Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಸಕ ಮಹೇಶ್ ಕುಮಠಳ್ಳಿಗೆ ಟಿಕೆಟ್ ಟೆನ್ಶನ್- ವಲಸಿಗ ಶಾಸಕರಿಗೆ ಮೂಲ ಬಿಜೆಪಿಗರಿಂದ ಕಿರಿಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಶಾಸಕ ಮಹೇಶ್ ಕುಮಠಳ್ಳಿಗೆ ಟಿಕೆಟ್ ಟೆನ್ಶನ್- ವಲಸಿಗ ಶಾಸಕರಿಗೆ ಮೂಲ ಬಿಜೆಪಿಗರಿಂದ ಕಿರಿಕ್

Belgaum

ಶಾಸಕ ಮಹೇಶ್ ಕುಮಠಳ್ಳಿಗೆ ಟಿಕೆಟ್ ಟೆನ್ಶನ್- ವಲಸಿಗ ಶಾಸಕರಿಗೆ ಮೂಲ ಬಿಜೆಪಿಗರಿಂದ ಕಿರಿಕ್

Public TV
Last updated: April 1, 2023 11:26 am
Public TV
Share
3 Min Read
mahesh kumathalli
SHARE

ಚಿಕ್ಕೋಡಿ (ಬೆಳಗಾವಿ): ರಾಜ್ಯ ಬಿಜೆಪಿ ಸರ್ಕಾರ (BJP Government) ರಚನೆಗೆ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದ ವಲಸಿಗ ಶಾಸಕರ ಸ್ಥಿತಿ ಸಧ್ಯ ಅತಂತ್ರವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಚುನಾವಣೆ ಬರುವವರೆಗೂ ಸುಮ್ಮನಿದ್ದ ಮೂಲ ಬಿಜೆಪಿಗರು ಈಗ ಬಹಿರಂಗವಾಗಿಯೇ ವಲಸಿಗ ಶಾಸಕರಿಗೆ ಸವಾಲು ಹಾಕಲು ಆರಂಭಿಸಿದ್ದು, ಬಿಜೆಪಿ ಪಾಳಯದಲ್ಲಿ ಗೊಂದಲಕ್ಕೆ ಕಾರಣವಾಗಿದೆ.

Laxman Savadi 4

ಹೌದು. ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ರಾಜ್ಯ ರಾಜಕಾರಣ ಗರಿಗೆದರಿದ್ದು ಅದರಲ್ಲೂ ಬೆಳಗಾವಿ ರಾಜಕಾರಣ ಬಾರಿ ಸದ್ದು ಮಾಡುತ್ತಿದೆ. ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ ಎಂದು ಬಿಂಬಿಸುತ್ತಿರುವ ರಾಜ್ಯ ನಾಯಕರಿಗೆ ಮುಜುಗರವಾಗುವಂತೆ ಅಥಣಿ (Athani Constituency) ಬಿಜೆಪಿಯಲ್ಲಿ ಅಸಮಾಧಾನದ ಜ್ವಾಲಾಮುಖಿಯ ಸ್ಫೋಟಗೊಂಡಿದೆ. ಅಥಣಿ ವಿಧಾನಸಭಾ ಕ್ಷೇತ್ರ ಪ್ರಭಾವಿ ರಾಜಕಾರಣಿಯಾದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ್ ಸವದಿ (Laxman Savadi) ಅವರ ಸ್ವಕ್ಷೇತ್ರ ವಾಗಿದ್ದು ಅವರದೇ ಕ್ಷೇತ್ರದಲ್ಲಿ ಸದ್ಯ ಈಗ ಬಿಜೆಪಿಯಲ್ಲಿ ಆಂತರಿಕವಾಗಿ ಇಬ್ಬರ ನಾಯಕರಿಗೆ ಬಿ ಫಾರ್ಮ್ ವಿಚಾರವಾಗಿ ಅಸಮಾಧಾನ ಬಹಿರಂಗಗೊಂಡಿದೆ. ಹಾಲಿ ಶಾಸಕ ಮಹೇಶ್ ಕುಮಠಳ್ಳಿ (Mahesh Kumtalli) ಮತ್ತು ಮಾಜಿ ಶಾಸಕ ಲಕ್ಷ್ಮಣ್ ಸವದಿ ಅವರಿಗೆ ಟಿಕೆಟ್ ವಿಚಾರವಾಗಿ ಕಳೆದ ಐದು ವರ್ಷದ ಹಿಂದಿನಿಂದಲೂ ತಿಕ್ಕಾಟ ನಡೆಯುತ್ತಿದ್ದು ಚುನಾವಣೆ ಸಮೀಪಿಸುತ್ತಿದ್ದಂತೆ ಅಥಣಿ ಬಿಜೆಪಿಯಲ್ಲಿ ಆಂತರಿಕ ಕಲಹ ಜಗತ್ತು ಜಾಹೀರಾತಾಗಿದೆ. ಕಾರ್ಯಕ್ರಮ ಒಂದರಲ್ಲಿ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ (Chidananda Savadi) ಅಥಣಿ ಕ್ಷೇತ್ರದಿಂದ ಈ ಬಾರಿ ನಮ್ಮ ತಂದೆ ಸ್ಪರ್ಧೆ ಮಾಡುತ್ತಾರೆ. ಅಥಣಿ ಕ್ಷೇತ್ರವನ್ನು ಬಿಟ್ಟುಕೊಡುವ ಮಾತೇ ಇಲ್ಲ ಎಂದು ಹೈಕಮಾಂಡಿಗೆ ಸಂದೇಶ ಸಾರುವ ಮುಖಾಂತರ ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆ.

