ಯತೀಂದ್ರ ಸಿದ್ದರಾಮಯ್ಯಗೆ ವರುಣಾ ಟಿಕೆಟ್‌ – ಡಿಕೆಶಿ ಘೋಷಣೆ

Public TV
2 Min Read
yathindra siddaramaiah d.k.shivakumar

ಮೈಸೂರು: ವರುಣಾ ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಒಬ್ಬರೇ ಅರ್ಜಿ ಹಾಕಿದ್ದಾರೆ. ಅವರನ್ನು 50 ಸಾವಿರ ಮತಗಳಿಂದ ಗೆಲ್ಲಿಸಿ ಎಂದು ಕಾರ್ಯಕರ್ತರು ಹಾಗೂ ಜನತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D.K.Shivakumar) ಮನವಿ ಮಾಡಿದರು. ಆ ಮೂಲಕ ವರುಣಾ (Varuna) ಕ್ಷೇತ್ರದಲ್ಲಿ ಯತೀಂದ್ರ ಅವರಿಗೆ ಟಿಕೆಟ್‌ ಎಂಬುದನ್ನು ತಿಳಿಸಿದರು.

ಯತೀಂದ್ರ ಸಿದ್ದರಾಮಯ್ಯ ಚೆನ್ನಾಗಿ ಮಾತನಾಡಿದ್ದಾರೆ. ಅವರಷ್ಟು ನಾನು ಮಾತನಾಡಲು ಸಾಧ್ಯವಿಲ್ಲ. ಬಹಳ ಅನುಭವ ಇರುವ ರೀತಿ ಮಾತನಾಡಿದರು. ಯತೀಂದ್ರ ಸಿದ್ದರಾಮಯ್ಯ ನಿಮ್ಮ ಶಾಸಕರಾಗಿರುವುದು ಭಾಗ್ಯ. ಎಲ್ಲರ ಕೈ ಬಲಪಡಿಸಲು ನಾನು ಬಂದಿದ್ದೇನೆ. ಸಿದ್ದರಾಮಯ್ಯ ಎಲ್ಲಿಗೆ ಬೇಕಾದ್ರೂ ಹೋಗಿ ನಿಂತುಕೊಳ್ಳಲು ಶಕ್ತಿ ಕೊಟ್ಟಿದ್ದು ನೀವು. ನಿಮ್ಮ ಸಹಾಯ ಮರೆಯಲು ಸಾಧ್ಯವಿಲ್ಲ ಎಂದು ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: LPG ಬೆಲೆ 10 ಸಾವಿರ, ಹೋಗ್ರಪ್ಪ ಹೋಗ್ರಿ ಪಾಕಿಗೆ ಹೋಗಿ: ಯತ್ನಾಳ್

congress flag

ಉತ್ತರ ಕರ್ನಾಟದಲ್ಲಿ ಸಿದ್ದರಾಮಯ್ಯ, ದಕ್ಷಿಣ ಕರ್ನಾಟಕದಲ್ಲಿ ನಾನು ಪ್ರಚಾರ ಮಾಡುತ್ತಿದ್ದೇನೆ. ಚುನಾವಣೆ ಸಮಯದಲ್ಲಿ ನಾನು ಆ ಭಾಗಕ್ಕೆ ಪ್ರಚಾರಕ್ಕೆ ಹೋಗುತ್ತೇನೆ. ಯಡಿಯೂರಪ್ಪ ಸೀರೆ ಮತ್ತು ಸೈಕಲ್ ಬಿಟ್ರೆ ಬೇರೆ ಏನು ಕೊಡಲಿಲ್ಲ. ಲಂಚವಿಲ್ಲದೆ ಈ ಸರ್ಕಾರದಲ್ಲಿ ಯಾವ ಕೆಲಸ ಆಗುತ್ತಿಲ್ಲ. ಸಿದ್ದರಾಮಯ್ಯ, ಯತೀಂದ್ರ, ಧ್ರುವನಾರಾಯಣ ಅವರ ಕೈ ಬಲಪಡಿಸಲು ನಾವೆಲ್ಲರೂ ಇಲ್ಲಿಗೆ ಬಂದಿದ್ದೇವೆ. ಎರಡು ಸಾವಿರ ಬರಲಿಲ್ಲ ಅಂದ್ರೆ ನಿಮ್ಮ ಊರಿಗೆ ನಾನು, ಸಿದ್ದರಾಮಯ್ಯ ವೋಟ್ ಕೇಳಲು ಬರಲ್ಲ. ವರುಣಾ ಕ್ಷೇತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರನ್ನ 50 ಸಾವಿರ ಮತಗಳಿಂದ ಗೆಲ್ಲಿಸಿ ಎಂದು ಕೇಳಿಕೊಂಡರು.

