Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೇಕಾರರ ನಾಡಲ್ಲಿ ಯಾರಿಗೆ ಟಿಕೆಟ್- ಎರಡೂ ಪಕ್ಷದಲ್ಲೂ ಎದ್ದಿದೆ ಅಸಮಾಧಾನದ ಬಿರುಗಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ನೇಕಾರರ ನಾಡಲ್ಲಿ ಯಾರಿಗೆ ಟಿಕೆಟ್- ಎರಡೂ ಪಕ್ಷದಲ್ಲೂ ಎದ್ದಿದೆ ಅಸಮಾಧಾನದ ಬಿರುಗಾಳಿ

Bagalkot

ನೇಕಾರರ ನಾಡಲ್ಲಿ ಯಾರಿಗೆ ಟಿಕೆಟ್- ಎರಡೂ ಪಕ್ಷದಲ್ಲೂ ಎದ್ದಿದೆ ಅಸಮಾಧಾನದ ಬಿರುಗಾಳಿ

Public TV
Last updated: April 9, 2023 4:37 pm
Public TV
Share
4 Min Read
SIDDU SAVADI UMASHREE
SHARE

ಬಾಗಲಕೋಟೆ: ಜಿಲ್ಲೆಯಲ್ಲಿ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಿವೆ. ಸದ್ಯಕ್ಕೆ ಬಾದಾಮಿ (Badami) ಹೈವೋಲ್ಟೇಜ್ ಕ್ಷೇತ್ರವಾಗಿದ್ದರೂ, ತೇರದಾಳ ಕೂಡ ಹೈವೋಲ್ಟೇಜ್ ಕ್ಷೇತ್ರವಾಗಿ ಬದಲಾಗುತ್ತಿದೆ. ತೇರದಾಳ ಕ್ಷೇತ್ರಕ್ಕೆ ಬಹಳ ಹಳೆಯ ರಾಜಕೀಯ ಇತಿಹಾಸವಿಲ್ಲ. ಈ ಕ್ಷೇತ್ರ ಉಗಮವಾಗಿದ್ದೇ 2008ರಲ್ಲಿ.

2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆ ವೇಳೆ ಉದಯವಾದ ವಿಧಾನಸಭಾ ಕ್ಷೇತ್ರ ತೇರದಾಳ. ವಿಂಗಡಣೆಗೂ ಮೊದಲು ಜಮಖಂಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿತ್ತು. 2008ರ ಮೊದಲ ಚುನಾವಣೆಯಲ್ಲಿ ಕ್ಷೇತ್ರ ಇಡೀ ರಾಜ್ಯದ ಗಮನವನ್ನು ಸೆಳೆದಿತ್ತು. ಇದನ್ನೂ ಓದಿ: ಹಿಡಿದು ಮಾರಿಬಿಡಬಹುದೆಂಬ ಭಯಕ್ಕೆ ಹುಲಿ ಗುಹೆಯಲ್ಲಿ ಅಡಗಿರಬಹುದು: ಮೋದಿ ಸಫಾರಿಗೆ ಸಿದ್ದು ವ್ಯಂಗ್ಯ

ತೇರದಾಳ ಕ್ಷೇತ್ರದ ಜನರಿಗೆ ಮೊದಲ ಬಾರಿ ಚುನಾವಣೆ (Election) ಆಗಿದ್ದರಿಂದ ಬಾರಿ ಕುತೂಹಲವನ್ನು ಕೆರಳಿಸಿತ್ತು. ಇನ್ನು 2008ರ ಚುನಾವಣೆಯಲ್ಲಿ ಈ ಕ್ಷೇತ್ರ ಇಷ್ಟು ಕುತೂಹಲಕಾರಿ ಹಾಗೂ ಹೈವೋಲ್ಟೇಜ್ ಕ್ಷೇತ್ರ ಆಗಲೂ ಪ್ರಮುಖ ಕಾರಣ ಚಿತ್ರನಟಿ ಹಿರಿಯ ಕಲಾವಿದೆ ಉಮಾಶ್ರಿಯವರ ಸ್ಪರ್ಧೆ.

ಚಿತ್ರನಟಿಯಾಗಿ ತನ್ನದೇ ಗುರುತು ಮೂಡಿಸಿದ್ದ ಉಮಾಶ್ರಿ ನೇಕಾರ ಸಮುದಾಯದವರೇ ಆಗಿದ್ದರು. ಈ ಕ್ಷೇತ್ರದಲ್ಲಿ ನೇಕಾರರ 40 ಸಾವಿರ ಮತಗಳಿವೆ. ನೇಕಾರರ ಪ್ರಭಾವ ಹೆಚ್ಚಾಗಿರುವ ತೇರದಾಳ (Terdal) ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಅವರು ಮುಂದಾಗಿದ್ದರು.

