ಬೆಂಗಳೂರು: ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯೇ (First List) ಗೆಲುವಿನ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)ಹೇಳಿದರು.
ಮಂಗಳವಾರ ಹೆಚ್ಎಎಲ್ (HAL) ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 189 ಅಭ್ಯರ್ಥಿಗಳಲ್ಲಿ ಹೊಸ ಮುಖ ತರುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೊದಲ ಪಟ್ಟಿ ನೋಡಿದರೆ ಈ ಬಾರಿ ಬಿಜೆಪಿ (BJP) ಮತ್ತೊಮ್ಮೆ ಗೆಲುವು ಸಾಧಿಸುವ ದಿಕ್ಸೂಚಿಯಾಗಿದೆ. ಟಿಕೆಟ್ ಕೈತಪ್ಪಿದವರು ಬಂಡಾಯ ಏಳುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್ ಕೈತಪ್ಪುವ ಬಗ್ಗೆ ಮೊದಲೇ ಹೇಳಿದ್ದೇವೆ. ಒಟ್ಟು 3 ದಿನ ಚರ್ಚೆ ಮಾಡಿ ಈ ನಿರ್ಧಾರ ಮಾಡಿದ್ದೇವೆ ಎಂದರು. ಇದನ್ನೂ ಓದಿ: Karnataka Election 2023: ಬಿಜೆಪಿ ಟಿಕೆಟ್ ಉಳಿಸಿಕೊಂಡ ಆ 35 ಕ್ಷೇತ್ರಗಳು ಯಾವುವು..?
ಇನ್ನೆರಡು ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆ ಆಗಲಿದೆ. ಇನ್ನೂ 34 ಕ್ಷೇತ್ರಗಳ ಪಟ್ಟಿ ಎರಡು ದಿನಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ನಾವು ಮಾಡಿರುವ ಕೆಲಸಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುತ್ತೇವೆ. ಬೂತ್ ಮಟ್ಟದಲ್ಲಿ ತೆರಳಿ, ಹಳ್ಳಿ ಹಳ್ಳಿಗೂ ಹೋಗಿ ಪ್ರಚಾರ ಮಾಡುತ್ತೇವೆ. ರಾಜ್ಯದ ಸಮರ್ಥ ಅಭಿವೃದ್ಧಿ, ಕೋವಿಡ್ ವೇಳೆ ಎದುರಿಸಿದ ಸವಾಲುಗಳು ಹಾಗೂ ಹಲವಾರು ಯುವಕರಿಗೆ ಕೊಟ್ಟ ಕೆಲಸದ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವಿನ ವಿಶ್ವಾಸವಿದೆ ಎಂದು ಹೇಳಿದರು. ಇದನ್ನೂ ಓದಿ: MLC ಸ್ಥಾನಕ್ಕೆ ಆರ್. ಶಂಕರ್ ಬುಧವಾರ ರಾಜೀನಾಮೆ..?
ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಹಿರಿಯರು ಪಕ್ಷವನ್ನು ಕಟ್ಟಿದ್ದಾರೆ. ಪಕ್ಷ ಹಿರಿಯರನ್ನು ಬೆಳೆಸಿದೆ. ಅವರಿಗೆ ಪಕ್ಷದೊಂದಿಗೆ ಅನ್ಯೋನ್ಯ ಸಂಬಂಧ ಇರುವ ಕಾರಣ ಯಾವುದೇ ತೊಂದರೆ ಆಗುವುದಿಲ್ಲ. ಟಿಕೆಟ್ ತಪ್ಪುವವರಿಗೆ ಯಾಕೆ? ಏನು ಕಾರಣ? ಮುಂದೆ ಯಾವ ರೀತಿಯ ಅವಕಾಶ ಇದೆ ಎಂಬುದನ್ನು ಹೇಳಿದ್ದೇವೆ. ನಮ್ಮ ಬಿಜೆಪಿ ರಾಷ್ಟ್ರೀಯ ಹಾಗೂ ಶಿಸ್ತಿನ ಪಕ್ಷ. ಎಲ್ಲವನ್ನೂ ನಿಭಾಯಿಸುವ ಶಕ್ತಿ ಬಿಜೆಪಿಗಿದೆ ಎಂದರು. ಇದನ್ನೂ ಓದಿ: ವರುಣಾದಲ್ಲಿ ಸೋಮಣ್ಣ Vs ಸಿದ್ದರಾಮಯ್ಯ – ಚಾಮರಾಜನಗರದಿಂದಲೂ ಟಿಕೆಟ್
ಪಟ್ಟಿ ತಯಾರಿಸುವ ವೇಳೆ ಯಡಿಯೂರಪ್ಪ (B.S.Yediyurappa) ಅಸಮಾಧಾನಗೊಂಡಿದ್ದಾರೆ ಎನ್ನುವುದು ಊಹಾಪೋಹ. ಎರಡು ದಿನ ಪೂರ್ಣ ಪ್ರಮಾಣದಲ್ಲಿ ಕುಳಿತು ನಿರ್ಧಾರ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಕೆಲವು ಸಲಹೆ ಪಡೆಯಲಾಗಿದೆ. ಸಂಪೂರ್ಣವಾಗಿ ಯಡಿಯೂರಪ್ಪ ಅವರು ಈ ಪಟ್ಟಿ ತಯಾರಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕೊನೆಗೂ ಬಿಜೆಪಿಯ ಮೊದಲ ಪಟ್ಟಿ ರಿಲೀಸ್ – 189 ಮಂದಿಗೆ ಟಿಕೆಟ್