ಈ ಕ್ಷೇತ್ರಕ್ಕೆ ಯತೀಂದ್ರ ಒಬ್ಬರೇ ಅರ್ಜಿ ಹಾಕಿದ್ದಾರೆ. ಆದರೂ ನಮ್ಮ ತಂದೆ ಬಂದು ಸ್ಪರ್ಧೆ ಮಾಡಲಿ ಎಂದರು. ಬಹಳ ಸಂತೋಷದಿಂದ ವರುಣಾ ಕ್ಷೇತ್ರಕ್ಕೆ ಬಂದಿದ್ದೇನೆ. ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಈ ಕ್ಷೇತ್ರಕ್ಕೆ ಬಂದಿದ್ದೆ. ಟಿ.ನರಸೀಪುರ ಕ್ಷೇತ್ರದಲ್ಲಿ ಅನೇಕ ಕೆಲಸಗಳನ್ನ ಮಾಡಿದ್ದಾರೆ. ಲೋಕೋಪಯೋಗಿ ಸಚಿವರಾಗಿ ಅತ್ಯತ್ತಮವಾದ ಕೆಲಸ ಮಾಡಿದ್ದಾರೆ. ನಮ್ಮ ನಾಯಕರು, ಅವರು ಕೈ ಕೆಳಗೆ ಕೆಲಸ ಮಾಡಿದ್ದೇನೆ. ಸಿದ್ದರಾಮಯ್ಯ ಅವರ ಕೆಲಸವನ್ನ ರಾಷ್ಟ್ರಮಟ್ಟದಲ್ಲಿ ಗುರುತು ಮಾಡುವ ಕೆಲಸ ಮಾಡಿದ್ದೀರಾ. ನಿಮಗೆ ಕೋಟಿ ನಮಸ್ಕಾರಗಳು ಎಂದರು. ಇದನ್ನೂ ಓದಿ: ಅಂದು ಬಡವರು ಡಿ.ಕೆ.ಶಿವಕುಮಾರ್ ಕಣ್ಣಿಗೆ ಕಾಣಲಿಲ್ಲವಾ – ಪ್ರತಾಪ್ ಸಿಂಹ ಪ್ರಶ್ನೆ

ದೇವರು ವರ ಹಾಗೂ ಶಾಪವನ್ನು ಕೊಡುವುದಿಲ್ಲ. ಆದರೆ ಅವಕಾಶ ಕೊಡುತ್ತಾನೆ, ಅದನ್ನು ಉಪಯೋಗಿಸಕೊಳ್ಳಲು ಬರಬೇಕು. ನಿಮ್ಮ ಆಶೀರ್ವಾದದಿಂದ ರಾಜ್ಯಕ್ಕೆ ಸಿಎಂ ಆಗಿದ್ದರು. ನಮ್ಮ ಸಿದ್ರಾಮಣ್ಣ ಒಳ್ಳೆಯ ಕೆಲಸ ಮಾಡಿದ್ದಾರೆ‌. ನಾನು 7 ಭಾರಿ ಗೆದ್ದಿದ್ದೇನೆ, ಸಿದ್ದರಾಮಯ್ಯ (Siddaramaiah) ಅವರು ಸಹ 7 ಸಲ ಗೆದಿದ್ದಾರೆ. ಅವರಿಗೆ ದೊಡ್ಡ ಅವಕಾಶ ಸಿಕ್ಕಿತು. ಗೆದ್ದಾಗ ಒಳ್ಳೆಯ ಕೆಲಸಗಳನ್ನ ಮಾಡಬೇಕು. ಮೈಸೂರು ಜಿಲ್ಲೆಯಲ್ಲಿ ದೇವರಾಜ ಅರಸ ಅವರನ್ನ ನೆನಪು ಮಾಡಿಕೊಳ್ಳುತ್ತಾರೆ ಎಂದು ತಿಳಿಸಿದರು.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *