Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವರದ್ದು ಬರೀ ಕುಟುಂಬ ರಾಜಕಾರಣ, ಯಾರೂ ಪ್ರಶ್ನೆ ಮಾಡಬಾರದು ಅಂದರೆ ಹೇಗೆ: ಎಚ್‌ಡಿಕೆ ವಿರುದ್ಧ ಸುಮಲತಾ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅವರದ್ದು ಬರೀ ಕುಟುಂಬ ರಾಜಕಾರಣ, ಯಾರೂ ಪ್ರಶ್ನೆ ಮಾಡಬಾರದು ಅಂದರೆ ಹೇಗೆ: ಎಚ್‌ಡಿಕೆ ವಿರುದ್ಧ ಸುಮಲತಾ ಕಿಡಿ

Districts

ಅವರದ್ದು ಬರೀ ಕುಟುಂಬ ರಾಜಕಾರಣ, ಯಾರೂ ಪ್ರಶ್ನೆ ಮಾಡಬಾರದು ಅಂದರೆ ಹೇಗೆ: ಎಚ್‌ಡಿಕೆ ವಿರುದ್ಧ ಸುಮಲತಾ ಕಿಡಿ

Public TV
Last updated: April 20, 2023 4:53 pm
Public TV
Share
3 Min Read
SUMALATHA AMBAREESH
SHARE

ಮಂಡ್ಯ: ಇವರ ಕುಟುಂಬದವರು ಎಲ್ಲಾ ಕಡೆ ಸ್ಪರ್ಧೆ ಮಾಡುತ್ತಿದ್ದಾರೆ. ಅವರೆಲ್ಲಾ ದ್ವೇಷದಿಂದ ಸ್ಪರ್ಧೆ ಮಾಡುತ್ತಿದ್ದಾರಾ? ಅಥವಾ ವಿರೋಧ ಪಕ್ಷದವರ ಮೇಲೆ ಪ್ರೀತಿಯಿದ್ದು ಅವರು ಗೆಲ್ಲಲಿ ಎಂದು ನಿಂತುಕೊಂಡಿದ್ದಾರಾ ಎಂದು ಪ್ರಶ್ನಿಸುವ ಮೂಲಕ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ (Sumalatha Ambareesh) ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿದ್ದಾರೆ.

ನಮ್ಮ ಕುಟುಂಬ ಸುಮಲತಾ ಅವರಿಗೆ ಏನು ಅನ್ಯಾಯ ಮಾಡಿದೆ ಎಂಬ ಕುಮಾರಸ್ವಾಮಿ (H.D.Kumaraswamy) ಹೇಳಿಕೆ ಕುರಿತು ಮಂಡ್ಯದಲ್ಲಿ (Mandya) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಚುನಾವಣೆಯಲ್ಲಿ (Election) ಒಬ್ಬರ ವಿರುದ್ಧವಾಗಿ ಸ್ಫರ್ಧೆ ಮಾಡಿದರೆ ಅದು ದ್ವೇಷ ಎಂದು ಅರ್ಥನಾ? ಚುನಾವಣೆ ಎಂದಮೇಲೆ ಅದು ಸ್ಪರ್ಧೆ. ಅದರಲ್ಲಿ ನಿಮಗೂ ಹಕ್ಕಿದೆ, ನನಗೂ ಹಕ್ಕಿದೆ ಎಂದರು. ಇದನ್ನೂ ಓದಿ: ದಿಢೀರ್‌ ಬೆಳವಣಿಗೆ – ಕನಕಪುರದಿಂದ ಡಿಕೆ ಸುರೇಶ್‌ ನಾಮಪತ್ರ ಸಲ್ಲಿಕೆ 

BJP JDS CON

ಚುನಾವಣೆ ಎಂದರೆ ಭಾರತ-ಪಾಕಿಸ್ತಾನದ ರೀತಿ ನಾವು ಶತ್ರುಗಳು ಎಂದು ಅರ್ಥ ಅಲ್ಲ. ನಾವು ಒಂದೇ ಸ್ಪರ್ಧೆಯಲ್ಲಿ ವಿರೋಧಿಗಳು ಅಷ್ಟೇ. ಅದನ್ನು ಅವರು ನನ್ನ ಮೇಲೆ ದ್ವೇಷವಿದೆ, ನನ್ನ ಪಕ್ಷದ ಮೇಲೆ ದ್ವೇಷವಿದೆ ಎಂದು ಹೇಳುವುದು ವಿಚಿತ್ರ. ಯಾಕೆಂದರೆ ಅವರದ್ದು ಬರೀ ಕುಟುಂಬ ರಾಜಕಾರಣ. ನಮ್ಮನ್ನು ಯಾರೂ ಎಲ್ಲಿಯೂ ವಿರೋಧಿಸಬಾರದು ಎನ್ನುವ ಮನೋಭಾವನೆ ಅವರದ್ದು. ಚುನಾವಣೆ ಅಂದಮೇಲೆ ಅವರ ಮಗನೇ ಆಗಲಿ, ಅವರೇ ಆಗಲಿ ಅಥವಾ ಅವರ ಶ್ರೀಮತಿಯೇ ಆಗಲಿ ಯಾರೇ ಬಂದರೂ ವಿರೋಧ ಮಾಡುವವರು ಇದ್ದೇ ಇರುತ್ತಾರೆ. ಇಲ್ಲಿಯವರೆಗೆ ಏನಾಗಿದೆ ಎಂದರೆ ರಾಜಕಾರಣದಲ್ಲಿ (Politics) ಯಾವ ಅಭ್ಯರ್ಥಿಗಳೂ ಅವರನ್ನು ಎದುರಿಸಿ ನಿಲ್ಲುತ್ತಿರಲಿಲ್ಲ. ಈಗ ಅದು ಆಗುತ್ತಿದೆ ಎಂಬ ವಿಷಯವನ್ನು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಲಿಂಗಾಯತರನ್ನು ಸಿಎಂ ಮಾಡುತ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ : ಸೋಮಣ್ಣ ಸವಾಲು

ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಮ್ (Ashok  Jayaram) ಅವರಿಗೆ 20 ವರ್ಷಗಳಿಂದ ಜೆಡಿಎಸ್ (JDS) ಪಕ್ಷದಿಂದ ಅನ್ಯಾಯವಾಗುತ್ತಾ ಬಂದಿದೆ. ಎಸ್.ಡಿ ಜಯರಾಮ್ ಅಂತಹ ನಾಯಕರು ಜೆಡಿಎಸ್ ಪಕ್ಷವನ್ನು ಬೆಳೆಸಿದಂತಹ ನಾಯಕರು. ಅವರ ಕುಟುಂಬಕ್ಕೆ ಮೊದಲಿನಿಂದಲೂ ಅನ್ಯಾಯ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಡಿಕೆಶಿ ಟಿಕೆಟ್ ಮಾರಾಟ ಮಾಡಿದ್ದಾರೆ : ಮೊಯಿದ್ದಿನ್ ಬಾವಾ ಆರೋಪ 

SUMALATHA 3

ಜೆಡಿಎಸ್ ಅಶೋಕ್ ಜಯರಾಮ್ ಅವರ ಭವಿಷ್ಯವನ್ನೇ ಹಾಳು ಮಾಡಿದೆ. ಅವರ ಕುಟುಂಬದ ಪರವಾಗಿ ನಾವು ನಿಂತುಕೊಳ್ಳಬೇಕು. ಅಂತಹ ಕೆಲಸವನ್ನು ನಾವು ಮಾಡಬಾರದು. ಅಶೋಕ್ ಜಯರಾಮ್ ಅವರನ್ನು ನಿಲ್ಲಿಸಿ ಗೆಲ್ಲಿಸಬಹುದು ಎಂಬ ವಿಶ್ವಾಸ ನಮಗಿದೆ. ಕುಮಾರಸ್ವಾಮಿಯವರೇ ಅಭ್ಯರ್ಥಿಯಾಗಿ ಬಂದರೂ ಅಶೋಕ್ ಅವರನ್ನು ಗೆಲ್ಲಿಸುವ ತಾಕತ್ತು ನಮಗಿದೆ ಎಂದರು. ಇದನ್ನೂ ಓದಿ: ಏ.28ಕ್ಕೆ ಕೋಲಾರಕ್ಕೆ ಮೋದಿ – 1 ವಾರ 20+ ಸಮಾವೇಶದಲ್ಲಿ ಭಾಗಿ 

ನಾಮಪತ್ರ ಸಲ್ಲಿಸದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಅದು ವದಂತಿ ಅಷ್ಟೇ. ಆದರೆ ಪಕ್ಷದಲ್ಲಿ ಆ ರೀತಿಯಾದ ಚರ್ಚೆಗಳು ನಡೆದಿತ್ತು. ಜನತಾ ದಳದಲ್ಲಿ ಕುಮಾರಸ್ವಾಮಿ ಅಭ್ಯರ್ಥಿಯಾದರೆ ನೀವು ನಿಲ್ಲಬೇಕು ಎಂದು ಹೈಕಮಾಂಡ್ ಸಹ ಸೂಚಿಸಿತ್ತು. ನಮ್ಮಲ್ಲಿ ಸಮರ್ಥರಾದ ಅಭ್ಯರ್ಥಿ ಇದ್ದಾರೆ. ಅವರಿಗೆ ಶಕ್ತಿಯನ್ನು ತುಂಬಿಸಿ ಬಳಸಬೇಕಾಗಿದೆ. ನಾನು ನಾಮಪತ್ರ ಸಲ್ಲಿಸಲು ಕಾಲಾವಕಾಶ ಕೇಳಿದ್ದೇನೆ ಎಂಬ ಅನುಮಾನಗಳಿದ್ದಲ್ಲಿ ಡಿಸಿ ಕಚೇರಿಯಲ್ಲಿ ವಿಚಾರಿಸಿಕೊಳ್ಳಲಿ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಗ್ಯಾಂಗ್‍ಸ್ಟಾರ್ ಅತೀಕ್ ಅಹ್ಮದ್ ಬೆಂಬಲಿಗ ಕಾಂಗ್ರೆಸ್ ಸ್ಟಾರ್ ಪ್ರಚಾರಕ – ಕರಂದ್ಲಾಂಜೆ ಖಂಡನೆ 

