ಮಡಿಕೇರಿ: ಕಾಂಗ್ರೆಸ್ನವರು (Congress) ಬಜರಂಗದಳ (Bajrang Dal) ಬ್ಯಾನ್ ಮಾಡುತ್ತೇವೆ ಎಂದು ಹೇಳುತ್ತಾರೆ. ವಿನಾಶ ಕಾಲದಲ್ಲಿ ವಿಪರೀತ ಬುದ್ಧಿ ಎಂಬ ಮಾತಿನಂತೆ ಕಾಂಗ್ರೆಸ್ ತನ್ನ ವಿನಾಶಕ್ಕೆ ಬಜರಂಗದಳವನ್ನು ನಿಷೇಧಿಸುವ ಭರವಸೆ ನೀಡಿದೆ ಎಂದು ಸಂಸದ ಡಿವಿ ಸದಾನಂದ ಗೌಡ (DV Sadananda Gowda) ವಾಗ್ದಾಳಿ ನಡೆಸಿದ್ದಾರೆ.
ಮಡಿಕೇರಿಯಲ್ಲಿ (Madikeri) ಮಾತಾನಾಡಿದ ಅವರು, ದೇಶಪ್ರೇಮಿ ಎಂಬ ಸಂಘಟನೆ ರಾಜಕೀಯ ರಂಗದಲ್ಲಿ ಇರುವುದು ಎಂದರೆ ಅದು ಬಿಜೆಪಿ ಮಾತ್ರ. ಈ ಬಾರಿ ಕರ್ನಾಟಕದಲ್ಲಿ ಬಿಜೆಪಿಗೆ ಇದು ಸವಾಲಿನ ಚುನಾವಣೆಯಾಗಿದೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದ ಸರ್ಕಾರ ತರಲು ಎಲ್ಲಾ ರೀತಿಯ ಪ್ರಯತ್ನ ನಡೆಯುತ್ತಿದೆ. ಸ್ವಂತ ಶಕ್ತಿಯಲ್ಲಿ ಬಿಜೆಪಿ 125 ರಿಂದ 130 ಸ್ಥಾನ ಗಳಿಸಿ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದರು.
ಬಜರಂಗದಳ ನಿಷೇಧದ ಬಗ್ಗೆ ಕಾಂಗ್ರೆಸ್ ಪ್ರಣಾಳಿಕೆ ಮಾಡಿದೆ. ಕಾಂಗ್ರೆಸ್ನ ವಿಪರೀತ ಬುದ್ಧಿ ವಿನಾಶಕ್ಕೆ ಹಾದಿ. ರಾಷ್ಟ್ರಪ್ರೇಮ ಗೊತ್ತಿಲ್ಲದ ಕಾಂಗ್ರೆಸ್ ಈ ರೀತಿಯ ಪ್ರಣಾಳಿಕೆ ನೀಡಿದೆ. ಕೊನೆಗೆ ದೀಪ ಜೋರಾಗಿ ಉರಿಯುತ್ತದೆ. ಆ ರೀತಿ ಕಾಂಗ್ರೆಸ್ನ ಸ್ಥಿತಿ ಆಗುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾತ್ರಿ ಮಟನ್ ತಿಂತೀರಿ, ಹಗಲೊತ್ತಲ್ಲಿ ಮಾಂಸಾಹಾರಿಗಳಿಗೆ ಬೈತೀರಿ – ಬಿಜೆಪಿ ನಾಯಕರ ವಿರುದ್ಧ ಖರ್ಗೆ ವಾಗ್ದಾಳಿ
ಈ ಬಾರಿ ಪೂರ್ಣ ಬಹುಮತದ ಸರ್ಕಾರವನ್ನು ಬಿಜೆಪಿ ರಚಿಸಲಿದೆ. ಚುನಾವಣೆಯ ನಂತರ ಕಾಂಗ್ರೆಸ್ನವರು ರಾಜಕೀಯ ಸನ್ಯಾಸ ಪಡೆಯುವುದು ಖಚಿತ ಎಂದರು. ಇದನ್ನೂ ಓದಿ: ಬಜರಂಗ ಬಲಿ ಕೀ ಜೈ ಘೋಷಣೆ ಮಾಡಿ ತುಳುವಿನಲ್ಲಿ ಭಾಷಣ ಮಾಡಿದ ಮೋದಿ