ಅವರ ಶ್ರೀಮತಿಯೇ ಆಗಲಿ ಯಾರೇ ಬಂದರೂ ವಿರೋಧ ಮಾಡುವವರು ಇದ್ದೇ ಇರುತ್ತಾರೆ. ಇಲ್ಲಿಯವರೆಗೆ ಏನಾಗಿದೆ ಎಂದರೆ ರಾಜಕಾರಣದಲ್ಲಿ (Politics) ಯಾವ ಅಭ್ಯರ್ಥಿಗಳೂ ಅವರನ್ನು ಎದುರಿಸಿ ನಿಲ್ಲುತ್ತಿರಲಿಲ್ಲ. ಈಗ ಅದು ಆಗುತ್ತಿದೆ ಎಂಬ ವಿಷಯವನ್ನು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಲಿಂಗಾಯತರನ್ನು ಸಿಎಂ ಮಾಡುತ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ : ಸೋಮಣ್ಣ ಸವಾಲು

ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಮ್ (Ashok  Jayaram) ಅವರಿಗೆ 20 ವರ್ಷಗಳಿಂದ ಜೆಡಿಎಸ್ (JDS) ಪಕ್ಷದಿಂದ ಅನ್ಯಾಯವಾಗುತ್ತಾ ಬಂದಿದೆ. ಎಸ್.ಡಿ ಜಯರಾಮ್ ಅಂತಹ ನಾಯಕರು ಜೆಡಿಎಸ್ ಪಕ್ಷವನ್ನು ಬೆಳೆಸಿದಂತಹ ನಾಯಕರು. ಅವರ ಕುಟುಂಬಕ್ಕೆ ಮೊದಲಿನಿಂದಲೂ ಅನ್ಯಾಯ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಡಿಕೆಶಿ ಟಿಕೆಟ್ ಮಾರಾಟ ಮಾಡಿದ್ದಾರೆ : ಮೊಯಿದ್ದಿನ್ ಬಾವಾ ಆರೋಪ 

SUMALATHA 3

ಜೆಡಿಎಸ್ ಅಶೋಕ್ ಜಯರಾಮ್ ಅವರ ಭವಿಷ್ಯವನ್ನೇ ಹಾಳು ಮಾಡಿದೆ. ಅವರ ಕುಟುಂಬದ ಪರವಾಗಿ ನಾವು ನಿಂತುಕೊಳ್ಳಬೇಕು. ಅಂತಹ ಕೆಲಸವನ್ನು ನಾವು ಮಾಡಬಾರದು. ಅಶೋಕ್ ಜಯರಾಮ್ ಅವರನ್ನು ನಿಲ್ಲಿಸಿ ಗೆಲ್ಲಿಸಬಹುದು ಎಂಬ ವಿಶ್ವಾಸ ನಮಗಿದೆ. ಕುಮಾರಸ್ವಾಮಿಯವರೇ ಅಭ್ಯರ್ಥಿಯಾಗಿ ಬಂದರೂ ಅಶೋಕ್ ಅವರನ್ನು ಗೆಲ್ಲಿಸುವ ತಾಕತ್ತು ನಮಗಿದೆ ಎಂದರು. ಇದನ್ನೂ ಓದಿ: ಏ.28ಕ್ಕೆ ಕೋಲಾರಕ್ಕೆ ಮೋದಿ – 1 ವಾರ 20+ ಸಮಾವೇಶದಲ್ಲಿ ಭಾಗಿ 

ನಾಮಪತ್ರ ಸಲ್ಲಿಸದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಅದು ವದಂತಿ ಅಷ್ಟೇ. ಆದರೆ ಪಕ್ಷದಲ್ಲಿ ಆ ರೀತಿಯಾದ ಚರ್ಚೆಗಳು ನಡೆದಿತ್ತು. ಜನತಾ ದಳದಲ್ಲಿ ಕುಮಾರಸ್ವಾಮಿ ಅಭ್ಯರ್ಥಿಯಾದರೆ ನೀವು ನಿಲ್ಲಬೇಕು ಎಂದು ಹೈಕಮಾಂಡ್ ಸಹ ಸೂಚಿಸಿತ್ತು. ನಮ್ಮಲ್ಲಿ ಸಮರ್ಥರಾದ ಅಭ್ಯರ್ಥಿ ಇದ್ದಾರೆ. ಅವರಿಗೆ ಶಕ್ತಿಯನ್ನು ತುಂಬಿಸಿ ಬಳಸಬೇಕಾಗಿದೆ. ನಾನು ನಾಮಪತ್ರ ಸಲ್ಲಿಸಲು ಕಾಲಾವಕಾಶ ಕೇಳಿದ್ದೇನೆ ಎಂಬ ಅನುಮಾನಗಳಿದ್ದಲ್ಲಿ ಡಿಸಿ ಕಚೇರಿಯಲ್ಲಿ ವಿಚಾರಿಸಿಕೊಳ್ಳಲಿ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಗ್ಯಾಂಗ್‍ಸ್ಟಾರ್ ಅತೀಕ್ ಅಹ್ಮದ್ ಬೆಂಬಲಿಗ ಕಾಂಗ್ರೆಸ್ ಸ್ಟಾರ್ ಪ್ರಚಾರಕ – ಕರಂದ್ಲಾಂಜೆ ಖಂಡನೆ 