CHIDANANDA SAVADI 1

2019ರಲ್ಲಿ ರಾಜಕೀಯ ಬದಲಾವಣೆ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷದ ಜೊತೆ ಸೇರಿ ಶಾಸಕ ಮಹೇಶ್ ಕುಮಠಳ್ಳಿ ಬಿಜೆಪಿ ಸರ್ಕಾರ ರಚನೆಗೆ ಪ್ರಮುಖ ಪಾತ್ರವನ್ನು ವಹಿಸಿದ್ದರು. ಈ ರಾಜಕೀಯ ಬದಲಾವಣೆಯಲ್ಲಿ ಲಕ್ಷ್ಮಣ ಸವದಿ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟು ಮಹೇಶ್ ಕುಮಠಳ್ಳಿ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಅಥಣಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಮಾಡಿದ್ದರು. ಎಲ್ಲೋ ಒಂದು ಕಡೆ ಅವತ್ತಿನಿಂದ ಇವತ್ತಿನವರೆಗೂ ಲಕ್ಷ್ಮಣ್ ಸವದಿ ಹಾಗೂ ಅವರ ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು, ಕಳೆದ ನಾಲ್ಕೂವರೆ ವರ್ಷದಿಂದ ಮೂಲ ಬಿಜೆಪಿ, ವಹಿಸಿಗರ ಬಿಜೆಪಿ ಎಂಬ ಕಾರ್ಯಕರ್ತರಲ್ಲಿ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಕಚ್ಚಾಟವು ಕೂಡ ನಡೆಯುತ್ತಿತ್ತು. ಇದರ ನಡುವೆ ಲಕ್ಷ್ಮಣ್ ಸವದಿ ಹೆಚ್ಚಾಗಿ ಮಹೇಶ್ ಕುಮಠಳ್ಳಿ ಜೊತೆ ಕಾಣಿಸದೆ ಇರುವುದು ಅಥಣಿ ಬಿಜೆಪಿಯಲ್ಲಿ ತೆರೆಮರೆ ಹಿಂದೆ ಯಾವುದು ಸರಿ ಇಲ್ಲ ಎಂಬುವುದು ಸ್ಪಷ್ಟವಾಗಿ ದೊರಕುತ್ತಿತ್ತು. ಇದನ್ನೂ ಓದಿ: ಈ ಕ್ಷೇತ್ರ ಗೆದ್ದ ಪಕ್ಷಕ್ಕೇ ರಾಜ್ಯಾಧಿಕಾರ – ಅಚ್ಚರಿಯಾದರೂ ನೀವು ನಂಬಲೇಬೇಕು