ಇನ್ನೂ ಮಹಿಳೆ ಎಂಬ ಅನುಕಂಪದೊಂದಿದೆ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಟಿಕೆಟ್ ಪಡೆದು ಅಖಾಡಕ್ಕೆ ಇಳಿದಿದ್ದರು. ಮೊದಲ ಬಾರಿ ಇಷ್ಟೆಲ್ಲ ಪ್ರಭಾವ ಬಿಜೆಪಿ (BJP) ವಿರೋಧಿ ಅಲೆ ಇದ್ದರೂ ಸಹ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಸಿದ್ದು ಸವದಿ ವಿರುದ್ಧ ಸೋತಿದ್ದರು. ಭಾರತೀಯ ಸೇನೆಯಲ್ಲಿ ಕೆಲ ವರ್ಷ ಸೇವೆ ಸಲ್ಲಿಸಿ ಬಂದು ರಾಜಕೀಯ ಅಖಾಡಕ್ಕೆ ಇಳಿದು ನೆಲೆ ಕಂಡುಕೊಂಡಿರುವ ಸಿದ್ದು ಸವದಿ. 2008ರ ಮೊದಲು ಜಮಖಂಡಿ ಶಾಸಕರಾಗಿದ್ದರು. ತೇರದಾಳ ಜಮಖಂಡಿ ಕ್ಷೇತ್ರದ ವ್ಯಾಪ್ತಿಯಲ್ಲೇ ಇದ್ದಿದ್ದರಿಂದ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದರು.

PADMAJITH NADA GOWDA

ಉಮಾಶ್ರಿ (Umashree) ಅವರಿಗೆ ಕಲೆ, ಮಹಿಳಾ ಅನುಕಂಪ, ಕಾಂಗ್ರೆಸ್ ಕೃಪಾಶೀರ್ವಾದ ವರ್ಚಸ್ಸು ಇದ್ದಾಗಲೂ ಸಿದ್ದು ಸವದಿ (Siddu Savadi) 62,595 ಮತ ಪಡೆದರೆ, ಉಮಾಶ್ರಿ 50,351 ಮತ ಪಡೆದಿದ್ದರು. ಉಮಾಶ್ರಿ ವಿರುದ್ಧ 12,244 ಮತಗಳ ಅಂತರದಿಂದ ಸಿದ್ದು ಸವದಿ ಗೆದ್ದು ಬೀಗಿದ್ದರು.

ಇನ್ನು 2013ರ ಚುನಾವಣೆಯಲ್ಲಿ ಪುನಃ ಸಿದ್ದು ಸವದಿ ಹಾಗೂ ಉಮಾಶ್ರಿ ಮಧ್ಯೆ ನೇರ ಹಣಾಹಣಿ ನಡೆದಿತ್ತು. ಆಗ ಬಿಜೆಪಿ ಸರ್ಕಾರದಲ್ಲಿ ನಡೆದ ಏರುಪೇರುಗಳು, ಬಿ.ಎಸ್.ಯಡಿಯೂರಪ್ಪ ಕೆಜೆಪಿ ಪಕ್ಷ ಕಟ್ಟಿದ್ದು, ಶ್ರೀರಾಮುಲು ಬಿಎಸ್‍ಆರ್ ಪಕ್ಷದ ಪರಿಣಾಮದಿಂದ ಉಮಾಶ್ರಿ, ಸಿದ್ದು ಸವದಿ ವಿರುದ್ಧ ಜಯ ಸಾಧಿಸಿದ್ದರು.