ಕುಮಾರಸ್ವಾಮಿ ಅಭ್ಯರ್ಥಿಯಾದರೆ ನೀವು ಸ್ಪರ್ಧೆ ಮಾಡುತ್ತೀರ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾವುದೇ ಸಿದ್ಧತೆಗಳನ್ನು ಮಾಡಿಕೊಳ್ಳಲಿಲ್ಲ. ನಮ್ಮ ಕಾರ್ಯಕರ್ತರು, ಬೆಂಬಲಿಗರು ಸೇರಿದಂತೆ ಎಲ್ಲರೂ ನೀವೇ ಬನ್ನಿ ಎಂದು ಕೇಳುತ್ತಿದ್ದರು. ನನಗೆ ಅದರ ಅಗತ್ಯವಿಲ್ಲ. ನಾವು ಏನು ಎಂಬುದನ್ನು ಈ ಚುನಾವಣೆಯಲ್ಲಿ ನಿರೂಪಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ : ಈಶ್ವರಪ್ಪ

Share This Article
Facebook Whatsapp Whatsapp Telegram
Previous Article Amritpal Singh wife Kirandeep Kaur ಲಂಡನ್‍ಗೆ ತೆರಳುತ್ತಿದ್ದ ಅಮೃತ್‌ಪಾಲ್ ಪತ್ನಿ ಪೊಲೀಸರ ವಶಕ್ಕೆ
Next Article PRATAP SIMHA 2 ಸಿದ್ದರಾಮಯ್ಯಗೆ ಪುಕ್ಕಲುತನ ಕಾಡ್ತಿರೋದ್ರಿಂದ 18 ವರ್ಷ ತುಂಬದ ಮೊಮ್ಮಗ ಜೊತೆ ಪ್ರಚಾರಕ್ಕೆ ಬರ್ತಿದ್ದಾರೆ – ಸಿಂಹ ಕಿಡಿ

Latest Cinema News

Chikkanna
ಮತ್ತೆ ಹೀರೋ ಆದ ಚಿಕ್ಕಣ್ಣ: ಮಹೇಶ್ ಕುಮಾರ್ ನಿರ್ದೇಶನದ ಚಿತ್ರ
Cinema Latest Sandalwood Top Stories
Pawan Kalyan 1
ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ – ಶ್ರೀ ಕ್ಷೇತ್ರದ ಪರ ನಿಂತ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
Cinema Dharwad Districts Karnataka Latest South cinema Top Stories
Manada Kadalu Boy Sumukh New Movie poster released
ಮನದ ಕಡಲು ಹುಡುಗನ ಹೊಸ ಸಿನಿಮಾ : ನೈಜ ಕಥೆಗೆ ಸುಮುಖ್ ಹೀರೋ
Cinema Latest Sandalwood Uncategorized
Darshan
ಬದುಕಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನಗೆ ವಿಷ ಕೊಡಿ: ಜಡ್ಜ್‌ ಮುಂದೆ ದರ್ಶನ್‌ ಮನವಿ
Bengaluru City Cinema Court Karnataka Latest Main Post
Kantara Chapter 1
ಕಾಂತಾರ ಚಾಪ್ಟರ್ 1 – ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ನಲ್ಲಿ ಬಿಡುಗಡೆಗೆ ಸಿದ್ಧ
Cinema Latest Sandalwood Top Stories World

You Might Also Like

air india express
Latest

ನೇಪಾಳದ ಏರ್‌ಪೋರ್ಟ್ ಬಳಿ ಹೊಗೆ ಕಂಡು ದೆಹಲಿಗೆ ವಾಪಸಾದ ವಿಮಾನ – ಏರ್‌ ಇಂಡಿಯಾ, ಇಂಡಿಗೋ ಹಾರಾಟ ರದ್ದು

7 minutes ago
vinay kulkarni
Court

ಪುತ್ರನಿಗೆ ಶಸ್ತ್ರಚಿಕಿತ್ಸೆ – ಶಾಸಕ ವಿನಯ್‌ಗೆ 2 ದಿನಗಳ ಮಧ್ಯಂತರ ಜಾಮೀನು ಮಂಜೂರು

54 minutes ago
Shobha Karandlaje
Districts

ಈ ಜನ್ಮದಲ್ಲೇ ಮುಸ್ಲಿಂ ಧರ್ಮಕ್ಕೆ ಹೋಗಿಬಿಡಿ, ನಾವೇ ಹಾರ ಹಾಕಿ ಕಳುಹಿಸ್ತೇವೆ: ಶೋಭಾ ಕರಂದ್ಲಾಜೆ

57 minutes ago
BK Hariprasad
Bengaluru City

ಸರ್ಕಾರ ಬುಡಮೇಲು ಮಾಡಲು ಅಮಿತ್ ಶಾ ಸಲಹೆ – ಬಿಜೆಪಿ ನಾಯಕರ ದೆಹಲಿ ಭೇಟಿಗೆ ಹರಿಪ್ರಸಾದ್ ಲೇವಡಿ

1 hour ago
nepal protest 1
Latest

ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?