ಕುಮಾರಸ್ವಾಮಿ ಅಭ್ಯರ್ಥಿಯಾದರೆ ನೀವು ಸ್ಪರ್ಧೆ ಮಾಡುತ್ತೀರ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾವುದೇ ಸಿದ್ಧತೆಗಳನ್ನು ಮಾಡಿಕೊಳ್ಳಲಿಲ್ಲ. ನಮ್ಮ ಕಾರ್ಯಕರ್ತರು, ಬೆಂಬಲಿಗರು ಸೇರಿದಂತೆ ಎಲ್ಲರೂ ನೀವೇ ಬನ್ನಿ ಎಂದು ಕೇಳುತ್ತಿದ್ದರು. ನನಗೆ ಅದರ ಅಗತ್ಯವಿಲ್ಲ. ನಾವು ಏನು ಎಂಬುದನ್ನು ಈ ಚುನಾವಣೆಯಲ್ಲಿ ನಿರೂಪಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ : ಈಶ್ವರಪ್ಪ

TAGGED:Ashok  Jayarambjpelectionh d kumaraswamyjdsmandyaSumalatha Ambareeshಅಶೋಕ್ ಜಯರಾಮ್ಚುನಾವಣೆಜೆಡಿಎಸ್ಬಿಜೆಪಿಮಂಡ್ಯಸುಮಲತಾ ಅಂಬರೀಶ್ಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

gilli kavya 1
ಕಣ್ಣೀರಿಟ್ಟ ‘ಕಾವು’ – ವಿಲನ್‌ ಕೊಟ್ಟ ಟಾಸ್ಕಲ್ಲಿ ಗೆದ್ರಾ ಗಿಲ್ಲಿ?
Cinema Latest Top Stories TV Shows
Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories
Rajinikanth Padayappa 2
ಪಡೆಯಪ್ಪ ಪಾರ್ಟ್-2 ಬಗ್ಗೆ ತಲೈವಾ ಹೇಳಿದ್ದೇನು?
Cinema Latest Top Stories
V. Shantaram Biopic Tamannaah Bhatia
ನಟಿ ಜಯಶ್ರೀಯಾದ ತಮನ್ನಾ ಭಾಟಿಯಾ
Cinema Latest Top Stories

You Might Also Like

karwar jail
Crime

ಕಾರವಾರ ಜೈಲಲ್ಲಿ ಕೈದಿಗಳಿಂದ ಮತ್ತೆ ದಾಂಧಲೆ; ಜೈಲಲ್ಲಿದ್ದ ಟಿ.ವಿ ಸೇರಿ ಹಲವು ವಸ್ತುಗಳ ಧ್ವಂಸ

Public TV
By Public TV
1 hour ago
Traffic Fine
Bengaluru City

ಟ್ರಾಫಿಕ್ ಫೈನ್‌ಗೆ 50% ಡಿಸ್ಕೌಂಟ್ – 5 ಲಕ್ಷಕ್ಕೂ ಹೆಚ್ಚು ಕೇಸ್ ಇತ್ಯರ್ಥ, 16.63 ಕೋಟಿ ದಂಡ ಸಂಗ್ರಹ

Public TV
By Public TV
2 hours ago
H 1B Visa
Latest

ಅಮೆರಿಕ ಸೋಷಿಯಲ್‌ ಮೀಡಿಯಾ ಹೊಸ ರೂಲ್ಸ್‌ – ಭಾರತೀಯರಿಗೆ H-1B ವೀಸಾ ನೇಮಕಾತಿ ಮುಂದೂಡಿಕೆ

Public TV
By Public TV
2 hours ago
Karnataka Legislatiev Assembly
Belgaum

ಇಂದು ವಿಧಾನಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡನೆ

Public TV
By Public TV
2 hours ago
tiger cubs mysuru
Latest

ಮೈಸೂರು| ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ಸಾವು

Public TV
By Public TV
2 hours ago
pm modi satya nadella
Latest

AI 1st ಫ್ಯೂಚರ್‌ಗಾಗಿ 1.5 ಲಕ್ಷ ಕೋಟಿ ರೂ. – ಭಾರತದಲ್ಲಿ ಮೈಕ್ರೋಸಾಫ್ಟ್‌ ಮೆಗಾ ಹೂಡಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?