RAMESH JARAKIHOLI

ಹಲವಾರು ಬಾರಿ ಅಥಣಿ ಬಿಜೆಪಿ ಅಸಮಾಧಾನ ಬಗ್ಗೆ ಮಾಧ್ಯಮಗಳು ಲಕ್ಷ್ಮಣ್ ಸವದಿ ಅವರನ್ನು ಪ್ರಶ್ನಿಸಿದಾಗ ನಾನು ಬಿಜೆಪಿಯ ಶಿಸ್ತಿನ ಸಿಪಾಯಿ, 2018ರ ಚುನಾವಣೆಯಲ್ಲಿ ಸೋತರು ನನ್ನನ್ನು ಡಿಸಿಎಂ ಎಂದು ಪಕ್ಷ ಎತ್ತಿ ಹಿಡಿದಿದೆ. ಪಕ್ಷದ ವರಿಷ್ಠರು ಹೇಗೆ ಹೇಳುತ್ತಾರೆ ಹಾಗೆ ನಾನು ಕೇಳುತ್ತೇನೆ ಅಥಣಿ ಟಿಕೆಟ್ ಆಕಾಂಕ್ಷಿ ಅಲ್ಲವೆಂದು ಲಕ್ಷ್ಮಣ್ ಸವದಿ ಸಮಜಾಯಿಸಿಕೊಡುತ್ತಿದ್ದರು. ಆದರೆ ಇವತ್ತು ಅವರ ಪುತ್ರ ಚಿದಾನಂದ್ ಸವದಿ ರಮೇಶ್ ಜಾರಕಿಹೊಳಿ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿ ತಮ ಆತ್ಮೀಯ ಮಹೇಶ್ ಕುಮಠಳ್ಳಿಗೆ ಗೋಕಾಕ್ ಮತಕ್ಷೇತ್ರವನ್ನು ಬಿಟ್ಟು ಕೊಡಲಿ. ನಾವು ಮಾತ್ರ ಅಥಣಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತೇವೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಸಮರ ಸಾರಿದ್ದಾರೆ.

BJP FLAG

ಮೊನ್ನೆ ಅಷ್ಟೇ ರಮೇಶ್ ಜಾರಕಿಹೊಳಿ ವಿಜಯಪುರದಲ್ಲಿ ಮಾಧ್ಯಮ ಜೊತೆ ಮಾತನಾಡುತ್ತಾ ಆಪ್ತಮಿತ್ರನಿಗೆ ಅಥಣಿ ಟಿಕೆಟ್ ಕೊಡಿಸುತ್ತೇನೆ. ಅವನಿಗೂ ಟಿಕೆಟ್ ಇಲ್ಲ ಅಂದ್ರೆ ನಾನು ಗೋಕಾಕ್‍ನಿಂದ ಸ್ಪರ್ಧೆ ಮಾಡೋದಿಲ್ಲ ಎಂದು ಬಿಜೆಪಿ ಹೈಕಮಾಂಡ್‌ಗೆ ಸಂದೇಶ ರವಾನಿಸುತ್ತಿದ್ದಂತೆ, ಸದ್ದಿಲ್ಲದೆ ಚುನಾವಣೆಗೆ ತಯಾರಿ ನಡೆಸುತ್ತಿದ್ದ ಸವದಿ ಕುಟುಂಬಕ್ಕೆ ಗೋಕಾಕ್ ಸಾಹುಕಾರ ಮಾತು ನುಂಗಲಾರದ ತುತ್ತಾಗಿದೆ. ಶತಾಯಗತಾಯವಾಗಿ ಅಥಣಿ ಕ್ಷೇತ್ರವನ್ನು ಮರಳಿ ಪಡೆಯುವ ಬೇಕೆಂಬ ಪಣತೊಟ್ಟಂತೆ ಕಾಣುತ್ತಿದ್ದು ಸದ್ಯ ಚಿದಾನಂದ ಸವದಿ ಬಿಜೆಪಿ ಹೈಕಮಾಂಡಿಗೆ ಇವತ್ತು ಸವಾಲೆಸಗಿದ್ದಾರೆ. ಇದು ಯಾವ ಹಂತಕ್ಕೆ ಹೋಗುತ್ತದೆಯೋ ಅಥವಾ ಲಕ್ಷ್ಮಣ ಸವದಿ ಮಗನನ್ನು ಕರೆದು ಬುದ್ಧಿವಾದ ಹೇಳುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ. ಒಟ್ಟಾರೆಯಾಗಿ ಅಥಣಿ ವಿಧಾನಸಭೆ ಕ್ಷೇತ್ರದ ಪ್ರತಿಕ್ಷಣವೂ ತಿರುಪಡೆದುಕೊಳ್ಳುತ್ತಿದ್ದು ಹೈಕಮಾಂಡ್ ಇಲ್ಲಿ ಯಾರಿಗೆ ಟಿಕೆಟ್ ಕೂಡುತ್ತಾರೆ, ಇಬ್ಬರ ನಾಯಕರಿಗೆ ಜನ ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂಬುವುದು ಕಾದುನೋಡಬೇಕಾಗಿದೆ.