ಉಮಾಶ್ರಿ 70,189 ಮತ ಪಡೆದರೆ ಸಿದ್ದು ಸವದಿ 67,590 ಮತ ಪಡೆದಿದ್ದರು. ಕೇವಲ 2599 ಮತಗಳ ಅಂತರದಿಂದ ಉಮಾಶ್ರಿ ಜಯ ಸಾಧಿಸಿದ್ದರು. ನಂತರ 2018ರಲ್ಲಿ ಪ್ರಧಾನಿ ಮೋದಿ ಹವಾ, ಯಡಿಯೂರಪ್ಪ ಪುನಃ ಬಿಜೆಪಿಗೆ ಬಂದಿದ್ದು, ಕಾಂಗ್ರೆಸ್ ಆಡಳಿತ ವಿರೋಧಿ ಅಲೆ ಕಾರಣದಿಂದ 2018ರಲ್ಲಿ ತೇರದಾಳ ಕ್ಷೇತ್ರದಲ್ಲಿ ಮತ್ತೆ ಎದುರಾಳಿಯಾಗಿದ್ದ ಉಮಾಶ್ರಿ ಸಿದ್ದು ಸವದಿ ಮಧ್ಯೆ ನೇರ ಹಣಾಹಣಿ ನಡೆದಿತ್ತು. ಆಗ ಸಿದ್ದು ಸವದಿ 87,583 ಮತ ಪಡೆದರೆ, ಉಮಾಶ್ರಿ 66,470 ಮತ ಪಡೆದಿದ್ದರು. 21,113 ಮತಗಳ ಅಂತರದಿಂದ ಸಿದ್ದು ಸವದಿ ಜಯ ಗಳಿಸಿದ್ದರು.

BJP Congress

ತೇರದಾಳ ಕ್ಷೇತ್ರದಲ್ಲಿ ನೇಕಾರರು, ಲಿಂಗಾಯತ ಮತದಾರರು ಹೆಚ್ಚಾಗಿದ್ದು ನೇಕಾರರೇ ಇಲ್ಲಿ ಪ್ರಮುಖ ನಿರ್ಣಾಯಕರಾಗಿದ್ದಾರೆ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ನೇಕಾರ ಹಾಗೂ ಲಿಂಗಾಯತರ ಸಮುದಾಯದವರೇ ಶಾಸಕರಾಗಿದ್ದಾರೆ. ಎರಡು ಬಾರಿ ಲಿಂಗಾಯತ ಪಂಚಮಾಲಿ ಸಮುದಾಯದ ಸಿದ್ದು ಸವದಿ ಶಾಸಕರಾದರೆ. ಒಂದು ಬಾರಿ ನೇಕಾರ ಸಮಾಜದ ಉಮಾಶ್ರಿ ಶಾಸಕಿಯಾಗಿದ್ದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಉಮಾಶ್ರಿ ಸಚಿವೆಯಾಗಿ ಕೂಡ ಕೆಲಸ ಮಾಡಿದ್ದಾರೆ. ಇಂತಹ ಕ್ಷೇತ್ರದಲ್ಲಿ 2023ರ ಚುನಾವಣೆ ಬಾರಿ ಕುತೂಹಲ ಕೆರಳಿಸಿದೆ.

ಉಮಾಶ್ರಿ ವಿರುದ್ಧ ಪರಕೀಯರು ಎಂಬ ವಿರೋಧಿ ಅಲೆ
ಈ ಬಾರಿ ತೇರದಾಳ ಕ್ಷೇತ್ರದಲ್ಲಿ ಆಕಾಂಕ್ಷಿಗಳ ಸಂಖ್ಯೆ ಎರಡು ಪಕ್ಷದಲ್ಲಿ ಹೆಚ್ಚಾಗಿದೆ. ಉಮಾಶ್ರಿ ಈ ಭಾಗದವರಾಗದ ಕಾರಣ ಈ ಬಾರಿ ಕಾಂಗ್ರೆಸ್‍ನಲ್ಲಿ ಎಲ್ಲಾ ಮುಖಂಡರು ಸ್ಥಳೀಯರಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. 16 ಜನರು ತೇರದಾಳ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಗಳಾಗಿದ್ದು, ಟಿಕೆಟ್‍ಗಾಗಿ ಇನ್ನಿಲ್ಲದ ಪ್ರಯತ್ನ ಶುರು ಮಾಡಿದ್ದಾರೆ. ಉಮಾಶ್ರಿ ಬಿಟ್ಟು ಸ್ಥಳೀಯರಿಗೆ ಟಿಕೆಟ್ ಕೊಟ್ಟರೆ ಮಾತ್ರ ಕಾಂಗ್ರೆಸ್ ಬೆಂಬಲಿಸೋದಾಗಿ ಕಾರ್ಯಕರ್ತರು ನಿಂತಿದ್ದಾರೆ. ಕಾಂಗ್ರೆಸ್ ನಲ್ಲಿ ಪ್ರಮುಖವಾಗಿ ವೈದ್ಯರೇ ಆಕಾಂಕ್ಷಿಗಳಾಗಿದ್ದಾರೆ. ಕಣ್ಣಿನ ವೈದ್ಯ ಡಾ.ಪದ್ಮಜಿತ್ ನಾಡಗೌಡ, ಜೈನ ಸಮುದಾಯಕ್ಕೆ ಸೇರಿದವರು. ಪಂಚಮಸಾಲಿ ಸಮುದಾಯಕ್ಕೆ ಸೇರಿದ ಡಾ.ಎ.ಆರ್ ಬೆಳಗಲಿ, ನೇಕಾರ ಸಮುದಾಯಕ್ಕೆ ಸೇರಿರುವ ಎಮ್.ಎಸ್ ದಡ್ಡೆನವರ ಸೇರಿದಂತೆ 16 ಜನರು ಆಕಾಂಕ್ಷಿಗಳಿದ್ದಾರೆ. ಆದರೆ ಮುಖ್ಯ ರೇಸ್ ನಲ್ಲಿ ಉಮಾಶ್ರಿ, ಪದ್ಮಜಿತ್ ನಾಡಗೌಡ. ಡಾ.ಎ.ಆರ್ ಬೆಳಗಲಿ ಇದ್ದಾರೆ.

ಬಿಜೆಪಿಯಲ್ಲೂ ಕೂಡ ಟಿಕೆಟ್ ಅಸಮಾಧಾನ
ಬಿಜೆಪಿಯಿಂದ 6-7 ಜನರು ಆಕಾಂಕ್ಷಿಗಳಿದ್ದು ಈ ಬಾರಿ ಟಿಕೆಟ್ ಸಿದ್ದು ಸವದಿಗೆ ನೀಡಬಾರದು ಎಂಬ ಕೂಗು ಕೇಳಿ ಬಂದಿದೆ. ಜೊತೆಗೆ ನೇಕಾರ ಸಮುದಾಯಕ್ಕೆ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡುವಂತೆ ಒತ್ತಡ ಬರುತ್ತಿದೆ. ಆದರೆ ಯಡಿಯೂರಪ್ಪ ಬನಹಟ್ಟಿ ವಿಜಯಸಂಕಲ್ಪ ಯಾತ್ರೆಗೆ ಬಂದಾಗ ಸಿದ್ದು ಸವದಿಯನ್ನು ಆರಿಸಿ ಕಳಿಸಿ ಎಂದಿದ್ದರು. ಮರುದಿನ ಬಾಯಿ ತಪ್ಪಿ ಹೇಳಿದ್ದೇನೆ ಎಂದು ಸಮರ್ಥನೆ ಮಾಡಿಕೊಂಡಿದ್ದರು.

ಕ್ಷೇತ್ರದಲ್ಲಿ ನೇಕಾರರು ಹೆಚ್ಚಿನ ಪ್ರಭಾವ ಹೊಂದಿದ ಕಾರಣ ನೇಕಾರರಿಗೆ ಸಾಲ ಸೌಲಭ್ಯ, ನೇಕಾರರ ಅಭಿವೃದ್ಧಿ, ನೇಕಾರರ ಸಾಲ ಮನ್ನಾ, ಮಗ್ಗಗಳಿಗೆ ವಿದ್ಯುತ್ ಎಲ್ಲವೂ ಚುನಾವಣೆಯ ಪ್ರಮುಖ ಅಸ್ತ್ರಗಳಾಗಿರುತ್ತವೆ. ನೇಕಾರ ಕ್ಷೇತ್ರದಲ್ಲಿ ಈ ಬಾರಿ ಆಕಾಂಕ್ಷಿಗಳ ಪಟ್ಟಿ ಎರಡು ಪಕ್ಷದಲ್ಲಿ ಹೆಚ್ಚಾಗಿದೆ. ಇದು ಚುನಾವಣೆಯ ಕುತೂಹಲದ ಕಾವನ್ನು ಹೆಚ್ಚಿಸಿದೆ. ಇದನ್ನೂ ಓದಿ: ಈ ಬಾರಿ 20ಕ್ಕೂ ಹೆಚ್ಚು ಹಾಲಿ ಬಿಜೆಪಿ ಶಾಸಕರಿಗೆ ಕೊಕ್‌?

TAGGED:BadamibjpcongressSiddu SavadiTerdal constituency Election 2023umashreeಉಮಾಶ್ರಿಕಾಂಗ್ರೆಸ್ತೇರದಾಳಬಾದಾಮಿಬಿ.ಎಸ್.ಯಡಿಯೂರಪ್ಪಬಿಜೆಪಿಸಿದ್ದು ಸವದಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
4 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
4 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
5 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?