TAGGED:belagavibjpchikkodicongressmahesh kumtalliಕಾಂಗ್ರೆಸ್ಚಿಕ್ಕೋಡಿಬಿಜೆಪಿಬೆಳಗಾವಿಮಹೇಶ್ ಕುಮಟಳ್ಳಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

us and israeli military operations natanz nuclear facility hit says iran iaea flags risk of radiation leak
Latest

ಇರಾನ್‌ ಪರಮಾಣು ಸೌಲಭ್ಯದ ಮೇಲೆ ದಾಳಿ – ವಿಕಿರಣ ಸೋರಿಕೆಯ ಆತಂಕ

Public TV
By Public TV
33 minutes ago
Benjamin Netanyahu
Latest

ನೆತನ್ಯಾಹು ಕಚೇರಿ, ಇಸ್ರೇಲಿ ವಾಯುಪಡೆಯ ಕಮಾಂಡರ್ ಮೇಲೆ ಕ್ಷಿಪಣಿ ದಾಳಿ

Public TV
By Public TV
33 minutes ago
Male Mahadeshwar
Chamarajanagar

ಮಲೆ ಮಹದೇಶ್ವರನಿಗೆ ತಟ್ಟಲ್ಲ ಗ್ರಹಣದ ಎಫೆಕ್ಟ್: ಚಂದ್ರಗ್ರಹಣವಿದ್ದರೂ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ

Public TV
By Public TV
57 minutes ago
Omkareshwara Temple 2
Districts

ಮಂಗಳವಾರ ರಕ್ತ ಚಂದ್ರಗ್ರಹಣ – ಕೊಡಗಿನ ಓಂಕಾರೇಶ್ವರ ದೇಗುಲದಲ್ಲಿ ಪೂಜಾ ಸಮಯ ಬದಲು

Public TV
By Public TV
1 hour ago
Israel Iran airstrikes
Bagalkot

ಇರಾನ್-ಇಸ್ರೇಲ್ ಯುದ್ಧ – ಕರ್ನಾಟಕದ ನಾಗರಿಕರ ನೆರವಿಗಾಗಿ 24*7 ತುರ್ತುವ್ಯವಸ್ಥೆ ಸಕ್ರಿಯ

Public TV
By Public TV
1 hour ago
cabinet meeting
Latest

ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ 90 ಲಕ್ಷ ಭಾರತೀಯರ ಸುರಕ್ಷತೆಗೆ ಆದ್ಯತೆ: ಸಂಪುಟ ಸಭೆಯಲ್ಲಿ ಚರ್ಚೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?